Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬೈಲುಕುಪ್ಪೆಯಲ್ಲಿ ವಿಶ್ವದ ಅತಿ ದೊಡ್ಡ ಚಿತ್ರ ಪರದೆ ಅನಾವರಣ*
  • *ಸಾಧಿಸಲು ಹಳ್ಳಿ ನಗರ ಮುಖ್ಯವಲ್ಲ, ಬದಲಿಗೆ ಸಾಧಿಸಲು ವಾತವರಣ ಸೃಷ್ಟಿ ಮಾಡುವುದು ಮುಖ್ಯವಾಗಬೇಕು: ಪೂಜಾ ಸಜೇಶ್: ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಶಿಭಿರಕ್ಕೆ ಚಾಲನೆ: ಸೇವಾರ್ಥ ಮನೋಭಾವದಿಂದ ರಾಷ್ಟೃ ನಿರ್ಮಾಣ ಮಾಡುವತ್ತ ಗಮನ ಹರಿಸುವಂತಾಗಬೇಕು:ಗಣ್ಯರ ಅಭಿಮತ*
  • *ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ಗಮನಹರಿಸಿ: ಡಾ.ಮಂತರ್ ಗೌಡ*
  • *ಶಕ್ತಿ ಗೋಪಾಲಕೃಷ್ಣ ರಸ್ತೆ ನಾಮಫಲಕ ಉದ್ಘಾಟನೆ*
  • *ವೃತ್ತಿಪರ ಕೋರ್ಸ್‌ಗಳ ಶುಲ್ಕ ಪಾವತಿಗೆ ಕೆಇಎ ಕಾಲಾವಕಾಶ ವಿಸ್ತರಣೆ: 9 ಸಾವಿರ ಅಭ್ಯರ್ಥಿಗಳಿಗೆ ಕೊನೆಯ ಚಾನ್ಸ್*
  • *’ಟಾಕ್ಸಿಕ್’ ರಿಲೀಸ್ ಡೇಟ್ ಚೇಂಜ್: ‘ಟಾಕ್ಸಿಕ್’ ಎದುರು ನಿಲ್ಲುತ್ತಾ ವರುಣ್ ಧವನ್ ಸಿನಿಮಾ? ಚಿತ್ರತಂಡದ ಮುಂದಿನ ನಡೆ ಏನು?*
  • *ತಿರುಪತಿ ದರ್ಶನಕ್ಕೆ ತೆರಳುತ್ತಿದ್ದ ಬೆಂಗಳೂರಿನ ಒಂದೇ ಕುಟುಂಬದ ಐವರು ಸಾವು: ಚಿತ್ತೂರು ಬಳಿ ಲಾರಿಗೆ ಕಾರು ಡಿಕ್ಕಿ!*
  • *ಯುರೋಕಿಡ್ಸ್ ಮಡಿಕೇರಿ ಪಬ್ಲಿಕ್ ಶಾಲೆಯಲ್ಲಿ ‘ಟ್ಯಾಲೆಂಟ್ ಡಿಸ್ಪ್ಲೇ ಮತ್ತು ಗ್ರಾಜುಯೇಷನ್ ಡೇ’ *
  • *ಹಾಡಿಗೆ ಪೊಲೀಸ್ ಅಧಿಕಾರಿಗಳ ಭೇಟಿ*
  • *ತೊರೆನೂರು ವಿರಕ್ತ ಮಠದಲ್ಲಿ ಮಾಸಿಕ ಹುಣ್ಣಿಮೆ ಚಿಂತನಾಗೋಷ್ಠಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಮಹಾದೇಗುಲ»*ದುಷ್ಟ ಶಕ್ತಿಗಳಿಂದ ಮುಕ್ತಿ ಪ್ರಸಾದಿಸುವ ಗಾಲಿ ಆಂಜನೇಯ ಸ್ವಾಮಿ*
ಮಹಾದೇಗುಲ

