
ಮಡಿಕೇರಿ NEWS DESK ಆ.15 : ಮಡಿಕೇರಿ ನಗರ ಆಟೋ ಮಾಲೀಕ ಹಾಗೂ ಚಾಲಕರ ಸಂಘದ ವತಿಯಿಂದ 79ನೇ ಸ್ವಾತಂತ್ರ್ಯೋತ್ಸವ ಅರ್ಥಪೂರ್ಣವಾಗಿ ನಡೆಯಿತು. ಸಂಘದ ಅಧ್ಯಕ್ಷ ಎಂ.ಸಮದ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಅತಿಥಿಗಳಾಗಿ ಸಂಚಾರಿ ಠಾಣಾಧಿಕಾರಿ ಶ್ರೀಧರ್ ಎಂ.ವಿ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಿ.ವೈ.ರಾಜೇಶ್, ಕೊಡಗು ಜಿಲ್ಲಾ ಆಟೋ ಮಾಲೀಕ ಹಾಗೂ ಚಾಲಕರ ಸಂಘದ ಅಧ್ಯಕ್ಷ ಡಿ.ಹೆಚ್.ಮೇದಪ್ಪ, ಕಾರ್ಯದರ್ಶಿ ಟಿ.ಎಂ.ಪ್ರಸನ್ನ ಮತ್ತಿತರ ಪದಾಧಿಕಾರಿಗಳು, ಸದಸ್ಯರು ಹಾಗೂ ಚಾಲಕರು ಪಾಲ್ಗೊಂಡಿದ್ದರು. ನಿವೃತ್ತಿಯ ನಂತರ ಆಟೋ ಚಾಲಕರ ವೃತ್ತಿಯನ್ನು ಆಯ್ದುಕೊಂಡ ಐವರು ಮಾಜಿ ಸೈನಿಕರನ್ನು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು.








