Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾಗಮಂಡಲ ಹೋಬಳಿಯಲ್ಲಿ ಮಾ.21 ರಂದು ಶಾಸಕ ಎ.ಎಸ್.ಪೊನ್ನಣ್ಣರಿಂದ ಜನಸ್ಪಂದನಾ ಕಾರ್ಯಕ್ರಮ*
  • *ಯುಗಾದಿ, ರಂಜಾನ್ ರಜೆ ಮುಗಿಸಿ ಬರೋಕೆ ಬಂತು ಸ್ಪೆಷಲ್ ಟ್ರೈನ್!: ಯಾವ ಊರಿಗೆ ಯಾವ ಸಮಯ? ಇಲ್ಲಿದೆ ಕಂಪ್ಲೀಟ್ ‘ವೇಳಾಪಟ್ಟಿ’*
  • *ರಾಜ್ಯಕ್ಕೆ ತಟ್ಟಿದ ಇರಾನ್ ಯುದ್ಧದ ಬಿಸಿ: ವಾಣಿಜ್ಯ ಸಿಲಿಂಡರ್ ಪೂರೈಕೆಯಲ್ಲಿ ಶೇ. 80ರಷ್ಟು ಕಡಿತ; ಹೋಟೆಲ್ ಉದ್ಯಮಕ್ಕೆ ಭಾರಿ ಪೆಟ್ಟು!*
  • *20-03-2026 ಶುಕ್ರವಾರ ರಂಜಾನ್ – ಈದುಲ್ ಫಿತ್ರ್ ಶವ್ವಾಲ್ – 01*
  • *ಒತ್ತೋರ್ಮೆರ ಕೊಡವ ಕೂಟದ ಅಧ್ಯಕ್ಷರಾಗಿ ಚೆಟ್ಟೋಳಿರ ಶರತ್ ಸೋಮಣ್ಣ ಆಯ್ಕೆ*
  • *ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ನಿಧನ*
  • *ಒತ್ತೋರ್ಮೆರ ಕೊಡವ ಕೂಟದ ಅಧ್ಯಕ್ಷರಾಗಿ ಚೆಟ್ಟೋಳಿರ ಶರತ್ ಸೋಮಣ್ಣ ಆಯ್ಕೆ*
  • *ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ : ಸ್ಥಳದಲ್ಲೇ ಸವಾರ ಸಾವು : ಮತ್ತೊಬ್ಬರಿಗೆ ಗಂಭೀರ ಗಾಯ*
  • *ರಾಷ್ಟ್ರೀಯ ಹೆದ್ದಾರಿ ಬದಿಯ ಹಣ್ಣಿನ ಅಂಗಡಿ ಮತ್ತು ಗೂಡಂಗಡಿಗಳನ್ನು ಮಾ.23 ರೊಳಗೆ ತೆರವುಗೊಳಿಸಲು ಕಟ್ಟುನಿಟ್ಟಿನ ಸೂಚನೆ*
  • *ನೂತನ ಡಿಸಿಪಿಯಾಗಿ ಅಧಿಕಾರ ಸ್ವೀಕಾರ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ಅಹಿಂದ ಒಕ್ಕೂಟ ಮತ್ತು ಸಹಮತ ವೇದಿಕೆಯಿಂದ ಅರಸು ದಿನ : ಸಾಮಾಜಿಕ ನ್ಯಾಯವನ್ನು ಎತ್ತಿ ಹಿಡಿದ ಮಹಾನ್ ನೇತಾರ ದೇವರಾಜ ಅರಸು : ಹೆಚ್.ಎ.ವೆಂಕಟೇಶ್ ಬಣ್ಣನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ ಅಹಿಂದ ಒಕ್ಕೂಟ ಮತ್ತು ಸಹಮತ ವೇದಿಕೆಯಿಂದ ಅರಸು ದಿನ : ಸಾಮಾಜಿಕ ನ್ಯಾಯವನ್ನು ಎತ್ತಿ ಹಿಡಿದ ಮಹಾನ್ ನೇತಾರ ದೇವರಾಜ ಅರಸು : ಹೆಚ್.ಎ.ವೆಂಕಟೇಶ್ ಬಣ್ಣನೆ*

