Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾರತ vs ಪಾಕಿಸ್ತಾನ ಪಂದ್ಯಕ್ಕೆ ಮಳೆ ಭೀತಿ! ಶ್ರೀಲಂಕಾ ಹವಾಮಾನ ಇಲಾಖೆ ನೀಡಿದ ಆ ಒಂದು ಎಚ್ಚರಿಕೆ ಅಭಿಮಾನಿಗಳಿಗೆ ಬಿಗ್ ಶಾಕ್!*
  • *ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*
  • *ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » ಕೊಡಗು ಪತ್ರಕರ್ತರ ಸಂಘದಿಂದ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ : ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯಲ್ಲಿ ಗುರುಗಳ ಪಾತ್ರ ಅಮೂಲ್ಯ : ಶಾಸಕ ಡಾ.ಮಂತರ್ ಗೌಡ*
ಇತ್ತೀಚಿನ ಸುದ್ದಿಗಳು

ಕೊಡಗು ಪತ್ರಕರ್ತರ ಸಂಘದಿಂದ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ : ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯಲ್ಲಿ ಗುರುಗಳ ಪಾತ್ರ ಅಮೂಲ್ಯ : ಶಾಸಕ ಡಾ.ಮಂತರ್ ಗೌಡ*

July 14, 20253 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಸೋಮವಾರಪೇಟೆ ಜು.14 NEWS DESK : ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯಲ್ಲಿ ಗುರುಗಳ ಪಾತ್ರ ಅಮೂಲ್ಯವಾದದ್ದು. ಬಾಲ್ಯದಲ್ಲಿ ತಂದೆ-ತಾಯಿಗಳು ಮೊದಲ ಗುರುಗಳು; ನಂತರ ಶಾಲಾ ಕಾಲೇಜುಗಳಲ್ಲಿ ಶಿಕ್ಷಕರು ದಾರಿ ತೋರಿಸುವ ದೀಪದಂತೆ ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರಾಗುತ್ತಾರೆ ಎಂದು ಶಾಸಕ ಮಂತರ್ ಗೌಡ ಅಭಿಪ್ರಾಯಪಟ್ಟರು. ಕೊಡಗು ಪತ್ರಕರ್ತರ ಸಂಘದ ಸೋಮವಾರಪೇಟೆ ಘಟಕದ ವತಿಯಿಂದ ನಡೆದ 2024-25ನೇ ಸಾಲಿನ ಸಾಧಕ ವಿದ್ಯಾರ್ಥಿಗಳ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿವಿಧ ಸಂಸ್ಥೆಗಳು ಏರ್ಪಡಿಸುವ ಸಾಧಕರ ಸನ್ಮಾನ ಇತರ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಿ ಬಲ ನೀಡಬೇಕು ಎಂದೂ ಹೇಳಿದರು. “ಧೈರ್ಯ ಮತ್ತು ದೃಢ ನಿರ್ಧಾರದಿಂದ ಯಾವುದೇ ಗುರಿಯನ್ನು ಸಾಧಿಸಬಹುದು. ಆಸೆ ಮತ್ತು ಕನಸುಗಳಿಲ್ಲದೆ ಯಶಸ್ಸು ಸಾಧ್ಯವಿಲ್ಲ. ಪತ್ರಿಕೆಗಳು ಮತ್ತು ಮಾಧ್ಯಮಗಳ ಮೂಲಕ ಸ್ಥಳೀಯ ಸಮಸ್ಯೆಗಳನ್ನು ಬಿಂಬಿಸಿದರೆ, ನಾವು ಅವುಗಳ ಪರಿಹಾರಕ್ಕೆ ಬದ್ಧರಾಗಿದ್ದೇವೆ” ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಸಿದ್ಧಲಿಂಗಪುರದ ಶ್ರೀ ಮಂಜುನಾಥ ಸ್ವಾಮಿ ಕ್ಷೇತ್ರದ ಪ್ರಧಾನ ಗುರು ರಾಜೇಶ್ ನಾಥ್ ಜೀ ದಿವ್ಯ ಸಾನಿಧ್ಯವಹಿಸಿ ಮಾತನಾಡಿದರು. “ಪತ್ರಿಕಾ ಮಾಧ್ಯಮಗಳು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳನ್ನು ಕಟ್ಟುವ ಜವಾಬ್ದಾರಿ ಹೊತ್ತಿವೆ. ಮಾಧ್ಯಮಗಳು ಸಮಾಜಕ್ಕೆ ಉತ್ತಮ ಸಂದೇಶ ನೀಡಬೇಕು,” ಎಂದು ಸಲಹೆ ನೀಡಿದರು. “ಸನ್ಮಾನ ವ್ಯಕ್ತಿಗೆ ಹೆಚ್ಚಿನ ಜವಾಬ್ದಾರಿ ಒಡ್ಡುತ್ತದೆ. ವಿದ್ಯಾರ್ಥಿಗಳಿಗೆ ಗುರಿ ಇರಬೇಕು. ಪೋಷಕರ ಇಷ್ಟಕ್ಕಷ್ಟೇ ಬೆಳೆದರೆ ಸಾಕಾಗದು; ಮಕ್ಕಳ ಆಸೆ-ಆಕಾಂಕ್ಷೆಗಳಿಗೆ ತಕ್ಕಂತೆ ಶಿಕ್ಷಣ ನೀಡಬೇಕು. ಪ್ರತಿಯೊಬ್ಬರೂ ಕನಿಷ್ಠ ಒಂದು ಸಸಿ ನೆಟ್ಟು ಪರಿಸರ ಉಳಿಸುವ ಜವಾಬ್ದಾರಿ ವಹಿಸಿಕೊಳ್ಳಬೇಕು,” ಎಂಬ ಸಂದೇಶವನ್ನು ಅವರು ನೀಡಿದರು. ಕೊಡಗು ಪತ್ರಕರ್ತರ ಸಂಘದ ಸ್ಥಾಪಕ ಅಧ್ಯಕ್ಷ ಎಸ್.ಎ. ಮುರುಳಿದೇವ ಅವರು ಮಾತನಾಡಿ, “ಸತತ ಶ್ರಮ ಮತ್ತು ನಿಷ್ಠೆಯೇ ಯಶಸ್ಸಿಗೆ ಮೂಲ. ವಿದ್ಯಾರ್ಥಿಗಳು ಓದು ಮತ್ತು ಅಧ್ಯಯನದಲ್ಲಿ ತೊಡಗಿದರೆ ಭವಿಷ್ಯದಲ್ಲಿ ಉತ್ತಮ ಉದ್ಯೋಗ ಹಾಗೂ ನೈತಿಕ ಬದುಕು ಸಾಧ್ಯ,” ಎಂದರು. ಐಎಎಸ್, ಐಪಿಎಸ್, ಬ್ಯಾಂಕಿಂಗ್ ಹಥಾಯಿಗಳ ಪರೀಕ್ಷೆಗಳಿಗೆ ಸ್ಪರ್ಧೆ ಮಾಡಬಯಸುವ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲಾಗುವುದು ಎಂದು ತಿಳಿಸಿದರು. ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ::  ಅಖಿಲ ಭಾರತ ಮಟ್ಟದ ನೀಟ್ ಪರೀಕ್ಷೆಯಲ್ಲಿ 84ನೇ ರ‍್ಯಾಂಕ್ ಹಾಗೂ ರಾಜ್ಯದಲ್ಲಿ 7ನೇ ರ‍್ಯಾಂಕ್ ಪಡೆದ ಚೌಡ್ಲು ಗ್ರಾಮದ ಕೆ.