Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
  • *ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*
  • *ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*
  • *ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಶ್ರೀ ಓಂಕಾರೇಶ್ವರ, ಶ್ರೀ ಆಂಜನೇಯ, ಕೋಟೆ ಶ್ರೀ ಮಹಾಗಣಪತಿ ದೇವಾಲಯಗಳಲ್ಲಿನ ಆಭರಣಗಳ ಮೌಲ್ಯ ಮಾಪನ*
ಇತ್ತೀಚಿನ ಸುದ್ದಿಗಳು

*ಶ್ರೀ ಓಂಕಾರೇಶ್ವರ, ಶ್ರೀ ಆಂಜನೇಯ, ಕೋಟೆ ಶ್ರೀ ಮಹಾಗಣಪತಿ ದೇವಾಲಯಗಳಲ್ಲಿನ ಆಭರಣಗಳ ಮೌಲ್ಯ ಮಾಪನ*

September 27, 20252 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ NEWS DESK ಸೆ.27 : ಶ್ರೀ ಓಂಕಾರೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ನೂತನ ಆಡಳಿತ ಮಂಡಳಿ ಪ್ರಸಕ್ತ ಸಾಲಿನ ಮಾರ್ಚ್ನಲ್ಲಿ ರಚನೆಯಾಯಿತು. ಆ ಬಳಿಕ ದೇವಸ್ಥಾನದ ಸ್ವತ್ತುಗಳ ಬಗ್ಗೆ ಪಾರದರ್ಶಕತೆಯನ್ನು ಕಂಡುಕೊಳ್ಳ್ಳುವ ಸಲುವಾಗಿ ಸಮಿತಿಯ ವ್ಯಾಪ್ತಿಗೆ ಒಳಪಡುವ ಶ್ರೀ ಓಂಕಾರೇಶ್ವರ, ಶ್ರೀ ಆಂಜನೇಯ ಹಾಗೂ ಕೋಟೆ ಶ್ರೀ ಮಹಾಗಣಪತಿ ದೇವಾಲಯಗಳಲ್ಲಿನ ಚಿನ್ನ, ಬೆಳ್ಳಿ ಮತ್ತು ಇತರೆ ಆಭರಣಗಳ ಮೌಲ್ಯಮಾಪನವನ್ನು ಮಾಡಲಾಗಿದೆ ಎಂದು ಸಮಿತಿಯ ಅಧ್ಯಕ್ಷ ಎ.ಸಿ.ಚುಮ್ಮಿ ದೇವಯ್ಯ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಸಮಿತಿಯ ಸದಸ್ಯರು, ಅರ್ಚಕ ವೃಂದ, ದೇವಾಲಯ ಸಿಬ್ಬಂದಿ, ಆರಕ್ಷಕ ಇಲಾಖೆ, ಜಿಲ್ಲಾಧಿಕಾರಿಗಳ ಕಚೇರಿ ಸಿಬ್ಬಂದಿಗಳ ಹಾಗೂ ಸಾರ್ವಜನಿಕರ ಸಮ್ಮುಖದಲ್ಲಿ ವಿಡಿಯೋ ಚಿತ್ರೀಕರಣದೊಂದಿಗೆ ಇದೇ ಸಾಲಿನ ಜೂ.11 ರಂದು ಮೌಲ್ಯಮಾಪನ ನಡೆಸಲಾಯಿತೆಂದು ವಿವರಿಸಿದರು. ಮೌಲ್ಯಮಾಪನದಂತೆ ಶ್ರೀ ಓಂಕಾರೇಶ್ವರ ದೇವಸ್ಥಾನಕ್ಕೆ ಸಂಬಂಧಿಸಿದಂತೆ 22 ಗ್ರಾಂ 100 ಮಿಲಿ ಗ್ರಾಂ ಚಿನ್ನ, 83 ಕೆ.