ಆಗಷ್ಟ್ 20, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಆ.20 NEWS DESK : ‘ಶೋಷಣೆ ಮತ್ತು ಬಡತನ’ ಮುಕ್ತವಾದ ಸಮಾಜ ನಿರ್ಮಾಣಕ್ಕಾಗಿ ಬದುಕಿನುದ್ದಕ್ಕೂ ಹೋರಾಟಗಳನ್ನು ನಡೆಸಿಕೊಂಡು ಬಂದ ದಿ.ದೇವರಾಜ ಅರಸು, ಅಂತಃಕರಣದ ರಾಜ್ಯಭಾರದ ಮೂಲಕ ಸಾಮಾಜಿಕ ನ್ಯಾಯವನ್ನು ಎತ್ತಿ ಹಿಡಿದ ಮಹಾನ್ ನೇತಾರರಾಗಿದ್ದಾರೆ ಎಂದು ಮೈಸೂರು ವಿಶ್ವ ವಿದ್ಯಾನಿಲಯದ ಮಾಜಿ ಸಿಂಡಿಕೇಟ್ ಸದಸ್ಯರು ಹಾಗೂ ಅರಗು ಮತ್ತು ಬಣ್ಣದ ಕಾರ್ಖಾನೆ ನಿಗಮದ ಮಾಜಿ ಅಧ್ಯಕ್ಷರಾದ ಹೆಚ್.ಎ.ವೆಂಕಟೇಶ್ ತಿಳಿಸಿದ್ದಾರೆ. ಕೊಡಗು ಜಿಲ್ಲಾ ಅಹಿಂದ ಒಕ್ಕೂಟ ಮತ್ತು ಸಹಮತ ವೇದಿಕೆಯ ಸಂಯುಕ್ತಾಶ್ರಯದಲ್ಲಿ ನಗರದ ಲಯನ್ಸ್ ಸಭಾಂಗಣದಲ್ಲಿ ನಡೆದ ದಿ.ಡಿ.ದೇವರಾಜ ಅರಸು ಅವರ 110ನೇ ಜನ್ಮ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ದೇವರಾಜ ಅರಸು ಅವರನ್ನು ಮುಖ್ಯಮಂತ್ರಿಗಳಾಗಿದ್ದವರು ಎನ್ನುವ ಕಾರಣದಿಂದ ಜನತೆ ನೆನಪಿಸಿಕೊಳ್ಳುತ್ತಿಲ್ಲ. ಬದಲಾಗಿ ಅವವರು ಪ್ರಜಾಪ್ರಭುತ್ವ ವ್ಯವಸ್ಥೆಯಡಿ ಶೋಷಿತ ಸಮುದಾಯಗಳಿಗೆ ಸಾಮಾಜಿಕ ನ್ಯಾಯವನ್ನು ಒದಗಿಸಲು ಶ್ರಮಿಸಿದ ಮಹಾನ್ ನೇತಾರರಾಗಿದ್ದರೆಂದು ಸ್ಮರಿಸುತ್ತಾರೆ. ಇವರು ತಮ್ಮ ಆಡಳಿತದ ಅವಧಿಯಲ್ಲಿ ತಂದ ದೂರದೃಷ್ಟಿಯ ಜನಪರವಾದ ಯೋಜನೆಗಳು, ಆಡಳಿತ ವೈಖರಿಗಳು ರಾಜ್ಯದಲ್ಲಿ ಹೊಸ ರಾಜಕೀಯ ವಾತಾವರಣವನ್ನೆ ಸೃಷ್ಟಿಸಿತ್ತು. ಅಂದಿನ ದಿನಮಾನಗಳಲ್ಲಿ ಅರಸು ಆಡಳಿತ ರಾಷ್ಟ್ರದ ಇತರ ರಾಜ್ಯಗಳಿಗೂ ಮಾದರಿಯದ್ದಾಗಿತ್ತೆಂದು ಹೇಳಿದರು. ಅರಸು ಅವರು ತಮ್ಮ ಆಡಳಿತದ ಅವಧಿಯಲ್ಲಿ ಪರಿಶಿಷ್ಟರ ಮೀಸಲಾತಿಯೊಂದಿಗೆ ದೇಶದಲ್ಲೆ ಪ್ರಥಮವಾಗಿ ಹಿಂದುಳಿದ ವರ್ಗಗಳಿಗೆ ಶೇ.32ರಷ್ಟು ಮೀಸಲಾತಿಯನ್ನು ಶಿಕ್ಷಣ ಮತ್ತು ಉದ್ಯೋಗದಲ್ಲಿ ಒದಗಿಸಿದ್ದರು. ಆ ಮೂಲಕ ಹಿಂದುಳಿದ ಸಮಾಜದ ಮಂದಿಯೂ ಶೈಕ್ಷಣಿಕವಾಗಿ ಮುಂದು ಬರಬೇಕೆನ್ನುವ ಉದಾತ್ತತೆಯನ್ನು ತೋರಿಸಿದ್ದರೆಂದು ತಿಳಿಸಿದರು. ಅರಸು ಅವರು ತಮ್ಮ ಆಡಳಿತದ ಅವಧಿಯಲ್ಲಿ, ಸಮಾಜದ ತಳಸ್ತರದಲ್ಲಿದ್ದ ಹಿಂದುಳಿದವರು, ಬಡವರಿಗೆ ಧ್ವನಿ ನೀಡುವ ಪ್ರಯತ್ನವನ್ನು ತಮ್ಮ ಆಡಳಿತದ ಮೂಲಕ ಮಾಡಿದ್ದರು ಹಾಗೂ ಸಮಾಜದಲ್ಲಿ ನಿಲ್ಲಲು ಶಕ್ತಿ ಇಲ್ಲದವರಿಗೆ ತಮ್ಮ ಕಾರ್ಯ ಯೋಜನೆ, ದೂರದೃಷ್ಟಿಯ ಚಿಂತನೆಗಳಿಂದ ನಿಲ್ಲುವ ಶಕ್ತಿಯನ್ನು ನೀಡಿದ್ದರು. ಇವರು ತಮ್ಮ ಅವಧಿಯಲ್ಲಿ ಉಳುವವನಿಗೆ ಭೂಮಿಯ ಒಡೆತನ, ಮಲ ಹೊರುವ ಪದ್ಧತಿ ನಿಷೇಧ ಮೊದಲಾದವುಗಳನ್ನು ಜಾರಿಗೆ ತಂದರೆಂದು ಹೆಚ್.ಎ.ವೆಂಕಟೇಶ್ ವಿವರಿಸಿದರು. ಅತ್ಯಂತ ಕಡಿಮೆ ಸಂಖ್ಯೆಯ ಅರಸು ಸಮುದಾಯಕ್ಕೆ ಸೇರಿದ ದೇವರಾಜ ಅರಸು ಅವರು, ಸಮಾಜದ ಶೋಷಿತ ವರ್ಗದ ಏಳಿಗೆಗಾಗಿ ತಮ್ಮ ಬದುಕನ್ನು ಸವೆಸಿದರು. ಇಂತಹವರ ಮೇಲೂ ಅಪಪ್ರಚಾರಗಳು ಅಂದಿನ ಕಾಲದಲ್ಲೂ ನಡೆದಿತ್ತೆಂದು ವಿಷಾದಿಸಿದರು. ಸಭಾಧ್ಯಕ್ಷತೆ ವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿದ ಅಹಿಂದ ಒಕ್ಕೂಟದ ಸ್ಥಾಪಕಾಧ್ಯಕ್ಷರು ಹಾಗೂ ಸಹಮತ ವೇದಿಕೆಯ ಅಧ್ಯಕ್ಷ ಟಿ.ಪಿ.