
ಹುಣುಸೂರು NEWS DESK ಆ.4 : ವಿಶ್ವ ವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಗೆ ನಾಗರಹೊಳೆಯ ವೀರನಹೊಸಹಳ್ಳಿ ಗೇಟ್ ಬಳಿಯಿಂದ ಇಂದು ಗಜಪಯಣ ಆರಂಭಗೊ0ಡಿತು. ಅರಣ್ಯ ಸಚಿವ ಈಶ್ವರ ಖಂಡ್ರೆ, ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್, ಅರಣ್ಯ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಈ ಸಂದರ್ಭ ಹಾಜರಿದ್ದು, ಶುಭ ಹಾರೈಸಿದರು. ವಿವಿಧ ಕಲಾತಂಡಗಳು ಬೀಳ್ಕೊಡುಗೆ ಸಮಾರಂಭಕ್ಕೆ ಮೆರುಗು ತಂದವು.








