
ವಿರಾಜಪೇಟೆ ಸೆ.19 NEWS DESK : ವಿರಾಜಪೇಟೆ ತಾಲ್ಲೂಕು ವಿಶ್ವಕರ್ಮ ಸೇವಾ ಸಂಘದ ವತಿಯಿಂದ ವಿಶ್ವಕರ್ಮ ಜಯಂತಿ ಹಾಗೂ ಸಂಘದ 24ನೇ ವರ್ಷದ ಅಂಗವಾಗಿ ವಿಶ್ವಕರ್ಮ ಪೂಜೆಯನ್ನು ನಡೆಸಲಾಯಿತು. ವಿರಾಜಪೇಟೆ ನಗರದ ರಾಜ ರಾಜೇಶ್ವರಿ ಮಿನಿ ಫಂಕ್ಷನ್ ಹಾಲ್ನಲ್ಲಿ ಪೂಜಾ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ಎಲಿಜಾಕ್ಷಿ, ಪ್ರಸಾದ್ ಆಚಾರ್ಯ, ವಿಶ್ವಕರ್ಮ ಸೇವಾ ಸಮಾಜದ ಅಧ್ಯಕ್ಷರಾದ ದಿವಾಕರ ಆಚಾರ್ಯ, ಉಪಾಧ್ಯಕ್ಷರು, ಕಾರ್ಯದರ್ಶಿ, ಖಜಾಂಚಿ ಮತ್ತು ಸಂಘದ ಸದಸ್ಯರು, ವಿರಾಜಪೇಟೆ ತಾಲೂಕು ವಿಶ್ವಕರ್ಮ ಮಹಿಳಾ ಸ್ವ ಸಹಾಯ ಸಂಘದ ಅಧ್ಯಕ್ಷರಾದ ರಶ್ಮಿ ಭವಾನಿ ಶಂಕರ್ ಆಚಾರ್ಯ, ಮತ್ತು ಸಂಘದ ಸರ್ವ ಸದಸ್ಯರು ಹಾಜರಿದ್ದರು.








