Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಏ.10 ರಿಂದ ಕೊಡವ ಲೆದರ್ ಬಾಲ್ ಕ್ರಿಕೆಟ್ ಲೀಗ್ ಮೂರನೇ ಆವೃತ್ತಿ ಆರಂಭ*
  • *ಸುಂಟಿಕೊಪ್ಪದಲ್ಲಿ ಶಾಂತಿ ಸಭೆ : ಸೌಹಾರ್ದತೆಯನ್ನು ಕಾಪಾಡಿಕೊಳ್ಳಲು ದಿನೇಶ್‍ಕುಮಾರ್ ಕರೆ*
  • *ಸೋಮವಾರಪೇಟೆ : ಕಾರ್ಮಿಕರಿಗೆ ಪೂರ್ವಭಾವಿ ಕಲಿಕಾ ತರಬೇತಿ ಕಾರ್ಯಾಗಾರ*
  • *ಯಡೂರಿನಲ್ಲಿ ವೈಸಿಸಿ ಕ್ರಿಕೆಟ್ ಕಪ್ ಪಂದ್ಯಾವಳಿ : ಗರಗಂದೂರಿನ ದಳಪತಿ ಕ್ರಿಕೆಟರ್ಸ್ ತಂಡ ಚಾಂಪಿಯನ್*
  • *ಕೂಡಿಗೆ ಪರೀಕ್ಷಾ ಕೇಂದ್ರದಲ್ಲಿ ಸುಗಮವಾಗಿ ನಡೆದ ಎಸ್‍ಎಸ್‍ಎಲ್‍ಸಿ ಪರೀಕ್ಷೆ* 
  • *ಪ್ರಸಿದ್ಧ ಎಮ್ಮೆಮಾಡು ಉರೂಸ್ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳಿಗೆ ಆಹ್ವಾನ*
  • *ಕೊಡಗು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ನವೀಕರಣ ಕಟ್ಟಡ ಉದ್ಘಾಟನೆ : ಗ್ರಾಹಕರ ಹಿತರಕ್ಷಿಸುವಲ್ಲಿ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಹಲವು ಕ್ರಮ : ನ್ಯಾಯಮೂರ್ತಿ ಟಿ.ಜಿ.ಶಿವಶಂಕರೇಗೌಡ*
  • *ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ” : ಡಾ.ಎಲ್.ಹನುಮಂತಯ್ಯ, ಕೆ.ಪಿ.ಬಾಲಸುಬ್ರಹ್ಮಣ್ಯ, ಎಂ.ಟಿ.ನಾಣಯ್ಯ, ರೇವತಿ ಪೂವಯ್ಯರಿಂದ ವಿಚಾರ ಮಂಡನೆ*
  • *ಜಮೀನು ತೆರವು ಕಾರ್ಯಾಚರಣೆ : ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಮಸಗೋಡು ಗ್ರಾಮಸ್ಥರ ಅಸಮಾಧಾನ*
  • *ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇಂದಿನಿಂದ ಶುರು: 8.65 ಲಕ್ಷ ವಿದ್ಯಾರ್ಥಿಗಳಿಗೆ ಅಗ್ನಿಪರೀಕ್ಷೆ; ಪರೀಕ್ಷಾ ಕೇಂದ್ರಗಳ ಸುತ್ತ 144 ನಿಷೇಧಾಜ್ಞೆ ಜಾರಿ!*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿ ದಸರಾಕ್ಕೆ ಕೇವಲ ಒಂದು ವಾರ ಬಾಕಿ : ರಸ್ತೆ ಅವ್ಯವಸ್ಥೆಗೆ ಸಮಿತಿಗಳು, ಸಾರ್ವಜನಿಕರು ಬೇಸರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿ ದಸರಾಕ್ಕೆ ಕೇವಲ ಒಂದು ವಾರ ಬಾಕಿ : ರಸ್ತೆ ಅವ್ಯವಸ್ಥೆಗೆ ಸಮಿತಿಗಳು, ಸಾರ್ವಜನಿಕರು ಬೇಸರ*

