Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಶಾಲನಗರದಲ್ಲಿ ವಾಸವಿ ಮಾತೆಗೆ ಪುಷ್ಪಾರ್ಚನೆ*
  • *ಭಾರತದ ಸರ್ವೋಚ್ಛ ನ್ಯಾಯಾಲಯದಿಂದ ‘ಸಮಾಧಾನ ಸಮಾರೋಹ-2026’ : ಪ್ರಥಮ ಬಾರಿಗೆ ವಿಶೇಷ ಲೋಕ್ ಅದಾಲತ್ ಆಯೋಜನೆ*
  • ಹಲೋ ಆಕಾಶವಾಣಿ ‘ಬೆಳಕ ಹುಡುಕುತ್ತಾ’ ನೇರಪೋನ್ ಇನ್ ಕಾರ್ಯಕ್ರಮ : ಜಿಲ್ಲಾಧಿಕಾರಿ ಸೋಮಶೇಖರ್ ಭಾಗಿ : ಸಾರ್ವಜನಿಕರಿಂದ ಉತ್ತಮ ಸ್ಪಂದನೆ*
  • *ಕೊಡಗು : ಜಿಲ್ಲಾ ಕುಲಾಲ ಕುಂಬಾರ ಕ್ರೀಡೋತ್ಸವ : ಮಂತ್ರಣ ಪತ್ರಿಕೆ ಲೋಕಾರ್ಪಣೆ*
  • *ತಾವುರೂ ಗ್ರಾಮದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಮಹಿಷಾಸುರ ಮರ್ದಿನಿ ಅಷ್ಟಬಂಧ ಬ್ರಹ್ಮಕಲಶೋತ್ಸವ*
  • *ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ವಾರ್ಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ*
  • *ಮಣ್ಣು ಪರೀಕ್ಷೆ ಮತ್ತು ತರಬೇತಿ ಕಾರ್ಯಾಗಾರ*
  • *ಯಿಫಾ ಹಾಕಿ ಚಾಂಪಿಯನ್ ಟ್ರೋಫಿ ಕ್ರೀಡಾಕೂಟ : ಜರ್ಸಿ ಬಿಡುಗಡೆ*
  • *KANNIKA CONVENTION CENTER : CELEBRATE YOUR SPECIAL MOMENTS : HOTEL KANNIKA INTERNATIONAL , KUSHALANAGAR*
  • *ಸರ್ಕಾರದ ಪಂಚ ಗ್ಯಾರಂಟಿ ಯೋಜನೆ ಸಮರ್ಪಕವಾಗಿ ತಲುಪಿಸಿ : ಎಂ.ಜಿ.ಮೋಹನ್ ದಾಸ್ ಸಲಹೆ* 
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸೆ.22 ರಂದು ಕೊಡಗು ಜಿಲ್ಲೆಗೆ ಬಸವ ಸಂಸ್ಕೃತಿ ಯಾತ್ರೆ ಆಗಮನ : ಕೊಡ್ಲಿಪೇಟೆಯಲ್ಲಿ ಪೂರ್ವಭಾವಿ ಸಭೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸೆ.22 ರಂದು ಕೊಡಗು ಜಿಲ್ಲೆಗೆ ಬಸವ ಸಂಸ್ಕೃತಿ ಯಾತ್ರೆ ಆಗಮನ : ಕೊಡ್ಲಿಪೇಟೆಯಲ್ಲಿ ಪೂರ್ವಭಾವಿ ಸಭೆ*

ಸೆಪ್ಟೆಂಬರ್ 10, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಶನಿವಾರಸಂತೆ ಸೆ.10 NEWS DESK : ಕೊಡಗು ಜಿಲ್ಲೆಗೆ ಸೆ.22 ರಂದು ಆಗಮಿಸಲಿರುವ ಬಸವ ಸಂಸ್ಕೃತಿ ಅಭಿಯಾನ ಯಾತ್ರೆಯನ್ನು ಕೊಡಗು ಜಿಲ್ಲೆಯ ಕೊಡ್ಲಿಪೇಟೆಯಲ್ಲಿ ಸಾರ್ವಜನಿಕರು, ಸಂಘಸಂಸ್ಥೆಗಳು ಒಗ್ಗೂಡಿ ಸ್ವಾಗತಿಸಿಕೊಳ್ಳುವ ವಿಚಾರವಾಗಿ ಕೊಡಗು ಮಠಾಧಿಪತಿಗಳ ಸಮ್ಮುಖದಲ್ಲಿ  ಶನಿವಾರಸಂತೆಯ ಮನೆಹಳ್ಳಿ ಮಠದಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು. ಸೆ.3 ರಿಂದ ಬಸವೇಶ್ವರರ ಕಲ್ಯಾಣದ ನಾಡು ಬೀದರ್ ನಿಂದ ಆರಂಭಗೊಂಡ ಅಭಿಯಾನ ರಾಜ್ಯದ 31 ಜಲ್ಲೆಗಳಲ್ಲಿ ಸಂಚರಿಸುತ್ತದೆ.  ಸೆ.21 ರಂದು ಹಾಸನ ಜಿಲ್ಲೆಗೆ ಬಂದು ಸೆ.22 ರಂದು ಕೊಡ್ಲಿಪೇಟೆಗೆ ಧಾವಿಸಲಿದೆ. ಅಂದು ಕೊಡಗು ಜಿಲ್ಲೆಯ ಎಲ್ಲಾ ಬಸವಪರ ಚಿಂತನೆಗಳ ಒಕ್ಕೂಟಗಳು, ಸಂಘ ಸಂಸ್ಥೆಗಳು, ಅಖಿಲ ಭಾರತ ವೀರಶೈವ ಮಹಾಸಭಾ, ಶರಣ ಸಾಹಿತ್ಯ ಪರಿಷತ್ತು ಸೇರಿದಂತೆ ಎಲ್ಲಾ ಸಮುದಾಯಗಳ ಮಂದಿ ಬಸವ ಸಂಸ್ಕೃತಿ ಅಭಿಯಾನವನ್ನು ಕೊಡ್ಲಿಪೇಟೆಯ ಬಸವೇಶ್ವರ ದೇವಾಲಯದ ಬಳಿ ಸ್ವಾಗತಿಸಿಕೊಂಡು ಮೆರವಣಿಗೆ ಮೂಲಕ ಕಿರಿಕೊಡ್ಲಿ ಮಠದ ವಿದ್ಯಾಸಂಸ್ಥೆಯ ಆವರಣದಲ್ಲಿ ನಡೆಯುವ ಧಾರ್ಮಿಕ ಸಭಾ ವೇದಿಕೆಗೆ ಆಗಮಿಸಲಿದೆ ಎಂದು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್.ಮೂರ್ತಿ ಹಾಗೂ ವೀರಶೈವ ಮಹಾಸಭಾ ಪ್ರಧಾನ ಕಾರ್ಯದರ್ಶಿ ಶಾಂಬಶಿವಮೂರ್ತಿ ಹೇಳಿದರು. ಧಾರ್ಮಿಕ ಸಭೆಯಲ್ಲಿ ಉತ್ತರ ಕರ್ನಾಟಕದ ಹೆಸರಾಂತ ಮಠಗಳ ಪೀಠಾಧಿಪತಿಗಳು, ಕೊಡಗು ಜಿಲ್ಲೆಯ ಎಲ್ಲಾ ಮಠಾಧಿಪತಿಗಳು ಭಾಗವಹಿಸಲಿದ್ದಾರೆ. ಬಸವಪರವಾದ ಶ್ರೇಷ್ಠ ಚಿಂತನೆಗಳನ್ನು ಹೊಂದಿರುವ ಕೊಡಗು ವಿವಿ ಕುಲಪತಿ ಡಾ.ಅಶೋಕ್ ಸಂಗಪ್ಪ ಆಲೂರ, ರಾಜ್ಯ ಉಚ್ಚನ್ಯಾಯಾಲಯದ ಹಿರಿಯ ವಕೀಲ ಹೆಚ್.ಎಸ್.