
ಮಡಿಕೇರಿ ಆ.5 NEWS DESK : ಕರ್ನಾಟಕ ರಕ್ಷಣಾ ವೇದಿಕೆಯ ಕೊಡಗು ಮಹಿಳಾ ಘಟಕದ ನೂತನ ಜಿಲ್ಲಾಧ್ಯಕ್ಷರಾಗಿ ಜ್ಯೋತಿ ಕುದುಪಜೆ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ದಿವ್ಯ ದೇವಾಂಗರನ್ನು ನೇಮಕ ಮಾಡಲಾಗಿದೆ. ಕರ್ನಾಟಕ ರಕ್ಷಣಾ ವೇದಿಕೆಯ ಕೇಂದ್ರ ಕಚೇರಿಯಲ್ಲಿ ವೇದಿಕೆಯ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣ ಗೌಡರು ನೇಮಕಾತಿ ಪತ್ರ ನೀಡಿ ಅಭಿನಂದಿಸಿದರು. ಅತ್ಯಂತ ಶ್ರದ್ದೆ ಮತ್ತು ಪ್ರಾಮಾಣಿಕತೆಯಿಂದ ನಿರ್ವಹಿಸಿ, ಕಾವೇರಿ ಮಾತೆಯ ಉಗಮ ಸ್ಥಳವಾಗಿರುವ ಕೊಡಗು ಜಿಲ್ಲೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಮಹಿಳಾ ಘಟಕವನ್ನು ಬಲಪಡಿಸಲು ಶಕ್ತಿಮೀರಿ ಕಾರ್ಯನಿರ್ವಹಿಸುವಂತೆ ಸಲಹೆ ನೀಡಿದರು. ಈ ಸಂದರ್ಭ ಕರ್ನಾಟಕ ರಕ್ಷಣಾ ವೇದಿಕೆಯ ಮಹಿಳಾ ಘಟಕದ ರಾಜ್ಯ ಸಂಚಾಲಕರಾದ ದೀಪಾ ಪೂಜಾರಿ ಹಾಜರಿದ್ದರು.








