Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ವಿಶ್ವ ಬುಡಕಟ್ಟು ದಿನಾಚರಣೆ : ಶಿಕ್ಷಣದೊಂದಿಗೆ ಸಂಸ್ಕೃತಿ ಮತ್ತು ಪರಿಸರವನ್ನು ಉಳಿಸಿ ಬೆಳೆಸಬೇಕು : ಈರಮಂಡ ಹರಿಣಿ ವಿಜಯ್ ಕರೆ*
ಇತ್ತೀಚಿನ ಸುದ್ದಿಗಳು

*ವಿಶ್ವ ಬುಡಕಟ್ಟು ದಿನಾಚರಣೆ : ಶಿಕ್ಷಣದೊಂದಿಗೆ ಸಂಸ್ಕೃತಿ ಮತ್ತು ಪರಿಸರವನ್ನು ಉಳಿಸಿ ಬೆಳೆಸಬೇಕು : ಈರಮಂಡ ಹರಿಣಿ ವಿಜಯ್ ಕರೆ*

August 11, 20252 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಆ.11 NEWS DESK : ಇಂದಿನ ಆಧುನಿಕ ಯುಗದಲ್ಲಿ ಶಿಕ್ಷಣವೊಂದಿದ್ದರೆ ಸಾಕು ಎನ್ನುವ ಮನೋಭಾವ ಬೆಳೆಯುತ್ತಿದೆ. ಇದು ಸರಿಯಲ್ಲ, ಶಿಕ್ಷಣದೊಂದಿಗೆ ನಮ್ಮ ಸಂಸ್ಕೃತಿ ಮತ್ತು ಪರಿಸರವನ್ನು ಉಳಿಸಿ ಬೆಳೆಸಿದರೆ ಮಾತ್ರ ನಮಗೆ ಭವಿಷ್ಯವಿದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮಡಿಕೇರಿ ಸ್ಥಳೀಯ ಸಂಸ್ಥೆಯ ಅಧ್ಯಕ್ಷರಾದ ಈರಮಂಡ ಹರಿಣಿ ವಿಜಯ್ ಅಭಿಪ್ರಾಯಪಟ್ಟಿದ್ದಾರೆ. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮಡಿಕೇರಿ ಸ್ಥಳೀಯ ಸಂಸ್ಥೆ ವತಿಯಿಂದ ಪಾಲೇಮಾಡು ಅಂಗನವಾಡಿ ಕೇಂದ್ರದಲ್ಲಿ ವಿಶ್ವ ಬುಡಕಟ್ಟು ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಪ್ರತಿಯೊಬ್ಬರಿಗೆ ಶಿಕ್ಷಣದ ಅಗತ್ಯವಿದೆ, ಆದರೆ ಶಿಕ್ಷಣದ ಜೊತೆ ಜೊತೆಯಲ್ಲಿ ನಮ್ಮ ಸಂಸ್ಕೃತಿ ಮತ್ತು ಪರಂಪರೆಯನ್ನು ಮುಂದಿನ ಪೀಳಿಗೆಗಾಗಿ ಬೆಳೆಸಿಕೊಂಡು ಹೋಗಬೇಕು ಎಂದರು. ಬುಡಕಟ್ಟು ಜನರು ಈ ಪರಿಸರದ ಅವಿಭಾಜ್ಯ ಅಂಗವಾಗಿದ್ದಾರೆ, ಅವರಿದ್ದರೆ ಪರಿಸರ ಉಳಿಯುತ್ತದೆ. ನಾವು ಕೂಡ ಪರಿಸರದ ಬಗ್ಗೆ ಕಾಳಜಿ ವಹಿಸಬೇಕಾಗಿದೆ. ಕೊಡಗಿನ ಗದ್ದೆ ಮತ್ತು ತೋಟಗಳು