Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ರಾತ್ರಿ 10ರಿಂದ ಬೆಳಗ್ಗೆ 6ರವರೆಗೆ ಡಿಜೆ, ಧ್ವನಿವರ್ಧಕ ಬಳಕೆಗೆ ನಿರ್ಬಂಧ : 5 ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ 1 ಲಕ್ಷ ರೂ.ವರೆಗೆ ದಂಡ : ಕೊಡಗು ಜಿಲ್ಲಾ ಪೊಲೀಸ್‌ ಎಚ್ಚರಿಕೆ*
  • *ಮೂರ್ನಾಡಿನಲ್ಲಿ 102ನೇ ವಾರ್ಷಿಕ ಕೈಲ್ ಪೊಳ್ದ್ ಆಚರಣೆ : ವಿವಿಧ ಆಟೋಟಗಳು*
  • *ಸೆ.5 ರಂದು ಶಿಕ್ಷಕರ ದಿನಾಚರಣೆ*
  • *ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*
  • *ಟೈಲರಿಂಗ್ ಯಂತ್ರೋಪಕರಣ ವಿತರಣೆ*
  • *ಹೊನ್ನಮ್ಮನ ಕೆರೆ ಆವರಣದಲ್ಲಿ ಸ್ವಚ್ಛತಾ ಶ್ರಮದಾನ*
  • *ಪೊಲೀಸ್ ಪೇದೆ ಹುದ್ದೆ :  ನೇರ ನೇಮಕಾತಿ ಪರೀಕ್ಷೆ ಸುಸೂತ್ರವಾಗಿ ನಡೆಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*   
  • *31 ನೇ ವರ್ಷದ ಕೈಲ್ ಪೊವ್ದ್ ನ್ನು ಸಂಭ್ರಮದಿಂದ ಆಚರಿಸಿದ CNC*
  • *ಮಡಿಕೇರಿಯಲ್ಲಿ ಬೀದಿನಾಯಿ ಉಪಟಳ ತಡೆಗೆ ಕ್ರಮ*
  • *ಕೊಡಗು ವಿದ್ಯಾಲಯದಲ್ಲಿ ಈದ್ ಮಿಲಾದ್ ಆಚರಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ : ಇಲಾಖೆಗಳಿಂದ ಉತ್ತಮ ಪ್ರಗತಿ : ಮಂದ್ರೀರ ಮೋಹನ್ ದಾಸ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ : ಇಲಾಖೆಗಳಿಂದ ಉತ್ತಮ ಪ್ರಗತಿ : ಮಂದ್ರೀರ ಮೋಹನ್ ದಾಸ್*

