Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾಗಮಂಡಲದಲ್ಲಿ ಜನಸ್ಪಂದನ ಸಭೆ : ಸಾರ್ವಜನಿಕರಿಂದ 85 ಅರ್ಜಿ ಸಲ್ಲಿಕೆ*
  • *ಕಳೆದ ಮೂರು ವರ್ಷದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕೊಡಗು ಜಿಲ್ಲೆಗೆ ಹೆಚ್ಚಿನ‌ ಪ್ರಾಧಾನ್ಯತೆ ನೀಡಿದೆ : ಶಾಸಕ ಎ.ಎಸ್.ಪೊನ್ನಣ್ಣ*
  • *ಮಾ.24 ರಂದು ಕಣ್ಣಿನ ತಪಾಸಣಾ ಶಿಬಿರ*
  • *ರೋಟರಿ ಮಡಿಕೇರಿಯಿಂದ ಮೂರ್ನಾಡಿನಲ್ಲಿ ಕ್ಯಾನ್ಸರ್ ನಿರೋಧಕ ಲಸಿಕೆ ವಿತರಣೆ*
  • *ಕೊಡಗು ಕಲಾವಿದರ ಸಂಘದ ಅಧ್ಯಕ್ಷರಾಗಿ ವಾಂಚಿರ ವಿಠಲ್ ನಾಣಯ್ಯ ಆಯ್ಕೆ*
  • *ಕೊಡಗು ಕಲಾವಿದರ ಸಂಘದಿಂದ ಎ.ಟಿ.ರಘು ಪುಣ್ಯ ಸ್ಮರಣೆ : ಪುಸ್ತಕ ಬಿಡುಗಡೆ, ಸಮಿತಿ ಪುನರ್‌ರಚನೆ*
  • *ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿದೆ : ಉದಯ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಸ್ಪಷ್ಟನೆ*
  • *ಮುಂದಿನ ಒಂದು ವಾರ ರಾಜ್ಯಾದ್ಯಂತ ಮಳೆ ಅಬ್ಬರ ಸಾಧ್ಯತೆ: ಯಾವೆಲ್ಲಾ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ? ಹವಾಮಾನ ಇಲಾಖೆ ರಿಪೋರ್ಟ್*
  • *ಗೋದಾವರಿ ನದಿಯಲ್ಲಿ ಐವರು ಎಂಜಿನಿಯರಿಂಗ್ ವಿದ್ಯಾರ್ಥಿಗಳ ದಾರುಣ ಅಂತ್ಯ*
  • *ಸುಂಟಿಕೊಪ್ಪ : ಶ್ರೀ ಕುರಂಭ (ಭಗವತಿ) ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವಾರ್ಷಿಕ ಮಹಾಪೂಜೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ನಿಮ್ಮೊಂದಿಗೆ ನಾವಿದ್ದೇವೆ : ಶಾಸಕ ಡಾ.ಮಂತರ್ ಗೌಡ ಭರವಸೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ನಿಮ್ಮೊಂದಿಗೆ ನಾವಿದ್ದೇವೆ : ಶಾಸಕ ಡಾ.ಮಂತರ್ ಗೌಡ ಭರವಸೆ*

ಆಗಷ್ಟ್ 1, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

 