ಜಿ. ನಿಧಿ ಅವರನ್ನು ಸನ್ಮಾನಿಸಲಾಯಿತು. ಎಸ್‌ಎಸ್‌ಎಲ್‌ಸಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಗಳಿಸಿದ ವಿಶ್ವಮಾನವ ಕುವೆಂಪು ವಿದ್ಯಾಸಂಸ್ಥೆಯ ಎಸ್. ಆದ್ವಿ, ಸೋಮವಾರಪೇಟೆ ಸೆಂಟ್ ಜೋಸೆಫ್ ಶಾಲೆಯ ಲಿಸ್ಮ ಡಯಾಸ್, ದ್ವಿತೀಯ ಪಿಯುಸಿಯಲ್ಲಿ ಶನಿವಾರಸಂತೆಯ ಸೆಕ್ರೆಟ್ ಹಾರ್ಟ್ ಪಿಯು ಕಾಲೇಜಿನ ಡಿ. ತೇಜಸ್ವಿನಿ, ಗರಗಂದೂರಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಎನ್.ಎಂ. ದರ್ಶನ್ ಅವರನ್ನು ಗೌರವಿಸಲಾಯಿತು. ವಾಣಿಜ್ಯ ವಿಭಾಗದಲ್ಲಿ ಸೋಮವಾರಪೇಟೆ ಸೆಂಟ್ ಜೋಸೆಫ್ ಕಾಲೇಜಿನ ಎಸ್.ಎಂ. ಧನ್ಯ, ಶನಿವಾರಸಂತೆಯ ವಿಘ್ನೇಶ್ವರ ಪಿಯು ಕಾಲೇಜಿನ ಸಿ.ಎಲ್. ಸುಚಿತ್ರ, ಕಲಾ ವಿಭಾಗದಲ್ಲಿ ಶನಿವಾರಸಂತೆಯ ವಿಘ್ನೇಶ್ವರ ಪಿಯು ಕಾಲೇಜಿನ ನಾಸಿಯಾ, ಮಾದಾಪುರದ ಶ್ರೀಮತಿ ಚೆನ್ನಮ್ಮ ಪಿಯು ಕಾಲೇಜಿನ ದಿಲ್ಸಾನ ಅವರಿಗೆ ಸನ್ಮಾನ ಸಲ್ಲಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹೆಚ್.ಆರ್. ಹರೀಶ್ ವಹಿಸಿದ್ದರು. ಕೊಡಗು ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಅನಿಲ್ ಹೆಚ್.ಟಿ ಪ್ರಾಸ್ತಾವಿಕ ನುಡಿಯಲ್ಲಿ ಮಾನವ ಸಮುದಾಯದ ಪ್ರಗತಿಯ ಪಥದಲ್ಲಿ ಶಿಕ್ಷಣವೇ ಅತ್ಯಂತ ಶಕ್ತಿಯುತ ಹತ್ತಿರದ ಆಸ್ತಿಯಾಗಿದ್ದು, ಅದನ್ನು ಧ್ಯೇಯವಾಗಿ ಧರಿಸಿಕೊಂಡ ಯುವ ಪ್ರತಿಭೆಗಳನ್ನು ಗುರುತಿಸಿ ಸನ್ಮಾನಿಸುವ ಕಾರ್ಯವು ನಿಜವಾದ ಸಮಾಜ ಸೇವೆಯ ಪ್ರತಿಬಿಂಬವಾಗಿದೆ. ಈ ನಿಟ್ಟಿನಲ್ಲಿ ಇಂದು ಆಯೋಜನೆಯಾದ ತಾಲ್ಲೂಕು ಮಟ್ಟದ ಸಾಧಕ ವಿದ್ಯಾರ್ಥಿಗಳ ಅಭಿನಂದನಾ ಸಮಾರಂಭವು ಅಪೂರ್ವ ನಿರ್ವಹಣೆಯ ಉದಾಹರಣೆ ಆಗಿದೆ. ಎಸ್‌.ಎಸ್‌.ಎಲ್‌.ಸಿ., ಪಿ.ಯು.ಸಿ., ಮತ್ತು ನೀಟ್ ಪರೀಕ್ಷೆಗಳಲ್ಲಿ ಜಿಲ್ಲೆಯ ಹೆಮ್ಮೆಗೊಂದು ಸಾಧನೆಗೈದ ಒಂಬತ್ತು ಮಂದಿ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸುವ ಮೂಲಕ, ನಾವು ಮುಂದಿನ ಪೀಳಿಗೆಗೆ ಪ್ರೋತ್ಸಾಹದ ಬೆಳಕು ಬೆಳಗಿಸುತ್ತಿದ್ದೇವೆ. ವಿಶೇಷವೆಂದರೆ ಈ ಸಾಧಕರ ಪೈಕಿ ಎಂಟು ಮಂದಿ ಯುವತಿಯರು ಎಂಬುದು ಸಮಾಜದ ಒಳಗಿನ ಸ್ಥಿತಿಗತಿಯ ಅರಿವನ್ನು ಕೊಡುವ, ಹೆಮ್ಮೆಪಡುವಂಥ ಸಂಗತಿಯಾಗಿದೆ ಎಂದು ಶ್ಲಾಘನೆ ವ್ಯಕ್ತಪಡಿಸಿದರು. ಕೊಡಗು ಪತ್ರಕರ್ತರ ಸಂಘವು ತನ್ನ ಸ್ಥಾಪನೆಯ ಮೂರನೇ ವರ್ಷವನ್ನು ಪೂರೈಸುತ್ತಿದೆ. ಕೊಡಗಿನ ಮೊದಲ ಪತ್ರಿಕೆ ‘ಕೊಡಗು ಚಂದ್ರಿಕೆ’ ಹುಟ್ಟಿದ್ದು ಸೋಮವಾರಪೇಟೆ ತಾಲೂಕಿನ ಶನಿವಾರ ಸಂತೆಯ ಮಣ್ಣಿನಲ್ಲಿ ಉದಯವಾದ ನಮ್ಮ ಸಂಘವು ಪ್ರಸ್ತುತ ಶ್ರದ್ಧೆಯಿಂದ ಸಮಾಜಮುಖಿ ಚಟುವಟಿಕೆಗಳನ್ನೆಸಗುತ್ತಿದೆ. ಸ್ಥಾಪಕ ಅಧ್ಯಕ್ಷ ಮುರಳೀಧರ್ ಅವರ ದೃಢವಾದ ದೃಷ್ಟಿಕೋನದ ಫಲವಾಗಿ ಹುಟ್ಟಿದ ಈ ಸಂಘವನ್ನು ನಾನು ಅಧ್ಯಕ್ಷನಾಗಿ ಮೂರು ತಿಂಗಳ ಹಿಂದೆ ಉಸ್ತುವಾರಿ ಹೊತ್ತಿದ್ದೇನೆ ಎಂದು ಹೇಳಿದರು. ಸೋಮವಾರಪೇಟೆಯಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮವು ತಾಲ್ಲೂಕು ಮಟ್ಟದಲ್ಲಿ ನಡೆಯುತ್ತಿರುವ ನಾಲ್ಕನೇ ವಿಶಿಷ್ಟ ಕಾರ್ಯಕ್ರಮವಾಗಿದೆ. ಕ್ಷೇತ್ರದ ಅಧ್ಯಕ್ಷರಾದ ಹರೀಶ್ ಮತ್ತು ತಂಡದವರು ಸಮಾಜಮುಖಿ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡಿರುವುದು ಗಮನಾರ್ಹ. ಇತ್ತೀಚೆಗಷ್ಟೇ 1,200 ವಿದ್ಯಾರ್ಥಿಗಳು ಭಾಗವಹಿಸಿದ ಐ.ಎ.ಎಸ್., ಐ.ಪಿ.ಎಸ್., ಮತ್ತು ಬ್ಯಾಂಕಿಂಗ್ ಕ್ಷೇತ್ರದ ತರಬೇತಿ ಶಿಬಿರವೂ ಇದಕ್ಕೆ ಸಾಕ್ಷಿಯಾಗಿದೆ ಎಂದರು. ಇಂತಹ ಪ್ರಯತ್ನಗಳಿಗೆ ಶಾಸಕರ ಜವಾಬ್ದಾರಿತನದ ಬೆಂಬಲವೂ ವಿಶೇಷವಾಗಿದ್ದು, ಅವರು ದೂರದ ಪಾಲೆಮಾಡು ಪ್ರದೇಶದಿಂದಲೇ ತಮ್ಮ ತೀವ್ರ ಸಮಯದ ಅಭ್ಯಂತರದಲ್ಲೂ, ಕೇವಲ 30-40 ನಿಮಿಷಗಳಲ್ಲಿ ಮಡಿಕೇರಿಯಿಂದ ಆಗಮಿಸಿ ವಿದ್ಯಾರ್ಥಿಗಳ ಸಾಧನೆಯನ್ನು ಗೌರವಿಸಿದುದು ನಿಜಕ್ಕೂ ಶ್ಲಾಘನೀಯ. ಇದು ರಾಜಕೀಯ ವ್ಯಕ್ತಿತ್ವದ ಮೌಲ್ಯಮಾಪನದಲ್ಲಿ ಮಾನವೀಯತೆಯ ಸ್ಥಾನ ಎಷ್ಟು ಉನ್ನತವಿದೆ ಎಂಬುದನ್ನು ತೋರಿಸುತ್ತದೆ. ಈ ಸಾಧಕರಿಗೆ ಅಭಿನಂದನೆ ಸಲ್ಲಿಸುವ ಮೂಲಕ ನಾವು ಕೇವಲ ಸನ್ಮಾನವನ್ನೇ ಮಾಡುವುದಿಲ್ಲ. ಅವರೊಳಗಿನ ಕನಸುಗಳಿಗೆ ಪಾರಿತೋಷಿಕ ನೀಡುವ ಮೂಲಕ, ಸಮಾಜದ ಭವಿಷ್ಯಕ್ಕೆ ಹೊತ್ತುಕೊಡುವ ಕಾರ್ಯವನ್ನು ಮಾಡುತ್ತಿದ್ದೇವೆ. ಇದು ಪತ್ರಕರ್ತರ ಸಂಘದ ಕೇವಲ ಕಾರ್ಯವಲ್ಲ, ನಾಗರಿಕ ಸಮಾಜದ ಸಾಂಸ್ಕೃತಿಕ ಕರ್ತವ್ಯವೂ ಹೌದು ಎಂದು ಹೇಳಿದರು.  