ಅಕ್ಟೋಬರ್ 3, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಅ.3 : ಮಡಿಕೇರಿ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಂ.ಜಿ.ಮೋಹನ್ ದಾಸ್ ಅವರ ಅಧ್ಯಕ್ಷತೆಯಲ್ಲಿ ಹಾಗೂ ಸಮಿತಿ ಸದಸ್ಯರ ಉಪಸ್ಥಿತಿಯಲ್ಲಿ ಸಭೆ ನಡೆಯಿತು. ಅಧ್ಯಕ್ಷರಾದ ಎಂ.ಜಿ.ಮೋಹನ್ ದಾಸ್ ಅವರು ಮಾತನಾಡಿ ಮಡಿಕೇರಿ ತಾಲ್ಲೂಕಿನಲ್ಲಿ 5 ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ಅನುಷ್ಠಾನ ಇಲಾಖೆಗಳು ಉತ್ತಮ ಪ್ರಗತಿಯನ್ನು ಸಾಧಿಸಿದೆ. ಮುಂದಿನ ದಿನಗಳಲ್ಲಿಯೂ ಸಹ ಸಮಿತಿಯ ಎಲ್ಲಾ ಸದಸ್ಯರು ಹಾಗೂ ಅಧಿಕಾರಿ ವರ್ಗದವರು ಸರ್ಕಾರದ ಮಹಾತ್ವಾಕಾಂಕ್ಷಿ 5 ಗ್ಯಾರಂಟಿ ಯೋಜನೆಯನ್ನು ಎಲ್ಲಾ ಅರ್ಹ ಫಲಾನುಭವಿಗಳಿಗೆ ದೊರೆಯುವಂತೆ ಮಾಡಲು ಶ್ರಮಿಸಬೇಕು ಹಾಗೂ ಗ್ಯಾರಂಟಿ ಯೋಜನೆಗೆ ಸಂಬAಧಿಸಿದAತೆ ಗ್ರಾಮಪಂಚಾಯತಿ ಮಟ್ಟದಲ್ಲಿ ಫಲಾನುಭವಿಗಳ ಕುಂದುಕೊರತೆ ಸಭೆಯನ್ನು ಮಾಡಬೇಕು ಎಂದು ಸಭೆಯಲ್ಲಿ ತಿಳಿಸಿದರು. ಗೃಹಲಕ್ಷ್ಮಿ ಯೋಜನೆ:-ಶಿಶುಅಭಿವೃದ್ದಿ ಅಧಿಕಾರಿ ಅವರು ಮಾತನಾಡಿ ಮಡಿಕೇರಿ ತಾಲ್ಲೂಕಿನಲ್ಲಿ ಜೂನ್ ಮಾಹೆಯ ಅಂತ್ಯಕ್ಕೆ ಹಣ ಮಂಜೂರಾಗಿರುವ ಒಟ್ಟು ಫಲಾನುಭವಿಗಳ ಸಂಖ್ಯೆ 30,307, ಪಾವತಿಯಾದ ಒಟ್ಟು ಮೊತ್ತ ಜೂನ್ ಮಾಹೆಯ ಅಂತ್ಯಕ್ಕೆ 6,06,14,000 ರೂ. NPCI,e-KYC ಮಾಡಿಸಲು ಬಾಕಿ ಉಳಿದಿರುವ ಫಲಾನುಭವಿಗಳ ಸಂಖ್ಯೆ 166 ,ಐಟಿ, ಜಿಎಸ್ ಟಿ ಪಾವತಿದಾರರು ಎಂದು ತಿರಸ್ಕೃತಗೊಂಡ ಫಲಾನುಭವಿಗಳ ಸಂಖ್ಯೆ 784 ಹಾಗೂ ಪ್ರಧಾನ ಕಚೇರಿಯಿಂದ ಫೆಬ್ರವರಿ-2025 ಹಾಗೂ ಮಾರ್ಚ್ -2025ರ ಮಾಹೆಯ ಹಣ ಪಾವತಿಯಾಗಲು ಬಾಕಿ ಇರುತ್ತದೆ ಎಂದು ಸಭೆಗೆ ಮಾಹಿತಿ ನೀಡಿದರು. ಶಕ್ತಿಯೋಜನೆ: ಶಕ್ತಿ ಯೋಜನೆಯಲ್ಲಿ ಸೆಪ್ಟೆಂಬರ್ ತಿಂಗಳಿನಲ್ಲಿ ಒಟ್ಟು 1,31,74,648 ವಯಸ್ಕ ಮಹಿಳಾ ಪ್ರಯಾಣಿಕರು ಮತ್ತು 3,05,132 ಹೆಣ್ಣು ಮಕ್ಕಳು ಹಾಗೂ ಶಾಲಾ ಕಾಲೇಜು ವಿದ್ಯಾರ್ಥಿನಿಯರು ಒಟ್ಟಾರೆ 1,34,79,780 ಜನ ಮಹಿಳಾ ಪ್ರಯಾಣಿಕರು ಸಂಸ್ಥೆಯ ವಾಹನದಲ್ಲಿ ಪ್ರಯಾಣಿಸಿ ಈ ಯೋಜನೆ ಪಡೆದುಕೊಂಡಿರುತ್ತಾರೆ ಎಂದರು. ಸರಾಸರಿ 15,934 ಪ್ರಯಾಣಿಕರು ಒಂದು ದಿನಕ್ಕೆ ಸಂಸ್ಥೆಯ ವಾಹನದಲ್ಲಿ ಪ್ರಯಾಣಿಸಿರುತ್ತಾರೆ, ಮುಂದುವರೆದು