Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಗ್ಯಾರಂಟಿ ಯೋಜನೆ : ಮಡಿಕೇರಿ ತಾಲ್ಲೂಕು ಅನುಷ್ಠಾನ ಸಮಿತಿ ಸಭೆ*
ಇತ್ತೀಚಿನ ಸುದ್ದಿಗಳು

*ಗ್ಯಾರಂಟಿ ಯೋಜನೆ : ಮಡಿಕೇರಿ ತಾಲ್ಲೂಕು ಅನುಷ್ಠಾನ ಸಮಿತಿ ಸಭೆ*

August 26, 20253 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಆ.26 NEWS DESK : ಮಡಿಕೇರಿ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಎಂ.ಜಿ.ಮೋಹನ್ ದಾಸ್ ಅವರ ಅಧ್ಯಕ್ಷತೆಯಲ್ಲಿ ಸಮಿತಿ ಸದಸ್ಯರ ಸಭೆ ನಡೆಯಿತು. ಸಭೆಯಲ್ಲಿ ವಿವಿಧ ಯೋಜನೆಗಳ ಕುರಿತು ಚರ್ಚಿಸಲಾಯಿತು. ಗೃಹಲಕ್ಷ್ಮಿ ಯೋಜನೆ: ಶಿಶು ಅಭಿವೃದ್ದಿ ಅಧಿಕಾರಿ ಮಾತನಾಡಿ ಮಡಿಕೇರಿ ತಾಲ್ಲೂಕಿನಲ್ಲಿ ಒಟ್ಟು 31,811 ಪಡಿತರ ಚೀಟಿ ಇದ್ದು, ಗೃಹಲಕ್ಷ್ಮಿ ಯೋಜನೆಯಡಿ 31,489 ಫಲಾನುಭವಿಗಳು ನೋಂದಣಿಯಾಗಿದ್ದಾರೆ ಎಂದರು. 322 ಪಡಿತರ ಚೀಟಿ ನೋಂದಣಿಗೆ ಬಾಕಿ ಇದ್ದು, ಜೂನ್ ಮಾಹೆಗೆ 30,539 ಪಡಿತರ ಚೀಟಿ ಫಲಾನುಭವಿಗಳಿಗೆ ಶಿಶು ಅಭಿವೃದ್ದಿ ಅಧಿಕಾರಿ ಮಡಿಕೇರಿಯವರಿಂದ ನೇರವಾಗಿ ಡಿಬಿಟಿ ಮುಖಾಂತರ ಹಣ ಮಂಜೂರಾಗಿದೆ ಎಂದು ತಿಳಿಸಿದರು. ಒಟ್ಟು ಹಣ ಪಾವತಿಯಾಗಲು ಬಾಕಿ ಇರುವ ಫಲಾನುಭವಿಗಳ ಸಂಖ್ಯೆ 13764, ಐ.ಟಿ/ಜಿ.ಎಸ್.ಟಿ ಪಾವತಿದಾರರೆಂದು 784 ಅರ್ಜಿಗಳು ತಿರಸ್ಕೃತಗೊಂಡಿದ್ದು, NPCI, e-KYC ಮಾಡಿಸಲು ಬಾಕಿ ಉಳಿದಿರುವ ಫಲಾನುಭವಿಗಳ ಸಂಖ್ಯೆ 166, ಮರಣ ನೋಂದಣಿ ಮಾಡಿಸಿದ ಫಲಾನುಭವಿಗಳ ಸಂಖ್ಯೆ 231 ಹಾಗೂ ತಿಂಗಳ ಅಂತ್ಯಕ್ಕೆ ಸಿಡಿಪಿಒ ಲಾಗಿನ್ ನಲ್ಲಿ ಪ್ರಸ್ತುತ ಮಾಹೆಯಲ್ಲಿ ಸ್ವೀಕೃತಗೊಂಡು ಅಪ್ರೂವ್ ಮಾಡಲು ಅರ್ಜಿಗಳು ಉಳಿಕೆ ಇರುವುದಿಲ್ಲ ಹಾಗೂ ಐಟಿ, ಜಿಎಸ್‍ಟಿ ಪಾವತಿದಾರರು ಎಂದು ಬರುತ್ತಿರುವ ಸಮಸ್ಯೆಯನ್ನು ಹೆಡ್ ಆಫೀಸ್ ನಲ್ಲಿ ಸರಿಪಡಿಸಲಾಗುತ್ತದೆ ಹಾಗೂ ಗೃಹಲಕ್ಷ್ಮಿಗೆ ಸಂಬಂಧಿಸಿದಂತೆ ಅನುದಾನವು ತಾಲ್ಲೂಕು ಪಂಚಾಯತಿಗೆ ಸರ್ಕಾರದಿಂದ ಜಮೆ ಆಗಿ ,ತಾಲ್ಲೂಕು ಪಂಚಾಯತಿಯಿಂದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಅನುದಾನವನ್ನು ಜಮೆ ಮಾಡಿದ ನಂತರ ತಮ್ಮ ಇಲಾಖೆಯಿಂದ ಹಣದ ಕಂತು ಫಲಾನುಭವಿಗಳ ಖಾತೆ ಹಣವನ್ನು ಜಮೆ ಮಾಡಲಾಗುತ್ತದೆ ಜೂನ್ 2025ರ ಮಾಹೆಯ ಒಟ್ಟು 15,376 ಎಸ್‍ಸಿ.