Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡವ ಜನಸಂಪರ್ಕ ಅಭಿಯಾನದ ಅಂಗವಾಗಿ ಸೆ.5ರಂದು ಮಾದಾಪುರದಲ್ಲಿ ಸಿಎನ್‌ಸಿ ಮಾನವ ಸರಪಳಿ*
  • *ರಾತ್ರಿ 10ರಿಂದ ಬೆಳಗ್ಗೆ 6ರವರೆಗೆ ಡಿಜೆ, ಧ್ವನಿವರ್ಧಕ ಬಳಕೆಗೆ ನಿರ್ಬಂಧ : 5 ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ 1 ಲಕ್ಷ ರೂ.ವರೆಗೆ ದಂಡ : ಕೊಡಗು ಜಿಲ್ಲಾ ಪೊಲೀಸ್‌ ಎಚ್ಚರಿಕೆ*
  • *ಮೂರ್ನಾಡಿನಲ್ಲಿ 102ನೇ ವಾರ್ಷಿಕ ಕೈಲ್ ಪೊಳ್ದ್ ಆಚರಣೆ : ವಿವಿಧ ಆಟೋಟಗಳು*
  • *ಸೆ.5 ರಂದು ಶಿಕ್ಷಕರ ದಿನಾಚರಣೆ*
  • *ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*
  • *ಟೈಲರಿಂಗ್ ಯಂತ್ರೋಪಕರಣ ವಿತರಣೆ*
  • *ಹೊನ್ನಮ್ಮನ ಕೆರೆ ಆವರಣದಲ್ಲಿ ಸ್ವಚ್ಛತಾ ಶ್ರಮದಾನ*
  • *ಪೊಲೀಸ್ ಪೇದೆ ಹುದ್ದೆ :  ನೇರ ನೇಮಕಾತಿ ಪರೀಕ್ಷೆ ಸುಸೂತ್ರವಾಗಿ ನಡೆಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*   
  • *31 ನೇ ವರ್ಷದ ಕೈಲ್ ಪೊವ್ದ್ ನ್ನು ಸಂಭ್ರಮದಿಂದ ಆಚರಿಸಿದ CNC*
  • *ಮಡಿಕೇರಿಯಲ್ಲಿ ಬೀದಿನಾಯಿ ಉಪಟಳ ತಡೆಗೆ ಕ್ರಮ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿರಾಜಪೇಟೆ : ಪ್ರಕೃತಿಯ ಜೊತೆಗೆ ಪ್ರತಿಯೊಬ್ಬರೂ ಭಾವನಾತ್ಮಕ ಸಂಬಂಧವನ್ನು ಹೊಂದಿರಬೇಕು : ಸಂಕೇತ್ ಪೂವಯ್ಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿರಾಜಪೇಟೆ : ಪ್ರಕೃತಿಯ ಜೊತೆಗೆ ಪ್ರತಿಯೊಬ್ಬರೂ ಭಾವನಾತ್ಮಕ ಸಂಬಂಧವನ್ನು ಹೊಂದಿರಬೇಕು : ಸಂಕೇತ್ ಪೂವಯ್ಯ*

