
ಮಡಿಕೇರಿ NEWS DESK ಆ.15 : ಮಡಿಕೇರಿ ನಗರದ ಮಲ್ಲಿಕಾರ್ಜುನ ನಗರದಲ್ಲಿ 79ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಮಲ್ಲಿಕಾರ್ಜುನ ನಗರದ ಶ್ರೀ ಕೋದಂಡರಾಮ ದೇವಾಲಯದ ಆವರಣದಲ್ಲಿ ನಗರಸಭಾ ಸದಸ್ಯ ಮುಸ್ತಫ ಅವರು ಧ್ವಜಾರೋಹಣ ನೆರವೇರಿಸಿದರು. ನಂತರ ಮಾತನಾಡಿದ ಅವರು ಪ್ರತಿಯೊಬ್ಬರು ದೇಶಭಕ್ತಿಯನ್ನು ಮೈಗೂಡಿಸಿಕೊಳ್ಳಬೇಕು ಎಂದು ಕರೆ ನೀಡಿದರು. ನಂತರ ಸಿಹಿ ಹಂಚಿದರು. ದೇವಾಲಯ ಟ್ರಸ್ಟ್ ನ ಪದಾಧಿಕಾರಿಗಳು, ಶ್ರೀರಾಮ ಸೇವಾ ಸಮಿತಿಯ ಪದಾಧಿಕಾರಿಗಳು, ಜ್ಯೋತಿ ಯುವಕ ಸಂಘದ ಸದಸ್ಯರು ಹಾಗೂ ಸ್ಥಳೀಯ ನಿವಾಸಿಗಳು ಪಾಲ್ಗೊಂಡಿದ್ದರು.








