Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾರತ vs ಪಾಕಿಸ್ತಾನ ಪಂದ್ಯಕ್ಕೆ ಮಳೆ ಭೀತಿ! ಶ್ರೀಲಂಕಾ ಹವಾಮಾನ ಇಲಾಖೆ ನೀಡಿದ ಆ ಒಂದು ಎಚ್ಚರಿಕೆ ಅಭಿಮಾನಿಗಳಿಗೆ ಬಿಗ್ ಶಾಕ್!*
  • *ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*
  • *ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಕೊಡಗು ಸೈನಿಕ ಶಾಲೆಯಲ್ಲಿ ಆಡಳಿತ ಮಂಡಳಿ ಸಭೆ ಹಾಗೂ ಧ್ವಜಸ್ತಂಭದ ಉದ್ಘಾಟನೆ*
ಇತ್ತೀಚಿನ ಸುದ್ದಿಗಳು

*ಕೊಡಗು ಸೈನಿಕ ಶಾಲೆಯಲ್ಲಿ ಆಡಳಿತ ಮಂಡಳಿ ಸಭೆ ಹಾಗೂ ಧ್ವಜಸ್ತಂಭದ ಉದ್ಘಾಟನೆ*

September 5, 20254 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಸೆ.5 NEWS DESK : ವಿದ್ಯಾರ್ಥಿಗಳು ಭವಿಷ್ಯದ ಸೇನಾ ಆಧಿಕಾರಿಗಳಾಗಿ ಕೇವಲ ಶಸ್ತ್ರಾಸ್ತ್ರಗಳನ್ನು ಮಾತ್ರವಲ್ಲ, ಮೌಲ್ಯ, ದೃಷ್ಟಿಕೋನವನ್ನು ಹಾಗೂ ಅಂತರಂಗದಲ್ಲಿ ನೈತಿಕತೆಯನ್ನು ಕೂಡ ಹೊತ್ತು ಸಾಗಬೇಕು ಎಂದು ಸ್ಥಳೀಯ ಆಡಳಿತ ಮಂಡಳಿಯ ಅಧ್ಯಕ್ಷ ಏರ್ ವೈಸ್ ಮಾರ್ಷಲ್ ಬಿಜೊ ಜಾನ್ ಮೆಮನ್ ಕಿವಿ ಮಾತು ಹೇಳಿದರು. ಕೊಡಗು ಸೈನಿಕ ಶಾಲೆಯ ಕುವೆಂಪು ವಿವಿಧೋದ್ದೇಶ ಸಭಾಂಗಣದಲ್ಲಿ ನಡೆದ 29ನೇ ಸ್ಥಳೀಯ ಆಡಳಿತ ಮಂಡಳಿ (ಎಲ್.ಬಿ.ಎ) ಸಭೆಗೆ ಮುಖ್ಯ ಅತಿಥಿಗಳಾಗಿ ಆಗಮಿಸಿ, ಶಾಲೆಯ ಯುದ್ಧವೀರರ ಸ್ಮಾರಕದ ಆವರಣದಲ್ಲಿ ನೂತನವಾಗಿ ನಿರ್ಮಿಸಲ್ಪಟ್ಟ ಧ್ವಜ ಸ್ತಂಭವನ್ನು ಉದ್ಘಾಟಿಸಿ ಮಾತನಾಡಿದರು. ಸೈನಿಕ ಶಾಲೆ ಕೊಡಗು ಹದಿನೇಳು ವರ್ಷಗಳ ಹಿಂದೆ ಭವಿಷ್ಯದ ಸೈನಿಕ ಅಧಿಕಾರಿಗಳನ್ನು ನಿರ್ಮಿಸುವ ಮಹೋನ್ನತ ದೃಷ್ಟಿಕೋನದೊಂದಿಗೆ ಸ್ಥಾಪಿತವಾಗಿದೆ. ಇಂದು ತನ್ನ ಸಾಮಥ್ರ್ಯ ಮತ್ತು ಗೌರವವನ್ನು ವೃದ್ಧಿಸಿಕೊಂಡು ಗಣನೀಯ ಬೆಳವಣಿಗೆಯನ್ನು ಕಂಡಿದೆ. ಕಾಲದ ಪರೀಕ್ಷೆಗೆ ತಕ್ಕಂತೆ ದೃಢವಾಗಿ ನಿಂತು, ಕಾಲಾನುಕ್ರಮವಾಗಿ ಆಧುನಿಕ ಶಿಕ್ಷಣ ಹಾಗೂ ತರಬೇತಿಯ ಬೇಡಿಕೆಗಳನ್ನು ಪೂರೈಸುವ ನಿಟ್ಟಿನಲ್ಲಿ ಬೆಳೆದು ನಿಂತಿದೆ. ವಿದ್ಯಾರ್ಥಿಗಳ ಶೈಕ್ಷಣಿಕ, ದೈಹಿಕ, ನೈತಿಕ ಹಾಗೂ ಸಾಂಸ್ಕೃತಿಕ ಬೆಳವಣಿಗೆಗೆ ಅಗತ್ಯವಾದ ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಈ ಸಂಸ್ಥೆ ಬೆಳೆದು ಬಂದಿರುವುದು ಶ್ಲಾಘನೀಯ ಎಂದರು. ಕಳೆದ ಎರಡು ವರ್ಷಗಳಲ್ಲಿ ವಿಶೇಷವಾಗಿ ಶಾಲೆಯು ಮೂಲಸೌಕರ್ಯ, ಶೈಕ್ಷಣಿಕ ಫಲಿತಾಂಶ, ಪೂರಕ ಚಟುವಟಿಕೆಗಳು ಹಾಗೂ ವಿದ್ಯಾರ್ಥಿಗಳ ಸಮಗ್ರ ವ್ಯಕ್ತಿತ್ವ ವಿಕಸನದಲ್ಲಿ ಅಪಾರ ಪ್ರಗತಿ ಸಾಧಿಸಿದೆ. ಯು ಪಿ ಎಸ್ ಸಿ, ಎನ್ ಡಿ ಎ ಪರೀಕ್ಷೆಯಲ್ಲಿ ಶಾಲೆಯ ಅತ್ಯುತ್ತಮ ಸಾಧನೆ ನಮಗೆಲ್ಲ ಹೆಮ್ಮೆಯ ವಿಷಯವಾಗಿದೆ. 19 ವಿದ್ಯಾರ್ಥಿಗಳು ಎನ್ ಡಿ ಎ ಲಿಖಿತ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು, ಅವರಲ್ಲಿ 4 ಮಂದಿ ಪ್ರತಿಷ್ಠಿತ ನ್ಯಾಷನಲ್ ಡಿಫೆನ್ಸ್ ಅಕಾಡೆಮಿಗೆ ಸೇರ್ಪಡೆಗೊಂಡಿರುತ್ತಾರೆ. ಇದು ಸಾಧಾರಣ ಸಾಧನೆಯಲ್ಲ. ಇದಕ್ಕಾಗಿ ವಿದ್ಯಾರ್ಥಿಗಳ ಪರಿಶ್ರಮ, ಅಧಿಕಾರಿಗಳ ಹಾಗೂ ಶಿಕ್ಷಕರ ಸಮರ್ಪಿತ ಹಾಗೂ ಅವಿರತ ಮಾರ್ಗದರ್ಶನವೇ ಕಾರಣವಾಗಿದೆ ಎಂದು ಹೇಳಿದರು. ಕ್ರೀಡಾ ವಿಭಾಗದ ಸಾಧನೆಗಳ ಕ್ಷೇತ್ರದಲ್ಲಿಯೂ ಶಾಲೆಯ ವಿದ್ಯಾರ್ಥಿಗಳು ತಮ್ಮ ನೈಜ ಸಾಮಥ್ರ್ಯವನ್ನು ರಾಷ್ಟ್ರೀಯ ಮಟ್ಟದಲ್ಲಿ ತೋರಿಸಿದ್ದಾರೆ. ಇದಕ್ಕೆ ಸಾಕ್ಷಿಯಾಗಿ 2025-26ನೇ ಸಾಲಿನಲ್ಲಿ ಒರಿಸ್ಸಾದ ಭುವನೇಶ್ವರದಲ್ಲಿ ನಡೆದ ಅಖಿಲ ಭಾರತ ಸೈನಿಕ ಶಾಲೆಗಳ ಅಂತರ ವಲಯ ಫುಟ್ಬಾಲ್ ಸ್ಪರ್ಧೆಯಲ್ಲಿ ಶಾಲೆಯು ಸಾಧಿಸಿದ ಸಾಧನೆ ಪೂರಕವಾಗಿದೆ. ಜೊತೆಗೆ, ಮಹಾರಾಷ್ಟ್ರದ ಚಂದ್ರಪುರದಲ್ಲಿ ನಡೆದ ಅಖಿಲ ಭಾರತ ಸೈನಿಕ ಶಾಲೆಗಳ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ವಿದ್ಯಾರ್ಥಿನಿಯರಾದ ದೀಪ್ತಿ ದೇವಿ, ಸಾನಿಕಾ ಉದಯ್ ಹಾಗೂ ದೀಪ್ತಿ ಬಿ.