ಸೆಪ್ಟೆಂಬರ್ 27, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ವಿರಾಜಪೇಟೆ ಸೆ.27 NEWS DESK : ಪ್ರತಿಯೊಬ್ಬರೂ ಕೂಡ ಪ್ರಕೃತಿಯ ಜೊತೆಗೆ ಭಾವನಾತ್ಮಕ ಸಂಬಂಧವನ್ನು ಹೊಂದಿರಬೇಕು ಎಂದು ರಾಜ್ಯ ವನ್ಯಜೀವಿ ಮಂಡಳಿಯ ಸದಸ್ಯರಾದ ಮೇರಿಯಂಡ ಸಂಕೇತ್ ಪೂವಯ್ಯ ಅಭಿಪ್ರಾಯಪಟ್ಟರು. ವಿರಾಜಪೇಟೆ ಪಟ್ಟಣದ ಸೆಂಟ್ ಆನ್ಸ್ ಪದವಿ ಕಾಲೇಜಿನಲ್ಲಿ ಕಾಲೇಜಿನ ನೇಚರ್ ಕ್ಲಬ್ ಘಟಕದ ವತಿಯಿಂದ ಆಯೋಜಿಸಲಾಗಿದ್ದ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪ್ರಕೃತಿಯು ಮಾನವನಿಗೆ ಒಂದು ವರವಾಗಿದ್ದು ಭಾವನಾತ್ಮಕವಾಗಿಯೂ, ಆರೋಗ್ಯದ ದೃಷ್ಟಿಯಿಂದಲೂ ತನ್ನದೇ ಆದ ಕೊಡುಗೆಯನ್ನು ನೀಡುತ್ತಿದೆ. ಪರಿಸರ ಅಧ್ಯಯನವನ್ನು ನಾವು ಪ್ರಾಯೋಗಿಕವಾಗಿ ಅಧ್ಯಯನ ಮಾಡಬೇಕು. ಪರಿಸರದಲ್ಲಿ ನಾವು ಕಲಿಯುವ ಪಾಠವು ಆರೋಗ್ಯವನ್ನು ಉತ್ತಮಪಡಿಸುವುದಲ್ಲದೆ ಸುಂದರ ಸಮಾಜದ ಸೃಷ್ಟಿಗೂ ಕಾರಣವಾಗುತ್ತದೆ. ಆದುದರಿಂದ ವಿದ್ಯಾರ್ಥಿಗಳು ಪರಿಸರದ ಸಂರಕ್ಷಣೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಮೌಲ್ಯಯುತವಾದ ಶಿಕ್ಷಣವನ್ನು ಪಡೆಯಿರಿ ಎಂದು ಕಿವಿಮಾತು ಹೇಳಿದರು. ಸತ್ಯ, ಪ್ರಾಮಾಣಿಕತೆ, ನ್ಯಾಯಪರವಾದ ಚಿಂತನೆಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ ಎಂದರು. ಮುಖ್ಯ ಅತಿಥಿಗಳಾಗಿ ಆಗಮಿಸಿ ಉಪನ್ಯಾಸವನ್ನು ನೀಡಿದ ಪತ್ರಕರ್ತರು ಹಾಗೂ ಬರಹಗಾರರಾದ ಉಷಾ ಪ್ರೀತಂ ಮಾತನಾಡಿ, ಕೊಡಗು ಪ್ರಕೃತಿ ಸೌಂದರ್ಯದ ನಾಡು. ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ನಮ್ಮಲ್ಲಿ ಆಗಮಿಸುತ್ತಾರೆ. ನಮ್ಮಲ್ಲಿರುವಂತಹ ಸಸ್ಯ ಪ್ರಭೇದ, ಜೀವ ಜಂತುಗಳು ನಮ್ಮ ನಾಡನ್ನು ಶ್ರೀಮಂತ ಗೊಳಿಸಿವೆ. ಹಳೆಯ ಕಾಲದಲ್ಲಿ ಇದ್ದಂತಹ ಕೃಷಿ ಪದ್ಧತಿಗಳು, ಅರಣ್ಯ ಸಂಪತ್ತು ಕ್ಷೀಣಿಸಿವೆ. ಭತ್ತದ ಗದ್ದೆಗಳು ಇಂದು ವಾಣಿಜ್ಯೀಕರಣ ಆಗುತ್ತಿದೆ. ಹಚ್ಚ ಹಸಿರಾಗಿದ್ದ ಪರಿಸರ ಲೇಔಟ್ ಆಗಿ ಪರಿವರ್ತನೆಯಾಗಿದೆ. ಕಾಡು ಪ್ರಾಣಿಗಳು ನಾಡಿಗೆ ಲಗ್ಗೆ ಇಡಲು ಆರಂಭಿಸಿವೆ. ಪರಿಸರ ನಾಶದಿಂದ ಮನುಷ್ಯನು ಪ್ರಾಣಿಗಳ ಜೊತೆ ಸಂಘರ್ಷ ಮಾಡುವ ಹಂತಕ್ಕೆ ನಾವಿಂದು ತಲುಪಿದ್ದೇವೆ. ನೈಸರ್ಗಿಕ ಸಂಪನ್ಮೂಲಗಳು ಬರಿದಾಗಲು ನಾವೇ ಕಾರಣವಾಗುತ್ತಿದ್ದೇವೆ. ಸ್ವಚ್ಛ ಪರಿಸರ ನಿರ್ಮಾಣಕ್ಕೆ ಎಲ್ಲರೂ ಪಣತೊಡಬೇಕಾಗಿದೆ. ನಮ್ಮ ಪ್ರಕೃತಿ ನಮ್ಮ ಪರಿಸರ ಎಂಬ ಭಾವನೆ ಎಲ್ಲರಲ್ಲೂ ಬರಬೇಕಾಗಿದೆ. ಅವಾಗ ಮಾತ್ರ ಸ್ವಚ್ಛಂದ ಆರೋಗ್ಯಯುಕ್ತ ಪರಿಸರ ನಿರ್ಮಾಣ ಸಾಧ್ಯ ಎಂದರು. ಪದವಿ ಕಾಲೇಜಿನ ಐಕ್ಯೂಎಸಿ ಘಟಕದ ಸಂಚಾಲಕಿ ಹೇಮ ರವರು ಮಾತನಾಡಿ ವಿದ್ಯಾರ್ಥಿಗಳು ಪರಿಸರದ ಸಂರಕ್ಷಣೆಗೆ ಮುಂದಾಗಬೇಕು. ನಮ್ಮ ಬಾಲ್ಯದಲ್ಲಿ ಇದ್ದಂತಹ ಪರಿಸರ ಇಂದು ಇಲ್ಲವಾಗಿದೆ. ಮಾಲಿನ್ಯ ಮುಕ್ತ ಪರಿಸರವನ್ನು ನಿರ್ಮಿಸೋಣ ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದಂತಹ ಕಾಲೇಜಿನ ಪ್ರಾಂಶುಪಾಲರಾದ ತೃಪ್ತಿ ಬೋಪಣ್ಣ ರವರು ಮಾತನಾಡಿ ಇಂದಿನ ಡಿಜಿಟಲ್ ಯುಗದಲ್ಲಿ ನಾವು ಹಲವಾರು ಕ್ಷೇತ್ರಗಳಲ್ಲಿ ಸಾಧನೆಯನ್ನು ಮಾಡುತ್ತಿದ್ದೇವೆ. ಹೊಸ ಹೊಸ ಆವಿಷ್ಕಾರಗಳನ್ನು ಮಾಡುತ್ತಿದ್ದೇವೆ. ಆದರೆ ನಮ್ಮ ಜೀವನಕ್ಕೆ ಮುಖ್ಯವಾದ ಪರಿಸರವನ್ನು ಸಂರಕ್ಷಿಸುವಲ್ಲಿ ವಿಫಲವಾಗಿದ್ದೇವೆ. ತಂತ್ರಜ್ಞಾನ ಎಷ್ಟೇ ಮುಂದುವರೆದರು ಪ್ರಕೃತಿಯನ್ನು ಉಳಿಸದಿದ್ದಲ್ಲಿ ಮಾನವನು ಜೀವಿಸಲು ಸಾಧ್ಯವಿಲ್ಲ ಎಂದು ಹೇಳಿದರು. ವೇದಿಕೆಯಲ್ಲಿ ಕಾಲೇಜಿನ ನೇಚರ್ ಕ್ಲಬ್ ಘಟಕದ ಸಂಚಾಲಕಿ ಸೌಮ್ಯ ರವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಕಾಲೇಜಿನ ಉಪನ್ಯಾಸಕರು, ನೇಚರ್ ಕ್ಲಬ್ ಘಟಕದ ವಿದ್ಯಾರ್ಥಿಗಳು ಹಾಜರಿದ್ದರು. ವಿದ್ಯಾರ್ಥಿ ನಿಶಿ ಸ್ವಾಗತಿಸಿ, ನಿರೂಪಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡವ ಜನಸಂಪರ್ಕ ಅಭಿಯಾನದ ಅಂಗವಾಗಿ ಸೆ.5ರಂದು ಮಾದಾಪುರದಲ್ಲಿ ಸಿಎನ್‌ಸಿ ಮಾನವ ಸರಪಳಿ*

