
ಮಡಿಕೇರಿ ಆ.1 NEWS DESK : ಕುಶಾಲನಗರದಲ್ಲಿ ಮನೆ ಮನೆಗೆ ಪೊಲೀಸ್ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಹೆಚ್ಚುವರಿ ಪೊಲೀಸ್ ಅಧೀಕ್ಷಕಾರ ಬಿ.ಪಿ.ದಿನೇಶ್ ಕುಮಾರ್ ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಸೋಮವಾರಪೇಟೆ ಉಪ ವಿಭಾಗದ ಗಣಪತಿ ಪ್ರತಿಷ್ಟಾಪನಾ ಸಮಿತಿಗಳ ಪದಾಧಿಕಾರಿಗಳ ಸಭೆಯನ್ನು ಆಯೋಜಿಸಿ ಶಾಂತಿಯುತ ಗಣೇಶ ಚತುರ್ಥಿ ಆಚರಣೆಗೆ ಸಲಹೆ ನೀಡಿದರು.