ಫಲಾನುಭವಿಗಳಿಗೆ ರೂ.3,07,52,000 ಹಾಗೂ 8233 ಎಸ್.ಟಿ ಫಲಾನುಭವಿಗಳಿಗೆ ರೂ.1,64,66,000 ಗಳನ್ನು ಡಿ.ಬಿ.ಟಿ ಲಾಗ್ ಇನ್ ಮೂಲಕ ಬ್ಯಾಂಕ್ ಮೋಡ್ ನಲ್ಲಿ ಧನಸಹಾಯ ಪಾವತಿಸಲು, ಅನುದಾನ ಬಿಡುಗಡೆಯಾಗಿದೆ. ಇದರಲ್ಲಿ ಡಿಬಿಟಿ ಲಾಗ್ ಇನ್ ನಿಂದ ಬ್ಯಾಂಕ್ ಮೋಡ್ ಮೂಲಕ NPCI Success ಆದ ಒಟ್ಟು 14,986 ಎಸ್‍ಸಿ ಫಲಾನುಭವಿಗಳಿಗೆ ರೂ.2,99,72,000 ಗಳು ಹಾಗೂ 7908 ಎಸ್.ಟಿ ಫಲಾನುಭವಿಗಳಿಗೆ ರೂ.15,81,600 ಡಿ.ಬಿ.ಟಿ ಲಾಗ್ ಇನ್ ನಿಂದ ಜಂಟಿ ನಿಯಂತ್ರಕರು,ಲೆಕ್ಕ ಶಾಖೆ,ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಬೆಂಗಳೂರು ಇವರಿಗೆ ಅಪ್ರೂವ್ ಮಾಡಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು. ಶಕ್ತಿ ಯೋಜನೆ: ಶಕ್ತಿ ಯೋಜನೆಯಲ್ಲಿ ಆಗಸ್ಟ್ ತಿಂಗಳಿನಲ್ಲಿ ಒಟ್ಟು 1,25,53,142 ವಯಸ್ಕ ಮಹಿಳಾ ಪ್ರಯಾಣಿಕರು ಮತ್ತು 2,89,833 ಹೆಣ್ಣು ಮಕ್ಕಳು ಹಾಗೂ ಶಾಲಾ ಕಾಲೇಜು ವಿದ್ಯಾರ್ಥಿನಿಯರು ಸಂಸ್ಥೆಯ ವಾಹನದಲ್ಲಿ ಪ್ರಯಾಣಿಸಿ ಈ ಯೋಜನೆ ಪಡೆದಿದ್ದಾರೆ. ಸರಾಸರಿ 15,816 ಪ್ರಯಾಣಿಕರು ಒಂದು ದಿನಕ್ಕೆ ಸಂಸ್ಥೆಯ ವಾಹನದಲ್ಲಿ ಪ್ರಯಾಣಿಸಿರುತ್ತಾರೆ, ಮುಂದುವರೆದು ಒಟ್ಟು ಮೊತ್ತ 54,19,15,657 ಸಂಸ್ಥೆಗೆ ಆದಾಯ ಬಂದಿದೆ ಸರಾಸರಿ ಒಂದು ದಿನದ ಆದಾಯ ರೂ.6,67,384 ಆಗಿದೆ ಎಂದು ಸಭೆಗೆ ಮಾಹಿತಿ ನೀಡಿದರು. ಯುವನಿಧಿ: ಇಲಾಖಾಧಿಕಾರಿಯವರು ಮಾತನಾಡಿ 2023-2024ರಲ್ಲಿ ಪದವಿ ಮತ್ತು ಡಿಪೆÇ್ಲೀಮಾ ಉತ್ತೀರ್ಣರಾಗಿ ಕನಿಷ್ಠ 6 ತಿಂಗಳ ಅವಧಿಯವರೆಗೆ ಸರ್ಕಾರಿ/ಖಾಸಗಿ ಉದ್ಯೋಗ ಹೊಂದಿಲ್ಲದವರು, ಸ್ವಯಂ ಉದ್ಯೋಗ ಹೊಂದಿಲ್ಲದವರು, ಉನ್ನತ ವಿದ್ಯಾಭ್ಯಾಸ ಮುಂದುವರಿಸದೇ ಇರುವವರು ಈ ಯೋಜನೆಗೆ ಅರ್ಹರಾಗಿದ್ದು, ಅಲ್ಲದೆ ಈ ಯೋಜನೆಯ ಪ್ರಯೋಜನ ಮುಂದುವರಿಸಬೇಕಾಗಿದ್ದಲ್ಲಿ ಮೂರು ತಿಂಗಳಿಗೊಮ್ಮೆ ಸ್ವಯಂ ಘೋಷಣೆ ಮಾಡಿಕೊಳ್ಳಬೇಕು. ಯುವನಿಧಿ ಯೋಜನೆಯಲ್ಲಿ ಜೂನ್ ಮಾಹೆವರೆಗೆ 440 ಜನ ನೋಂದಣಿಯಾಗಿದ್ದು ಜೂನ್ ಮಾಹೆವರೆಗೆ ಫಲಾನುಭವಿಗಳಿಗೆ ರೂ.92,50,500 ಹಣ ಬಿಡುಗಡೆಯಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು. ಗೃಹಜ್ಯೋತಿ ಯೋಜನೆ: ಇಲಾಖಾಧಿಕಾರಿಯವರು ಮಾತನಾಡಿ ಮಡಿಕೇರಿ ತಾಲ್ಲೂಕಿನಲ್ಲಿ 51,856 ಅರ್ಹ ವಿದ್ಯುತ್ ಸ್ಥಾವರಗಳಿದ್ದು, 51494 ನೋಂದಣಿಗೊಂಡ ಅರ್ಜಿಗಳಾಗಿದ್ದು, ಬಾಕಿ ಇರುವ 362 ಬಾಕಿ ಇರುವ ಸ್ಥಾವರಗಳಿದ್ದು ಶೇ.99.30 ಶೇಕಡವಾರು ಪ್ರಗತಿಯಾಗಿದ್ದು, 145.65 ಲಕ್ಷ ಸಹಾಯಧನ ಬಂದಿರುತ್ತದೆ ಎಂದು ಸಭೆಗೆ ಮಾಹಿತಿ ನೀಡಿದರು. ಅನ್ನಭಾಗ್ಯ: ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದಂತೆ ಮಡಿಕೇರಿ ತಾಲ್ಲೂಕಿನಲ್ಲಿ ಒಟ್ಟು 38399 ಪಡಿತರ ಚೀಟಿ ಇದ್ದು 7940 ಎಎವೈ ಫಲಾನುಭವಿಗಳು, 22625 ಬಿ.ಪಿ.ಎಲ್ ಕಾರ್ಡ್ ಇದ್ದು 73241 ಫಲಾನುಭವಿಗಳು, 13779 ಎ ಪಿ ಎಲ್ ಕಾರ್ಡ್ ಇದ್ದು 39637 ಫಲಾನುಭವಿಗಳಿದ್ದು, ಮಡಿಕೇರಿ ತಾಲ್ಲೂಕಿನಲ್ಲಿ ಪತ್ತೆ ಹಚ್ಚಿರುವ ಅನರ್ಹ ಫಲಾನುಭವಿಗಳ ಸಂಖ್ಯೆ 401 ಆಗಿರುತ್ತದೆ. ತಾಲ್ಲೂಕು ಗ್ಯಾರಂಟಿ ಸಮಿತಿಯ ಅಧ್ಯಕ್ಷರಾದ ಎಂ.ಜಿ.ಮೋಹನ್ ದಾಸ್ ಅವರು ಮಾತನಾಡಿ, ಮಡಿಕೇರಿ ತಾಲ್ಲೂಕಿನಲ್ಲಿ 5 ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಗೊಳಿಸುವಲ್ಲಿ ಅನುಷ್ಠಾನ ಇಲಾಖೆಗಳು ಉತ್ತಮ ಪ್ರಗತಿ ಸಾಧಿಸಿದ್ದು, ಮುಂದಿನ ದಿನಗಳಲ್ಲಿಯೂ ಸಹ ಸಮಿತಿಯ ಎಲ್ಲಾ ಸದಸ್ಯರು ಹಾಗೂ ಅಧಿಕಾರಿಗಳು ಸರ್ಕಾರದ ಮಹಾತ್ವಾಕಾಂಕ್ಷಿ 5 ಗ್ಯಾರಂಟಿ ಯೋಜನೆಯನ್ನು ಎಲ್ಲಾ ಅರ್ಹ ಫಲಾನುಭವಿಗಳಿಗೆ ದೊರೆಯುವಂತೆ ಮಾಡಲು ಶ್ರಮಿಸಬೇಕು ಎಂದರು. ‘ಗ್ಯಾರಂಟಿ ಯೋಜನೆ ಮತ್ತಷ್ಟು ಪರಿಣಾಮಕಾರಿ ಅನುಷ್ಠಾನ ಸಂಬಂಧ ಗ್ರಾಮ ಪಂಚಾಯತಿ ಮಟ್ಟದಲ್ಲಿ ಫಲಾನುಭವಿಗಳ ಕುಂದುಕೊರತೆ ಸಭೆ ಮಾಡಬೇಕಿದೆ. ಮಡಿಕೇರಿ ತಾಲ್ಲೂಕಿನ ಹೊದ್ದೂರು ಗ್ರಾಮಪಂಚಾಯತಿ ವ್ಯಾಪ್ತಿಯಲ್ಲಿ ಸೆ.10 ರಂದು ಗ್ಯಾರಂಟಿ ಯೋಜನೆಗೆ ಸಂಬಂಧಿಸಿದಂತೆ ಕುಂದುಕೊರತೆ ಸಭೆ ಆಯೋಜಿಸುವುದಾಗಿ ಮಂದ್ರೀರ ಮೋಹನ್ ದಾಸ್ ಹೇಳಿದರು.’ ಮುಂದಿನ ದಿನಗಳಲ್ಲಿ ಜಿಲ್ಲಾ ಮಟ್ಟದ ಸಭೆಯಲ್ಲಿ 5 ಗ್ಯಾರಂಟಿ ಯೊಜನೆಗಳಿಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಿ ಸೂಕ್ತ ಪರಿಹಾರವನ್ನು ಸೂಚಿಸುವಂತೆ ಸಭೆಯಲ್ಲಿ ತಿಳಿಸಿದರು. ಸಭೆಯಲ್ಲಿ ಅನುಷ್ಠಾನ ಇಲಾಖೆಗಳಾದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ಅಧಿಕಾರಿ, ಶಿಶು ಅಭಿವೃದ್ದಿ ಇಲಾಖಾ ಅಧಿಕಾರಿ, ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿ ಮತ್ತು ವ್ಯವಸ್ಥಾಪಕರು ಕೆ.ಎಸ್.ಆರ್.ಟಿ.ಸಿ ರವರು ಮತ್ತು ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ಸಮಿತಿ ಸದಸ್ಯರು ಹಾಜರಿದ್ದರು. ಸದಸ್ಯ ಕಾರ್ಯದರ್ಶಿಗಳು ಹಾಗೂ ಕಾರ್ಯನಿರ್ವಾಹಕ ಅಧಿಕಾರಿಯವರು ಸಭೆಯಲ್ಲಿ ಹಾಜರಿದ್ದ ಸರ್ವರಿಗೂ ವಂದಿಸಿದರು.

Share. Facebook Twitter Pinterest LinkedIn Tumblr Email WhatsApp
Previous Article*ಪುಣ್ಯಕ್ಷೇತ್ರ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಿಸಿದ ಶಾಸಕ ಡಾ.ಮಂತರ್ ಗೌಡ*
Next Article *ಕೊಡಗು : ಆ.27 ರಿಂದ ಮದ್ಯ ಮಾರಾಟ ನಿಷೇಧ*

Recommended: Website design development company services in Mangalore Forex Trading Teacher in India

Related Posts

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

ಸಿಯಾಟಲ್ (ಅಮೆರಿಕಾ): ಕಳೆದ ಎರಡು ವರ್ಷಗಳಿಂದ ಇಡೀ ಜಗತ್ತಿನ ಗಮನ ಸೆಳೆದಿದ್ದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಸಾವಿನ…

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.