ಮಡಿಕೇರಿ ಆ.1 NEWS DESK : ನಗರದ ರೆಡ್‍ಕ್ರಾಸ್ ಭವನದ ಕಾಳಜಿ ಕೇಂದ್ರಕ್ಕೆ ಶಾಸಕ ಡಾ.ಮಂತರ್ ಗೌಡ ಅವರು ಶುಕ್ರವಾರ ಭೇಟಿ ನೀಡಿ ಸಂತ್ರಸ್ತರಿಗೆ ಧೈರ್ಯ ತುಂಬಿದರು. ನಗರದ ಸಮೀಪದಲ್ಲಿರುವ ಹೆದ್ದಾರಿ ತಡೆಗೋಡೆ ಬಿರುಕಿನಿಂದ 5 ಕುಟುಂಬಗಳು ರೆಡ್‍ಕ್ರಾಸ್ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಗೊಂಡಿರುವ ಹಿನ್ನೆಲೆ ಭೇಟಿ ನೀಡಿ ಸಂತ್ರಸ್ತರ ಅಹವಾಲು ಆಲಿಸಿದ ಶಾಸಕರು ನಿಮ್ಮೊಂದಿಗೆ ನಾವಿದ್ದೇವೆ ಎಂದು ಭರವಸೆ ನೀಡಿದರು. ತಡೆಗೋಡೆ ಬಿರುಕು ಬಿಟ್ಟಿರುವ ಹಿನ್ನೆಲೆ ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯಾದಲ್ಲಿ ತೊಂದರೆಗೆ ಸಿಲುಕಬೇಕಾಗುತ್ತದೆ. ಆದ್ದರಿಂದ ತಾತ್ಕಾಲಿಕವಾಗಿ ಕಾಳಜಿ ಕೇಂದ್ರದಲ್ಲಿ ಇರುವಂತೆ ಮನವಿ ಮಾಡಿದರು. ಈಗಾಗಲೇ 2018 ಮತ್ತು 2019 ರಲ್ಲಿ ಸಂತ್ರಸ್ತರಿಗೆ ಮನೆ ನೀಡಿರುವ ಜಾಗದಲ್ಲಿ ಮನೆ ಖಾಲಿ ಇದ್ದಲ್ಲಿ, ಮನೆ ಒದಗಿಸುವ ಸಂಬಂಧ ಪರಿಶೀಲಿಸಿ ಕ್ರಮವಹಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಅವರಿಗೆ ಶಾಸಕರು ಸಲಹೆ ಮಾಡಿದರು. ಇಂತಹ ಕುಟುಂಬಗಳು ಸಂತ್ರಸ್ತ ಕುಟುಂಬಗಳ ಮನೆ ಪಟ್ಟಿಯಿಂದ ಏಕೆ ಕೈಬಿಟ್ಟಿವೆ ಎಂದು ತಿಳಿಯುತ್ತಿಲ್ಲ. ಆದ್ದರಿಂದ ಮರು ಪರಿಶೀಲಿಸಿ ಮನೆ ನೀಡಲು ಕ್ರಮವಹಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿಗಳು ಹಾಗೂ ತಹಶೀಲ್ದಾರರಿಗೆ ಸಲಹೆ ನೀಡಿದರು. ಕಾಳಜಿ ಕೇಂದ್ರಕ್ಕೆ ಶಾಸಕರು ಭೇಟಿ ನೀಡುತ್ತಿದ್ದಂತೆ ಅಳಲು ತೋಡಿಕೊಂಡ ಸಂತ್ರಸ್ತರಾದ ರತ್ನಮ್ಮ ಅವರು ನಮ್ಮ 5 ಕುಟುಂಬದವರಿಗೆ ಮನೆಯಾದರೆ ಸಾಕು, ಇನ್ನೇನೂ ಬೇಡ, ಇಲ್ಲಿನ ಐದು ಕುಟುಂಬಗಳು ಕೋಳಿ, ಹಂದಿ ಸಾಕಿಕೊಂಡು ಜೀವನ ನಡೆಸುತ್ತಿದ್ದೇವೆ ಎಂದು ದುಃಖಿತರಾದರು. ಈ ಸಂದರ್ಭದಲ್ಲಿ ಧೈರ್ಯ ಹೇಳಿದ ಶಾಸಕರು ನಿಮ್ಮ ಅಳಲು ನಮಗೆ ಸಂಕಟ ತರುತ್ತದೆ. ಆದ್ದರಿಂದ ಮನೆ ಒದಗಿಸಲು ಪ್ರಯತ್ನಿಸಲಾಗುವುದು. ಸದ್ಯ ಮುನ್ನೆಚ್ಚರ ವಹಿಸಬೇಕಿರುವುದರಿಂದ ಕಾಳಜಿ ಕೇಂದ್ರದಲ್ಲಿ ಇರುವಂತೆ ಕೋರಿದರು. ಸೂಕ್ಷ್ಮ ಪ್ರದೇಶವಾಗಿರುವುದರಿಂದ ಮುನ್ನೆಚ್ಚರ ವಹಿಸುವುದು ಅತ್ಯಗತ್ಯವಾಗಿದೆ ಎಂದು ಡಾ.