


ಮಡಿಕೇರಿ ಸೆ.22 NEWS DESK : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಪೊನ್ನಂಪೇಟೆ ತಾಲೂಕಿನಲ್ಲಿ ನೂತನವಾಗಿ ನಿರ್ಮಾಣ ಆಗಲಿರುವ ತಾಲ್ಲೂಕು ಕಚೇರಿ ಕಟ್ಟಡ ಕಾಮಗಾರಿಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಪರಿಶೀಲಿಸಿದರು. ಈ ಸಂದರ್ಭವಿಧಾನ ಪರಿಷತ್ ಮಾಜಿ ಸದಸ್ಯ ಅರುಣ್ ಮಾಚಯ್ಯ, ತಹಶೀಲ್ದಾರ್ ಮೋಹನ್, ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಅಣ್ಣೀರ ಹರೀಶ್, ಉಪಾಧ್ಯಕ್ಷರು ಅಲೀರ ರಶೀದ್, ಪಕ್ಷದ ಪ್ರಮುಖರು, ಹಿರಿಯ ನಾಗರಿಕರು ಉಪಸ್ಥಿತರಿದ್ದರು.









