
ಮಡಿಕೇರಿ ಆ.1 NEWS DESK : ಎಜಿಎಸ್ ಚಾರಿಟೇಬಲ್ ಟ್ರಸ್ಟ್ ಹಾಗೂ ಕೆ.ಆರ್ ಚಾರಿಟೇಬಲ್ ಟ್ರಸ್ಟ್ ಪ್ರತಿವರ್ಷ ಸ್ವಾತಂತ್ರೋತ್ಸವದ ಪ್ರಯುಕ್ತ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿದ ಗಣ್ಯರನ್ನು ಗುರುತಿಸಿ ಕರ್ನಾಟಕ ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸುತ್ತಿದೆ. ಅಂತೆಯೇ ಈ ಸಾಲಿನ ಪ್ರಶಸ್ತಿ ಪ್ರಕಣವಾಗಿದ್ದು, ಪತ್ರಕರ್ತ ಪ್ರಶಾಂತ್.ಟಿ.ಆರ್ ಅವರು ಈ ಸಾಲಿನ ಕರ್ನಾಟಕ ಸೇವಾರತ್ನ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕಳೆದ ಹನ್ನೆರಡು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸುತ್ತಿರುವ ಪ್ರಶಾಂತ್ ಅವರು ಪ್ರಸ್ತುತ ವಿಶ್ವವಾಣಿ ಪತ್ರಿಕೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದ ಜೊತೆಗೆ ಸಾಹಿತ್ಯ ಕೃಷಿಯಲ್ಲಿಯೂ ತೊಡಗಿಸಿಕೊಂಡಿರುವ ಪ್ರಶಾಂತ್ ಅವರು ರಚಿಸಿರುವ ಹೊನ್ನಮ್ಮನ ಕನಸು ಕಾದಂಬರಿಗೆ ರಾಜ್ಯಮಟ್ಟದ ಪ್ರಶಸ್ತಿ ಹಾಗೂ ಬಾಳಹಾದಿಯಲಿ ಬೆಳ್ಳಿ ಚುಕ್ಕಿ ಕಾದಂಬರಿಗೆ ಇಂಡಿಯನ್ ಐಕಾನ್ ಅವಾರ್ಡ್ ಸಂದಿದೆ. ಈಗ ಕರ್ನಾಟಕ ಸೇವಾ ರತ್ನ ಪ್ರಶಸ್ತಿಯೂ ಸಂದಿದೆ. ಇದು ರಾಜ್ಯ ಮಟ್ಟದ ಪ್ರಶಸ್ತಿಯಾಗಿದ್ದು, ಇದೇ 10 ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯುವ ಅದ್ದೂರಿ ಸಮಾರಂಭದಲ್ಲಿ ಗಣ್ಯರು ಪ್ರಶಸ್ತಿ ನೀಡಿ ಗೌರವಿಸಲಿದ್ದಾರೆ.