ಇಂದು ಮರೆಯಾಗುತ್ತಿದ್ದು, ಕಾಂಕ್ರೀಟ್ ಕಟ್ಟಡಗಳು ತಲೆ ಎತ್ತುತ್ತಿವೆ. ಸುತ್ತಮುತ್ತಲ ಹಸಿರ ಪರಿಸರ ಅಭಿವೃದ್ಧಿಯ ಹೆಸರಿನಲ್ಲಿ ನಾಶವಾಗುತ್ತಿದೆ. ಇಂದು ಪರಿಸರ ನಾಶವಾದರೆ ಮುಂದೊಂದು ದಿನ ಮನುಷ್ಯರು ಕೂಡ ನಾಶವಾಗಬೇಕಾಗುತ್ತದೆ ಎಂದು ಎಚ್ಚರಿಕೆಯ ಮಾತುಗಳನ್ನಾಡಿದರು. ಮುಖ್ಯ ಭಾಷಣ ಮಾಡಿದ ಚೊಟ್ಟೆಪಾರೆ ಹಾಡಿಯ ಬುಡಕಟ್ಟು ಜನಾಂಗದ ಮುಖಂಡ ಜೆ.ಕೆ.ರಾಮು ಅವರು ಇಂದು ಆದಿವಾಸಿಗಳು ಕೂಡ ಉನ್ನತ ಶಿಕ್ಷಣವನ್ನು ಪಡೆಯುತ್ತಿದ್ದಾರೆ, ಆದರೆ ಬುಡಕಟ್ಟು ಸಂಪ್ರದಾಯವನ್ನು ಕಡೆಗಣಿಸದೆ ಆಚರಿಸಿಕೊಂಡು ಹೋಗುತ್ತಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಸುಮಾರು 52 ಆದಿವಾಸಿ ಮೂಲ ಸಮುದಾಯಗಳಿವೆ. ಈ ಸಮುದಾಯಗಳನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಇದೆ. ಯಾವುದೇ ಕಾರಣಕ್ಕೂ ಬುಡಕಟ್ಟು ಜನಾಂಗ ನಶಿಸಿ ಹೋಗಬಾರದು. ಸಾಮಾಜಿಕ ಪಿಡುಗುಗಳ ದುಷ್ಪರಿಣಾಮದ ಕುರಿತು ಆದಿವಾಸಿಗಳಲ್ಲಿ ಹೆಚ್ಚು ಹೆಚ್ಚು ಅರಿವು ಮೂಡಿಸಬೇಕಾಗಿದೆ ಎಂದರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ ಆಯುಕ್ತ ಜಿಮ್ಮಿ ಸಿಕ್ವೆರಾ ಅವರು ಮಾತನಾಡಿ ಬುಡಕಟ್ಟು ಜನರು ಶಿಕ್ಷಣಕ್ಕೆ ಮಹತ್ವ ನೀಡಬೇಕು, ಉನ್ನತ ಶಿಕ್ಷಣವನ್ನು ಪಡೆಯಬೇಕು ಎಂದು ಕಿವಿಮಾತು ಹೇಳಿದರು. ಪ್ರತಿಯೊಬ್ಬರು ವಿದ್ಯಾವಂತರಾಗಬೇಕು ಎನ್ನುವ ಕಾರಣಕ್ಕಾಗಿ ಸರಕಾರ ಎಲ್ಲಾ ಸೌಲಭ್ಯಗಳನ್ನು ನೀಡುತ್ತಿದೆ, ಉಚಿತ ಯೋಜನೆಗಳನ್ನು ಜಾರಿ ಮಾಡುತ್ತಿದೆ. ಇವುಗಳನ್ನೆಲ್ಲ ಸದುಪಯೋಗಪಡಿಸಿಕೊಳ್ಳಬೇಕು, ವಿದ್ಯೆಯನ್ನು 10ನೇ ತರಗತಿಗೆ ಮೊಟಕುಗೊಳಿಸಬಾರದು. ಹೆಚ್ಚಿನ ವಿದ್ಯಾಭ್ಯಾಸ ಪಡೆಯುವ ಮೂಲಕ ದಬ್ಬಾಳಿಕೆ ಮತ್ತು ಅಕ್ರಮಗಳನ್ನು ಧೈರ್ಯದಿಂದ ಎದುರಿಸಬೇಕು. ಹಣವೊಂದಿದ್ದರೆ ಸಾಲದು ಶಿಕ್ಷಣ ಅತಿ ಮುಖ್ಯ, ವಿದ್ಯೆಯನ್ನು ಯಾರಿಂದಲೂ ಕದಿಯಲು ಸಾಧ್ಯವಿಲ್ಲ ಎಂದರು. ಹೊದ್ದೂರು ಗ್ರಾ.