
ನಾಪೋಕ್ಲು ಆ.19 NEWS DESK : ಗ್ರಾಮೀಣ ಮಟ್ಟದಲ್ಲಿ ಹಲವು ಪ್ರತಿಭೆಗಳಿದ್ದಾರೆ. ಅವರನ್ನು ಗುರುತಿಸಿ ಪ್ರೋತ್ಸಾಹಿಸುವ ಜವಾಬ್ದಾರಿ ಸಂಘ ಸಂಸ್ಥೆಗಳ ಮೇಲಿದೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು. ನಾಪೋಕ್ಲು ಹಿಂದೂ ಮಲಯಾಳಿ ಸಂಘದ ವತಿಯಿಂದ ಸಮಸ್ತ ಹಿಂದೂ ಬಾಂಧವರಿಗಾಗಿ ಹಳೆ ತಾಲೂಕಿನ ಜಿಎಂಪಿ ಶಾಲಾ ಮೈದಾನದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾಮಟ್ಟದ ಹಗ್ಗ ಜಗ್ಗಾಟ ಸ್ಪರ್ಧೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕೊಡಗು ಜಿಲ್ಲೆ ಕ್ರೀಡೆಗೆ ಹೆಸರುವಾಸಿಯಾಗಿದೆ. ಎಲ್ಲಾ ಸಮಾಜದವರನ್ನು, ಜನಾಂಗದವರನ್ನು ಉಗ್ಗೂಡಿಸುವ ಶಕ್ತಿ ಕ್ರೀಡೆಗಿದೆ. ದೇಶಕ್ಕೆ ದೊಡ್ಡ ಕೊಡುಗೆಯನ್ನು ಜಿಲ್ಲೆಯ ಕ್ರೀಡಾಪಟುಗಳು ನೀಡಿದ್ದಾರೆ ಮತ್ತಷ್ಟು ಕ್ರೀಡಾ ಪ್ರತಿಭೆಗಳನ್ನು ಹೊರ ತರುವಲ್ಲಿ ಸಂಘ ಸಂಸ್ಥೆಗಳ ಪಾತ್ರ ಪ್ರಮುಖವಾದದ್ದು ಎಂದರು. ನಾಡಿನ ಸಮಸ್ತ ದೇವಾನುದೇವತೆಗಳು ಯುವಕರಿಗೆ,ಮಕ್ಕಳಿಗೆ ಉತ್ತಮ ಭವಿಷ್ಯ ನೀಡಲಿ.ಉತ್ತಮಮಳೆ-ಬೆಳೆಯಾಗಿ ನಾಡು ನಾಡುಸಮೃದ್ದಿಯಿಂದ ಕೂಡಿರಲಿ ಎಂದರು. ಸ್ಥಳೀಯ ಗ್ರಾಮೀಣ ನಿವಾಸಿಗಳು ಶತಮಾನಗಳಿಂದ ಹಗ್ಗಜಗ್ಗಾಟದಂತಹ ಹಲವು ಕ್ರೀಡೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಬಂದಿದ್ದಾರೆ ಇಂತಹ ಕ್ರೀಡೆಗಳು ಗ್ರಾಮೀಣ ಸೊಬಗನ್ನು ಎತ್ತಿ ಹಿಡಿಯುವುದರೊಂದಿಗೆ ಜನರಲ್ಲಿ ಒಗ್ಗಟ್ಟು ಮೂಡಿಸಿ ಸಾಮರಸ್ಯ ಮೂಡಿಸಲು ಸಹಕಾರಿಯಾಗಿದೆ. ಬಹುತೇಕ ಕೃಷಿಕರಾಗಿರುವ ಗ್ರಾಮೀಣ ಜನತೆಗೆ ಇಂತಹ ಕ್ರೀಡಾಕೂಟಗಳು ಮನೋರಂಜನೆ ಹಾಗೂ ಮನೋಸ್ಥೈರ್ಯವನ್ನು ಹೆಚ್ಚಿಸಲು ಸಹಕಾರಿಯಾಗಿದೆ ಎಂದರು. ಹಿಂದೂ ಮಲಯಾಳಿ ಸಂಘ ಹಾಗೂ ಹಿಂದೂ ಮಲಿಯಾಳಿ ಸಮುದಾಯದವರು ಕೊಡಗಿನ ಅಭಿವೃದ್ಧಿಗೆ ಹಾಗೂ ಏಳಿಕೆಗೆ ಹಲವು ಕೊಡುಗೆಗಳನ್ನು ನೀಡಿದ್ದಾ.ರೆ ಅವರ ಕಾರ್ಯಕ್ಷಮತೆ, ಬದ್ಧತೆ ಎಲ್ಲರಿಗೂ ಮಾದರಿಯಾಗಿದೆ. ಕೊಡಗಿನ ಸರ್ವತೋಮುಖ ಅಭಿವೃದ್ಧಿಯಲ್ಲಿ ಹಿಂದೂ ಮಲೆಯಾಳಿಗಳ ಕೊಡುಗೆ ಗಣನೀಯವಾದದ್ದು ಎಂದರು ನಾಡಿನ ಹಾಗೂ ಕ್ಷೇತ್ರದ ಹಿಂದೂ ಮಲಯಾಳಿಗಳ ಶ್ರೇಯೋಭಿವೃದ್ಧಿಗೆ ಅಗತ್ಯವಿರುವ ಎಲ್ಲ ಸಹಾಯವನ್ನು ಮಾಡುವುದಾಗಿ ಹೇಳಿದರು. ನಾಪೆÇೀಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್ ಎ.