
ಸೋಮವಾರಪೇಟೆ ಜು.26 NEWS DESK : ಸಮೀಪದ ಕಾನ್ವೆಂಟ್ ಬಾಣೆಯ ಅಂಗನವಾಡಿಗೆ ಶಾಸಕ ಡಾ. ಮಂತರ್ ಗೌಡ ಅವರು ಭೇಟಿ ನೀಡಿ ಪರಿಶೀಲಿಸಿದರು. ಅಂಗನವಾಡಿಯಲ್ಲಿ ಮಕ್ಕಳ ಸಂಖ್ಯೆ, ನೀಡುತ್ತಿರುವ ಆಹಾರ ಮತ್ತು ವ್ಯವಸ್ಥೆಯ ಬಗ್ಗೆ ಮಾಹಿತಿ ಪಡೆದ ಅವರು, ಕೇಂದ್ರವನ್ನು ಸರಿಯಾಗಿ ನೋಡಿಕೊಳ್ಳುವುದರೊಂದಿಗೆ, ಮಕ್ಕಳಿಗೆ ಕಾಲ ಕಾಲಕ್ಕೆ ಸರ್ಕಾರ ನಿಗದಿಗೊಳಿಸಿರುವ ಆಹಾರವನ್ನು ವಿತರಿಸಬೇಕು ಎಂದು ತಿಳಿಸಿದರು. ಇದೇ ಸಂದರ್ಭ ಅಂಗನವಾಡಿ ಶಿಕ್ಷಕಿ ಬೊಳ್ಳಮ್ಮ ಅವರು, ಕಟ್ಟಡ ಶಿಥಿಲವಾಗಿರುವ ಬಗ್ಗೆ ಶಾಸಕರ ಗಮನಕ್ಕೆ ತಂದರು. ಶಾಸಕರ ಆಪ್ತ ಸಹಾಯಕ ಕಿರಣ್ ಇದ್ದರು.








