
ಸೋಮವಾರಪೇಟೆ ಸೆ.16 NEWS DESK : ತೋಳೂರು ಶೆಟ್ಟಳ್ಳಿಯ ಶುಭಾಸ್ ನಗರದಲ್ಲಿ ಶ್ರೀ ವಿನಾಯಕ ಯುವಕ ಸಂಘದ ವತಿಯಿಂದ 9ನೇ ವರ್ಷದ ಗೌರಿ ಗಣೇಶ ಮೂರ್ತಿ ವಿಸರ್ಜನ ಕಾರ್ಯಕ್ರಮ ನಡೆಯಿತು. ಡಿಜೆ ಸೌಂಡ್ ಹಾಗೂ ಗೊಂಬೆ ಕುಣಿತದೊಂದಿಗೆ ವಿದ್ಯುತ್ ದೀಪಾಲಂಕಾರಗೊಂಡ ವಾಹನದಲ್ಲಿ ಗೌರಿ ಗಣೇಶ ಮೂರ್ತಿಯನ್ನು ಗ್ರಾಮದ ಪ್ರಮುಖ ಬೀದಿಗಳ ಮೂಲಕ ಮೆರವಣಿಗೆ ನಡೆಸಿ, ತೋಳೂರು ಶೆಟ್ಟಳ್ಳಿ ಬಸವೇಶ್ವರ ದೇವಸ್ಥಾನದ ಕೆರೆಯಲ್ಲಿ ವಿಸರ್ಜನೆ ಮಾಡಲಾಯಿತು. ಈ ಸಂದರ್ಭ ಯುವಕ ಸಂಘದ ಅಧ್ಯಕ್ಷ ಟಿ.ಎನ್.ಬಸವರಾಜು, ಕಾರ್ಯದರ್ಶಿ ಕೆ.ಎಸ್.ನಂದೀಶ್, ಖಜಾಂಚಿ ಸತೀಶ್ (ದಾಮು), ಟಿ.ವಿ.ಅಭಿಜಿತ್, ಚಂದನ್, ರಾಜೇಶ್, ದರ್ಶನ್ ಮತ್ತು ಅರ್ಚಕ ಸುಧಾಕರ್ ಜೈನ್ ಮುಂತಾದವರು ಉಪಸ್ಥಿತರಿದ್ದರು.