ರಮೇಶ್ ಅವರು, 1991ರಲ್ಲಿ ಕೊಡಗಿನಲ್ಲಿ ಅಹಿಂದ ಒಕ್ಕೂಟದ ಸ್ಥಾಪನೆಯಾಯಿತು. ಆ ಮೂಲಕ ಜಿಲ್ಲೆಯಲ್ಲಿನ ಅಲ್ಪಸಂಖ್ಯಾತರು ಹಿಂದುಳಿದವರು, ದಲಿತ ಸಮುದಾಯದ ಸಂಕಷ್ಟಗಳ ನಿವಾರಣೆಗೆ ಶ್ರಮಿಸುತ್ತಾ ಬಂದಿದೆ. ಅಹಿಂದ ಹೋರಾಟಗಳಿಂದ ತಳ ಸಮುದಾಯದ ಮಂದಿಯೂ ಜಿಲ್ಲಾ ಪಂಚಾಯ್ತಿ, ಗ್ರಾಮ ಪಂಚಾಯ್ತಿ ಚುನಾವಣೆಗಳಲ್ಲಿ ಆಯ್ಕೆಯಾಗಿ ಅಧಿಕಾರವನ್ನು ಪಡೆಯಲು ಸಾಧ್ಯವಾಯಿತೆಂದು ತಿಳಿಸಿದರು. ದೇವರಾಜ ಅರಸು ಅವರು ತಳ ಸಮುದಾಯಗಳ ಕಲ್ಯಾಣಕ್ಕಾಗಿ ರೂಪಿಸಿದ ಕಾರ್ಯಕ್ರಮಗಳ ಬಗ್ಗೆ ಇಂದಿನ ಯುವ ಸಮೂಹಕ್ಕೆ ತಿಳಿಸಿಕೊಡುವ ಜವಾಬ್ದಾರಿ ನಮ್ಮೆಲ್ಲರದ್ದಾಗಿದೆ ಎಂದರು. *ಸಾಧಕರಿಗೆ ಸನ್ಮಾನ* ಕಾರ್ಯಕ್ರಮದಲ್ಲಿ ಖ್ಯಾತ ವೈದ್ಯರಾದ ಡಾ.ಕೆ.ಬಿ.ಸೂರ್ಯಕುಮಾರ್, ಸೋಮವಾರಪೇಟೆಯ ಕಾರ್ಮಿಕ ಮುಖಂಡ ಡಿ.ಎಸ್.ನಿರ್ವಾಣಪ್ಪ, ಕುಶಾಲನಗರದ ಸಮಾಜ ಸೇವಕ ವಿ.ಪಿ.ಶಶಿಧರ್, ಮಡಿಕೇರಿ ನಗರಸಭೆಯ ಪೌರಸೇವಾ ಹಿರಿಯ ಸಿಬ್ಬಂದಿ ರಾಮು, ಪೊನ್ನಂಪೇಟೆ ಕಾಟ್ರಕೊಲ್ಲಿಯ ಸಮಾಜ ಸೇವಕ ಎರ್ಮು ಹಾಜಿ, ಮಡಿಕೇರಿ ನಗರಸಭೆಯ ನಿವೃತ್ತ ದಫೇದಾರ್ ಜಿ.ಎ.ಚಾಮಿ, ಕುಶಾಲನಗರದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಸಂಯೋಜಕರಾದ ಲೀಲಾವತಿ ಹಾಗೂ ನಾಗರಹೊಳೆ ಕುಟ್ಟದ ಬುಡಕಟ್ಟು ಸಮುದಾಯದ ನಾಯಕ ಶಿವು ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. *ವಿದ್ಯಾರ್ಥಿಗಳಿಗೆ ಸನ್ಮಾನ* ಕಳೆದ 10ನೇ ತರಗತಿ ಪರೀಕ್ಷೆಯಲ್ಲಿ ಜಿಲ್ಲೆಗೆ ಅತೀ ಹೆಚ್ಚು ಅಂಕ ಗಳಿಸಿದ ಸೋಮವಾರಪೇಟೆಯ ವಿಶ್ವಮಾನವ ಕುವೆಂಪು ಪ್ರೌಢ ಶಾಲೆಯ ಆದ್ವಿ ಸಿ.