
ಮಡಿಕೇರಿ ಸೆ.30 NEWS DESK : ಪೆರಾಜೆ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ಬಿ.ಎಸ್.ಎನ್.ಎಲ್ ಟವರ್ ಕಾಮಗಾರಿಯು ಬಹುತೇಕ ಪೂರ್ಣಗೊಂಡಿದ್ದು, ಶೀಘ್ರದಲ್ಲೇ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಸಂಪರ್ಕ ಜಾಲವನ್ನು ಒದಗಿಸಲಾಗುತ್ತದೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಒಡೆಯರ್ ತಿಳಿಸಿದ್ದಾರೆ. ಇನ್ನೂ ಕೇವಲ ಸೋಲಾರ್ ಪ್ಯಾನೆಲ್ ಅಳವಡಿಕೆ ಮತ್ತು ತಾಂತ್ರಿಕ ಪ್ರಕ್ರಿಯೆಗಳು ಬಾಕಿ ಇರುವುದಾಗಿ ಅಧಿಕಾರಿಗಳು ವರದಿ ನೀಡಿರುವುದಾಗಿ ಯದುವೀರ್ ಒಡೆಯರ್ ಹೇಳಿದರು.









