

ಮಡಿಕೇರಿ ಆ.15 NEWS DESK : ಮಡಿಕೇರಿ ನಗರ ಚೇಂಬರ್ ಘಟಕದಿಂದ ನಗರದ ಚೌಕಿ ಆವರಣದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಪದ್ಮಶ್ರೀ ಪುರಸ್ಕೃತರಾದ ರಾಣಿ ಮಾಚಯ್ಯ ಅವರು ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಏಕ ಬಳಕೆ ಮುಕ್ತ ಪ್ಲಾಸ್ಟಿಕ್ ನಗರ ಎಂಬ ಘೋಷಣೆಯ ಬಿತ್ತಿ ಪತ್ರವನ್ನು ಬಿಡುಗಡೆಗೊಳಿಸಿ 2ಲೀಟರ್ ವರೆಗಿನ ಕುಡಿಯುವ ನೀರಿನ ಬಾಟಲಿಯನ್ನು ಬಳಸದಂತೆ ಮನವಿ ಮಾಡಲಾಯಿತು. ಕಾರ್ಯಕ್ರಮದಲ್ಲಿ ನಗರ ಚೇಂಬರ್ ನ ನಿರ್ದೇಶಕರು ಮತ್ತು ವರ್ತಕರು ಉಪಸ್ಥಿತರಿದ್ದರು. ನಗರ ಘಟಕ ಅಧ್ಯಕ್ಷರಾದ ಸಂತೋಷ್ ಅನ್ವೇಕರ್ ಸ್ವಾಗತಿಸಿ ವಂದಿಸಿದರು.