ಯು. ರವರ ಸಾಧನೆ ಶಾಲೆಯ ಕೀರ್ತಿಗೆ ನೂತನ ಮೈಲಿಗಲ್ಲನ್ನು ನಿರ್ಮಿಸಿದೆ. ಇದರೊಂದಿಗೆ ಶೈಕ್ಷಣಿಕ ಹೊಣೆಗಾರಿಕೆಯೊಂದಿಗೆ ಶಿಕ್ಷಕರ ನಿರಂತರ ವೃತ್ತಿಪರ ಅಭಿವೃದ್ಧಿಗೆ ಶಾಲೆ ಹೆಚ್ಚಿನ ಆದ್ಯತೆ ನೀಡಿದ್ದು, ಶಿಕ್ಷಕರಿಗೆ ಆಧುನಿಕ ಬೋಧನಾ ತಂತ್ರಗಳು ಹಾಗೂ ತರಬೇತಿಗಳನ್ನು ಒದಗಿಸಲಾಗುತ್ತಿದ್ದು, ಅವರು ಗುಜರಾತಿನ ಗಾಂಧಿನಗರದ ಐ ಐ ಟಿ ಇ, ಮುಂತಾದ ಪ್ರತಿಷ್ಠಿತ ಸಂಸ್ಥೆಗಳ ತರಬೇತಿ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದಾರೆ ಎಂದು ಹೇಳಿದರು. ವೇದವ್ಯಾಸ ಶೈಕ್ಷಣಿಕ ವಿಭಾಗದ ಆಧುನೀಕರಣ ಹಾಗೂ `ಶಿಖರ್’ ತರಗತಿಯ ನಿರ್ಮಾಣ, ಶಾಲೆಯ ಶೈಕ್ಷಣಿಕ ಉನ್ನತಿಯ ದಿಕ್ಕಿನಲ್ಲಿ ಮಹತ್ವದ ಹೆಜ್ಜೆಗಳಾಗಿವೆ. ಇವು ಕೇವಲ ಕಟ್ಟಡದ ಬದಲಾವಣೆಗಳಲ್ಲ, ಶಾಲೆಯನ್ನು ರಾಷ್ಟ್ರಮಟ್ಟದ ಮಾದರಿ ಸಂಸ್ಥೆಯನ್ನಾಗಿ ರೂಪಿಸುವ ದೃಷ್ಟಿಯ ಭಾಗವಾಗಿವೆ ಎಂದರು. ಇದರೊಂದಿಗೆ ವಿದ್ಯಾರ್ಥಿಗಳ ಪ್ರದರ್ಶಿಸಿದ ಡೊಳ್ಳು ಕುಣಿತ, ಇನ್ಕ್ರಿಡಿಬಲ್ ಇಂಡಿಯಾ ನೃತ್ಯ ಹಾಗೂ ಯಕ್ಷಗಾನದ ನೃತ್ಯಗಳಲ್ಲಿ ಕಾಣಿಸಿದ ಸಾಂಸ್ಕೃತಿಕ ವೈವಿಧ್ಯತೆ ಮನೋಜ್ಞವಾಗಿತ್ತು ಎನ್ನುದರೊಂದಿಗೆ ವಿದ್ಯಾರ್ಥಿಗಳನ್ನು ಪ್ರಶಂಸಿಸಿದರು.
ಭವಿಷ್ಯದ ಬದುಕಲ್ಲಿ ಯಶಸ್ಸನ್ನು ಸಾಧಿಸುವ ಜವಾಬ್ದಾರಿ ವಿದ್ಯಾರ್ಥಿಗಳಲ್ಲಿದೆ. ಶಾಲೆಯು ಎಲ್ಲಾ ಸೌಲಭ್ಯಗಳನ್ನು ಹೊಂದುವುದರೊಂದಿಗೆ ಅತ್ಯುತ್ತಮ ಮಾರ್ಗದರ್ಶನವನ್ನೂ ಸಹ ಹೊಂದಿದೆ. ಇದರೊಂದಿಗೆ ನಿಮ್ಮ ಬದ್ಧತೆ, ಕೇಂದ್ರೀಕೃತ ಪರಿಶ್ರಮ ನಿಮ್ಮದಾಗಿದೆ ಎಂದು ಹೇಳಿದರು.
