
ಮಡಿಕೇರಿ ಸೆ.9 NEWS DESK : ಮಡಿಕೇರಿ ದಸರಾ ಸಾಂಸ್ಕೃತಿಕ ಸಮಿತಿ ವತಿಯಿಂದ ಕೊಡಗು ಜಾನಪದ ಪರಿಷತ್ ಸಹಯೋಗದಲ್ಲಿ 4ನೇ ವಷ೯ದ ಜಾನಪದ ದಸರಾವನ್ನು ಸೆಪ್ಟೆಂಬರ್ 29 ರಂದು ಸೋಮವಾರ ಆಯೋಜಿಸಲಾಗಿದೆ ಎಂದು ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷ ಬಿ.ಜಿ.ಅನಂತಶಯನ ಮತ್ತು ಜಾನಪದ ದಸರಾ ಸಂಚಾಲಕ ಅನಿಲ್ ಹೆಚ್.ಟಿ. ತಿಳಿಸಿದ್ದಾರೆ. ಸೆ.29 ರಂದು ಸೋಮವಾರ ಬೆಳಗ್ಗೆ 10 ಗಂಟೆಗೆ ಮಡಿಕೇರಿಯ ಗಾಂಧಿ ಮೈದಾನದ ಕಲಾಸಂಭ್ರಮ ವೇದಿಕೆಯಲ್ಲಿ ಜಾನಪದ ಕಲಾ ಪ್ರದಶ೯ನಗಳು ಆಯೋಜಿಸಲ್ಪಟ್ಟಿವೆ. ಇದೇ ಸಂದಭ೯ ಜಾನಪದ ವಸ್ತು ಪ್ರದಶ೯ನ, ಕಲಾಜಾಥಾ ಕೂಡ ಜರುಗಲಿದೆ ಎಂದು ಜಾನಪದ ಪರಿಷತ್ ಪ್ರಕಟಣೆ ತಿಳಿಸಿದೆ. ಜಾನಪದ ದಸರಾ ಸಂದಭ೯ ಕೊಡಗಿನ ಜಾನಪದ ಕಲಾವಿದರಿಗೆ ವೈವಿಧ್ಯಮಯ ಕಲಾ ಪ್ರದಶ೯ನಕ್ಕೆ ಅವಕಾಶ ಕಲ್ಪಿಸಲಾಗಿದೆ. ಕೊಡಗಿನ ಜಾನಪದ ಕಲಾತಂಡಗಳು, ಕಲಾವಿದರು ಜಾನಪದ ದಸರಾ ಸಂದಭ೯ ನೀಡಲು ಇಚ್ಚಿಸುವ ಪ್ರದಶ೯ನದ ಬಗ್ಗೆ ತಮ್ಮ ಹೆಸರನ್ನು ಸೆಪ್ಟೆಂಬರ್ 20 ರ ಒಳಗಾಗಿ ನೋಂದಾಯಿಸಿಕೊಳ್ಳಬಹುದಾಗಿದೆ. ಜಾನಪದ ದಸರಾದಲ್ಲಿ ಕಲಾ ಪ್ರದಶ೯ನ ನೀಡಲಿಚ್ಚಿಸುವ ಕಲಾವಿದರು, ಕಲಾತಂಡಗಳು ಸೆಪ್ಟೆಂಬರ್ 20 ರೊಳಗಾಗಿ ಅಜಿ೯ಗಳನ್ನು ಅಧ್ಯಕ್ಷರು, ಕೊಡಗು ಜಾನಪದ ಪರಿಷತ್, ಕೇರಾಫ್ ಶಕ್ತಿ ದಿನಪತ್ರಿಕೆ, ಕೈಗಾರಿಕಾ ಬಡಾವಣೆ, ಮಡಿಕೇರಿ – 571201 ಇಲ್ಲಿಗೆ ಕಳುಹಿಸಬೇಕು, ಜಾನಪದ ದಸರಾ ಸಂಬಂಧಿತ ಹೆಚ್ಚಿನ ಮಾಹಿತಿಗೆ ಸಂಪಕ೯ ಸಂಖ್ಯೆಗಳು – 9886181613, ಎಸ್.ಐ.ಮುನೀರ್ ಅಹಮ್ಮದ್ , ಪ್ರಧಾನ ಕಾಯ೯ದಶಿ೯, 94486 14999 ಎಸ್ ಎಸ್ ಸಂಪತ್ ಕುಮಾರ್ ಖಜಾಂಜಿ, ಕೊಡಗು ಜಿಲ್ಲಾ ಜಾನಪದ ಪರಿಷತ್,