ಮಂತರ್ ಗೌಡ ಅವರು ಹೇಳಿದರು. ಮಾನವೀಯ ದೃಷ್ಟಿಯಿಂದ ಪ್ರತಿಯೊಬ್ಬರ ಜೀವ ರಕ್ಷಣೆ ಮಾಡುವುದು ಆದ್ಯ ಕರ್ತವ್ಯವಾಗಿದೆ. ಪರಿಸ್ಥಿತಿಯನ್ನು ಅರ್ಥಮಾಡಿಕೊಂಡು ಕಾಳಜಿ ಕೇಂದ್ರದಲ್ಲಿ ಇರುವಂತೆ ಮನವಿ ಮಾಡಿದರು. ಬದಲಿ ಜಾಗ/ನಿವೇಶನ, ಮನೆ ನೀಡಿದಲ್ಲಿ ಈಗಿರುವ ಜಾಗವನ್ನು ಬಿಡಬೇಕು ಎಂದು ಇದೇ ಸಂದರ್ಭದಲ್ಲಿ ಶಾಸಕರು ತಿಳಿಸಿದರು. ಇದೇ ಸಂದರ್ಭದಲ್ಲಿ ರೆಡ್‍ಕ್ರಾಸ್ ಸಂಸ್ಥೆ ವತಿಯಿಂದ ಅಡುಗೆಗೆ ಬೇಕಾದ ಸಾಮಾಗ್ರಿಗಳು, ಬೆಡ್‍ಶೀಟ್, ಟಾರ್ಪಲ್ ಹಾಗೂ ಕೊಡೆ ಮತ್ತಿತರ ಒಳಗೊಂಡ ಕಿಟ್‍ನ್ನು ಶಾಸಕರಾದ ಡಾ.ಮಂತರ್ ಗೌಡ ಅವರು ವಿತರಿಸಿದರು. ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಶಾಸಕರಾದ ಡಾ.ಮಂತರ್ ಗೌಡ ಅವರು ಈಗಾಗಲೇ ಹಂಚಿಕೆ ಮಾಡಲಾಗಿರುವ ಮನೆಗಳನ್ನು ಮರು ಪರಿಶೀಲಿಸುವಂತಾಗಬೇಕು. ಜೊತೆಗೆ ಇನ್ಪೋಸಿಸ್ ಸಂಸ್ಥೆಯ ಮನೆ ಸಹ ಬಳಸಿಕೊಳ್ಳುವಂತಾಗಬೇಕು. ಇಂತಹ ಸಂತ್ರಸ್ತರಿಗೆ ಕೂಡಲೇ ಮನೆ ಒದಗಿಸುವಂತಾಗಬೇಕು ಎಂದು ಹೇಳಿದರು. ಹೆಚ್ಚಿನ ಮಳೆಯಿಂದ ತೊಂದರೆಗೆ ಸಿಲುಕಿರುವವರು ಹತ್ತಿರದ ಗ್ರಾ.ಪಂ.ಅಥವಾ ಕಂದಾಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿ ಕಾಳಜಿ ಕೇಂದ್ರಕ್ಕೆ ಸ್ಥಳಾಂತರವಾಗಬೇಕು ಎಂದು ಮನವಿ ಮಾಡಿದರು.  ಇದೇ ಸಂದರ್ಭದಲ್ಲಿ ಶಾಸಕರಾದ ಡಾ.ಮಂತರ್ ಗೌಡ ಅವರು ಸಂತ್ರಸ್ತರಿಗೆ ಊಟ ಬಡಿಸಿದರು. ನಂತರ ಶಾಸಕರು, ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಸೇರಿದಂತೆ ಎಲ್ಲರೂ ಸಂತ್ರಸ್ತರ ಜತೆ ಊಟ ಸವಿದರು. ಭಾರತೀಯ ರೆಡ್‍ಕ್ರಾಸ್ ಸಂಸ್ಥೆಯ ಸಭಾಪತಿ ಬಿ.ಕೆ.ರವೀಂದ್ರ ರೈ ಅವರು ಮಾತನಾಡಿ ಭಾರತೀಯ ರೆಡ್‍ಕ್ರಾಸ್ ಸಂಸ್ಥೆಯು ಪ್ರಾಕೃತಿಕ ವಿಕೋಪ ಹಾಗೂ ಆರೋಗ್ಯಕ್ಕೆ ಸಂಬಂಧಿಸಿದಂತೆ ವಿವಿಧ ವಿಪತ್ತು ಸಂದರ್ಭದಲ್ಲಿ ಸಾರ್ವಜನಿಕರಿಗೆ ಸ್ಪಂದಿಸುತ್ತಾ ಬಂದಿದೆ ಎಂದು ಹೇಳಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ತಹಶೀಲ್ದಾರ್ ಶ್ರೀಧರ, ಪೌರಾಯುಕ್ತರಾದ ಎಚ್.ಆರ್.ರಮೇಶ್, ಭಾರತೀಯ ರೆಡ್‍ಕ್ರಾಸ್ ಸಂಸ್ಥೆಯ ಉಪ ಸಭಾಪತಿ ಎಚ್.ಟಿ.ಅನಿಲ್, ಕಾರ್ಯದರ್ಶಿ ಧನಂಜಯ, ರೆಡ್‍ಕ್ರಾಸ್ ಸಂಸ್ಥೆಯ ಉತ್ತಯ್ಯ, ತೆನ್ನಿರಾ ಮೈನಾ, ಪ್ರಮುಖರಾದ ಜಗದೀಶ್, ಪ್ರಕಾಶ್ ಆಚಾರ್ಯ, ಪ್ರಭು ರೈ,  ಮುದ್ದುರಾಜ್, ಸದಾಮುದ್ದಪ್ಪ, ಮೀನಾಜ್, ರವಿಗೌಡ, ನಗರಸಭೆ ಎಂಜಿನಿಯರ್‍ಗಳಾದ ಸತೀಶ್, ಹೇಮಂತ್ ಕುಮಾರ್, ತಾಹಿರ್ ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಭಾಗಮಂಡಲದಲ್ಲಿ ಜನಸ್ಪಂದನ ಸಭೆ : ಸಾರ್ವಜನಿಕರಿಂದ 85 ಅರ್ಜಿ ಸಲ್ಲಿಕೆ*