ಎಸ್., ಪಂಚಮಿ ಕೆ.ಸಿ., ವಿರಾಜಪೇಟೆ ಶ್ರೀಕಾವೇರಿ ಪ್ರೌಢಶಾಲೆಯ ಆಶ್ರಯ್ ಅಕ್ಕಮ್ಮ, ಗೋಣಿಕೊಪ್ಪಲು ಕಳತ್ಮಾಡಿನ ಲಯನ್ಸ್ ಪ್ರೌಢಶಾಲೆಯ ತೇಜಸ್ ಭೀಮಯ್ಯ ಎಂ.ಡಿ., ಕೋಡಂಬೂರು ಜ್ಞಾನಜ್ಯೋತಿ ಪ್ರೌಢ ಶಾಲೆಯ ಮಹಮ್ಮದ್ ಸಾಹಿಲ್ ಸಿ.ಎಂ. ಹಾಗೂ ಕೂಡ್ಲೂರು ಯೂನಿಕ್ ಅಕಾಡೆಮಿ ಪ್ರೌಢಶಾಲೆಯ ಸಮೃದ್ಧಿ ಆಚಾರ್ ಕೆ.ಎಂ. ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ಆರಂಭದಲ್ಲಿ ವಿವಿಧ ಶಾಲಾ ವಿದ್ಯಾರ್ಥಿಗಳಿಗಾಗಿ ದೇಶಭಕ್ತಿ ಗೀತೆ ಗಾಯಕ ಸ್ಪರ್ಧಾ ಕಾರ್ಯಕ್ರಮ ನಡೆಯಿತು. ವೇದಿಕೆಯಲ್ಲಿ ಸಾಹಿತಿಗಳಾದ ಡಾ.ಬೆಸೂರು ಮೋಹನ್ ಪಾಳೇಗಾರ್, ಅಹಿಂದ ಒಕ್ಕೂಟದ ಜಿಲ್ಲಾಧ್ಯಕ್ಷ ಟಿ.ಎಂ.ಮುದ್ದಯ್ಯ, ಕೊಡವ ಭಾಷಿಕ ಸಮುದಾಯಗಳ ಒಕ್ಕೂಟದ ಅಧ್ಯಕ್ಷರಾದ ಡಾ. ಸುಭಾಷ್ ನಾಣಯ್ಯ, ಜಿಲ್ಲಾ ದಸಂಸ ಸಂಚಾಲಕ ಹೆಚ್.ಎಲ್.ದಿವಾಕರ್, ಸೋಮವಾರಪೇಟೆಯ ಸರ್ಕಾರಿ ನೋಟರಿ ಬಿ.ಇ.ಜಯೇಂದ್ರ ಮತ್ತಿತರರು ಉಪಸ್ಥಿತರಿದ್ದರು. ಜಿಲ್ಲಾ ಮಹಿಳಾ ಬರಹಗಾರರ ಸಂಘದ ಸದಸ್ಯರು ನಾಡಗೀತೆಯನ್ನು, ಗಾಯಕ ಲಿಯಾಕತ್ ಆಲಿ ದೇಶಭಕ್ತಿ ಗೀತೆಯನ್ನು ಹಾಡಿದರು. ಸಹಮತ ವೇದಿಕೆಯ ಮೋಹನ್ ಮೌರ್ಯ ಸ್ವಾಗತಿಸಿ, ಪುದಿಯನೆರವನ ರೇವತಿ ರಮೇಶ್ ಕಾರ್ಯಕ್ರಮ ನಿರೂಪಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಭಾಗಮಂಡಲ ಹೋಬಳಿಯಲ್ಲಿ ಮಾ.21 ರಂದು ಶಾಸಕ ಎ.ಎಸ್.ಪೊನ್ನಣ್ಣರಿಂದ ಜನಸ್ಪಂದನಾ ಕಾರ್ಯಕ್ರಮ*