ಒಟ್ಟು ಮೊತ್ತ 56,97,27,802 ರೂ. ಸಂಸ್ಥೆಗೆ ಆದಾಯ ಬಂದಿರುತ್ತದೆ. ಸರಾಸರಿ ಒಂದು ದಿನದ ಆದಾಯ ರೂ.6,73,437 ಆಗಿರುತ್ತದೆ ಎಂದು ಸಭೆಗೆ ಮಾಹಿತಿ ನೀಡಿದರು. ಯುವನಿಧಿ: ಇಲಾಖಾಧಿಕಾರಿಯವರು ಮಾತನಾಡಿ 2023-2024ರಲ್ಲಿ ಪದವಿ ಮತ್ತು ಡಿಪ್ಲೋಮಾ ಉತ್ತೀರ್ಣರಾಗಿ ಕನಿಷ್ಠ 6 ತಿಂಗಳ ಅವಧಿಯವರೆಗೆ ಸರ್ಕಾರಿ/ಖಾಸಗಿ ಉದ್ಯೋಗ ಹೊಂದಿಲ್ಲದವರು, ಸ್ವಯಂ ಉದ್ಯೋಗ ಹೊಂದಿಲ್ಲದವರು, ಉನ್ನತ ವಿದ್ಯಾಭ್ಯಾಸ ಮುಂದುವರಿಸದೇ ಇರುವವರು ಈ ಯೋಜನೆಗೆ ಅರ್ಹರಾಗಿರುತ್ತಾರೆ. ಅಲ್ಲದೆ ಈ ಯೋಜನೆಯ ಪ್ರಯೋಜನ ಮುಂದುವರಿಸಬೇಕಾಗಿದ್ದಲ್ಲಿ ಮೂರು ತಿಂಗಳಿಗೊಮ್ಮೆ ಸ್ವಯಂ ಘೋಷಣೆ ಮಾಡಿಕೊಳ್ಳಬೇಕು. ಯುವನಿಧಿ ಯೋಜನೆಯಲ್ಲಿ ಆಗಸ್ಟ್ ಮಾಹೆಯವರೆಗೆ 493 ಜನ ನೋಂದಣಿಯಾಗಿದ್ದು ಜುಲೈ ಮಾಹೆಯಲ್ಲಿ ನೋಂದಾಯಿತ ಫಲಾನುಭವಿಗಳಿಗೆ ರೂ.12,04,500 ಹಣ ಬಿಡುಗಡೆಯಾಗಿರುತ್ತದೆ ಎಂದು ಸಭೆಗೆ ಮಾಹಿತಿ ನೀಡಿದರು. ಗೃಹಜ್ಯೋತಿ ಯೋಜನೆ: ಇಲಾಖಾಧಿಕಾರಿಯವರು ಮಾತನಾಡಿ ಮಡಿಕೇರಿ ತಾಲ್ಲೂಕಿನಲ್ಲಿ 51918 ಅರ್ಹ ವಿದ್ಯುತ್ ಸ್ಥಾವರಗಳಿದ್ದು, ಗೃಹಜ್ಯೋತಿ ಯೋಜನೆಯಡಿ 51521 ನೋಂದಣಿಗೊಂಡ ಅರ್ಜಿಗಳಾಗಿದ್ದು, 397 ಬಾಕಿ ಇರುವ ಸ್ಥಾವರಗಳಿದ್ದು ಶೇ.99.23 ಶೇಕಡವಾರು ಪ್ರಗತಿಯಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು. ಅನ್ನಭಾಗ್ಯ: ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದಂತೆ ಮಡಿಕೇರಿ ತಾಲ್ಲೂಕಿನಲ್ಲಿ ಒಟ್ಟು 38,363 ಪಡಿತರ ಚೀಟಿ ಇದ್ದು 1,20,865 ಒಟ್ಟು ಫಲಾನುಭವಿಗಳಿರುತ್ತಾರೆ ಅದರಲ್ಲಿ 1973 ಎಎವೈ ಪಡಿತರ ಚೀಟಿ ಇದ್ದು 7897 ಎಎವೈ ಫಲಾನುಭವಿಗಳು ಇರುತ್ತಾರೆ. 22606 ಪಿ.ಹೆಚ್ ಹೆಚ್ ಪಡಿತರ ಚೀಟಿ ಇದ್ದು 73295 ಫಲಾನುಭವಿಗಳು,13784 ಎನ್ ಪಿ ಹೆಚ್ ಹೆಚ್ ಪಡಿತರ ಚೀಟಿ ಇದ್ದು 39673 ಫಲಾನುಭವಿಗಳಿದ್ದು, ಮಡಿಕೇರಿ ತಾಲ್ಲೂಕಿನಲ್ಲಿ ಪತ್ತೆ ಹಚ್ಚಿರುವ ಅನರ್ಹ ಫಲಾನುಭವಿಗಳ ಸಂಖ್ಯೆ 441 ಆಗಿರುತ್ತದೆ ಹಾಗೂ ಈ ಪಡಿತರ ಚೀಟಿದಾರರು, ಬಿಪಿಎಲ್/ಅಂತ್ಯೋದಯ ಪಡಿತರ ಚೀಟಿ ಪಡೆಯಲು ಅನರ್ಹರಾಗಿರುತ್ತಾರೆ ಎಂದು ಸಭೆಗೆ ತಿಳಿಸಿದರು. ಪಡಿತರ ಚೀಟಿಯಲ್ಲಿನ ಎಲ್ಲಾ ಸದಸ್ಯರು ಹೊಂದಿರುವ ಜಮೀನು ಸೇರಿಸಿದಾಗ 7 ಎಕರೆಗೂ ಹೆಚ್ಚು ಜಮೀನು ಇದ್ದಲ್ಲಿ ಅಂತಹವರು ಬಿ.ಪಿ.ಎಲ್/ಅಂತ್ಯೋದಯ ಪಡಿತರ ಚೀಟಿ ಹೊಂದಲು ಅನರ್ಹರು.