*ದುಷ್ಟ ಶಕ್ತಿಗಳಿಂದ ಮುಕ್ತಿ ಪ್ರಸಾದಿಸುವ ಗಾಲಿ ಆಂಜನೇಯ ಸ್ವಾಮಿ*

ಆಗಷ್ಟ್ 28, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಗಾಳಿ ಆಂಜನೇಯ ದೇವಸ್ಥಾನ ಬೆಂಗಳೂರು ನಗರದ ಅತಿ ಶ್ರೇಷ್ಠ ಹಾಗೂ ಪವಿತ್ರವಾದ ಸ್ಥಳ. ಇದು ಬೆಂಗಳೂರಿನ ಹಳೆಯ ದೇವಸ್ಥಾನಗಳಲ್ಲಿ ಒಂದು. ಈ ದೇವಾಲಯವನ್ನು ಮೊದಲು ದಿಗಂಬರ ದೇವಸ್ಥಾನ ಎಂದು ಕರೆಯಲಾಗುತ್ತಿತ್ತು. ಗಾಳಿ ಆಂಜನೇಯ ದೇವಸ್ಥಾನ ಬೆಂಗಳೂರಿನ ಮೈಸೂರು ರಸ್ತೆಯ ಬ್ಯಾಟರಾಯನಪುರದ ಬಳಿ ಇದೆ. ಈ ದೇವಾಲಯದ ದೇವರು ತುಂಬಾ ಶಕ್ತಿಶಾಲಿಯಾಗಿರುವುದರಿಂದ ತಮ್ಮ ಎಲ್ಲಾ ಕೋರಿಕೆಗಳು ಈಡೇರುತ್ತವೆ ಎಂದು ಅನೇಕ ಭಕ್ತರು ನಂಬುತ್ತಾರೆ. ಇಡೀ ವರ್ಷ ದೇವಾಲಯದಲ್ಲಿ ವಿಶೇಷ ಪೂಜೆಗಳನ್ನು ನಡೆಸಲಾಗುತ್ತದೆ ಹಾಗೂ ಧಾರ್ಮಿಕ ಹಬ್ಬಗಳನ್ನು ಆಚರಿಸಲಾಗುತ್ತದೆ. ಗಾಳಿ ಆಂಜನೇಯ ದೇವರ ಆಶೀರ್ವಾದ ಪಡೆಯಲು ಮತ್ತು ತಮ್ಮ ಜೀವನದ ತೊಂದರೆಗಳನ್ನು ನಿವಾರಿಸಿಕೊಳ್ಳಲು ಜನರು ಇಲ್ಲಿಗೆ ಭೇಟಿ ನೀಡುತ್ತಾರೆ. ಆಂಜನೇಯನ ಆಶೀರ್ವಾದ ಪಡೆಯಲು ಭಕ್ತರು ಬೇರೆ ಬೇರೆ ಊರುಗಳು ಹಾಗೂ ರಾಷ್ಟ್ರಗಳಿಂದೆಲ್ಲಾ ಬರುತ್ತಾರೆ.

ಇತಿಹಾಸ ::  ಈ ದೇವಾಲಯವನ್ನು 1425ರಲ್ಲಿ ನಿರ್ಮಿಸಲಾಗಿದ್ದು ಇದು ಸುಮಾರು 600 ವರ್ಷಗಳ ಇತಿಹಾಸವನ್ನು ಹೊಂದಿದೆ. ವೃಷಭಾವತಿ ಮತ್ತು ಪಶ್ಚಿಮಾವತಿ ನದಿಗಳ ಸಂಗಮವಾದದ್ದರಿಂದ ವ್ಯಾಸರಾಜನು ಇಲ್ಲಿ ಪ್ರತಿಮೆಯನ್ನು ಸ್ಥಾಪಿಸಿದನೆಂದು ಪುರಾಣ ಹೇಳುತ್ತದೆ. ಇಲ್ಲಿರುವ ಆಂಜನೇಯನ ವಿಗ್ರಹವನ್ನು ಹಿಂದೂ ಸಂತ ಶ್ರೀ ವ್ಯಾಸರಾಜ ಸ್ಥಾಪಿಸಿದ್ದಾರೆ. ಅವರು 732 ಹನುಮಂತನ ವಿಗ್ರಹಗಳನ್ನು ಸ್ಥಾಪಿಸಿದ್ದಾರೆ ಎಂದು ಹೇಳಲಾಗುತ್ತದೆ, ಇವುಗಳಲ್ಲಿ ಗಾಳಿ ಆಂಜನೇಯ ದೇವಸ್ಥಾನ ಕೂದ ಒಂದು. ಬೆಂಗಳೂರು ನಗರ ಉದಿಸುವ ಮುನ್ನ ಸ್ವಾಮಿಯ ಮೂರ್ತಿ ಬಯಲಿನಲ್ಲಿ ಇದ್ದ ಕಾರಣ ಗಾಳಿ ಆಂಜನೇಯ ಎಂಬ ಹೆಸರು ಬಂದಿದೆ. ಗಾಳಿ ಎಂದರೆ ದುಷ್ಟಶಕ್ತಿ ಎಂದರ್ಥ. ದುಷ್ಟಶಕ್ತಿಗಳ ಅಧಿಪತಿಯಾದ ರಾವಣನ ಪುತ್ರ ಅಕ್ಷಾಸುರನನ್ನು ಮೆಟ್ಟಿ ನಿಂತಿದ್ದರಿಂದ ಈ ಹೆಸರು ಬಂದಿದೆ.

ದೇವಾಲಯದ ವಿವರ ::  ದೇವಾಲಯದ ಪೂಜಾ ಮೂರ್ತಿಯ ಶಿರದ ಎರಡೂ ಬದಿಗಳಲ್ಲಿ ಶಂಖ ಚಕ್ರಗಳಿವೆ. ಸಾಮಾನ್ಯವಾಗಿ ಬಹುತೇಕ ಆಂಜನೇಯನ ವಿಗ್ರಹಗಳ ಕೈಯಲ್ಲಿ ಗದೆ ಇರುತ್ತದೆ ಆದರೆ ಇಲ್ಲಿ ಪದ್ಮಕಮಲ ಇರುವುದು ಮತ್ತೊಂದು ವಿಶೇಷತೆಯಾಗಿದೆ. ಆಂಜನೇಯನ ಬಹುತೇಕ ದೇಗುಲಗಳಲ್ಲಿ ಮೂರ್ತಿಯ ಮುಖಕ್ಕೆ ಸಿಂಧೂರ ಲೇಪಿಸಲಾಗುತ್ತದೆ ಆದರೆ ಇಲ್ಲಿ ಪ್ರತಿ ಗುರುವಾರ ಸ್ವಾಮಿಯ ಇಡೀ ದೇಹಕ್ಕೆ ಸಿಂಧೂರವನ್ನು ಲೇಪಿಸಿ ಪೂಜೆ ಮಾಡಲಾಗುತ್ತದೆ. ಪ್ರತಿ ಮಂಗಳವಾರ ಮತ್ತು ಶನಿವಾರ ವಿಶೇಷ ಪೂಜೆ ನಡೆಯುತ್ತದೆ. ಗಾಳಿ ಆಂಜನೇಯ ದೇವಸ್ಥಾನ ಎತ್ತರದ ಗೋಪುರವನ್ನು ಹೊಂದಿದ್ದು ಇಲ್ಲಿ ದೇವರು ಪಶ್ಚಿಮಕ್ಕೆ ಮುಖಮಾಡಿ ಶ್ರೀರಾಮನ ಪರಿವಾರವನ್ನು ಕಾಣುತ್ತಿದ್ದಾನೆ. ಇಲ್ಲಿ ಪವಿತ್ರ ದಾರವನ್ನು ಭಕ್ತರಿಗೆ ಪ್ರಸಾದ ಎಂದು ನೀಡಲಾಗುತ್ತದೆ. ಇಲ್ಲಿ ಭಗವಂತನ ಬಾಲದ ಕೊನೆಯಲ್ಲಿ ಒಂದು ಗಂಟೆಯನ್ನು ಕಟ್ಟಿದ್ದು ಇದು ಶ್ರೀ ವ್ಯಾಸರಾಜರ ಶಾಂತಿ ಶೈಲಿಯನ್ನು ಸೂಚಿಸುತ್ತದೆ. ಆಂಜನೇಯನ ವಿಗ್ರಹದ ಎಡಗೈ ಸೊಂಟದ ಮೇಲೆ ವಿಶ್ರಾಂತಿ ಪಡೆಯುತ್ತಾ ಹೂವನ್ನು ಹಿಡಿದಿದೆ ಹಾಗೂ ಬಲಗೈಯಲ್ಲಿ ಅಭಯ ಮುದ್ರೆಯನ್ನು ಹಿಡಿದು ತನ್ನ ಎಲ್ಲಾ ಭಕ್ತರಿಗೆ ಆಶೀರ್ವಾದ ನೀಡುತ್ತಿದೆ.

ದೇವಾಲಯದ ಮಹತ್ವ ;:  ಗಾಳಿ ಆಂಜನೇಯ ದೇವಾಲಯದ ಅನನ್ಯತೆಯೆಂದರೆ ರಥ ಯಾತ್ರೆ. ಇದು ಕಳೆದ 120 ವರ್ಷಗಳಿಂದ ನಡೆಯುತ್ತಿದೆ. ಈ ಸಮಯದಲ್ಲಿ ಬಹಳಷ್ಟು ಭಕ್ತರು ದೇವಾಲಯಕ್ಕೆ ಭೇಟಿ ನೀಡುತ್ತಾರೆ. ಇಲ್ಲಿ 135 ವರ್ಷಗಳಿಂದ ಶ್ರೀ ರಾಮ ನವಮಿ ಸಂದರ್ಭದಲ್ಲಿ 9 ದಿನಗಳ ಕಾಲ ಶ್ರೀ ಪಾಂಚರಾತ್ರಾಗಮ ಬ್ರಹ್ಮರಥೋತ್ಸವ ವಿಜ್ರಂಭಣೆಯಿಂದ ನಡೆಯುತ್ತದೆ. ಹನುಮ ಜಯಂತಿ ಹಾಗೂ ಭೀಮನ ಅಮಾವಾಸ್ಯೆಯಂದು ವಿಶೇಷ ಪೂಜೆ ನಡೆಯುತ್ತದೆ. ದೇವಸ್ಥಾನದಲ್ಲಿ ಪ್ರತಿ ಶನಿವಾರ ವಿಶೇಷ ಅಭಿಷೇಕ, ಪೂಜೆ, ಸಂಗೀತ, ಭಜನೆ, ಪ್ರಸಾದ ವಿಸ್ತರಣೆ ಮುಂತಾದವು ಇರುತ್ತದೆ. ಅಗಸ್ಟ್ ತಿಂಗಳಲ್ಲಿ ಈ ದೇವಸ್ಥಾನದ ದೇವರಿಗೆ ಬೆಣ್ಣೆ ಅಲಂಕಾರವನ್ನು ನಡೆಸಲಾಗುತ್ತದೆ. ಈ ಸಮಯದಲ್ಲಿ ದೈತ್ಯಾಕಾರದ ವಿಗ್ರಹವನ್ನು ಬೆಣ್ಣೆಯಿಂದ ಅಲಂಕರಿಸಲಾಗುತ್ತದೆ. ಬೆಣ್ಣೆಯನ್ನು ಸಾವಿರಾರು ಭಕ್ತರು ದಾನ ಮಾಡುತ್ತಾರೆ. ಹನುಮಾನ್ ಜಯಂತಿ ಸಮಯದಲ್ಲಿ ಬೆಂಗಳೂರು ಮತ್ತು ಸುತ್ತಮುತ್ತಲಿನ ಕೋತಿಗಳಿಗೆ ಹಣ್ಣುಗಳನ್ನು ನೀಡಲಾಗುತ್ತದೆ. ಗಾಳಿ ಆಂಜನೇಯ ದೇವಸ್ಥಾನದಲ್ಲಿ ಶ್ರೀ ವೇಣುಗೋಪಾಲಸ್ವಾಮಿ, ಶ್ರೀರಾಮ, ಗಣಪತಿ ಮತ್ತು ನವಗ್ರಹ ದೇವಾಲಯಗಳಿವೆ. ಈ ದೇವಾಲಯದಲ್ಲಿ ಸಾಕಷ್ಟು ರಾಜಕಾರಣಿ ಭಕ್ತರಿದ್ದಾರೆ. ಭಕ್ತರು ಅವರ ಕೆಲಸದ ಕ್ಷೇತ್ರಗಳಲ್ಲಿ ತಮ್ಮ ಯಶಸ್ಸಿಗೆ ಪ್ರಾರ್ಥನೆ ಸಲ್ಲಿಸುತ್ತಾರೆ ಮತ್ತು ಮಕ್ಕಳಿಗೆ ಕಾಯಿಲೆಗಳನ್ನು ಗುಣಪಡಿಸಲು ಇಲ್ಲಿ ಭೇಟಿನೀಡುತ್ತಾರೆ.

 

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಐತಿಹಾಸಿಕ ಕುನ್ನತ್ತೂರು ಪಾಡಿ ಶ್ರೀ ಮುತ್ತಪ್ಪನ್ ಕ್ಷೇತ್ರ*

ಡಿಸೆಂಬರ್ 22, 2025

*ಪರಮ ಪವಿತ್ರ ಕ್ಷೇತ್ರ ಬಾರ್ದಿಲ ಶ್ರೀ ಸಾಂಬಸದಾಶಿವ ದೇವಸ್ಥಾನ*

ನವೆಂಬರ್ 29, 2025

*ಶ್ರೀರಾಜರಾಜೇಶ್ವರಿ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ದೀಪಾವಳಿ ‘ದೀಪೋತ್ಸವ’ : ಸಹಸ್ರ ಸಹಸ್ರ ದೀಪಗಳನ್ನು ಹಚ್ಚಿ ಪುನೀತರಾದ ಭಕ್ತರು*