ಮಾರ್ಚ್ 21, 2026

*ಕಳೆದ ಮೂರು ವರ್ಷದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕೊಡಗು ಜಿಲ್ಲೆಗೆ ಹೆಚ್ಚಿನ‌ ಪ್ರಾಧಾನ್ಯತೆ ನೀಡಿದೆ : ಶಾಸಕ ಎ.ಎಸ್.ಪೊನ್ನಣ್ಣ*

ಮಾರ್ಚ್ 21, 2026

*ಮಾ.24 ರಂದು ಕಣ್ಣಿನ ತಪಾಸಣಾ ಶಿಬಿರ*

ಮಾರ್ಚ್ 21, 2026

*ಕಳೆದ ಮೂರು ವರ್ಷದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕೊಡಗು ಜಿಲ್ಲೆಗೆ ಹೆಚ್ಚಿನ‌ ಪ್ರಾಧಾನ್ಯತೆ ನೀಡಿದೆ : ಶಾಸಕ ಎ.ಎಸ್.ಪೊನ್ನಣ್ಣ*

ಮಾರ್ಚ್ 21, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.21 NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕಳೆದ ಮೂರು ವರ್ಷದಲ್ಲಿ ಕೊಡಗು ಜಿಲ್ಲೆಗೆ ಹೆಚ್ಚಿನ‌…

*ಮಾ.24 ರಂದು ಕಣ್ಣಿನ ತಪಾಸಣಾ ಶಿಬಿರ*

ಮಾರ್ಚ್ 21, 2026

*ರೋಟರಿ ಮಡಿಕೇರಿಯಿಂದ ಮೂರ್ನಾಡಿನಲ್ಲಿ ಕ್ಯಾನ್ಸರ್ ನಿರೋಧಕ ಲಸಿಕೆ ವಿತರಣೆ*

ಮಾರ್ಚ್ 21, 2026

*ಕೊಡಗು ಕಲಾವಿದರ ಸಂಘದ ಅಧ್ಯಕ್ಷರಾಗಿ ವಾಂಚಿರ ವಿಠಲ್ ನಾಣಯ್ಯ ಆಯ್ಕೆ*

ಮಾರ್ಚ್ 21, 2026

*ಕೊಡಗು ಕಲಾವಿದರ ಸಂಘದಿಂದ ಎ.ಟಿ.ರಘು ಪುಣ್ಯ ಸ್ಮರಣೆ : ಪುಸ್ತಕ ಬಿಡುಗಡೆ, ಸಮಿತಿ ಪುನರ್‌ರಚನೆ*

ಮಾರ್ಚ್ 21, 2026

*ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿದೆ : ಉದಯ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಸ್ಪಷ್ಟನೆ*

ಮಾರ್ಚ್ 21, 2026

*ಮುಂದಿನ ಒಂದು ವಾರ ರಾಜ್ಯಾದ್ಯಂತ ಮಳೆ ಅಬ್ಬರ ಸಾಧ್ಯತೆ: ಯಾವೆಲ್ಲಾ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ? ಹವಾಮಾನ ಇಲಾಖೆ ರಿಪೋರ್ಟ್*

ಮಾರ್ಚ್ 20, 2026

*ಗೋದಾವರಿ ನದಿಯಲ್ಲಿ ಐವರು ಎಂಜಿನಿಯರಿಂಗ್ ವಿದ್ಯಾರ್ಥಿಗಳ ದಾರುಣ ಅಂತ್ಯ*

ಮಾರ್ಚ್ 20, 2026

*ಸುಂಟಿಕೊಪ್ಪ : ಶ್ರೀ ಕುರಂಭ (ಭಗವತಿ) ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವಾರ್ಷಿಕ ಮಹಾಪೂಜೆ*

ಮಾರ್ಚ್ 20, 2026

*ಗೌಡಳ್ಳಿಯಲ್ಲಿ ಫುಟ್ಬಾಲ್ ಪಂದ್ಯಾವಳಿ ಉದ್ಘಾಟನೆ*

ಮಾರ್ಚ್ 20, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.