ಸೆಪ್ಟೆಂಬರ್ 14, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಸೆ.14 : ನೂರಾರು ವರ್ಷಗಳ ಇತಿಹಾಸವಿರುವ ಮಡಿಕೇರಿ ದಸರಾ ಜನೋತ್ಸವಕ್ಕೆ ಕೇವಲ ಒಂದು ವಾರ ಬಾಕಿ ಉಳಿದಿದೆ. ದಸರಾ ಹಬ್ಬದ ಪ್ರಮುಖ ಧಾರ್ಮಿಕ ಆಚರಣೆಯಾದ ಕರಗಗಳ ನಗರ ಸಂಚಾರ ಮುಂದಿನ ವಾರದಿಂದ ಆರಂಭವಾಗುತ್ತದೆ. ಆದರೆ ನಗರದ ಎಲ್ಲಾ ರಸ್ತೆಗಳು ಹೊಂಡ, ಗುಂಡಿಗಳಿಂದ ಕೂಡಿರುವುದರಿಂದ ದಸರಾ ಸಮಿತಿಗಳು ಬೇಸರ ವ್ಯಕ್ತಪಡಿಸಿವೆ. ಪ್ರತಿವರ್ಷ ಮಡಿಕೇರಿ ಮಹೋತ್ಸವ ಆರಂಭವಾಗುವುದೇ ನಾಲ್ಕು ಶಕ್ತಿ ದೇವತೆಗಳ ಕರಗೋತ್ಸವದ ಮೂಲಕ. ಸುಮಾರು ಒಂಭತ್ತು ದಿನಗಳ ನಗರ ಸಂಚಾರದ ಮೂಲಕ ಕರಗಗಳು ಭಕ್ತರಿಂದ ಪೂಜೆಯನ್ನು ಸ್ವೀಕರಿಸುತ್ತವೆ. 10 ನೇ ದಿನವಾದ ವಿಜಯದಶಮಿಯಂದು ಹತ್ತು ದೇವಾಲಯಗಳ ದಶಮಂಟಪಗಳ ಶೋಭಾಯಾತ್ರೆ ವೈಭವದಿಂದ ಸಾಗುತ್ತದೆ. ಆದರೆ ಮಡಿಕೇರಿ ನಗರದ ರಸ್ತೆಗಳು ಕರಗಗಳ ನಗರ ಸಂಚಾರ ಮತ್ತು ದಶಮಂಟಪಗಳ ಶೋಭಾಯಾತ್ರೆಗೆ ಯೋಗ್ಯವಾಗಿಲ್ಲ. ಕಳೆದ ಮೂರು ತಿಂಗಳ ಕಾಲ ನಿರಂತರವಾಗಿ ಸುರಿದ ಧಾರಾಕಾರ ಮಳೆಯಿಂದ ನಗರಸಭಾ ವ್ಯಾಪ್ತಿಯ ಎಲ್ಲಾ 23 ವಾರ್ಡ್ಗಳ ರಸ್ತೆಗಳು ಸಂಪೂರ್ಣವಾಗಿ ಹದಗೆಟ್ಟು ಹೊಂಡ, ಗುಂಡಿಗಳಿಂದ ಕೂಡಿದೆ. ನಗರದ ಹೃದಯ ಭಾಗದ ಶ್ರೀ ಓಂಕಾರೇಶ್ವರ ದೇವಾಲಯ ರಸ್ತೆ, ರಾಜಾಶೀಟ್ ರಸ್ತೆ, ಗೌಳಿಬೀದಿ ರಸ್ತೆ, ಕೊಹಿನೂರ್ ರಸ್ತೆ, ಮಹದೇವಪೇಟೆ ರಸ್ತೆ, ಇಂದಿರಾಗಾAಧಿ ವೃತ್ತ ರಸ್ತೆ, ಮಲ್ಲಿಕಾರ್ಜುನ ನಗರ ರಸ್ತೆ, ಗಣಪತಿ ಬೀದಿ ಮತ್ತು ಹೆಸರುವಾಸಿ ಪ್ರವಾಸಿತಾಣ ಅಬ್ಬಿ ಜಲಪಾತದ ರಸ್ತೆಗಳಲ್ಲಿ ವಾಹನಗಳ ಸಂಚಾರ ಅಸಾಧ್ಯವಾಗಿದೆ.
