Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಗ್ಗುಲ ಶ್ರೀ ಶನೇಶ್ವರ ಮತ್ತು ನವಗ್ರಹ ದೇವಾಲಯದಲ್ಲಿ ಶ್ರಾವಣ ಮಾಸದ ವಿಶೇಷ ಪೂಜೆ*
  • *ಕೊಡ್ಲಿಪೇಟೆಯಲ್ಲಿ ಶರಣ ಸಾಹಿತ್ಯ ಕಾರ್ಯಕ್ರಮಕ್ಕೆ ಚಾಲನೆ : ಮಕ್ಕಳ ಸಾತ್ವಿಕ ಬದುಕಿಗೆ ವಚನಗಳು ದಾರಿದೀಪ : ಅಭಿನವಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ ಅಭಿಮತ*
  • *ಬೆಟ್ಟಗೇರಿ ಉದಯ ಪ್ರೌಢಶಾಲೆಯ ಹಳೆಯ ವಿದ್ಯಾರ್ಥಿಗಳು ಹಾಗೂ ಪೋಷಕರ ಸಭೆ*
  • *ಓದುವ ಹವ್ಯಾಸದೊಂದಿಗೆ ಜ್ಞಾನ ವೃದ್ಧಿಸುವಲ್ಲಿ ಗ್ರಂಥಾಲಯದ ಪಾತ್ರ ಅಪಾರ : ಡಾ. ಕೆ.ಜಿ.ವೀಣಾ*
  • *ವಿದ್ಯುತ್ ಗ್ರಾಹಕರ ಕುಂದುಕೊರತೆ ನಿವಾರಣಾ ವೇದಿಕೆಗೆ ಸದಸ್ಯರ ನೇಮಕ*
  • *ಮಾದರಿ ಅಂಗನವಾಡಿ ರೂಪಿಸುವಲ್ಲಿ ಬಾಲ ವಿಕಾಸ ಸಮಿತಿ ಹೊಣೆಗಾರಿಕೆ: ಸವಿತಾ ಕೀರ್ತನ್*
  • *ಮಡಿಕೇರಿ : ಅಂಗನವಾಡಿಯಲ್ಲಿ ಆರೋಗ್ಯ ತಪಾಸಣೆ*
  • *ಮಡಿಕೇರಿ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಏಡ್ಸ್ ಕುರಿತು ಜಾಗೃತಿ ಕಾರ್ಯಕ್ರಮ*
  • *ತಲಕಾವೇರಿಗೆ ಮಾಜಿ ಸಚಿವ ಎಸ್.ಸುರೇಶ್‌ ಕುಮಾರ್‌ ಭೇಟಿ : ವಿಶೇಷ ಪೂಜೆ ಸಲ್ಲಿಕೆ*
  • *ಆನೆ-ಮಾನವ ಸಂಘರ್ಷಕ್ಕೆ ಅರಿವೇ ಶಾಶ್ವತ ಪರಿಹಾರ: ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಅನುದಾನ ಮತ್ತು ಅಭಿವೃದ್ಧಿ ಕುರಿತು ಕಾಂಗ್ರೆಸ್ಸಿಗರಿಂದ ಕಟ್ಟುಕಥೆ : ವಿರಾಜಪೇಟೆ ಬಿಜೆಪಿ ಟೀಕೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಅನುದಾನ ಮತ್ತು ಅಭಿವೃದ್ಧಿ ಕುರಿತು ಕಾಂಗ್ರೆಸ್ಸಿಗರಿಂದ ಕಟ್ಟುಕಥೆ : ವಿರಾಜಪೇಟೆ ಬಿಜೆಪಿ ಟೀಕೆ*

ಸೆಪ್ಟೆಂಬರ್ 30, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಸೆ.30 : ರಸ್ತೆ ಅವ್ಯವಸ್ಥೆ ವಿರುದ್ಧ ಬಿಜೆಪಿ ನಡೆಸಿದ ಪ್ರತಿಭಟನೆಯಿಂದ ಮುಜುಗರಗೊಂಡಿರುವ ಕಾಂಗ್ರೆಸ್ಸಿಗರು ಜನರ ಹಾದಿ ತಪ್ಪಿಸುವುದಕ್ಕಾಗಿ ಅನುದಾನ ಮತ್ತು ಅಭಿವೃದ್ಧಿಯ ವಿಚಾರದಲ್ಲಿ ಕಟ್ಟುಕಥೆ ಹೇಳುತ್ತಿದ್ದಾರೆ. ಕಳೆದ 2 ವರ್ಷಗಳಲ್ಲಿ 1266 ಕೋಟಿ ರೂ. ಅನುದಾನ ಬಂದಿದ್ದರೆ ಅಭಿವೃದ್ಧಿ ಕಾರ್ಯಗಳನ್ನು ಸಾಕ್ಷೀಕರಿಸಲಿ ಎಂದು ವಿರಾಜಪೇಟೆ ಬಿಜೆಪಿ ಮಂಡಲದ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಆಗ್ರಹಿಸಿದ್ದಾರೆ
ಪತ್ರಿಕಾ ಪ್ರಕಟಣೆ ನೀಡಿರುವ ಅವರು ಅಭಿವೃದ್ಧಿ ಕಾರ್ಯಗಳು ಕುಂಟಿತಗೊಂಡಾಗ ಮತ್ತು ಸರಕಾರ ಹಾದಿ ತಪ್ಪಿದಾಗ ಎಚ್ಚರಿಸುವ ಕಾರ್ಯವನ್ನು ವಿರೋಧ ಪಕ್ಷಗಳು ಮಾಡುತ್ತವೆ. ಪ್ರಸ್ತುತ ವಿರೋಧ ಪಕ್ಷದ ಸ್ಥಾನದಲ್ಲಿರುವ ಬಿಜೆಪಿ ಕೂಡ ಇದನ್ನೇ ಮಾಡುತ್ತಿದೆ. ಪ್ರತಿಭಟನೆಯನ್ನು ವಿರೋಧಿಸುತ್ತಿರುವ ಕಾಂಗ್ರೆಸ್ ಪ್ರತಿನಿಧಿಗಳು ತಮ್ಮ ಜವಾಬ್ದಾರಿಯನ್ನು ಮರೆತು ಜನರ ಹಿತವನ್ನು ಕಡೆಗಣಿಸಿದ್ದಾರೆ. ಕಳೆದ ಎರಡು ವರ್ಷಗಳಿಂದ ಸಮರ್ಪಕವಾಗಿ ರಸ್ತೆಯನ್ನು ಅಭಿವೃದ್ಧಿ ಪಡಿಸದ ಜನಪ್ರತಿನಿಧಿಗಳು ಈಗ ಮಳೆಯ ನೆಪವೊಡ್ಡಿ ಕಾಲಹರಣ ಮಾಡುತ್ತಿರುವುದು ಹಾಸ್ಯಾಸ್ಪದ ಎಂದು ಟೀಕಿಸಿದ್ದಾರೆ. 