
ಮಡಿಕೇರಿ ಜು.31 NEWS DESK : ಮಡಿಕೇರಿ-ಮಂಗಳೂರು ರಸ್ತೆಗೆ ನಿರ್ಮಿಸಲಾಗಿದ್ದ ಬೃಹತ್ ತಡೆಗೋಡೆಯನ್ನು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಪರಿಶೀಲಿಸಿದರು. 2018ರಲ್ಲಿ ಉಂಟಾದ ಪ್ರಾಕೃತಿಕ ವಿಕೋಪದ ಸಂದರ್ಭ ಮಡಿಕೇರಿ-ಮಂಗಳೂರು ರಸ್ತೆಯಲ್ಲಿ ಭೂ ಕುಸಿತ ಉಂಟಾದ ಹಿನ್ನೆಲೆ ರಸ್ತೆ ಬದಿಗೆ ಬೃಹತ್ ಕಾಂಕ್ರೀಟ್ ತಡೆಗೋಡೆ ನಿರ್ಮಿಸಲಾಗಿತ್ತು. ಇದೀಗ ತಡೆಗೋಡೆಯಲ್ಲಿ ಬಿರುಕು ಕಾಣಿಸಿಕೊಂಡ ಹಿನ್ನೆಲೆ ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.









