Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಬಾಳೆಯಡ ಕಿಶನ್ ಪೂವಯ್ಯ ರಚಿತ ಕೊಡವ ಮಕ್ಕಡ ಕೂಟದ 118ನೇ ಪುಸ್ತಕ ‘ಎತ್ತ ಸಾಗುತ್ತಿದೆ ನಮ್ಮ ಹೆಜ್ಜೆ’ ಬಿಡುಗಡೆ*
ಇತ್ತೀಚಿನ ಸುದ್ದಿಗಳು

*ಬಾಳೆಯಡ ಕಿಶನ್ ಪೂವಯ್ಯ ರಚಿತ ಕೊಡವ ಮಕ್ಕಡ ಕೂಟದ 118ನೇ ಪುಸ್ತಕ ‘ಎತ್ತ ಸಾಗುತ್ತಿದೆ ನಮ್ಮ ಹೆಜ್ಜೆ’ ಬಿಡುಗಡೆ*

September 23, 20252 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಸೆ.23 NEWS DESK : ಲೇಖಕ ಬಾಳೆಯಡ ಕಿಶನ್ ಪೂವಯ್ಯ ಅವರು ರಚಿಸಿರುವ ಕೊಡವ ಮಕ್ಕಡ ಕೂಟದ 118ನೇ ಪುಸ್ತಕ ‘ಎತ್ತ ಸಾಗುತ್ತಿದೆ ನಮ್ಮ ಹೆಜ್ಜೆ’ ಬಿಡುಗಡೆಗೊಂಡಿತು. ನಗರದ ಕರ್ಣಂಗೇರಿಯ ಶ್ರೀ ರಾಜರಾಜೇಶ್ವರಿ ದೇವಾಲಯದಲ್ಲಿ ದೇವಾಲಯದ ಧರ್ಮದರ್ಶಿ ಗೋವಿಂದಸ್ವಾಮಿ ಅವರು ಪುಸ್ತಕವನ್ನು ಬಿಡುಗಡೆಗೊಳಿಸಿ, ಪುಸ್ತಕಕ್ಕೆ ಹೆಚ್ಚು ಜನಮನ್ನಣೆ ದೊರಕಲಿ ಎಂದು ಶುಭ ಹಾರೈಸಿದರು. ನಂತರ ಮಾತನಾಡಿದ ಲೇಖಕ ಬಾಳೆಯಡ ಕಿಶನ್ ಪೂವಯ್ಯ ಅವರು ಸಮಾಜದಲ್ಲಿನ ಭ್ರಷ್ಟಾಚಾರ, ಆಡಳಿತಗಳ ನ್ಯೂನತೆ, ಪ್ರಕೃತಿ ನಾಶ, ಪ್ರವಾಸೋದ್ಯಮದ ಅನಾಹುತಗಳು, ಮೂಢನಂಬಿಕೆಗಳು ಸೇರಿದಂತೆ ವಿಭಿನ್ನ ವಿಚಾರಧಾರೆಗಳನ್ನು ಪುಸ್ತಕದ ರೂಪದಲ್ಲಿ ಹೊರ ತರಲಾಗಿದೆ ಎಂದರು. ಜನರು ನನ್ನ ಬರವಣಿಗೆಯನ್ನು ಮೆಚ್ಚಿಕೊಂಡಿದ್ದಾರೆ, ಆದರೆ ಜೀವನದಲ್ಲಿ ಅಳವಡಿಕೊಂಡಿಲ್ಲ. ಪ್ರತಿಯೊಬ್ಬರು ಪುಸ್ತಕಗಳನ್ನು ಓದಬೇಕು ಮತ್ತು ಅದರಲ್ಲಿರುವ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಹಸಿರ ಕೊಡಗನ್ನು ಕೊಡಗಾಗಿ ಉಳಿಸಿಕೊಳ್ಳಲು ಪಣತೊಡಬೇಕು ಎಂದು ಕರೆ ನೀಡಿದರು. ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ಪ್ರಾಂಶುಪಾಲರು ಹಾಗೂ ಕಿಶನ್ ಪೂವಯ್ಯ ಅವರ ಪತ್ನಿ ಬಾಳೆಯಡ ಸವಿತಾ ಪೂವಯ್ಯ ಅವರು ಮಾತನಾಡಿ, ಪುಸ್ತಕದಲ್ಲಿ ಸಾಮಾಜಿಕ ಚಿಂತನೆಯೊಂದಿಗೆ ಪರಿಸರದ ಬಗ್ಗೆ ಜಾಗೃತಿ ಮೂಡಿಸಲಾಗಿದೆ. ಈಗಾಗಲೇ ಪ್ರಕಟಗೊಂಡಿರುವ ಲೇಖನಗಳನ್ನು ಜನ ಮೆಚ್ಚಿಕೊಂಡಿದ್ದು, ಓದುಗರಿಂದ ಹಲವು ಪತ್ರಗಳು ಬಂದಿವೆ. ‘ಎತ್ತ ಸಾಗುತ್ತಿದೆ ನಮ್ಮ ಹೆಜ್ಜೆ’ ಪುಸ್ತಕ ಈ ಲೇಖನಗಳ ಸಂಗ್ರಹವಾಗಿದೆ ಎಂದರು. ಪ್ರತಿಯೊಬ್ಬರು ಪುಸ್ತಕವನ್ನು ಓದುವ ಮೂಲಕ ಸಾಮಾಜಿಕ ಕಳಕಳಿ ತೋರಬೇಕು ಹಾಗೂ ಪರಿಸರ ಸಂರಕ್ಷಣೆಗೆ ಕೈಜೋಡಿಸಬೇಕೆಂದು ಕರೆ ನೀಡಿದರು. ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಅವರು ಮಾತನಾಡಿ, ಒಂದು ಕಾಲದಲ್ಲಿ ಕೊಡಗು ಸಾಹಿತ್ಯ ಕ್ಷೇತ್ರದಲ್ಲಿ ಹಿಂದುಳಿದ ಜಿಲ್ಲೆ ಎಂಬ ಅಪಕೀರ್ತಿಗೆ ಒಳಗಾಗಿತ್ತು ಎಂಬ ಮಾತು ಹಿರಿಯರ ಬಾಯಿಂದ ಕೇಳಿದ್ದೇವೆ. ಇದನ್ನೊಂದು ಸವಾಲಾಗಿ ಸ್ವೀಕರಿಸಿ ಸಾಮಾಜಿಕ ಕಳಕಳಿ, ಕೊಡಗಿನ ಅಭ್ಯುದಯದ ಕಾಳಜಿ, ಸಂಸ್ಕøತಿ, ಸಾಹಿತ್ಯದ ಬೆಳೆವಣಿಗೆಯ ಮೇಲಿನ ಆಸಕ್ತಿಯಿಂದ 2013ರಲ್ಲಿ ಸಮಾನ ಮನಸ್ಕ ಯುವಕ, ಯುವತಿಯರು ಸೇರಿ ಕೊಡವ ಮಕ್ಕಡ ಕೂಟ ಎಂಬ ಸಂಘಟನೆಯನ್ನು ರಚಿಸಲಾಯಿತು. ನಂತರ ನಿರಂತರ ಕಾರ್ಯನಿರ್ವಹಣೆಯಲ್ಲಿ ತೊಡಗಿಸಿಕೊಂಡು ಸಾಹತ್ಯ ಕ್ಷೇತ್ರದ ಬೆಳವಣಿಗೆಗೆ ಹೆಚ್ಚು ಒತ್ತು ನೀಡಲಾಯಿತು ಎಂದು ತಿಳಿಸಿದರು. ದುಬಾರಿ ವೆಚ್ಚವನ್ನು ಭರಿಸಿ ಪುಸ್ತಕ ಪ್ರಕಟಿಸುವುದು ತುಂಬಾ ಕಷ್ಟದ ಕಾರ್ಯವಾಗಿದೆ. ಆದರೂ ದಾನಿಗಳ ಸಹಕಾರದಿಂದ ಇಲ್ಲಿಯವರೆಗೆ ಜಿಲ್ಲೆಯ ಹಲವು ಬರಹಗಾರರು, ಸಾಹಿತಿಗಳು ಬರೆದ ಕೊಡವ, ಕನ್ನಡ, ಇಂಗ್ಲೀಷ್, ಹಿಂದಿ ಸೇರಿದಂತೆ ಅನೇಕ ಕೃತಿಗಳನ್ನು ಬಿಡುಗಡೆ ಮಾಡಲಾಗಿದೆ. ಇದೀಗ 118ನೇ ಪುಸ್ತಕವಾಗಿ ‘ಎತ್ತ ಸಾಗುತ್ತಿದೆ ನಮ್ಮ ಹೆಜ್ಜೆ’ ಯನ್ನು ಬಿಡುಗಡೆಗೊಳಿಸಲಾಗಿದೆ ಎಂದರು. ಬಾಳೆಯಡ ಕಿಶನ್ ಪೂವಯ್ಯ ಅವರು ಕೇವಲ ವಕೀಲಿ ವೃತ್ತಿಯಲ್ಲಿ ಮಾತ್ರ ಪರಿಣಿತರಲ್ಲ, ತಮ್ಮ ಮೊನಚಾದ ಬರಹಗಳ ಮೂಲಕ ಸಮಾಜದ ಅಂಕುಡೊಂಕುಗಳ ಮೇಲೆ ಬೆಳಕು ಚೆಲ್ಲಿದ್ದಾರೆ. ಯಾರ ಮನಸ್ಸಿಗೂ ನೋವಾಗದ ರೀತಿಯಲ್ಲಿ ಪ್ರಸ್ತುತದ ಪರಿಸ್ಥಿತಿಯನ್ನು ಪುಸ್ತಕದಲ್ಲಿ ವಿವರಿಸಿದ್ದಾರೆ. ಮುಂದಿನ ಭವಿಷ್ಯದ ಯುವ ಪೀಳಿಗೆಯ ಮೇಲೆ ಬೀರುವ ದುಷ್ಪರಿಣಾಮ, ಕೊಡಗಿನ ಆಸ್ತಿಯೇ ಆಗಿರುವ ಪ್ರಕೃತಿಯ ವಿನಾಶ ಸೇರಿದಂತೆ ಹಲವು ವಿಚಾರಗಳನ್ನು ಪುಸ್ತಕದಲ್ಲಿ ಮನಮುಟ್ಟುವಂತೆ ವಿವರಿಸಿದ್ದಾರೆ ಎಂದು ಬೊಳ್ಳಜಿರ ಬಿ.ಅಯ್ಯಪ್ಪ ಹೇಳಿದರು. ಕಿಶನ್ ಪೂವಯ್ಯ ಅವರು ತಂದೆ ಬಾಳೆಯಡ ಚರ್ಮಣ್ಣ, ಶ್ರೀ ರಾಜರಾಜೇಶ್ವರಿ ದೇವಾಲಯ ಸಮಿತಿಯ ಟ್ರಸ್ಟಿ ದೇವರಾಜು (ಮಣಿ), ಪ್ರಮುಖರಾದ ಪಕ್ತಿ, ಸತೀಶ್, ಕಿರಣ್ ಕುಮಾರ್, ಪ್ರಧಾನ ಅರ್ಚಕ ಶ್ರೀನಿವಾಸ್ ಸ್ವಾಮಿ, ರಾಜರಾಜೇಶ್ವರಿ ವಿದ್ಯಾಲಯದ ಕಾರ್ಯದರ್ಶಿ ದಾಕ್ಷಾಯಿಣಿ ವಾಸುದೇವ್, ಭಕ್ತರಾದ ಸೂದನ ಹರೀಶ್, ಮೊಟ್ಟೇರ ಹೇಮಾವತಿ, ನೆರವಂಡ ಉಷಾ ಮತ್ತಿತರರು ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ಕುಶಾಲನಗರ ಕನ್ನಿಕಾಪರಮೇಶ್ವರಿ ದೇವಸ್ಥಾದಲ್ಲಿ ವಿಶೇಷ ಪೂಜೆ : ದುಷ್ಟ ಶಕ್ತಿಗಳ ಸಂಹಾರಕ್ಕೆ ದೇವಿ ಬಂದಿರುವುದು : ಗಿರೀಶ್ ಭಟ್*
Next Article *ವಿರಾಜಪೇಟೆ, ಕುಶಾಲನಗರ ಮತ್ತು ಹುದಿಕೇರಿ ಆಸ್ಪತ್ರೆ ಮೇಲ್ದರ್ಜೆಗೆ : ಸಚಿವ ದಿನೇಶ್ ಗುಂಡೂರಾವ್*

Website design development company services in Mangalore

Forex Trading Teacher in India

Related Posts

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

ಸಿಯಾಟಲ್ (ಅಮೆರಿಕಾ): ಕಳೆದ ಎರಡು ವರ್ಷಗಳಿಂದ ಇಡೀ ಜಗತ್ತಿನ ಗಮನ ಸೆಳೆದಿದ್ದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಸಾವಿನ…

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.