
ಮಡಿಕೇರಿ ಜು.26 NEWS DESK : ವಿರಾಜಪೇಟೆ ತಾಲ್ಲೂಕಿನಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರೀ ಗಾಳಿಗೆ ಕೆದಮುಳ್ಳೂರು ಗ್ರಾಮದ ಚುರಿಯಾಲ್ನಲ್ಲಿರುವ ಪನ್ನಂಗಾಲತ್ತಮ್ಮೆ ಗುಡಿಯ ಮೇಲೆ ಮರ ಬಿದ್ದು ಹಾನಿಯಾಗಿದೆ. ದೇವಾಲಯದ ಅರ್ಧ ಭಾಗದಷ್ಟು ಹಾನಿಗೀಡಾಗಿದ್ದು, ಯಾರೂ ಇಲ್ಲದ್ದರಿಂದ ಅನಾಹುತ ತಪ್ಪಿದೆ. ಸ್ಥಳಕ್ಕೆ ವಿರಾಜಪೇಟೆ ತಹಶೀಲ್ದಾರರು ಹಾಗೂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.









