
ಮಡಿಕೇರಿ ಜು.31 NEWS DESK : ಕುಶಾಲನಗರ ತಾಲ್ಲೂಕಿನ ಗುಡ್ಡೆಹೊಸೂರು ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ
ಯೂತ್ ಪಂಚಾಯತ್ ಸಂಘಟನೆಯ ವತಿಯಿಂದ ಉಚಿತವಾಗಿ ಕೊಡೆಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಶಾಲಾ ಮುಖ್ಯೋಪಾಧ್ಯಾಯರಾದ ಕೆ.ಎಸ್.ಸಣ್ಣಸ್ವಾಮಿ, ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ವಿವಿಧ ಸಂಘ ಸಂಸ್ಥೆಗಳು ಉಚಿತವಾಗಿ ಅನೇಕ ಸವಲತ್ತುಗಳನ್ನು ನೀಡುತ್ತಿವೆ, ಅದನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಸುತ್ತಮುತ್ತಲಿನ ಶಾಲೆಗಳಿಗೆ ಉಚಿತವಾಗಿ ಸ್ವಚ್ಚತಾ ಪರಿಕರಗಳು ಮತ್ತಿತರ ಸವಲತ್ತುಗಳನ್ನು ನೀಡುತ್ತಿರುವ ಯೂತ್ ಪಂಚಾಯತ್ ಸಂಘಟನೆಯ ಕಾರ್ಯವೈಕರಿಯನ್ನು ಶ್ಲಾಘಿಸಿದರು. ಸಂಘಟನೆ ಕಾರ್ಯದರ್ಶಿಗಳಾದ ಎಂ.ಎಸ್.ರಂಜಿತ್, ಕಿಶೋರ್ ಪೂಜಾರಿ ಮತ್ತು ಬಿಪಿನ್ ಸುಮಾರು 84 ವಿದ್ಯಾರ್ಥಿಗಳಿಗೆ ಕೊಡೆಗಳನ್ನು ವಿತರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿ.ಎನ್.ರವಿಕುಮಾರ್ ವಹಿಸಿದ್ದರು. ಶಾಲಾ ಶಿಕ್ಷಕಿಯರಾದ ಯಶುಮತಿ, ರುಕ್ಮಿಣಿ, ಗೀತ ಮತ್ತು ದೈಹಿಕ ಶಿಕ್ಷಕರಾದ ಚಂದ್ರಶೇಖರ್, ಪತ್ರಕರ್ತರಾದ ನವೀನ್ ಚಿನ್ನಪ್ಪ ಉಪಸ್ಥಿತರಿದ್ದರು.









