
ಸುಂಟಿಕೊಪ್ಪ ಆ.23 NEWS DESK : ಧರ್ಮದ ತಳಹದಿಯ ಮೇಲೆ ಆರ್ಥಿಕ ಸಬಲತೆಯನ್ನು ಹೊಂದುವ ವ್ಯವಸ್ಥೆಯನ್ನು ಮಹಿಳಾ ಸಬಲೀಕರಣದ ಮೂಲಕ ಶ್ರೀ ಕ್ಷೇತ್ರ ಧರ್ಮಸ್ಥಳ ಸಾಧಿಸಿದೆ ಎಂದು ಶ್ರೀ ಕ್ಷೇತ್ರ ಕಿರಿಕೊಡ್ಲಿ ಮಠದ ಕೊಡ್ಲಿಪೇಟೆಯ ಶ್ರೀ ಸದಾಶಿವ ಸ್ವಾಮಿಗಳು ಹೇಳಿದ್ದಾರೆ. ಕೊಡಗರಹಳ್ಳಿಯ ನೇತಾಜಿ ಯುವಕ ಸಂಘದ ಸಭಾಂಗಣದಲ್ಲಿ ನಡೆದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್, ಸಾಮೂಹಿಕ ಶ್ರೀವರಮಹಾಲಕ್ಷ್ಮೀ ಪೂಜಾ ಸಮಿತಿ ಹಾಗೂ ಪ್ರಗತಿ ಬಂಧು ಸ್ವಸಹಾಯ ಸಂಘಗಗಳ ಒಕ್ಕೂಟ ಗುಡ್ಡೆಹೊಸೂರು ವಲಯ ಸಂಯುಕ್ತಾಶ್ರಯದಲ್ಲಿ ಕೌಟುಂಬಿಕ ಸೌಹಾರ್ದತೆ ಹಾಗೂ ಗ್ರಾಮಸುಭಿಕ್ಷೆಗಾಗಿ ವಲಯ ಮಟ್ಟದ ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಧಾರ್ಮಿಕ ಉಪನ್ಯಾಸ ನೀಡಿದರು. ಜನರಿಂದ ಜನರಿಗಾಗಿ ಜನರಿಗೋಸ್ಕರ ಗ್ರಾಮಾಭಿವೃದ್ಧಿ ಯೋಜನೆ ರೂಪುಗೊಂಡಿದ್ದು, ಮಾನಸಿಕವಾಗಿ ಸಾಮಾಜಿಕವಾಗಿ ಧಾರ್ಮಿಕವಾಗಿ ಜನರನ್ನು ಎಚ್ಚರಗೊಳಿಸಿ ಧರ್ಮದ ತಳಹದಿಯ ಮೇರೆ ಆರ್ಥಿಕ ಸಬಲೀಕರಣದ ಮೂಲಕ ಬದುಕನ್ನು ಕಟ್ಟಿಕೊಳ್ಳುವುದು ಶ್ರೇಷ್ಠ ಸಾಧನೆಯೆಂದು ಸ್ವಾಮೀಜಿ ಬಣ್ಣಿಸಿದರು. ಭಾರತ ಎಲ್ಲಾ ರೀತಿಯಲ್ಲೂ ಪ್ರಗತಿ ಹೊಂದುತ್ತಿರುವ ದೇಶವಾಗಿದ್ದು, ವಿಶ್ವಗುರು ಎಂಬ ಪಟ್ಟಕ್ಕೆ ಹತ್ತಿರವಾಗುತ್ತಿದೆ ಎಂದು ಸ್ವಾಮೀಜಿ ಹೇಳಿದರು. ವಿಜ್ಞಾನ ಮತ್ತು ತಂತ್ರಜ್ಞಾನದಿಂದ ಬಾಹ್ಯ ಅನುಕೂಲಗಳನ್ನು ಪಡೆಯಬಹುದು ಆದರೆ ಅಂತರಗದಲ್ಲಿ ಶಾಂತಿ ಸಮಾಧಾನ ಆರೋಗ್ಯವನ್ನು ಹೊಂದಲು ಧರ್ಮ ಅಗತ್ಯವೆಂದು ಸ್ವಾಮೀಜಿ ಪ್ರತಿಪಾದಿಸಿದರು. ತಾಳ್ಮೆ ತಾಯಿತನ ಸಮದಾನಗಳ ಪ್ರತಿರೂಪವಾಗಿರುವ ಮಹಿಳೆಯರು ಆರ್ಥಿಕ ಸಬಲೀಕರಣ ಆಡಳಿತ ರಂಗದಲ್ಲಿ ಸಕ್ರಿಯವಾಗಿರುವುದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ಡಿ.