
ಸೋಮವಾರಪೇಟೆ ಸೆ.19 NEWS DESK : ಕಾಗಡಿಕಟ್ಟೆ ಆರೋಗ್ಯ ಉಪಕೇಂದ್ರದಲ್ಲಿ ರಾಷ್ಟ್ರೀಯ ಪೋಷಣ್ ಅಭಿಯಾನ ಕಾರ್ಯಕ್ರಮ ನಡೆಯಿತು. ದೊಡ್ಡಮಳ್ತೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಗೋಪಾಲಕೃಷ್ಣ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿ ಸರ್ಕಾರ ಗರ್ಭಿಣಿಯರಿಗೆ ಅನೇಕ ಸೌಲಭ್ಯಗಳನ್ನು ನೀಡುತ್ತಿದೆ. ಅವುಗಳನ್ನು ಪಡೆದುಕೊಳ್ಳಬೇಕು ಎಂದು ಹೇಳಿದರು. ಅಪೌಷ್ಟಿಕತೆ ತಡೆಗಟ್ಟುವುದು, ರಕ್ತಹೀನತೆ ನಿವಾರಣೆ, ಸೀಮಂತ, ಅನ್ನಪ್ರಾಶನ ಮತ್ತು ಪೋಷಣಾ ಅಭಿಯಾನದ ಬಗ್ಗೆ ಆರೋಗ್ಯ ಕೇಂದ್ರದ ಸುರಕ್ಷಾಧಿಕಾರಿ ದಿವ್ಯ ತಿಳಿಸಿದರು. ಪಂಚಾಯಿತಿ ಉಪಾಧ್ಯಕ್ಷೆ ರಶೀದ, ಪಿಡಿಓ ಸ್ಮಿತಾ, ಅಂಗನವಾಡಿ ಕಾರ್ಯಕರ್ತೆಯರಾದ ಸವಿತಾ, ಪೂರ್ಣಿಮ, ಸಿಬ್ಬಂದಿಗಳಾದ ಮಧುಸೂದನ್, ವಿಶ್ವರೂಪಚಾರ್ಯ ಇದ್ದರು.








