
ಮಡಿಕೇರಿ NEWS DESK ಆ.19 : ವಿಶ್ವ ಹಿಂದೂ ಪರಿಷತ್, ಭಜರಂಗದಳ, ಮಾತೃಶಕ್ತಿ ಮತ್ತು ದುರ್ಗಾವಾಹಿನಿ ವತಿಯಿಂದ ಮೂರ್ನಾಡಿನಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ನಡೆದ ಜಿಲ್ಲಾ ಮಟ್ಟದ ಶ್ರೀಕೃಷ್ಣ ಛದ್ಮವೇಷ ಸ್ಪರ್ಧೆಯಲ್ಲಿ ಸ್ಮೃತಿ ಎಸ್.ಭಾರದ್ವಾಜ್ ಪ್ರಥಮ ಬಹುಮಾನ ಗೆದ್ದಿದ್ದಾಳೆ. 5 ರಿಂದ 6 ವರ್ಷದೊಳಗಿನ ಮಕ್ಕಳ ವಿಭಾಗದ ಸ್ಪರ್ಧೆಯಲ್ಲಿ ಅರ್ಜುನನಿಗೆ ಗೀತೋಪದೇಶ ಮಾಡುವ ಶ್ರೀಕೃಷ್ಣನಾಗಿ ಮಿಂಚಿದ ಸ್ಮೃತಿ ನೆರೆದಿದ್ದವರ ಮೆಚ್ಚುಗೆಗೆ ಪಾತ್ರಳಾಗಿ ಪ್ರಥಮ ಬಹುಮಾನ ಪಡೆದಳು. 5 ವರ್ಷದ ಸ್ಮೃತಿ ಪೊನ್ನಂಪೇಟೆ ಸಮೀಪದ ಬೇಗೂರು ಶ್ರೀ ಪೂಳೆಮಾಡು ಈಶ್ವರ ದೇವಸ್ಥಾನದ ಅರ್ಚಕರಾದ ಸುಂದರೇಶ ಭಾರದ್ವಾಜ್ ಹಾಗೂ ಆಶಿಕಾ ದಂಪತಿಯ ಪುತ್ರಿ.