ವಿರೇಂದ್ರ ಹೆಗ್ಡೆಯವರ ದೂರದರ್ಶಿತ್ವ ಸಂಘಟನಾ ಚತುರತೆ ನಾಯಕತ್ವದ ಗುಣಗಳ ಕಾರಣ ಎಂದು ಸ್ವಾಮೀಜಿ ಹೇಳಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ನಿವೃತ್ತ ಅರಣ್ಯ ಉಪ ಸಂರಕ್ಷಣಾಧಿಕಾರಿ ಎಂ.ಎಸ್.ಸುರೇಶ್ ಚಂಗಪ್ಪ ಮಾತನಾಡಿ, ತೊಟ್ಟಿಲನ್ನು ತೂಗುವ ಕೈ ಪ್ರಪಂಚವನ್ನು ಆಳಬಲದ್ದು ಎಂಬುದನ್ನು ಮಾಜಿ ಪ್ರಧಾನಿ ಇಂಧಿರಾ ಗಾಂಧಿಯವರಿಂದ ಇಡಿದು ಇಂದಿನವರೆಗೆ ಮಹಿಳೆಯರು ತೋರಿಸಿಕೊಟ್ಟಿದ್ದಾರೆ. ಅದಕ್ಕೆ ಜಲ್ವಂತ ಸಾಕ್ಷಿಯಾಗಿ ಶ್ರೀ ಧರ್ಮಸ್ಥಳ ಗ್ರಾಮಾಭೀವೃದ್ಧಿ ಯೋಜನೆ ನಮ್ಮ ಮುಂದಿದ್ದು, ಜನೋಪಯೋಗಿ ಮತ್ತು ಸಮಾಜ ಮುಖಿ ಯಾಗಿದ್ದು, ಕಾರ್ಯಕ್ರಮಗಳಿಗೆ ನಾವೆಲ್ಲಾರೂ ಕೈಜೋಡಿಸಬೇಕೆಂದು ಅವರು ಕರೆ ನೀಡಿದರು. ಮುಖ್ಯ ಅತಿಥಿಗಳಾದ ಡಾ.ಶಶಿಕಾಂತ ರೈ ಮಾತನಾಡಿ ಸನತಾನ ಧರ್ಮದ ಪರಿಕಲ್ಪನೆ ವಸುದೈವಕುಟುಂಬಕಂ ಎಂಬುದು ನಮ್ಮ ಮುಂದಿದ್ದು, ಪ್ರತಿಯೊಬ್ಬರಿಗೂ ಅವರವರ ಧರ್ಮ ಶ್ರೇಷ್ಠವಾಗಿದ್ದು, ಧರ್ಮಗಳ ನಡುವೆ ಒಡಕನ್ನು ತರದೆ ಶಾಂತಿ ಗೌರವ ಸಹಬಾಳ್ವೆಯನ್ನು ಪಾಲಿಸಬೇಕು ಧರ್ಮ ಮತ್ತು ಧಾರ್ಮಿಕ ವಿಧಿವಿಧಾನಗಳಿಂದ ಸಾಮೂಹಿಕ ಪ್ರಾರ್ಥನೆಯು ಆನೆ ಬಲವನ್ನು ಅಂದರೆ ಆರೋಗ್ಯ ಮತ್ತು ನೆಮ್ಮದಿಯನ್ನು ನೀಡುವಂತಾಗಬೇಕೆಂದು ಅವರು ಆಶೀಸಿದರು. ಕಂಬಿಬಾಣೆಯ ಕಮಲ ನೆಹರೂ ಮಹಿಳಾ ಮಂಡಳಿಯ ಅಧ್ಯಕ್ಷೆ ಪೂರ್ಣಿಮಾ ಪ್ರಭಾಕರ್ ಮಾತನಾಡಿ, ಮಹಿಳಾ ಅಭಿವೃದ್ಧಿ ದೇಶದ ಅಭಿವೃದ್ಧಿ ಎÀಂದು ಸ್ವಾಮಿ ವಿವೇಕಾನಂದರು ಹೇಳಿ ಸತ್ಯವಾಗಿದೆ. ಮಹಿಳಾ ಸಬಲೀಕರಣದಿಂದ ನಾಲ್ಕು ಗೋಡೆಗಳ ನಡುವೆ ಅಡುಗೆ ಮನೆಗೆ ಸಿಮೀತವಾಗಿದ್ದ ಮಹಿಳೆಯರು ಹಣಕಾಸು ಮತ್ತು ಆಡಳಿತ ಕ್ಷೇತ್ರದಲ್ಲಿ ಪುರುಷರೊಂದಿಗೆ ಸಮಾಜದ ಮುಖ್ಯ ವಾಹಿನಿಯಲ್ಲಿ ಬೆರೆತ್ತಿದ್ದಾರೆ. ಯುವಜನಾಂಗ ಹೆಚ್ಚು ಉದ್ಯಮ ಶಿಲತೆಯತ್ತ ಗಮನ ಹರಿಸಬೇಕು ಎಂದು ಕರೆ ನೀಡಿದರು. ಸಮಾರಂಭದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ಸುಜ್ಞಾನ ನಿಧಿ ವಿಚಾರಣೆಯ ಅಡಿಯಲ್ಲಿ ಹಲವು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಸುಂಟಿಕೊಪ್ಪ ಅಪರಾಧ ವಿಭಾಗದ ಉಪ ನಿರೀಕ್ಷಕಿ ಕೆ.ಹೆಚ್.ಭಾರತಿ, ತೊಂಡೂರು ಬಸವೇಶ್ವರ ದೇವಸ್ಥಾನದ ಕಾರ್ಯದರ್ಶಿ ಕೆ.ಜಿ.ಶಿವನ್, ಕೊಡಗರಹಳ್ಳಿ ಗ್ರಾಮ ಪಂಚಾಯಿತಿ ಪಿಡಿಓ ರವೀಶ್, ಗುಡ್ಡೆಹೊಸೂರು ವಲಯದ ಶ್ರೀ.ಸತ್ಯನಾರಾಯಣ ಪೂಜಾ ಸಮಿತಿಯ ಅಧ್ಯಕ್ಷ ಕೆ.ಎಂ.ರಮೇಶ್ ಶಾಂತಿನಿಕೇತನ ಮುಖ್ಯೋಪಾದ್ಯಾಯನಿ ಎಂ.ಬಿ.ಕವಿತ ಮಾತನಾಡಿದರು. ಕಾರ್ಯಕ್ರಮದಲ್ಲಿ ಯೋಜನಾಧಿಕಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸೇವಾ ಪ್ರತಿನಿಧಿ ಜೀವನ್ ಕುಮಾರ್ ನಿರೂಪಿಸಿ, ಹೇಮಾವತಿ ವಂದಿಸಿದರು. ವೇದಿಕೆಯಲ್ಲಿ ಸೋಮವಾರಪೇಟೆ ತಾಲೂಕಿನ ಯೋಜನಾಧಿಕಾರಿ ಹನುಮಂತಪ್ಪ ಅಂಗಡಿ, ವರಮಹಾಲಕ್ಷ್ಮಿ ಪೂಜಾ ಸಮಿತಿ ಅಧ್ಯಕ್ಷರಾದ ಜೀವನ್ ಕುಮಾರ್, ಕುಂದುಮೊಟ್ಟೆ ಶ್ರೀ ಚಾಮುಂಡೇಶ್ವರಿ ದೇವಸ್ಥಾನ ಸಮಿತಿಯ ಕಾರ್ಯದರ್ಶಿ ಅರುಣ್ ಪೂಜಾರಿ, ನೇತಾಜಿ ಯುವಕ ಸಂಘದ ಅಧ್ಯಕ್ಷ ಎಂ.ಸಿ.ಪೂಣ್ಣಚ್ಚ, ಹಿರಿಯ ಪತ್ರಕರ್ತ ಬಿ.ಸಿ.ದಿನೇಶ್ ಹಾಗೂ ಸೇವಾ ಪ್ರತಿನಿಧಿಗಳಾದ ಹೇಮಾವತಿ, ಮೇಲ್ವಿಚಾರಕರಾದ ಕೆ.ಯತೀಶ್, ವಿವಿಧ ಒಕ್ಕೂಟಗಳ ಅಧ್ಯಕ್ಷರು, ಕಾರ್ಯಕಾರಿ ಸಮಿತಿ ಸದಸ್ಯರು ಪಾಲ್ಗೊಂಡಿದ್ದರು.









