
ವಿರಾಜಪೇಟೆ ಆ.19 NEWS DESK : ತುಳುವೆರೆ ಜನಪದ ಕೂಟದ ತಾಲ್ಲೂಕು ಘಟಕದ ವತಿಯಿಂದ ಕೂಟದ ಮುಂದಿನ ಕಾರ್ಯ ಚಟುವಟಿಕೆಗಳ ಬಗ್ಗೆ ಚರ್ಚಿಸುವ ಸಲುವಾಗಿ ಆ.24 ಪಟ್ಟಣದ ಪುರಭವನದಲ್ಲಿ ಸಭೆ ಕರೆಯಲಾಗಿದೆ ಎಂದು ಕೂಟದ ತಾಲೂಕು ಅಧ್ಯಕ್ಷ ಶಬರೀಶ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿರಾಜಪೇಟೆಯ ಪುರಭವನದಲ್ಲಿ ಬೆಳಿಗ್ಗೆ 10.30ಕ್ಕೆ ಸಭೆ ನಡೆಯಲಿದೆ. ಸಭೆಯಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಸಂಘಟನೆಯ ಪ್ರಮುಖರು ಭಾಗವಹಿಸಲಿದ್ದಾರೆ. ವಿರಾಜಪೇಟೆ ಭಾಗದ ತುಳುವೆರೆ ಜನಪದ ಕೂಟದ ಸದಸ್ಯರು ಹಾಗೂ ಭಾಷಿಕ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡುವಂತೆ ಪ್ರಕಟಣೆಯಲ್ಲಿ ಮನವಿ ಮಾಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 9483840707 ಅನ್ನು ಸಂಪರ್ಕಿಸುವಂತೆ ಕೋರಲಾಗಿದೆ.