1266 ಕೋಟಿ ರೂ. ಅನುದಾನ ತಂದಿರುವುದಾಗಿ ಕಾಗದದ ಮೂಲಕ ತೋರಿಸುತ್ತಿರುವವರು ಈ ಅನುದಾನದಿಂದ ನಡೆದಿರುವ ಅಭಿವೃದ್ಧಿ ಕಾರ್ಯಗಳ ಕುರಿತು ದಾಖಲೆಯನ್ನು ಜನರ ಮುಂದಿಡಲಿ ಎಂದು ಸವಾಲು ಹಾಕಿದ್ದಾರೆ. ಕಿರುಗೂರು ಗ್ರಾಮದ ಗುಮ್ಮತ್ ಮಾಡ್ ರಸ್ತೆಯ ಅಭಿವೃದ್ಧಿಗೆ 30 ರಿಂದ 40 ಲಕ್ಷ ರೂ. ಅನುದಾನ ಬಂದಿದೆ ಎಂದು ಕಳೆದ ಎರಡು ವರ್ಷಗಳಿಂದ ಕಾಂಗ್ರೆಸ್ಸಿಗರು ಪ್ರಚಾರ ಗಿಟ್ಟಿಸಿಕೊಂಡೇ ಬಂದಿದ್ದಾರೆ. ಆದರೆ ಇಲ್ಲಿಯವರೆಗೆ ರಸ್ತೆ ಕಾಮಗಾರಿ ಆರಂಭಗೊಂಡಿಲ್ಲ. ಕ್ರಿಯಾ ಯೋಜನೆಯನ್ನು ಒಂದು ಇಲಾಖೆಯಲ್ಲಿ ಮಾಡಿ ಅದನ್ನು ಕಾರ್ಯರೂಪಕ್ಕೆ ತಾರದೆ ಕಾಮಗಾರಿಯನ್ನು ಮತ್ತೊಂದು ಇಲಾಖೆಗೆ ವರ್ಗಾಯಿಸಿ ಸಮಯ ವ್ಯರ್ಥ ಮಾಡಲಾಗುತ್ತಿದೆ. ಹೀಗೆಯೇ ಅನೇಕ ರಸ್ತೆಗಳ ಪರಿಸ್ಥಿತಿ ಆಗಿದೆ. ಗುತ್ತಿಗೆದಾರರಿಗೆ ಹಿಂದೆ ನಡೆದಿರುವ ಕಾಮಗಾರಿಗಳ ಹಣವನ್ನೇ ಬಿಡುಗಡೆ ಮಾಡಿಲ್ಲ ಮತ್ತು ರಸ್ತೆ ಅಭಿವೃದ್ಧಿಯ ವಿಚಾರದಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎನ್ನುವ ಬಗ್ಗೆ ರಾಜ್ಯ ಮಟ್ಟದಲ್ಲಿ ದೂರಿದೆ ಎಂದು ರಾಕೇಶ್ ದೇವಯ್ಯ ಆರೋಪಿಸಿದ್ದಾರೆ. ಬಾಕಿ ಹಣ ನೀಡದೆ ಇರುವುದರಿಂದ ರಸ್ತೆ ಕಾಮಗಾರಿ ನಡೆಯುತ್ತಿಲ್ಲ ಎನ್ನುವ ಸಂಶಯವಿದೆ. ಮಳೆಯ ನೆಪವೊಡ್ಡಿ ರಸ್ತೆಗಳನ್ನು ಅಭಿವೃದ್ಧಿ ಪಡಿಸದೆ ಇರುವುದು ಸರಿಯಾದ ಕ್ರಮವಲ್ಲ. ಕಳೆದ ಎರಡು ವರ್ಷಗಳಿಂದ ಜಿಲ್ಲೆಯಲ್ಲಿ ಬಿಸಿಲೇ ಬರಲಿಲ್ಲವೇ ಎಂದು ಪ್ರಶ್ನಿಸಿರುವ ಅವರು ಸಾಧಾರಣ ಮಳೆಯಾಗುತ್ತಿರುವುದರಿಂದ ಕಾಂಕ್ರಿಟ್ ರಸ್ತೆಗಳ ಕಾಮಗಾರಿಯನ್ನಾದರೂ ಆರಂಭಿಸಿ ಜನರ ಮೇಲಿನ ಆಸಕ್ತಿಯನ್ನು ಸಾಬೀತು ಪಡಿಸಲಿ ಎಂದು ಒತ್ತಾಯಿಸಿದ್ದಾರೆ. *ಬೆಳೆಹಾನಿ ಪರಿಹಾರ ನೀಡಲಿ* ಕೊಡಗಿನಲ್ಲಿ ಅಭಿವೃದ್ಧಿ ಕಾರ್ಯಗಳು ಕುಂಟಿತಗೊಂಡಿರುವುದಲ್ಲದೆ ಬೆಳೆಗಾರರ ಸಮಸ್ಯೆಗಳಿಗೆ ರೈತ ವಿರೋಧಿ ರಾಜ್ಯ ಸರಕಾರದಿಂದ ಯಾವುದೇ ಸ್ಪಂದನೆ ದೊರೆಯುತ್ತಿಲ್ಲ. ಅತಿ ಮಳೆಯಿಂದ ಕಾಫಿ ಬೆಳೆ ನೆಲ ಕಚ್ಚಿದೆ, ಕಳೆದ 2 ವರ್ಷಗಳಿಂದ ಬೆಳೆಗಾರರಿಗೆ ಪರಿಹಾರವನ್ನೇ ನೀಡಿಲ್ಲ. ಬಿಜೆಪಿ ಸರಕಾರದ ಅವಧಿಯಲ್ಲಿ ವಾರ್ಷಿಕ ಒಬ್ಬ ರೈತನಿಗೆ 56 ಸಾವಿರ ರೂ. ವರೆಗೂ ಪರಿಹಾರ ನೀಡಿದೆ. ವಿರೋಧ ಪಕ್ಷದಲ್ಲಿರುವ ಬಿಜೆಪಿ ತನ್ನ ಜವಾಬ್ದಾರಿಯನ್ನು ಅರಿತು ಕಾಂಗ್ರೆಸ್ ಸರಕಾರದ ವೈಫಲ್ಯಗಳನ್ನು ಜನರ ಮುಂದಿಡುವ ಸಲುವಾಗಿ ನಿರಂತರ ಪ್ರತಿಭಟನೆಗಳನ್ನು ನಡೆಸುತ್ತಾ ಬರುತ್ತಿದೆ. ಇದರಿಂದ ವಿಚಲಿತಗೊಂಡಿರುವ ಕಾಂಗ್ರೆಸ್ಸಿಗರು ಕಳೆದ 20 ವರ್ಷಗಳ ಕಟ್ಟು ಕಥೆಯನ್ನು ಹೇಳಿ ಜನರ ಹಾದಿ ತಪ್ಪಿಸುತ್ತಿದ್ದಾರೆ ಎಂದು ರಾಕೇಶ್ ದೇವಯ್ಯ ಆರೋಪಿಸಿದ್ದಾರೆ.
ಬಿಜೆಪಿ ಮುಖಂಡರ ಮಾಹಿತಿ ನಮ್ಮ ಬಳಿ ಇದೆ ಎಂದು ಹೇಳಿಕೊಳ್ಳುತ್ತಿರುವವರು ಅದನ್ನು ಬಹಿರಂಗಪಡಿಸಲಿ ಎಂದು ಸವಾಲು ಹಾಕಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಗ್ಗುಲ ಶ್ರೀ ಶನೇಶ್ವರ ಮತ್ತು ನವಗ್ರಹ ದೇವಾಲಯದಲ್ಲಿ ಶ್ರಾವಣ ಮಾಸದ ವಿಶೇಷ ಪೂಜೆ*