ಕೆ ಮಾತನಾಡಿ ಶಾಸಕರು ಅಭಿವೃದ್ಧಿಗೆ ಪೂರಕವಾಗಿ ಎಲ್ಲಾ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಕಾರ್ಯಕ್ರಮಗಳಿಗೆ ಸಹಕಾರನೀಡುತ್ತಿದ್ದಾರೆ. ಶಾಸಕರು ಇಲ್ಲಿಯ ಹಿಂದೂ ಮಲಯಾಳಿ ಸಂಘದ ಅಭಿವೃದ್ಧಿಗೆ ನಿವೇಶನ ನೀಡಿ ಸಹಕರಿಸುವಂತೆ ಮನವಿ ಮಾಡಿ ದರಲ್ಲದೆ ಸಂಘಕ್ಕೆ ನಾನು ಈ ಹಿಂದೆ ವಾಗ್ದಾನ ನೀಡಿದಂತೆ ಸಂಘಕ್ಕೆ ರೂ.50 ಸಾವಿರ ರೂ ದೇಣಿಗೆ ನೀಡಲಿರುವುದಾಗಿ ಹೇಳಿದರು. ಗ್ರಾಮ ಪಂಚಾಯಿತಿ ಸದಸ್ಯ ಅರುಣ್ ಬೇಬ ಮಾತನಾಡಿ ಆಧುನಿಕ ಭರಾಟೆಯಲ್ಲಿ ತಂತ್ರಜ್ಞಾನ ಯುಗದಲ್ಲಿ ಎಲ್ಲವನ್ನೂ ಕಳೆದುಕೊಳ್ಳುತ್ತಿರುವ ಈ ಸಂದರ್ಭದಲ್ಲಿ ಜಿಲ್ಲೆಯಕ್ರೀಡಾಕೂಟಗಳು ಎಲ್ಲರನ್ನಬೂಒಗ್ಗೂಡಿಸುವ ಕಾರ್ಯಕ್ರಮವಾಗಿದೆ. ಇಲ್ಲಿನ ಆಟದ ಮೈದಾನಕ್ಕೆ 150 ವರ್ಷಗಳ ಇತಿಹಾಸವಿದೆ ಎಂದು ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು. ನಾಪೋಕ್ಲು ಹಿಂದೂ ಮಲಯಾಳಿ ಸಂಘದ ಅಧ್ಯಕ್ಷ ಅನಿಲ್ ಕೆ ಕೆ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಉದ್ಘಾಟನಾ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್, ಶ್ರೀ ಪೊನ್ನು ಮುತ್ತಪ್ಪ ದೇವಾಲಯದ ಅಧ್ಯಕ್ಷ ಎ.ಕೆ. ಚಂದ್ರ, ದಾನಿಗಳು ,ಕಾಫಿ ಬೆಳೆಗಾರರಾದ ಅಪ್ಪಚೆಟ್ಟೋಳಂಡ ನವೀನ್ ಅಪ್ಪಯ್ಯ, ದಾನಿಗಳಾದ ಚೀಯಕಪೂವಂಡ ಎಸ್.ಮಂಜುನಾಥ್ (ಕಟ್ಟಿ), ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಮಾಚೇಟಿರ ಕುಸು ಕುಶಾಲಪ್ಪ, ಹೇಮಾ ಅರುಣ್, ಪ್ರತೀಪ ಬಿ.ಎಂ, ಕಲಿಯಂಡ ಸಂಪನ್ ಅಯ್ಯಪ್ಪ, ಹಿಂದೂ ಮಲಯಾಳಿ ಸಂಘದ ಸಲಹೆಗಾರ ರಘು ಅಜಿಮುಟ್ಟ, ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು. ದೇವಸ್ಮಿತ ಪ್ರಾರ್ಥನೆಯೊಂದಿಗೆ ಪ್ರಾರಂಭಗೊಂಡ ಕಾರ್ಯಕ್ರಮದ ನಿರೂಪಣೆ ಮತ್ತು ವಿಕ್ಷಕ ವಿವರಣೆಯನ್ನು ರವಿ ಓಂಕಾರ್, ಪ್ರಸಾದ ಹಾಗೂ ಶೈಲಾ ನಿರ್ವಹಿಸಿ ಅನಿಲ್ ಕೆ ಕೆ ವಂದಿಸಿದರು. ಇದಕ್ಕೂ ಮೊದಲು ಕೇರಳದ ಚೆಂಡ ಮೇಳ ಹಾಗೂ ಸಾಂಪ್ರದಾಯಿಕ ಉಡುಗೆ-ತೊಡುಗೆಗಳೊಂದಿಗೆ ಅತಿಥಿಗಳನ್ನು ಗೌರವಪೂರ್ವಕವಾಗಿ ಸ್ವಾಗತಿಸಿಕೊಳ್ಳಲಾಯಿತು. ಆ ಬಳಿಕ ಶ್ರೀ ಈಶ್ವರ ಇ ಗ್ಗುತ್ತಪ್ಪ ಎ ಮತ್ತು ಬಿ ತಂಡಗಳ ಹಗ್ಗ ಜಗ್ಗಾಟ ಸ್ಪರ್ಧೆಯೊಂದಿಗೆ ಚಾಲನೆ ನೀಡಲಾಯಿತು.
ವರದಿ : ದುಗ್ಗಳ ಸದಾನಂದ.