ಚಂದ್ರಮೌಳಿ ಮೊದಲಾದ ಗಣ್ಯರು ಉಪಸ್ಥಿತರಿರುವರು ಎಂದು ಅವರು ತಿಳಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರ ಹನ್ನೆರಡನೆ ಶತಮಾನದ ಕ್ರಾಂತಿ ಪುರುಷ ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕನನ್ನಾಗಿ ಘೋಷಿಸಿರುವುದರಿಂದ ಬಸವಣ್ಣನ ವಿಚಾರಧಾರೆ ಗಳು ಜನಸಮುದಾಯಕ್ಕೆ ತಲುಪಬೇಕು.  ಬಸವಣ್ಣ ಕೇವಲ ಸಮುದಾಯ ಒಂದರ ನಾಯಕನಲ್ಲ. ಮಾನವ ಕುಲದ ನಾಯಕನಾಗಿ ಸರ್ವ ಸಮ್ಮತವಾಗಿ ಎಲ್ಲಾ ಜನರು ವಚನಗಳ ಅಧ್ಯಯನದ ಮೂಲಕ ಬಸವೇಶ್ವರರ ವಿಚಾರಧಾರೆಗಳನ್ನು ಅರಿತು ಆತ್ಮಕಲ್ಯಾಣ ಮಾಡಿಕೊಂಡಲ್ಲಿ ತನ್ನಿಂದ ತಾನೇ ಸಮಾಜ ಕಲ್ಯಾಣ ವಾಗುತ್ತದೆ ಎಂಬ ದೃಷ್ಟಿಕೋನದಿಂದ ರಾಜ್ಯದ ಜನಮಾನಸದಲ್ಲಿ ಬಸವಣ್ಣನನ್ನು ನೆಲೆಸುವಂತೆ ಮಾಡಲು ಈ ಯಾತ್ರೆ ಹಾಗೂ ಅಭಿಯಾನ ಆಯೋಜಿತವಾಗಿದೆ ಎಂದು ಪೂರ್ವಸಭೆಯಲ್ಲಿ ಉಪಸ್ಥಿತರಿದ್ದ ವಿರಾಜಪೇಟೆ ತಾಲ್ಲೂಕಿನ ಅರಮೇರಿಯ ಕಳಂಚೇರಿ ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಹಾಗೂ ಕೊಡ್ಲಿಪೇಟೆ ಕಿರಿಕೊಡ್ಲಿಮಠದ ಶ್ರೀ ಸದಾಶಿವ ಸ್ವಾಮೀಜಿ ಆಶಿಸಿದರು. ಪೂರ್ವಭಾವಿ ಸಭೆಯಲ್ಲಿ ವೀರಶೈವ ಮಹಾಸಭಾದ ಕೊಡಗು ಜಿಲ್ಲಾ ಅಧ್ಯಕ್ಷ ಹೆಚ್.ವಿ.ಶಿವಪ್ಪ, ಶರಣ ಸಾಹಿತ್ಯ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಬಿ.ನಟರಾಜು, ಕೋಶಾಧಿಕಾರಿ ಕೆ.ಪಿ.ಪರಮೇಶ್, ಮುದ್ದಿನ ಕಟ್ಟೆ ಮಠದ ಶ್ರೀ ಅಭಿನವ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ, ಮನೆಹಳ್ಳಿ ತಪೋವನ ಮಠದ ಶ್ರೀ ಮಹಾಂತ ಶಿವಲಿಂಗ ಸ್ವಾಮೀಜಿ, ಕೊಡ್ಲಿಪೇಟೆ ಕಲ್ಲಳ್ಳಿ ಮಠದ ಕಲ್ಲುಮಠದ ಶ್ರೀ ಮಹಾಂತ ಸ್ವಾಮೀಜಿ, ತೊರೆನೂರು ವಿರಕ್ತ ಮಠದ ಶ್ರೀ ಮಲ್ಲೇಶ ಸ್ವಾಮೀಜಿ, ಸಿಡಿಗಳಲೆ ಮಠದ ಶ್ರೀ ಇಮ್ಮಡಿ ಶಿವಲಿಂಗ ಸ್ವಾಮೀಜಿ, ವೀರಶೈವ ಮಹಾಸಭಾದ ಪದಾಧಿಕಾರಿಗಳಾದ ನಿಲುವಾಗಿಲು ಮದನ್, ಚಂದ್ರಶೇಖರ್, ಗಣಗೂರು ಚಂದ್ರಶೇಖರ್, ಯಶೋಧಮ್ಮ, ಮರೂರು ಹೆಚ್.ಎಸ್. ನಾಗರಾಜ್, ಹೆಬ್ಬಾಲೆ ಬಸವಣ್ಣ, ಕುಮಾರ್ ಇದ್ದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಶಾಲನಗರದಲ್ಲಿ ವಾಸವಿ ಮಾತೆಗೆ ಪುಷ್ಪಾರ್ಚನೆ*

