
ಭಾಗಮಂಡಲ NEWS DESK ಆ.15 : ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಾಲಯದ ಆವರಣದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಶ್ರೀ ಭಗಂಡೇಶ್ವರ – ತಲಕಾವೇರಿ ದೇವಾಲಯದ ಪ್ರಬಾರ ಕಾರ್ಯನಿರ್ವಹಣಾ ಅಧಿಕಾರಿಗಳು ಹಾಗೂ ಮಡಿಕೇರಿ ತಾಲ್ಲೂಕು ಕಛೇರಿ ಚುನಾವಣಾ ಶಿರಸ್ತೇದಾರರಾದ ಎನ್.ಜಿ.ಚಂದ್ರಶೇಖರ್ ಅವರು ಧ್ವಜಾರೋಹಣ ನೆರವೇರಿಸಿದರು, ದೇವಾಲಯದ ಸಿಬ್ಬಂದಿವರ್ಗ, ಅರ್ಚಕರು, ತಕ್ಕಮುಖ್ಯಸ್ಥರು, ಕಂದಾಯ ಇಲಾಖೆಯ ಸಿಬ್ಬಂದಿಗಳು, ಸ್ಥಳೀಯ ಮುಖಂಡರು ಹಾಗೂ ಭಕ್ತರು ಪಾಲ್ಗೊಂಡಿದ್ದರು. ನೆರೆದಿದ್ದವರಿಗೆ ಸಿಹಿ ಹಂಚಿ ಸಂಭ್ರಮಿಸಲಾಯಿತು.