ತಾವು ಶಾಲೆಯಲ್ಲಿ ಇರುವವರೆಗಿನ ತಮ್ಮ ಸಮಯವನ್ನು ಸದುಪಯೋಗಪಡಿಸಿಕೊಳ್ಳಿ. ನಿಮ್ಮ ಶಿಕ್ಷಕರಿಂದ ಕಲಿಯಿರಿ, ನಿಮ್ಮ ಸಹಪಾಠಿಗಳಿಗೆ ಸಹಕಾರ ನೀಡುವುದರೊಂದಿಗೆ ಪರಿಶ್ರಮದಿಂದ ತರಬೇತಿಯನ್ನು ಪಡೆಯಿರಿ. ಜೊತೆಗೆ ನಿಮ್ಮ ಶಾಲೆಯ, ನಿಮ್ಮ ಕುಟುಂಬದ ಅದಕ್ಕಿಂತಲೂ ಮುಖ್ಯವಾಗಿ ನಮ್ಮ ದೇಶದ ಕೀರ್ತಿಯನ್ನು ಸದಾ ಎತ್ತಿ ಹಿಡಿಯಿರಿ. ದೇಶಭಕ್ತಿಯ ಪ್ರೇರಣೆ ನಿಮ್ಮೆಲ್ಲರಿಗೂ ದಾರಿ ತೋರಿಸಲಿ ಎಂದು ಹಾರೈಸಿದರು.
ಸಭೆಯಲ್ಲಿ ಶಾಲೆಯ ಪ್ರಾಂಶುಪಾಲರು ಹಾಗೂ ಪ್ರಸ್ತುತ ಸಭೆಯ ಕಾರ್ಯದರ್ಶಿಗಳಾದ ಕರ್ನಲ್ ಅಮರ್ ಜೀತ್ ಸಿಂಗ್ ಮಾತನಾಡಿ, ಕಳೆದ ಆರು ತಿಂಗಳಲ್ಲಿ ಶಾಲೆಯ ತರಬೇತಿ ಮತ್ತು ಆಡಳಿತಾತ್ಮಕ ಪ್ರಗತಿಯನ್ನು ಕುರಿತು ವಿವರಿಸುವುದರೊಂದಿಗೆ ಶಾಲೆಯು ಸಾಧಿಸಿದ ಸಾಧನೆಗಳ ಕುರಿತು ವಿವರಿಸಿದರು. ಅಲ್ಲದೆ ಮುಂದೆ ಶಾಲೆಯು ಹಮ್ಮಿಕೊಂಡಿರುವ ಶೈಕ್ಷಣಿಕ ಹಾಗೂ ಆಡಳಿತ ಕ್ರಮವನ್ನು ವಿವರಿಸಿದರು. ಈ ಸಭೆಯು ವಿವಿಧ ಅಂಶಗಳ ಕುರಿತು ವಿವರವಾದ ಚರ್ಚೆಗಳೊಂದಿಗೆ ಪೂರ್ಣಗೊಂಡಿತು. ಜೊತೆಗೆ ಶಾಲೆಯು ಮುಂದಿನ ದಿನಗಳಲ್ಲಿ ಹೊಂದಬೇಕಾದ ಬೆಳವಣಿಗೆ ಮತ್ತು ಅಭಿವೃದ್ಧಿಯ ಗುರಿಯನ್ನು ನಿರ್ಧರಿಸಿ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಯಿತು. ಸಭೆಯಲ್ಲಿ ಸ್ಥಳೀಯ ಆಡಳಿತ ಮಂಡಳಿಯ ಸದಸ್ಯರಾದ ಕೊಡಗು ಜಿಲ್ಲಾಧಿಕಾರಿ ವೆಂಕಟ ರಾಜಾ, ಪ್ರತಿನಿಧಿನಿಧಿಯಾಗಿ ಸಹಾಯಕ ಆಯುಕ್ತರಾದ ನಿತಿನ್ ಚಕ್ಕಿ, ಮೈಸೂರು ವಿಶ್ವವಿದ್ಯಾನಿಲಯದ ಶಿಕ್ಷಣ ತಜ್ಞರಾದ ಡಾ. ಎಂ.ಪಿ.ಸದಾಶಿವ, ಕೊಡಗು ಜಿಲ್ಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರ ಪ್ರತಿನಿಧಿಯಾಗಿ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಹಿರಿಯ ಉಪನ್ಯಾಸಕಿ ಬಿ.ಎನ್.