
ಮಡಿಕೇರಿ ಜು.24 NEWS DESK : ಮಡಿಕೇರಿಯಲ್ಲಿರುವ ಯುವ ಭವನವನ್ನು ಕೊಡಗು ಜಿಲ್ಲಾ ಯುವ ಒಕ್ಕೂಟಕ್ಕೆ ಹಸ್ತಾಂತರ ಮಾಡುವಂತೆ ಯುವ ಘಟಕದ ಜಿಲ್ಲಾಧ್ಯಕ್ಷ ಪಿ.ಪಿ.ಸುಕುಮಾರ್ ಮನವಿ ಮಾಡಿದರು. ನಗರದ ಸುದರ್ಶನ ಅತಿಥಿಗೃಹದಲ್ಲಿ ಶಾಸಕ ಡಾ.ಮಂತರ್ ಗೌಡ ಅವರನ್ನು ಭೇಟಿಯಾದ ಪಿ.ಪಿ.ಸುಕುಮಾರ್ ಯುವ ಭವನದ ಕುರಿತಾಗಿ ಚರ್ಚೆ ನಡೆಸಿದರು.









