
ಮಡಿಕೇರಿ ಜು.29 NEWS DESK : ತೋಳೂರು ಶೆಟ್ಟಳ್ಳಿಯ ಡಾ. ಬಿ.ಆರ್.ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆಗೆ ಶಾಂತಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ ಎಎಎಮ್ ಹಾಗೂ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಾಂತಿ ಮತ್ತು ತಂಡದವರು ಭೇಟಿ ನೀಡಿ ಆರೋಗ್ಯ ಜಾಗೃತಿ ಮೂಡಿಸಿದರು. ಎಂಎಫ್ ಆರ್ ಮತ್ತು ಸಿಪಿಆರ್, ಡೆಂಗಿ ಮುಕ್ತ ಶಾಲಾ ಆವರಣ, ಒತ್ತಡ ನಿರ್ವಹಣೆ, ಜಂಕ್ ಫುಡ್ ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಆರೋಗ್ಯ ಶಿಕ್ಷಣ ನೀಡಿದರು. CHOs ನವೀನ್ ಮತ್ತು ಪ್ರಕಾಶ್ ಸಿಪಿಆರ್ ಕುರಿತು ಪ್ರಾತ್ಯಕ್ಷತೆಯನ್ನು ತೋರಿಸಿದರು. ತಂಡದಲ್ಲಿ ಆಶಾ ಕಾರ್ಯಕರ್ತರು ಮತ್ತು 245 ವಿದ್ಯಾರ್ಥಿಗಳು ಹಾಗೂ ಶಿಕ್ಷಕ ವೃಂದದವರು ಪಾಲ್ಗೊಂಡಿದ್ದರು.