ಏಪ್ರಿಲ್ 30, 2026

*ಭಾರತದ ಸರ್ವೋಚ್ಛ ನ್ಯಾಯಾಲಯದಿಂದ ‘ಸಮಾಧಾನ ಸಮಾರೋಹ-2026’ : ಪ್ರಥಮ ಬಾರಿಗೆ ವಿಶೇಷ ಲೋಕ್ ಅದಾಲತ್ ಆಯೋಜನೆ*

ಏಪ್ರಿಲ್ 30, 2026

ಹಲೋ ಆಕಾಶವಾಣಿ ‘ಬೆಳಕ ಹುಡುಕುತ್ತಾ’ ನೇರಪೋನ್ ಇನ್ ಕಾರ್ಯಕ್ರಮ : ಜಿಲ್ಲಾಧಿಕಾರಿ ಸೋಮಶೇಖರ್ ಭಾಗಿ : ಸಾರ್ವಜನಿಕರಿಂದ ಉತ್ತಮ ಸ್ಪಂದನೆ*

ಏಪ್ರಿಲ್ 30, 2026

*ಭಾರತದ ಸರ್ವೋಚ್ಛ ನ್ಯಾಯಾಲಯದಿಂದ ‘ಸಮಾಧಾನ ಸಮಾರೋಹ-2026’ : ಪ್ರಥಮ ಬಾರಿಗೆ ವಿಶೇಷ ಲೋಕ್ ಅದಾಲತ್ ಆಯೋಜನೆ*

ಏಪ್ರಿಲ್ 30, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಬೆಂಗಳೂರು, ಏ.30 NEWS DESK : ಭಾರತದ ಸರ್ವೋಚ್ಛ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಸೌಹಾರ್ದಯುತವಾಗಿ ಇತ್ಯರ್ಥಪಡಿಸಿಕೊಳ್ಳಲು ಭಾರತದ ಸರ್ವೋಚ್ಛ ನ್ಯಾಯಾಲಯ…

ಹಲೋ ಆಕಾಶವಾಣಿ ‘ಬೆಳಕ ಹುಡುಕುತ್ತಾ’ ನೇರಪೋನ್ ಇನ್ ಕಾರ್ಯಕ್ರಮ : ಜಿಲ್ಲಾಧಿಕಾರಿ ಸೋಮಶೇಖರ್ ಭಾಗಿ : ಸಾರ್ವಜನಿಕರಿಂದ ಉತ್ತಮ ಸ್ಪಂದನೆ*

ಏಪ್ರಿಲ್ 30, 2026

*ಕೊಡಗು : ಜಿಲ್ಲಾ ಕುಲಾಲ ಕುಂಬಾರ ಕ್ರೀಡೋತ್ಸವ : ಮಂತ್ರಣ ಪತ್ರಿಕೆ ಲೋಕಾರ್ಪಣೆ*

ಏಪ್ರಿಲ್ 30, 2026

*ತಾವುರೂ ಗ್ರಾಮದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಮಹಿಷಾಸುರ ಮರ್ದಿನಿ ಅಷ್ಟಬಂಧ ಬ್ರಹ್ಮಕಲಶೋತ್ಸವ*

ಏಪ್ರಿಲ್ 30, 2026

*ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ವಾರ್ಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ*

ಏಪ್ರಿಲ್ 30, 2026

*ಮಣ್ಣು ಪರೀಕ್ಷೆ ಮತ್ತು ತರಬೇತಿ ಕಾರ್ಯಾಗಾರ*

ಏಪ್ರಿಲ್ 30, 2026

*ಯಿಫಾ ಹಾಕಿ ಚಾಂಪಿಯನ್ ಟ್ರೋಫಿ ಕ್ರೀಡಾಕೂಟ : ಜರ್ಸಿ ಬಿಡುಗಡೆ*

ಏಪ್ರಿಲ್ 30, 2026

*KANNIKA CONVENTION CENTER : CELEBRATE YOUR SPECIAL MOMENTS : HOTEL KANNIKA INTERNATIONAL , KUSHALANAGAR*

ಏಪ್ರಿಲ್ 30, 2026

*ಸರ್ಕಾರದ ಪಂಚ ಗ್ಯಾರಂಟಿ ಯೋಜನೆ ಸಮರ್ಪಕವಾಗಿ ತಲುಪಿಸಿ : ಎಂ.ಜಿ.ಮೋಹನ್ ದಾಸ್ ಸಲಹೆ* 

ಏಪ್ರಿಲ್ 29, 2026

*ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ*

ಏಪ್ರಿಲ್ 29, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.