ಆಗಷ್ಟ್ 12, 2026

*ಕೊಡ್ಲಿಪೇಟೆಯಲ್ಲಿ ಶರಣ ಸಾಹಿತ್ಯ ಕಾರ್ಯಕ್ರಮಕ್ಕೆ ಚಾಲನೆ : ಮಕ್ಕಳ ಸಾತ್ವಿಕ ಬದುಕಿಗೆ ವಚನಗಳು ದಾರಿದೀಪ : ಅಭಿನವಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ ಅಭಿಮತ*

ಆಗಷ್ಟ್ 12, 2026

*ಬೆಟ್ಟಗೇರಿ ಉದಯ ಪ್ರೌಢಶಾಲೆಯ ಹಳೆಯ ವಿದ್ಯಾರ್ಥಿಗಳು ಹಾಗೂ ಪೋಷಕರ ಸಭೆ*

ಆಗಷ್ಟ್ 12, 2026

*ಕೊಡ್ಲಿಪೇಟೆಯಲ್ಲಿ ಶರಣ ಸಾಹಿತ್ಯ ಕಾರ್ಯಕ್ರಮಕ್ಕೆ ಚಾಲನೆ : ಮಕ್ಕಳ ಸಾತ್ವಿಕ ಬದುಕಿಗೆ ವಚನಗಳು ದಾರಿದೀಪ : ಅಭಿನವಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ ಅಭಿಮತ*

ಆಗಷ್ಟ್ 12, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕೊಡ್ಲಿಪೇಟೆ ಆ.12 NEWS DESK : ಇಂದಿನ ವಿದ್ಯಾರ್ಥಿಗಳನ್ನು ಸಾತ್ವಿಕರಾಗಿ ಹಾಗೂ ಸಂಸ್ಕಾರವಂತರಾಗಿ ಬೆಳೆಸಬೇಕಾದ ತುರ್ತು ಅಗತ್ಯ ಇದೆ. ಸಾತ್ವಿಕ…

*ಬೆಟ್ಟಗೇರಿ ಉದಯ ಪ್ರೌಢಶಾಲೆಯ ಹಳೆಯ ವಿದ್ಯಾರ್ಥಿಗಳು ಹಾಗೂ ಪೋಷಕರ ಸಭೆ*

ಆಗಷ್ಟ್ 12, 2026

*ಓದುವ ಹವ್ಯಾಸದೊಂದಿಗೆ ಜ್ಞಾನ ವೃದ್ಧಿಸುವಲ್ಲಿ ಗ್ರಂಥಾಲಯದ ಪಾತ್ರ ಅಪಾರ : ಡಾ. ಕೆ.ಜಿ.ವೀಣಾ*

ಆಗಷ್ಟ್ 12, 2026

*ವಿದ್ಯುತ್ ಗ್ರಾಹಕರ ಕುಂದುಕೊರತೆ ನಿವಾರಣಾ ವೇದಿಕೆಗೆ ಸದಸ್ಯರ ನೇಮಕ*

ಆಗಷ್ಟ್ 12, 2026

*ಮಾದರಿ ಅಂಗನವಾಡಿ ರೂಪಿಸುವಲ್ಲಿ ಬಾಲ ವಿಕಾಸ ಸಮಿತಿ ಹೊಣೆಗಾರಿಕೆ: ಸವಿತಾ ಕೀರ್ತನ್*

ಆಗಷ್ಟ್ 12, 2026

*ಮಡಿಕೇರಿ : ಅಂಗನವಾಡಿಯಲ್ಲಿ ಆರೋಗ್ಯ ತಪಾಸಣೆ*

ಆಗಷ್ಟ್ 12, 2026

*ಮಡಿಕೇರಿ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಏಡ್ಸ್ ಕುರಿತು ಜಾಗೃತಿ ಕಾರ್ಯಕ್ರಮ*

ಆಗಷ್ಟ್ 12, 2026

*ತಲಕಾವೇರಿಗೆ ಮಾಜಿ ಸಚಿವ ಎಸ್.ಸುರೇಶ್‌ ಕುಮಾರ್‌ ಭೇಟಿ : ವಿಶೇಷ ಪೂಜೆ ಸಲ್ಲಿಕೆ*

ಆಗಷ್ಟ್ 12, 2026

*ಆನೆ-ಮಾನವ ಸಂಘರ್ಷಕ್ಕೆ ಅರಿವೇ ಶಾಶ್ವತ ಪರಿಹಾರ: ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ*

ಆಗಷ್ಟ್ 12, 2026

*ಭಾಗಮಂಡಲದಲ್ಲಿ ಶ್ರದ್ಧಾಭಕ್ತಿಯಿಂದ ನಡೆದ “ಪೊಲಿಂಕಾನ ಉತ್ಸವ”*

ಆಗಷ್ಟ್ 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.