
ಸುಂಟಿಕೊಪ್ಪ ಸೆ.2 NEWS DESK : ವಿಸ್ಮಯ ಅವರು ಭಾರತೀಯ ಅರೆಸೇನಾಪಡೆಗೆ ನೇಮಕಗೊಂಡಿದ್ದು, ಅವರನ್ನು ಪೊಲೀಸ್ ಮುಖ್ಯ ಪೇದೆ ಹಾಗೂ ಗ್ರಾಮಸ್ಥರು ಸನ್ಮಾನಿಸಿದರು. 7ನೇ ಹೊಸಕೋಟೆಯ ತೊಂಡೂರ್ ನಿವಾಸಿ ದಾಸು ಹಾಗೂ ಬಿಂದು ದಂಪತಿಯ ಪುತ್ರಿ ವಿಸ್ಮಯ ಅವರು ಭಾರತೀಯ ಸೇನೆಗೆ ಆಯ್ಕೆಯಾದ ಹಿನ್ನಲೆ ಗ್ರಾಮಸ್ಥರಾದ ಅಬ್ದುಲ್ ರಜಾಕ್, ರಫೀಕ್, ಉಷಾ ಶ್ರೀಧರ್, ಉಸ್ಮನ್ ಹಾಗೂ ಸುಂಟಿಕೊಪ್ಪ ಠಾಣೆಯ ಪೊಲೀಸ್ ಸಿಬ್ಬಂದಿ ಆಶಾ ಅವರು ಸನ್ಮಾನಿಸಿ, ಗೌರವಿಸಿದರು.