ದಸರಾದ ಹಿನ್ನೆಲೆ ಮಡಿಕೇರಿ ನಗರಕ್ಕೆ ಲಕ್ಷಕ್ಕೂ ಮೀರಿ ಪ್ರವಾಸಿಗರು ಆಗಮಿಸುತ್ತಾರೆ, ಸಾವಿರಾರು ವಾಹನಗಳು ಪ್ರವೇಸಿಸುತ್ತವೆ. ಆದರೆ ರಸ್ತೆಗಳ ಹೊಂಡ, ಗುಂಡಿಗಳು ಹಬ್ಬದ ಸಂಭ್ರಮಕ್ಕೆ ಅಡ್ಡಿಯಾಗಿವೆ, ಹದಗೆಟ್ಟ ರಸ್ತೆಗಳಿಂದ ನಗರದ ಸೌಂದರ್ಯಕ್ಕೆ ದಕ್ಕೆಯಾಗಿದೆ. ಮಳೆ ಕಡಿಮೆಯಾಗಿ ಬಿಸಿಲಿನ ವಾತಾವರಣವಿದ್ದರೂ ರಸ್ತೆಗಳ ಡಾಂಬರೀಕರಣ ಕಾರ್ಯ ಆರಂಭಿಸದ ನಗರಸಭೆ ವಿರುದ್ಧ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಾರಿ ಅಧಿಕ ಮಳೆಯಾಗಿರುವ ಹಿನ್ನೆಲೆ ಎಲ್ಲಾ ರಸ್ತೆಗಳಿಗೆ ಹಾನಿಯಾಗಿದ್ದು, ಗುಂಡಿ ಮುಚ್ಚುವ ಕಾರ್ಯ ಶೀಘ್ರ ಆರಂಭಗೊಳ್ಳಲಿದೆ ಎಂದು ನಗರಸಭೆಯ ಪೌರಾಯುಕ್ತ ಹೆಚ್.ಆರ್.ರಮೇಶ್ ತಿಳಿಸಿದ್ದಾರೆ. *ಗುಣಮಟ್ಟದ ಕಾಮಗಾರಿ ನಡೆಯಲಿ* ಕರಗೋತ್ಸವ ಮತ್ತು ದಶಮಂಟಪಗಳ ಯಶಸ್ವಿ ನಿರ್ವಹಣೆಗೆ ನಗರಸಭೆಯ ಸಹಕಾರ ಅತಿ ಮುಖ್ಯ. ಪ್ರಸ್ತುತ ಮಡಿಕೇರಿಯ ಹಲವು ರಸ್ತೆಗಳು ಅತ್ಯಂತ ಕೆಟ್ಟ ಸ್ಥಿತಿಯಲ್ಲಿವೆ. ಇವುಗಳನ್ನು ಎನ್.ಡಿ.ಆರ್.ಎಫ್ ಹಾಗೂ ನಗರಸಭೆ ನಿಧಿಯಿಂದ ತ್ವರಿತವಾಗಿ ಅಭಿವೃದ್ಧಿಪಡಿಸಬೇಕು. ಕೊನೆಯ ಹಂತದಲ್ಲಿ ಕಾಮಗಾರಿ ಕೈಗೆತ್ತಿಕೊಂಡರೆ ಗುಣಮಟ್ಟ ಕಾಯ್ದುಕೊಳ್ಳಲು ಸಾಧ್ಯವಿಲ್ಲ. ಆದ್ದರಿಂದ ಶೀಘ್ರ ರಸ್ತೆ ಕಾಮಗಾರಿ ಆರಂಭಿಸಬೇಕು, ಎಷ್ಟು ಅನುದಾನವನ್ನು ರಸ್ತೆಗಳ ಅಭಿವೃದ್ಧಿಗಾಗಿ ವಿನಿಯೋಗಿಸಲಾಗುತ್ತಿದೆ ಎನ್ನುವುದನ್ನು ಸಾರ್ವಜನಿಕವಾಗಿ ತಿಳಿಸಬೇಕು. ಗುಣಮಟ್ಟದ ಕಾಮಗಾರಿ ನಡೆಸಿ, ಸಾರ್ವಜನಿಕರ ಸುಗಮ ಸಂಚಾರ ಹಾಗೂ ದಸರಾ ಉತ್ಸವದ ಯಶಸ್ಸಿಗೆ ಕೈಜೋಡಿಸಬೇಕು. ಮುಂದಿನ ವರ್ಷದ ದಸರಾ ವೇಳೆಗೆ ನಗರದಲ್ಲಿ ಸರ್ವಋತು ರಸ್ತೆಗಳನ್ನು ನಿರ್ಮಿಸಬೇಕು. (ಬಿ.ಎಂ.ಹರೀಶ್ ಅಣ್ವೇಕರ್, ಅಧ್ಯಕ್ಷರು, ಮಡಿಕೇರಿ ದಸರಾ ದಶಮಂಟಪ ಸಮಿತಿ)