ಅಕ್ಟೋಬರ್ 22, 2025

*ಸಾಧಿಸಲು ಹಳ್ಳಿ ನಗರ ಮುಖ್ಯವಲ್ಲ, ಬದಲಿಗೆ ಸಾಧಿಸಲು ವಾತವರಣ ಸೃಷ್ಟಿ ಮಾಡುವುದು ಮುಖ್ಯವಾಗಬೇಕು: ಪೂಜಾ ಸಜೇಶ್: ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಶಿಭಿರಕ್ಕೆ ಚಾಲನೆ: ಸೇವಾರ್ಥ ಮನೋಭಾವದಿಂದ ರಾಷ್ಟೃ ನಿರ್ಮಾಣ ಮಾಡುವತ್ತ ಗಮನ ಹರಿಸುವಂತಾಗಬೇಕು:ಗಣ್ಯರ ಅಭಿಮತ*

ಮಾರ್ಚ್ 4, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಮಾ:೦೪: ವಿದ್ಯಾರ್ಥಿ ಜೀವನವು ಹಲವು ಒತ್ತಡಗಳಿಂದ ನಿರ್ಮಾಣವಾಗುತ್ತಿದೆ ಎನ್ನುವುದು ಸುಳ್ಳು.ಕಲಿಕೆ ಮತ್ತು ಸಾಮಾಜಿಕ ಚಿಂತನೆಯನ್ನು ಸಮಾನವಾಗಿ…

*ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ಗಮನಹರಿಸಿ: ಡಾ.ಮಂತರ್ ಗೌಡ*

ಮಾರ್ಚ್ 4, 2026

*ಶಕ್ತಿ ಗೋಪಾಲಕೃಷ್ಣ ರಸ್ತೆ ನಾಮಫಲಕ ಉದ್ಘಾಟನೆ*

ಮಾರ್ಚ್ 4, 2026

*ವೃತ್ತಿಪರ ಕೋರ್ಸ್‌ಗಳ ಶುಲ್ಕ ಪಾವತಿಗೆ ಕೆಇಎ ಕಾಲಾವಕಾಶ ವಿಸ್ತರಣೆ: 9 ಸಾವಿರ ಅಭ್ಯರ್ಥಿಗಳಿಗೆ ಕೊನೆಯ ಚಾನ್ಸ್*

ಮಾರ್ಚ್ 4, 2026

*’ಟಾಕ್ಸಿಕ್’ ರಿಲೀಸ್ ಡೇಟ್ ಚೇಂಜ್: ‘ಟಾಕ್ಸಿಕ್’ ಎದುರು ನಿಲ್ಲುತ್ತಾ ವರುಣ್ ಧವನ್ ಸಿನಿಮಾ? ಚಿತ್ರತಂಡದ ಮುಂದಿನ ನಡೆ ಏನು?*

ಮಾರ್ಚ್ 4, 2026

*ತಿರುಪತಿ ದರ್ಶನಕ್ಕೆ ತೆರಳುತ್ತಿದ್ದ ಬೆಂಗಳೂರಿನ ಒಂದೇ ಕುಟುಂಬದ ಐವರು ಸಾವು: ಚಿತ್ತೂರು ಬಳಿ ಲಾರಿಗೆ ಕಾರು ಡಿಕ್ಕಿ!*

ಮಾರ್ಚ್ 4, 2026

*ಯುರೋಕಿಡ್ಸ್ ಮಡಿಕೇರಿ ಪಬ್ಲಿಕ್ ಶಾಲೆಯಲ್ಲಿ ‘ಟ್ಯಾಲೆಂಟ್ ಡಿಸ್ಪ್ಲೇ ಮತ್ತು ಗ್ರಾಜುಯೇಷನ್ ಡೇ’ *

ಮಾರ್ಚ್ 4, 2026

*ಹಾಡಿಗೆ ಪೊಲೀಸ್ ಅಧಿಕಾರಿಗಳ ಭೇಟಿ*

ಮಾರ್ಚ್ 4, 2026

*ತೊರೆನೂರು ವಿರಕ್ತ ಮಠದಲ್ಲಿ ಮಾಸಿಕ ಹುಣ್ಣಿಮೆ ಚಿಂತನಾಗೋಷ್ಠಿ*

ಮಾರ್ಚ್ 4, 2026

*ವಲಸೆ ಕಾರ್ಮಿಕರ ಸಮಸ್ಯೆ ಬಗೆಹರಿಸಲು ಒತ್ತಾಯಿಸಿ ಜಿಲ್ಲಾಧಿಕಾರಿಗೆ ಮನವಿ*

ಮಾರ್ಚ್ 4, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.