
ಸುಂಟಿಕೊಪ್ಪ ಆ.4 NEWS DESK : ಶ್ರೀ ವಿನಾಯಕ ಸೇವಾ ಸಮಿತಿ ಶ್ರೀ ಅಣ್ಣಪ್ಪಸ್ವಾಮಿ ದೇವಾಲಯ ಶ್ರೀದೇವಿ ನಾರ್ಗಾಣೆ ಗ್ರಾಮದ 12ನೇ ವರ್ಷದ ಗೌರಿಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಎಂ.ಜೆ.ಆಕಾಶ್ ಪ್ರಧಾನ ಕಾರ್ಯದರ್ಶಿಯಾಗಿ ಕಿರಣ್ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಕಾರ್ತಿಕ್, ಸಹಕಾರ್ಯದರ್ಶಿಯಾಗಿ ಸುಧಿ, ಖಜಾಂಚಿಯಾಗಿ ಮೋಹನ್, ಸಹ ಖಜಾಂಚಿಯಾಗಿ ಬಿ.ಕೆ.ರಾಜೇಶ್ ಹಾಗೂ ಸಮಿತಿ ಸದಸ್ಯರುಗಳಾಗಿ 77 ಮಂದಿಯನ್ನು ಆಯ್ಕೆಮಾಡಲಾಯಿತು. ಹಿಂದಿನ ಸಾಲಿನ ಅಧ್ಯಕ್ಷ ಪುನಿತ್ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.