ಪುಷ್ಟ, ಮೈಸೂರಿನ ಪ್ರಾದೇಶಿಕ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲರಾದ ಪ್ರದ್ಯುಮ್ನ ಕುಮಾರ್ ಸೇಥಿ, ಮೈಸೂರಿನ ಸಿ ಪಿ ಡಬ್ಲ್ಯೂ ಡಿ ಯ ಅಂಭಿಯಂತರರಾದ ಅಮೋಲ್ ನಾಮ್ ದೇವ್, ಪೋಷಕ ಪ್ರತಿನಿಧಿಯಾದ ಸಂಪತ್ ಕುಮಾರ್ ಶರ್ಮಾ, ಶಾಲೆಯ ಆಡಳಿತಾಧಿಕಾರಿಗಳಾದ ವಿಂಗ್ ಕಮಾಂಡರ್ ಪಿ ಪ್ರಕಾಶ್ ರಾವ್ ಉಪಸ್ಥಿತರಿದ್ದರು. ಸಭೆಯಲ್ಲಿ ಶಾಲೆಯ ವಾರ್ಷಿಕ ಸಂಚಿಕೆಯಾದ `ಕೊಡಗಿಯನ್’ ನ್ನು ಬಿಡುಗಡೆಗೊಳಿಸಲಾಯಿತು. 2024-25ನೇ ಸಾಲಿನಲ್ಲಿ ಶಾಲೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ವಿಜ್ಞಾನ ವಿಷಯ ಶಿಕ್ಷಕರಾದ ಎನ್ ಸುಬ್ಬರಂಗಯ್ಯ ಹಾಗೂ ದಾದಾ ಧರೆಪ್ಪ ಕುಸನಾಳೆಯವರನ್ನು ಸನ್ಮಾನಿಸುವುದರೊಂದಿಗೆ, ಅಖಿಲ ಭಾರತ ಸೈನಿಕ ಶಾಲೆಗಳ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ ಗಳಿಸಿದ ಮೂವರು ವಿದ್ಯಾರ್ಥಿನಿಯರಿಗೆ ಪದಕ ಹಾಗೂ ಪ್ರಮಾಣಪತ್ರಗಳನ್ನು ಪ್ರದಾನ ಮಾಡಲಾಯಿತು. ಶಾಲಾ ವಿದ್ಯಾರ್ಥಿನಿಯರ ಸ್ವಾಗತ ನೃತ್ಯದೊಂದಿಗೆ ಕಾರ್ಯಕ್ರಮವನ್ನು ಆರಂಭಿಸಲಾಯಿತು.
ಸಭೆಗೂ ಮುನ್ನ ಏರ್ ವೈಸ್ ಮಾರ್ಷಲ್ ಬಿಜೊ ಜಾನ್ ಮೆಮನ್ ಶಾಲೆಯ ಯುದ್ಧ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದರು. ನಂತರ ಯುದ್ಧವೀರರ ಸ್ಮಾರಕದ ಆವರಣದಲ್ಲಿ ನೂತನವಾಗಿ ನಿರ್ಮಿಸಲ್ಪಟ್ಟ ಧ್ವಜ ಸ್ತಂಭವನ್ನು ಉದ್ಘಾಟಿಸಿದರು. ಶಾಲೆಯ ಪರೇಡ್ ಮೈದಾನದಲ್ಲಿ ವಿದ್ಯಾರ್ಥಿಗಳು ನೀಡಿದ ಗಾರ್ಡ್ ಆಫ್ ಹಾನರ್ ನ ಗೌರವ ವಂದನೆ ಸ್ವೀಕರಿಸಿದರು. ವಿಶೇಷ ಸಭೆಯ ನಂತರ ಆಸಕ್ತ ಎನ್ ಡಿ ಎ ವಿದ್ಯಾರ್ಥಿಗಳಿಗೆ ಸಂಪನ್ಮೂಲ ಕೇಂದ್ರವಾಗಿ ಕುವೆಂಪು ವಿವಿದೊದ್ಧೇಶ ಸಭಾಂಗಣದಲ್ಲಿ ನೂತನವಾಗಿ ನಿರ್ಮಿಸಲ್ಪಟ್ಟಿರುವ “ಶಿಖರ್” ಎಂಬ ಹೆಸರಿನ ಹೊಸ ತರಗತಿ ಕೊಠಡಿಯನ್ನು ಹಾಗೂ ಆಡಳಿತ ಮಂಡಳಿಯ ಕಟ್ಟಡದಲ್ಲಿ ನೂತನವಾಗಿ ನಿರ್ಮಿಸಲ್ಪಟ್ಟ ರೋಬೋಟಿಕ್ ಪ್ರಯೋಗಾಲಯವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ರೇರ್ ಆಡ್ಮಿರಲ್ ಆರ್.