ಸೆಪ್ಟೆಂಬರ್ 2, 2026

*ರಾತ್ರಿ 10ರಿಂದ ಬೆಳಗ್ಗೆ 6ರವರೆಗೆ ಡಿಜೆ, ಧ್ವನಿವರ್ಧಕ ಬಳಕೆಗೆ ನಿರ್ಬಂಧ : 5 ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ 1 ಲಕ್ಷ ರೂ.ವರೆಗೆ ದಂಡ : ಕೊಡಗು ಜಿಲ್ಲಾ ಪೊಲೀಸ್‌ ಎಚ್ಚರಿಕೆ*

ಸೆಪ್ಟೆಂಬರ್ 2, 2026

*ಮೂರ್ನಾಡಿನಲ್ಲಿ 102ನೇ ವಾರ್ಷಿಕ ಕೈಲ್ ಪೊಳ್ದ್ ಆಚರಣೆ : ವಿವಿಧ ಆಟೋಟಗಳು*

ಸೆಪ್ಟೆಂಬರ್ 1, 2026

*ರಾತ್ರಿ 10ರಿಂದ ಬೆಳಗ್ಗೆ 6ರವರೆಗೆ ಡಿಜೆ, ಧ್ವನಿವರ್ಧಕ ಬಳಕೆಗೆ ನಿರ್ಬಂಧ : 5 ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ 1 ಲಕ್ಷ ರೂ.ವರೆಗೆ ದಂಡ : ಕೊಡಗು ಜಿಲ್ಲಾ ಪೊಲೀಸ್‌ ಎಚ್ಚರಿಕೆ*

ಸೆಪ್ಟೆಂಬರ್ 2, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

ಮಡಿಕೇರಿ NEWS DESK ಸೆ.2 : ಶಬ್ದ ಮಾಲಿನ್ಯ ನಿಯಂತ್ರಣಕ್ಕೆ ಸಂಬಂಧಿಸಿದ ಸುಪ್ರೀಂ ಕೋರ್ಟ್‌ನ ಶಬ್ದ ಮಾಲಿನ್ಯ (ನಿಯಂತ್ರಣ ಮತ್ತು…

*ಮೂರ್ನಾಡಿನಲ್ಲಿ 102ನೇ ವಾರ್ಷಿಕ ಕೈಲ್ ಪೊಳ್ದ್ ಆಚರಣೆ : ವಿವಿಧ ಆಟೋಟಗಳು*

ಸೆಪ್ಟೆಂಬರ್ 1, 2026

*ಸೆ.5 ರಂದು ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 1, 2026

*ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*

ಸೆಪ್ಟೆಂಬರ್ 1, 2026

*ಟೈಲರಿಂಗ್ ಯಂತ್ರೋಪಕರಣ ವಿತರಣೆ*

ಸೆಪ್ಟೆಂಬರ್ 1, 2026

*ಹೊನ್ನಮ್ಮನ ಕೆರೆ ಆವರಣದಲ್ಲಿ ಸ್ವಚ್ಛತಾ ಶ್ರಮದಾನ*

ಸೆಪ್ಟೆಂಬರ್ 1, 2026

*ಪೊಲೀಸ್ ಪೇದೆ ಹುದ್ದೆ :  ನೇರ ನೇಮಕಾತಿ ಪರೀಕ್ಷೆ ಸುಸೂತ್ರವಾಗಿ ನಡೆಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*   

ಸೆಪ್ಟೆಂಬರ್ 1, 2026

*31 ನೇ ವರ್ಷದ ಕೈಲ್ ಪೊವ್ದ್ ನ್ನು ಸಂಭ್ರಮದಿಂದ ಆಚರಿಸಿದ CNC*

ಸೆಪ್ಟೆಂಬರ್ 1, 2026

*ಮಡಿಕೇರಿಯಲ್ಲಿ ಬೀದಿನಾಯಿ ಉಪಟಳ ತಡೆಗೆ ಕ್ರಮ*

ಸೆಪ್ಟೆಂಬರ್ 1, 2026

*ಕೊಡಗು ವಿದ್ಯಾಲಯದಲ್ಲಿ ಈದ್ ಮಿಲಾದ್ ಆಚರಣೆ*

ಸೆಪ್ಟೆಂಬರ್ 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.