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಏ.10 ರಿಂದ ಕೊಡವ ಲೆದರ್ ಬಾಲ್ ಕ್ರಿಕೆಟ್ ಲೀಗ್ ಮೂರನೇ ಆವೃತ್ತಿ ಆರಂಭ*

ಮಾರ್ಚ್ 18, 2026

*ಸುಂಟಿಕೊಪ್ಪದಲ್ಲಿ ಶಾಂತಿ ಸಭೆ : ಸೌಹಾರ್ದತೆಯನ್ನು ಕಾಪಾಡಿಕೊಳ್ಳಲು ದಿನೇಶ್‍ಕುಮಾರ್ ಕರೆ*

ಮಾರ್ಚ್ 18, 2026

*ಸೋಮವಾರಪೇಟೆ : ಕಾರ್ಮಿಕರಿಗೆ ಪೂರ್ವಭಾವಿ ಕಲಿಕಾ ತರಬೇತಿ ಕಾರ್ಯಾಗಾರ*

ಮಾರ್ಚ್ 18, 2026

*ಸುಂಟಿಕೊಪ್ಪದಲ್ಲಿ ಶಾಂತಿ ಸಭೆ : ಸೌಹಾರ್ದತೆಯನ್ನು ಕಾಪಾಡಿಕೊಳ್ಳಲು ದಿನೇಶ್‍ಕುಮಾರ್ ಕರೆ*

ಮಾರ್ಚ್ 18, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಂಟಿಕೊಪ್ಪ ಮಾ.18 NEWS DESK : ಹಬ್ಬದ ದಿನದಂದು ಶಾಂತಿ, ಸಾಮರಸ್ಯ ಮತ್ತು ಸೌಹಾರ್ದತೆಯನ್ನು ಕಾಪಾಡಿಕೊಳ್ಳಲು ಕುಶಾಲನಗರ ವೃತ್ತ ನಿರೀಕ್ಷಕರಾದ…

*ಸೋಮವಾರಪೇಟೆ : ಕಾರ್ಮಿಕರಿಗೆ ಪೂರ್ವಭಾವಿ ಕಲಿಕಾ ತರಬೇತಿ ಕಾರ್ಯಾಗಾರ*

ಮಾರ್ಚ್ 18, 2026

*ಯಡೂರಿನಲ್ಲಿ ವೈಸಿಸಿ ಕ್ರಿಕೆಟ್ ಕಪ್ ಪಂದ್ಯಾವಳಿ : ಗರಗಂದೂರಿನ ದಳಪತಿ ಕ್ರಿಕೆಟರ್ಸ್ ತಂಡ ಚಾಂಪಿಯನ್*

ಮಾರ್ಚ್ 18, 2026

*ಕೂಡಿಗೆ ಪರೀಕ್ಷಾ ಕೇಂದ್ರದಲ್ಲಿ ಸುಗಮವಾಗಿ ನಡೆದ ಎಸ್‍ಎಸ್‍ಎಲ್‍ಸಿ ಪರೀಕ್ಷೆ* 

ಮಾರ್ಚ್ 18, 2026

*ಪ್ರಸಿದ್ಧ ಎಮ್ಮೆಮಾಡು ಉರೂಸ್ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳಿಗೆ ಆಹ್ವಾನ*

ಮಾರ್ಚ್ 18, 2026

*ಕೊಡಗು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ನವೀಕರಣ ಕಟ್ಟಡ ಉದ್ಘಾಟನೆ : ಗ್ರಾಹಕರ ಹಿತರಕ್ಷಿಸುವಲ್ಲಿ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಹಲವು ಕ್ರಮ : ನ್ಯಾಯಮೂರ್ತಿ ಟಿ.ಜಿ.ಶಿವಶಂಕರೇಗೌಡ*

ಮಾರ್ಚ್ 18, 2026

*ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ” : ಡಾ.ಎಲ್.ಹನುಮಂತಯ್ಯ, ಕೆ.ಪಿ.ಬಾಲಸುಬ್ರಹ್ಮಣ್ಯ, ಎಂ.ಟಿ.ನಾಣಯ್ಯ, ರೇವತಿ ಪೂವಯ್ಯರಿಂದ ವಿಚಾರ ಮಂಡನೆ*

ಮಾರ್ಚ್ 18, 2026

*ಜಮೀನು ತೆರವು ಕಾರ್ಯಾಚರಣೆ : ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಮಸಗೋಡು ಗ್ರಾಮಸ್ಥರ ಅಸಮಾಧಾನ*

ಮಾರ್ಚ್ 18, 2026

*ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇಂದಿನಿಂದ ಶುರು: 8.65 ಲಕ್ಷ ವಿದ್ಯಾರ್ಥಿಗಳಿಗೆ ಅಗ್ನಿಪರೀಕ್ಷೆ; ಪರೀಕ್ಷಾ ಕೇಂದ್ರಗಳ ಸುತ್ತ 144 ನಿಷೇಧಾಜ್ಞೆ ಜಾರಿ!*

ಮಾರ್ಚ್ 18, 2026

*ಕೊಡಗಿನಲ್ಲಿ ವನ್ಯಜೀವಿ ಉಪಟಳ : ಅರಣ್ಯ ಸಚಿವರಿಂದ ಮಹತ್ವದ ಸಭೆ : ಶಾಸಕದ್ವಯರು ಭಾಗಿ*

ಮಾರ್ಚ್ 18, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.