
ಮಡಿಕೇರಿ NEWS DESK ಸೆ.19 : ಮಡಿಕೇರಿ ನಗರಸಭೆಗೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ಭೇಟಿ ನೀಡಿ ಕಡತಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಕಡತಗಳ ವಿಲೇವಾರಿ ವಿಳಂಬವಾಗುತ್ತಿರುವ ಕುರಿತು ನಗರಸಭೆ ವಿರುದ್ಧ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿ ಬಂದಿರುವ ಹಿನ್ನೆಲೆ ಲೋಕಾಯುಕ್ತ ಡಿವೈಎಸ್ಪಿ ದಿನಕರ್ ಶೆಟ್ಟಿ ಅವರ ನೇತೃತ್ವದ ತಂಡ ಇಂದು ಬೆಳಿಗ್ಗೆ ಭೇಟಿ ನೀಡಿತು. ಕಡತಗಳ ಪರಿಶೀಲನೆಯೊಂದಿಗೆ ನಗರಸಭೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ವಿಚಾರಣೆಯನ್ನು ಕೂಡ ಮಾಡಲಾಗುತ್ತಿದೆ. ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.