ಪಡಿತರ ಚೀಟಿಯ ಯಾವುದೇ ಸದಸ್ಯ 4 ಚಕ್ರ ವಾಹನ ಹೊಂದಿದ್ದಲ್ಲಿ ಅಂತಹವರು ಅಥವಾ ಅಂತಹ ವ್ಯಕ್ತಿಯ ಅವಲಂಬಿತ ಕುಟುಂಬ ಸದಸ್ಯರು ಬಿ.ಪಿ.ಎಲ್/ ಅಂತ್ಯೋದಯ ಪಡಿತರ ಚೀಟಿ ಹೊಂದಲು ಅನರ್ಹರು.
ಜಿ.ಎಸ್.ಟಿ ಅಥವಾ ಆದಾಯ ತೆರಿಗೆ ಪಾವತಿಸುತ್ತಿರುವ ಯಾವುದೇ ವ್ಯಕ್ತಿ ಅಥವಾ ಅಂತಹ ವ್ಯಕ್ತಿಯ ಅವಲಂಬಿತ ಕುಟುಂಬ ಸದಸ್ಯರು ಬಿ.ಪಿ.ಎಲ್/ಅಂತ್ಯೋದಯ ಪಡಿತರ ಚೀಟಿ ಹೊಂದಲು ಅನರ್ಹರು.
ಸರ್ಕಾರಿ ನೌಕರಿ ಮಾಡುತ್ತಿರುವ ಯಾವುದೇ ವ್ಯಕ್ತಿ ಅಥವಾ ಅಂತಹ ವ್ಯಕ್ತಿಯ ಅವಲಂಬಿತ ಕುಟುಂಬ ಸದಸ್ಯರು ಬಿ.ಪಿ.ಎಲ್/ಅಂತ್ಯೋದಯ ಪಡಿತರ ಚೀಟಿ ಹೊಂದಲು ಅನರ್ಹರು. ಹಕಾರಿ ಸಂಘಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಖಾಯಂ ಸಿಬ್ಬಂಧಿ ಅಥವಾ ಅಂತಹ ವ್ಯಕ್ತಿಯ ಅವಲಂಬಿತ ಕುಟುಂಬ ಸದಸ್ಯರು ಬಿ.ಪಿ.ಎಲ್/ಅಂತ್ಯೋದಯ ಪಡಿತರ ಚೀಟಿ ಹೊಂದಲು ಅನರ್ಹರು. ವೃತ್ತಿಪರ ನೌಕರರು ವೈದ್ಯರು, ಎಂಜಿನಿಯರ್, ವಕೀಲರು, ಇತರರು ಅಥವಾ ಅಂತಹ ವ್ಯಕ್ತಿಯ ಅವಲಂಬಿತ ಕುಟುಂಬ ಸದಸ್ಯರು (ತಂದೆ/ ತಾಯಿ/ ಹೆಂಡತಿ/ ಅವಿವಾಹಿತ ಮಕ್ಕಳು” ಬಿ.ಪಿ.ಎಲ್/ಅಂತ್ಯೋದಯ ಪಡಿತರ ಚೀಟಿ ಹೊಂದಲು ಅನರ್ಹರು.
ನೋಂದಾಯಿತ ಗುತ್ತಿಗೆದಾರರು, ಎಪಿಎಂಸಿ ಟ್ರೇಡರ್‌ಗಳು, ಕಮಿಷನ್ ಏಜಂಟರು, ಬೀಜ ಮತ ಗೊಬ್ಬರ ಡೀಲರ್ಗಳು ಇತ್ಯಾದಿ ಅಥವಾ ಅಂತಹ ವ್ಯಕ್ತಿಯ ಅವಲಂಬಿತ ಕುಟುಂಬ ಸದಸ್ಯರ ಅವಲಂಬಿತ ಕುಟುಂಬ ಸದಸ್ಯರು, ಸರ್ಕಾರಿ ಸ್ವಾಮ್ಯದ ಉದ್ಯಮಗಳು/ ಮಂಡಳಿಗಳು /ನಿಗಮಗಳ ಖಾಯಂ ನೌಕರರು, ಸ್ವಾಯ ಸಂಸ್ಥೆ/ ಮಂಡಳಿಯ ನೌಕರರು ಅಥವಾ ಅಂತಹ ವ್ಯಕ್ತಿಯ ಅವಲಂಬಿತ ಕುಟುಂಬ ಸದಸ್ಯರು ಬಿ.ಪಿ.ಎಲ್/ಅಂತ್ಯೋದಯ ಪಡಿತರ ಚೀಟಿ ಹೊಂದಲು ಅನರ್ಹರು ಎಂದು ಸಭೆಗೆ ಮಾಹಿತಿ ನೀಡಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ರಾತ್ರಿ 10ರಿಂದ ಬೆಳಗ್ಗೆ 6ರವರೆಗೆ ಡಿಜೆ, ಧ್ವನಿವರ್ಧಕ ಬಳಕೆಗೆ ನಿರ್ಬಂಧ : 5 ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ 1 ಲಕ್ಷ ರೂ.ವರೆಗೆ ದಂಡ : ಕೊಡಗು ಜಿಲ್ಲಾ ಪೊಲೀಸ್‌ ಎಚ್ಚರಿಕೆ*