ಕಾರ್ಯಕ್ರಮದಲ್ಲಿ ಕರವೇ ಜಿಲ್ಲಾ ಅಧ್ಯಕ್ಷ ಕೆ.ಎನ್. ದೀಪಕ್, ಸೋಮವಾರಪೇಟೆ ಒಕ್ಕಲಿಗರ ಯುವ ವೇದಿಕೆ ಅಧ್ಯಕ್ಷ ಚಕ್ರವರ್ತಿ ಸುರೇಶ್, ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯ ತಾಲೂಕು ಘಟಕದ ಅಧ್ಯಕ್ಷ ಶರ್ಮಿಳಾ ರಮೇಶ್, ಚುಟುಕು ಸಾಹಿತ್ಯ ಪರಿಷತ್‌ನ ಜಿಲ್ಲಾಧ್ಯಕ್ಷೆ ರುಬಿನಾ, ವಿವಿಧ ಸಂಘ ಸಂಸ್ಥೆಯ ಮುಖಂಡರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ತಾಲೂಕು ಪತ್ರಕರ್ತರ ಸಂಘದ ಕಾರ್ಯದರ್ಶಿ ಡಿ.ಪಿ.ಲೋಕೇಶ್, ಕೊಡಗು ಪತ್ರಕರ್ತರ ಸಂಘದ ಕಾರ್ಯದರ್ಶಿ ಸುರೇಶ್ ಬಿಳಿಗೇರಿ, ತಾಲೂಕು ಪತ್ರಕರ್ತ ಸಂಘದ ಖಜಾಂಚಿ ದುಷ್ಯಂತ್, ತಾಲೂಕು ಪತ್ರಕರ್ತರ ಸಂಘದ ನಿರ್ದೇಶಕ ಎಸ್.ಆರ್. ವಸಂತ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕವನ್ ಕಾರ್ಯಪ್ಪ ಕಾರ್ಯಕ್ರಮ ನಿರೂಪಿಸಿದರು. 

Share. Facebook Twitter Pinterest LinkedIn Tumblr Email WhatsApp
Previous Article*ಪಾಲೆಮಾಡು ಕಾನ್ಸಿರಾಂ ನಗರದಲ್ಲಿ ನೂತನ ಕಾಂಕ್ರೀಟ್ ರಸ್ತೆ ಉದ್ಘಾಟನೆ : ಗ್ರಾಮಗಳು ಅಭಿವೃದ್ಧಿಯಾದರೆ ದೇಶದ ಪ್ರಗತಿ : ಶಾಸಕ ಡಾ.ಮಂತರ್ ಗೌಡ*
Next Article *ಸಿಎನ್‍ಸಿ ಸಂತಾಪ*

Website design development company services in Mangalore

Forex Trading Teacher in India

Related Posts

*ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*

February 14, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

ಬೆಂಗಳೂರು: ಸಿಲಿಕಾನ್ ಸಿಟಿಯ ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2026ರ ಐಪಿಎಲ್ (IPL) ಪಂದ್ಯಗಳನ್ನು…

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.