
ನಾಪೋಕ್ಲು ಆ.18 NEWS DESK : ಪಂಜಾಬ್ ನ ಜಲಂಧರ್ನಲ್ಲಿ ಆ.23ರವರೆಗೆ ಹಾಕಿ ಇಂಡಿಯಾ ವತಿಯಿಂದ ಆಯೋಜಿತಗೊಂಡಿರುವ 15ನೇ ಹಾಕಿ ಇಂಡಿಯಾ ಜೂನಿಯರ್ ಮೆನ್ ನ್ಯಾಷನಲ್ ಚಾಂಪಿಯಶಿಪ್-2025ಕ್ಕೆ ಹಾಕಿ ಕರ್ನಾಟಕ ತಂಡವನ್ನು ಪ್ರಕಟಿಸಲಾಗಿದೆ. ಹಾಕಿ ಕರ್ನಾಟಕ ತಂಡದಲ್ಲಿ ಕೊಡಗು ಜಿಲ್ಲೆಯ ಮೂಲದ 11 ಆಟಗಾರರು ಸ್ಥಾನ ಪಡೆದಿದ್ದಾರೆ. ತಂಡದ ಕೋಚ್ ಹಾಗೂ ವ್ಯವಸ್ಥಾಪಕರಾಗಿಯೂ ಜಿಲ್ಲೆಯ ಇಬ್ಬರು ತಂಡವನ್ನು ಮುನ್ನಡೆಸುತ್ತಿರುವುದು ವಿಶೇಷವಾಗಿದೆ. ತಂಡದ ನಾಯಕನಾಗಿ ಕೊಡಗಿನವರಾದ ಧ್ರುಮ ಬಿ.ಎಸ್. ಕಾರ್ಯನಿರ್ವಹಿಸಲಿದ್ದು, ಆಟಗಾರರಾಗಿ ನಾಪೋಕ್ಲು ಗ್ರಾಮದ ಬಿದ್ದಾಟಂಡ ಬೋಪಣ್ಣ, ಕುಲ್ಲೇಟಿರ ವಚನ್ ಕಾಳಪ್ಪ, ಮಕ್ಕಂದೂರು ಗ್ರಾಮದ ವಿಶ್ವಜಿತ್ ಕುಂಬಗೌಡನ ವಿ., ಹರ್ಷಿತ್ ಕುಮಾರ್, ಮಂಡೇಡ ಅಚ್ಚಯ್ಯ, ಬಲ್ಯಂಡ ಸಂಪನ್ ಗಣಪತಿ, ಚೋಯಮಾಡಂಡ ಆಕರ್ಷ್ ಬಿದ್ದಪ್ಪ, ಪೂಜಿತ್ ಕೆ.ಆರ್, ಕೋಳೆರ ಹೃತಿಕ್ ಅಯ್ಯಪ್ಪ, ಚೋಕಿರ ಕುಶಾಲ್ ಬೋಪಯ್ಯ ತಂಡದಲ್ಲಿದ್ದಾರೆ. ತಂಡದ ಕೋಚ್ ಆಗಿ ಮೇಚಂಡ ತನು ನಂಜಪ್ಪ ಹಾಗೂ ವ್ಯವಸ್ಥಾಪಕರಾಗಿ ಬಲ್ಲಮಾವಟ್ಟಿ ಗ್ರಾಮದ ಅಪ್ಪಚೆಟ್ಟೋಳಂಡ ಅಯ್ಯಪ್ಪ ಭಾಗವಹಿಸದ್ದಾರೆ.
ವರದಿ : ದುಗ್ಗಳ ಸದಾನಂದ.