ಜಿ 472 ಗ್ರಾಂ ಬೆಳ್ಳಿ ಆಭರಣಗಳು, 40 ಕೆ.ಜಿ. 810 ಗ್ರಾಂ ಹಿತ್ತಾಳೆ ಮತ್ತು 3 ಕೆ.ಜಿ. ಕಂಚಿನ ಸಾಮಾಗ್ರಿಗಳಿವೆ. ಶ್ರೀ ಆಂಜನೇಯ ದೇವಾಲಯಕ್ಕೆ ಸಂಬಂಧಿಸಿದಂತೆ 1 ಗ್ರಾಂ ಚಿನ್ನ, 19 ಕೆ.ಜಿ. 609 ಗ್ರಾಂ ಬೆಳ್ಳಿ ಆಭರಣಗಳಿವೆ. ಕೋಟೆ ಶ್ರೀ ಗಣಪತಿ ದೇವಾಲಯಕ್ಕೆ ಸಂಬಂಧಿಸಿದಂತೆ 120 ಗ್ರಾಂ 840 ಮಿಲಿ ಗ್ರಾಂ ಚಿನ್ನ, 18 ಗ್ರಾಂ 450 ಮಿಲಿ ಗ್ರಾಂ ಬೆಳ್ಳಿ ಆಭರಣಗಳಿವೆ ಎಂದರು. ನಮ್ಮ ನೂತನ ಆಡಳಿತ ಮಂಡಳಿ ದೇವಸ್ಥಾನದ ಉಸ್ತುವಾರಿಯ ಹಂತಗಳಲ್ಲಿ ಸಂಪೂರ್ಣ ಪಾರದರ್ಶಕತೆಯನ್ನು ಕಾಯ್ದುಕೊಳ್ಳುವ ಉದ್ದೇಶದಿಂದ ಮೌಲ್ಯಮಾಪನ ಮಾಡಲಾಗಿದೆ. ಈ ಎಲ್ಲಾ ಮಾಹಿತಿ ಜಿಲ್ಲಾಡಳಿತಕ್ಕೂ ತಿಳಿದಿದೆ ಎಂದು ಹೇಳಿದರು. ವ್ಯವಸ್ಥಾಪನಾ ಸಮಿತಿಯ ಸದಸ್ಯರು ಹಾಗೂ ವಕೀಲರಾದ ಎಂ.ಎ.ನಿರಂಜನ್ ಅವರು ಮಾತನಾಡಿ, ನೂತನ ಆಡಳಿತ ಮಂಡಳಿ ಅಧಿಕಾರ ವಹಿಸಿಕೊಂಡ ಬಳಿಕ ದೇವಸ್ಥಾನಕ್ಕೆ ಸೇರಿರಬಹುದಾದ ಆಸ್ತಿಗಳ ದಾಖಲೆಗಳನ್ನು ಪರಿಶೀಲಿಸಿದಾಗ, ಶ್ರೀ ಓಂಕಾರೇಶ್ವರ ದೇವಸ್ಥಾನಕ್ಕೆ ಈ ಹಿಂದೆ ದಾನ ನೀಡಿದ ಆಸ್ತಿಗಳಲ್ಲಿ ಯಾವೊಂದು ಆಸ್ತಿಯು ದೇವಸ್ಥಾನದ ಸ್ವಾಧೀನದಲ್ಲಿ ಇಲ್ಲದಿರುವುದು ಕಂಡು ಬರುತ್ತಿದ್ದು, ಇದೊಂದು ದುಃಖಕರ ವಿಚಾರ. ಈ ಸಂಬಂಧ ಇದೀಗ ಕಾನೂನಾತ್ಮಕ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನ ಪ್ರಯತ್ನ ನಡೆಸಿರುವುದಾಗಿ ತಿಳಿಸಿದರು.
ವ್ಯವಸ್ಥಾಪನಾ ಸಮಿತಿಯ ಸದಸ್ಯ ಜಿ.ರಾಜೇಂದ ಅವರು ಮಾತನಾಡಿ, ತಾಂಬೂಲ ಪ್ರಶ್ನೆಯಲ್ಲಿ ಕಂಡು ಬಂದಂತೆ ಶ್ರೀ ಆಂಜನೇಯ ದೇವಸ್ಥಾನದ ಒಳಭಾಗದಲ್ಲಿ ‘ನವಗ್ರಹ ಪ್ರತಿಷ್ಠಾಪನೆ’ಯನ್ನು ದಾನಿಗಳ ನೆರವಿನೊಂದಿಗೆ ಮಾಡಲು ಸಮಿತಿ ನಿರ್ಧರಿಸಿದೆ. ಇದರೊಂದಿಗೆ ದೇವಸ್ಥಾನದ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಸರಕಾರದ ಸಹಕಾರದೊಂದಿಗೆ 5 ಕೋಟಿ ರೂ. ವೆಚ್ಚದಲ್ಲಿ ನಡೆಸಲು