ಪಂ ಅಧ್ಯಕ್ಷ ಹೆಚ್.ಎ.ಹಂಸ ಅವರು ಮಾತನಾಡಿ ಆದಿವಾಸಿಗಳು ಸ್ವಂತ ಸೂರು ಹೊಂದಬೇಕು ಎನ್ನುವುದು ನಮ್ಮ ಗುರಿಯಾಗಿದೆ. ಆ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲಾಗುತ್ತಿದೆ ಮತ್ತು ಹೋರಾಟಗಳಿಗೆ ಸ್ಪಂದಿಸಲಾಗುತ್ತಿದೆ. ಬಡವರಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಬದ್ಧರಾಗಿದ್ದೇವೆ ಎಂದು ಭರವಸೆ ನೀಡಿದರು. ಮೂರ್ನಾಡು ಪೊಲೀಸ್ ಉಪ ಠಾಣೆಯ ಸಹಾಯಕ ಉಪ ನಿರೀಕ್ಷಕ ಮೊಣ್ಣಪ್ಪ ಪಿ.ಬಿ ಮಾತನಾಡಿ ಜಿಲ್ಲೆಯಲ್ಲಿ ಗಾಂಜಾ ವ್ಯಸನಿಗಳ ಸಂಖ್ಯೆ ಹೆಚ್ಚಾಗುತ್ತಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದರು. ಗಾಂಜಾ ವ್ಯಸನಿಗಳಿಂದ ಪೋಷಕರು ಅನುಭವಿಸುತ್ತಿರುವ ಕಷ್ಟವನ್ನು ವಿವರಿಸಿದ ಅವರು ಗಾಂಜಾ ಮಾರಾಟದ ವಿರುದ್ಧ ಪೊಲೀಸ್ ಇಲಾಖೆ ನಿರಂತರ ಕಾರ್ಯಾಚರಣೆಯಲ್ಲಿ ತೊಡಗಿದೆ. ಬುಡಕಟ್ಟು ಜನರು ದುಶ್ಚಟಗಳಿಂದ ಮುಕ್ತರಾಗಿ ಉತ್ತಮ ಜೀವನ ಸಾಗಿಸಬೇಕು ಎಂದು ಕರೆ ನೀಡಿದರು. ಹೊದ್ದೂರು ಗ್ರಾ.ಪಂ ಸದಸ್ಯರುಗಳಾದ ಕೆ.ಮೊಣ್ಣಪ್ಪ, ಕುಸುಮಾವತಿ ಹಾಗೂ ಹಮೀದ್ ಅವರುಗಳು ಬುಡಕಟ್ಟು ಜನಾಂಗದ ಸಮಸ್ಯೆಗಳು ಮತ್ತು ಪ್ರಗತಿಯ ಕುರಿತು ಮಾತನಾಡಿದರು. *ಸನ್ಮಾನ* ಬುಡಕಟ್ಟು ಜನಾಂಗದ ಸಾಧಕರಾದ ಲಕ್ಷ್ಮಿ, ಜೆ.ಕೆ.ರಾಮು ಹಾಗೂ ವೈ.ಪಿ.ತಮ್ಮಯ್ಯ ಅವರುಗಳನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಚೊಟ್ಟೆಪಾರೆ ಹಾಡಿ ತಂಡದ ವತಿಯಿಂದ ನಡೆದ ಹಾಡು ಮತ್ತು ನೃತ್ಯ ಪ್ರದರ್ಶನ ಗಮನ ಸೆಳೆಯಿತು. ಬುಡಕಟ್ಟು ಜನಾಂಗದ ಹಾಡು ಹಾಡಿದ ಲಕ್ಷ್ಮಿ ಅವರು ನೆರೆದಿದ್ದವರ ಮೆಚ್ಚುಗೆಗೆ ಪಾತ್ರರಾದರು. ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಎ.ಎ.ಅಬ್ದುಲ್ಲ, ಸದಸ್ಯೆ ಲಕ್ಷ್ಮಿ, ಸ್ಕೌಟ್ ಮತ್ತು ಗೈಡ್ ಜಿಲ್ಲಾ ಕಾರ್ಯದರ್ಶಿ ವಸಂತಿ ಎಂ.ಎಂ, ಉಪಾಧ್ಯಕ್ಷರುಗಳಾದ ನೀಲಮ್ಮ, ಪಿ.ಎಂ.ರವಿ, ಅರುಣ್ ಕುಮಾರ್, ಖಜಾಂಚಿ ಶಾಂತಿ, ಪ್ರಧಾನ ಕಾರ್ಯದರ್ಶಿ ಆರ್.ಪಿ.ಚಂದ್ರಶೇಖರ್, ಕಾರ್ಯದರ್ಶಿಗಳಾದ ನಳಿನಿ ಸುವರ್ಣ, ಸುಚಿತ, ಸೂರಜ್, ಗುಲ್ಶನ್, ವಾಟೆಕಾಡು ಸರಕಾರಿ ಶಾಲೆಯ ಮುಖ್ಯೋಪಾಧ್ಯಾಯರಾದ ಕುಮಾರಸ್ವಾಮಿ, ಎಸ್.ಡಿ.ಎಂ.ಸಿ ಅಧ್ಯಕ್ಷ ಸುರೇಶ್ ಮತ್ತಿತರರು ಉಪಸ್ಥಿತರಿದ್ದರು. ಸ್ಕೌಟ್ ಅಂಡ್ ಗೈಡ್ಸ್ ಪ್ರಾರ್ಥಿಸಿ, ರಂಜಿತ್ ಮೌರ್ಯ ನಿರೂಪಿಸಿ, ಆರ್.ಪಿ.ಚಂದ್ರಶೇಖರ್ ವಂದಿಸಿದರು.

Share. Facebook Twitter Pinterest LinkedIn Tumblr Email WhatsApp
Previous Article*ಸಮಾತ್ರಾ ಉತಾರಾ ರ‍್ಯಾಲಿ : ಅಂತರರಾಷ್ಟ್ರೀಯ ರ‍್ಯಾಲಿ ಪ್ರವೇಶದಲ್ಲೇ ಅಬ್ಬಿನ್ ರೈ ಮಿಂಚು*
Next Article *ಅಬ್ಬಾ ! ಕೊಡಗಿನಲ್ಲಿ 12 ಕೆ.ಜಿ ಗೂ ಅಧಿಕ ಗಾಂಜಾ ವಶ : ಆರೋಪಿಗಳ ಬಂಧನ*

Recommended: Website design development company services in Mangalore Forex Trading Teacher in India

Related Posts

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

ಸಿಯಾಟಲ್ (ಅಮೆರಿಕಾ): ಕಳೆದ ಎರಡು ವರ್ಷಗಳಿಂದ ಇಡೀ ಜಗತ್ತಿನ ಗಮನ ಸೆಳೆದಿದ್ದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಸಾವಿನ…

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.