

ಸೋಮವಾರಪೇಟೆ NEWS DESK ಆ.9 : ರಕ್ಷಾ ಬಂಧನದ ಹಿನ್ನೆಲೆ ಸೋಮವಾರಪೇಟೆ ಬಿಜೆಪಿ ಮಹಿಳಾ ಮೋರ್ಚಾದ ಪ್ರಮುಖರು ಪತ್ರಕರ್ತರಿಗೆ ರಕ್ಷೆ ಕಟ್ಟಿ ಶುಭ ಹಾರೈಸಿದರು. ಸಹೋದರತ್ವ ಮತ್ತು ಬಾಂಧವ್ಯದ ಕೊಂಡಿ ರಕ್ಷಾ ಬಂಧನ ಎಂದು ಮಂಡಲ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಕವಿತಾ ವಿರುಪಾಕ್ಷ ಹೇಳಿದರು. ಪಟ್ಟಣದ ಪತ್ರಿಕಾ ಭವನದಲ್ಲಿ ಪತ್ರಕರ್ತರಿಗೆ ರಕ್ಷೆ ಕಟ್ಟಿ ಶುಭ ಹಾರೈಸಿದ ಅವರು ಹೆಣ್ಣು ಮಕ್ಕಳು ಸಹೋದರ ಭಾವನೆಯಿಂದ ರಕ್ಷೆ ಕಟ್ಟಿ ಸಹೋದರರಿಂದ ಆಶೀರ್ವಾದ ಮತ್ತು ರಕ್ಷಣೆ ಕೋರುವ ಸಂಪ್ರದಾಯ ನಮ್ಮ ದೇಶದಲ್ಲಿ ಆಚರಿಸುತ್ತಿರುವುದು ಹೆಮ್ಮೆ ಎನಿಸಿದೆ ಎಂದರು. ಪಟ್ಟಣ ಪಂಚಾಯ್ತಿ ಉಪಾಧ್ಯಕ್ಷೆ ಮೋಹಿನಿ, ತಾಲೂಕು ಪಂಚಾಯತ್ ಮಾಜಿ ಸದಸ್ಯೆ ತಂಗಮ್ಮ, ಹಾನಗಲ್ಲು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ರೇಣುಕಾ, ಮಂಡಲ ಬಿಜೆಪಿ ಕಾರ್ಯದರ್ಶಿ ಇಂದಿರಾ ಸಾಲಿಯಾನ, ಪ್ರಮುಖರಾದ ವರಲಕ್ಷ್ಮಿ ಸಿದ್ದೇಶ್ವರ, ಸುಮತಿ ಉಪಸ್ತಿತರಿದ್ದರು. ನಂತರ ಪೊಲೀಸ್ ಠಾಣೆಗೆ ತೆರಳಿ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೂ ರಕ್ಷೆ ಕಟ್ಟಿ ಶುಭ ಹಾರೈಸಿದರು.