ಉದ್ದೇಶಿಸಲಾಗಿದೆ ಎಂದರು. ಉದ್ದೇಶಿತ ಅಭಿವೃದ್ಧಿ ಕಾರ್ಯಗಳಂತೆ ಶ್ರೀ ಓಂಕಾರೇಶ್ವರ ಮತ್ತು ಶ್ರೀ ಆಂಜನೇಯ ದೇವಾಲಯಕ್ಕೆ ಹೊಂದಿಕೊಂಡಿರುವ ಪ್ರವೇಶ ದ್ವಾರವನ್ನು ಎಡಬದಿಗೆ ಶಿವಲಿಂಗ ಮತ್ತು ನಂದಿಯ ಮೂರ್ತಿ, ಮಧ್ಯ ಭಾಗದಲ್ಲಿ ಪಟ್ಟಾಭಿರಾಮ, ಲಕ್ಷ್ಮಣ, ಸೀತೆಯ ವಿಗ್ರಹ, ಬಲಭಾಗದಲ್ಲಿ ಕೈಮುಗಿದು ಕುಳಿತಿರುವ ಭಂಗಿಯಲ್ಲಿನ ಆಂಜನೇಯ ಮೂರ್ತಿಯನ್ನು ಅಳವಡಿಸಲು ಉದ್ದೇಶಿಸಲಾಗಿದೆ. ಎರಡು ದೇವಸ್ಥಾನಗಳಲ್ಲಿ ಪ್ರವೇಶ ದ್ವಾರ, ಪ್ರಾರ್ಥನಾ ಕೇಂದ್ರ, ನವಗ್ರಹ ವೃಕ್ಷೋದ್ಯಾನ, ಕೆರೆ ಅಂಗಣ ಜೀರ್ಣೋದ್ಧಾರ ಕಾರ್ಯಗಳನ್ನು ನಡೆಸಲು ನಿರ್ಧರಿಸಲಾಗಿದೆ ಎಂದು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಸಮಿತಿಯ ಸದಸ್ಯ ಅಂಬೆಕಲ್ಲು ಕುಶಾಲಪ್ಪ ಹಾಗೂ ವೀಣಾಕ್ಷಿ ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ಜಾತಿಯ ಕಾಲಂನಲ್ಲಿ GOWDA (ಗೌಡ) ಎಂದು ನಮೂದಿಸಲು ಚೇರಳ ಗೌಡ ಸಮಾಜ ಮನವಿ*
Next Article *ಇತರರನ್ನು ಕೊಡವ ಗುಂಪುಗಳನ್ನಾಗಿ ಪರಿವರ್ತಿಸಲು ಅಥವಾ ಮತಾಂತರಿಸಲು ಅಥವಾ ಧರ್ಮದೀಕ್ಷೆ ನೀಡಲು ‘ಕೊಡವಯಿಸಂ’ ಒಂದು ಮಿಷನರಿ ಧರ್ಮವಲ್ಲ*

Website design development company services in Mangalore

Forex Trading Teacher in India

Related Posts

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

ಬೆಂಗಳೂರು: ರಾಜ್ಯದ ಲಕ್ಷಾಂತರ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಭರ್ಜರಿ ಸಿಹಿಸುದ್ದಿ ನೀಡಿದೆ.…

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026

*ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*

February 13, 2026

*ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.