ಮಾರ್ಚ್ 19, 2026

*ಯುಗಾದಿ, ರಂಜಾನ್ ರಜೆ ಮುಗಿಸಿ ಬರೋಕೆ ಬಂತು ಸ್ಪೆಷಲ್ ಟ್ರೈನ್!: ಯಾವ ಊರಿಗೆ ಯಾವ ಸಮಯ? ಇಲ್ಲಿದೆ ಕಂಪ್ಲೀಟ್ ‘ವೇಳಾಪಟ್ಟಿ’*

ಮಾರ್ಚ್ 19, 2026

*ರಾಜ್ಯಕ್ಕೆ ತಟ್ಟಿದ ಇರಾನ್ ಯುದ್ಧದ ಬಿಸಿ: ವಾಣಿಜ್ಯ ಸಿಲಿಂಡರ್ ಪೂರೈಕೆಯಲ್ಲಿ ಶೇ. 80ರಷ್ಟು ಕಡಿತ; ಹೋಟೆಲ್ ಉದ್ಯಮಕ್ಕೆ ಭಾರಿ ಪೆಟ್ಟು!*

ಮಾರ್ಚ್ 19, 2026

*ಯುಗಾದಿ, ರಂಜಾನ್ ರಜೆ ಮುಗಿಸಿ ಬರೋಕೆ ಬಂತು ಸ್ಪೆಷಲ್ ಟ್ರೈನ್!: ಯಾವ ಊರಿಗೆ ಯಾವ ಸಮಯ? ಇಲ್ಲಿದೆ ಕಂಪ್ಲೀಟ್ ‘ವೇಳಾಪಟ್ಟಿ’*

ಮಾರ್ಚ್ 19, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ

ಬೆಂಗಳೂರು, ಮಾರ್ಚ್ 19, 2026: ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆಗಳ ಕಾರಣದಿಂದ ಬೆಂಗಳೂರಿನಿಂದ ವಿವಿಧ ಜಿಲ್ಲೆಗಳಿಗೆ ತೆರಳುವ…

*ರಾಜ್ಯಕ್ಕೆ ತಟ್ಟಿದ ಇರಾನ್ ಯುದ್ಧದ ಬಿಸಿ: ವಾಣಿಜ್ಯ ಸಿಲಿಂಡರ್ ಪೂರೈಕೆಯಲ್ಲಿ ಶೇ. 80ರಷ್ಟು ಕಡಿತ; ಹೋಟೆಲ್ ಉದ್ಯಮಕ್ಕೆ ಭಾರಿ ಪೆಟ್ಟು!*

ಮಾರ್ಚ್ 19, 2026

*20-03-2026 ಶುಕ್ರವಾರ ರಂಜಾನ್ – ಈದುಲ್ ಫಿತ್ರ್ ಶವ್ವಾಲ್ – 01*

ಮಾರ್ಚ್ 19, 2026

*ಒತ್ತೋರ್ಮೆರ ಕೊಡವ ಕೂಟದ ಅಧ್ಯಕ್ಷರಾಗಿ ಚೆಟ್ಟೋಳಿರ ಶರತ್ ಸೋಮಣ್ಣ ಆಯ್ಕೆ*

ಮಾರ್ಚ್ 19, 2026

*ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ನಿಧನ*

ಮಾರ್ಚ್ 19, 2026

*ಒತ್ತೋರ್ಮೆರ ಕೊಡವ ಕೂಟದ ಅಧ್ಯಕ್ಷರಾಗಿ ಚೆಟ್ಟೋಳಿರ ಶರತ್ ಸೋಮಣ್ಣ ಆಯ್ಕೆ*

ಮಾರ್ಚ್ 19, 2026

*ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ : ಸ್ಥಳದಲ್ಲೇ ಸವಾರ ಸಾವು : ಮತ್ತೊಬ್ಬರಿಗೆ ಗಂಭೀರ ಗಾಯ*

ಮಾರ್ಚ್ 19, 2026

*ರಾಷ್ಟ್ರೀಯ ಹೆದ್ದಾರಿ ಬದಿಯ ಹಣ್ಣಿನ ಅಂಗಡಿ ಮತ್ತು ಗೂಡಂಗಡಿಗಳನ್ನು ಮಾ.23 ರೊಳಗೆ ತೆರವುಗೊಳಿಸಲು ಕಟ್ಟುನಿಟ್ಟಿನ ಸೂಚನೆ*

ಮಾರ್ಚ್ 19, 2026

*ನೂತನ ಡಿಸಿಪಿಯಾಗಿ ಅಧಿಕಾರ ಸ್ವೀಕಾರ*

ಮಾರ್ಚ್ 19, 2026

*ಏ.10 ರಿಂದ ಕೊಡವ ಲೆದರ್ ಬಾಲ್ ಕ್ರಿಕೆಟ್ ಲೀಗ್ ಮೂರನೇ ಆವೃತ್ತಿ ಆರಂಭ*

ಮಾರ್ಚ್ 18, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.