ಎಂ.ಪುರಂದರೆ ವಿ ಎಸ್ ಎಂ (ನಿವೃತ್ತ), ಎಲಿಜಾ ಮೆಮನ್ ಹಾಗೂ ದಿವ್ಯಾಸಿಂಗ್ ಹಾಜರಿದ್ದರು. :: ಸಂವಾದ :: ಮಧ್ಯಾಹ್ನದ ಅವಧಿಯಲ್ಲಿ ಮುಖ್ಯ ಅಥಿತಿಗಳು 12ನೇ ತರಗತಿಯ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ತಮಟೆ ಕಲಾ ಪ್ರದರ್ಶನ, ಲೇಝಿಂ ನೃತ್ಯ ಕೌಶಲ್ಯ ಹಾಗೂ ಕೇರಳದ ಪ್ರಸಿದ್ಧ ಯುದ್ಧ ಕಲೆ ಕಳರಿಪಾಯಟ್ಟು ಪ್ರದರ್ಶನಗಳನ್ನು ವೀಕ್ಷಿಸಿದರು. ಈ ಸಂದರ್ಭ ಮುಖ್ಯ ಅತಿಥಿಗಳು ವಿದ್ಯಾರ್ಥಿಗಳ ಶಿಸ್ತು, ಸಂಸ್ಕೃತಿಯ ಕುರಿತಾದ ಹಮ್ಮೆ ಹಾಗೂ ನವೀನತೆಯನ್ನು ಮೆಚ್ಚಿ, ಎಲ್ಲ ಕ್ಷೇತ್ರಗಳಲ್ಲಿಯೂ ಶ್ರೇಷ್ಠತೆಯನ್ನು ಸಾಧಿಸಲು ಅವರನ್ನು ಪ್ರೋತ್ಸಾಹಿಸಿದರು.

 

Share. Facebook Twitter Pinterest LinkedIn Tumblr Email WhatsApp
Previous Article*ಮಡಿಕೇರಿಯಲ್ಲಿ ಶಿಕ್ಷಕರ ದಿನಾಚರಣೆ : ಜಿಲ್ಲಾ ಅತ್ಯುತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ*
Next Article *ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನಕ್ಕೆ ಕೊಡಗು ಗೌಡ ವಿದ್ಯಾ ಸಂಘದಿಂದ ಅರ್ಜಿ ಆಹ್ವಾನ*

Website design development company services in Mangalore

Forex Trading Teacher in India

Related Posts

*ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*

February 14, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

ಬೆಂಗಳೂರು: ಸಿಲಿಕಾನ್ ಸಿಟಿಯ ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2026ರ ಐಪಿಎಲ್ (IPL) ಪಂದ್ಯಗಳನ್ನು…

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.