ಸೆಪ್ಟೆಂಬರ್ 2, 2026

*ಮೂರ್ನಾಡಿನಲ್ಲಿ 102ನೇ ವಾರ್ಷಿಕ ಕೈಲ್ ಪೊಳ್ದ್ ಆಚರಣೆ : ವಿವಿಧ ಆಟೋಟಗಳು*

ಸೆಪ್ಟೆಂಬರ್ 1, 2026

*ಸೆ.5 ರಂದು ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 1, 2026

*ಮೂರ್ನಾಡಿನಲ್ಲಿ 102ನೇ ವಾರ್ಷಿಕ ಕೈಲ್ ಪೊಳ್ದ್ ಆಚರಣೆ : ವಿವಿಧ ಆಟೋಟಗಳು*

ಸೆಪ್ಟೆಂಬರ್ 1, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮೂರ್ನಾಡು ಸೆ.1 NEWS DESK : ಮೂರ್ನಾಡು ಸಹಕಾರ ಸ್ಪೋರ್ಟ್ಸ್ ಕ್ಲಬ್ ವತಿಯಿಂದ 102ನೇ ವಾರ್ಷಿಕ  ಕೈಲ್ ಪೊಳ್ದ್  ಹಬ್ಬದ…

*ಸೆ.5 ರಂದು ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 1, 2026

*ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*

ಸೆಪ್ಟೆಂಬರ್ 1, 2026

*ಟೈಲರಿಂಗ್ ಯಂತ್ರೋಪಕರಣ ವಿತರಣೆ*

ಸೆಪ್ಟೆಂಬರ್ 1, 2026

*ಹೊನ್ನಮ್ಮನ ಕೆರೆ ಆವರಣದಲ್ಲಿ ಸ್ವಚ್ಛತಾ ಶ್ರಮದಾನ*

ಸೆಪ್ಟೆಂಬರ್ 1, 2026

*ಪೊಲೀಸ್ ಪೇದೆ ಹುದ್ದೆ :  ನೇರ ನೇಮಕಾತಿ ಪರೀಕ್ಷೆ ಸುಸೂತ್ರವಾಗಿ ನಡೆಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*   

ಸೆಪ್ಟೆಂಬರ್ 1, 2026

*31 ನೇ ವರ್ಷದ ಕೈಲ್ ಪೊವ್ದ್ ನ್ನು ಸಂಭ್ರಮದಿಂದ ಆಚರಿಸಿದ CNC*

ಸೆಪ್ಟೆಂಬರ್ 1, 2026

*ಮಡಿಕೇರಿಯಲ್ಲಿ ಬೀದಿನಾಯಿ ಉಪಟಳ ತಡೆಗೆ ಕ್ರಮ*

ಸೆಪ್ಟೆಂಬರ್ 1, 2026

*ಕೊಡಗು ವಿದ್ಯಾಲಯದಲ್ಲಿ ಈದ್ ಮಿಲಾದ್ ಆಚರಣೆ*

ಸೆಪ್ಟೆಂಬರ್ 1, 2026

*ಸುಂಟಿಕೊಪ್ಪ : ಯುವಶಕ್ತಿ ದಾರಿ ತಪ್ಪದಂತೆ ಸಮಾಜ ಬೆನ್ನೆಲುಬಾಗಿ ನಿಲ್ಲಬೇಕು: ಬಿ.ಸಿ. ದಿನೇಶ್*

ಸೆಪ್ಟೆಂಬರ್ 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.