Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಾ.15 ರಂದು ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*
  • *ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾಕ್ಕೆ ಪ್ರಾಮಾಣಿಕ ಯತ್ನ : ಮಡಿಕೇರಿ 7, ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಮಂಜೂರು : ಸಚಿವ ಈಶ್ವರ ಖಂಡ್ರೆ*
  • *ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*
  • *ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*
  • *ಮಾಯಮುಡಿ ಗ್ರಾ.ಪಂ ಆಡಳಿತಾಧಿಕಾರಿಯಾಗಿ ಪಿ.ಪಿ.ಕವಿತಾ ಅಧಿಕಾರ ಸ್ವೀಕಾರ*
  • *ಜವಾಬ್ದಾರಿ ನಿಭಾಯಿಸಲು ಸಾಧ್ಯವಾಗದಿದ್ದಲ್ಲಿ ಅರಣ್ಯ ಸಚಿವರು ರಾಜೀನಾಮೆ ನೀಡಲಿ : ವಿರಾಜಪೇಟೆ ಬಿಜೆಪಿ ಒತ್ತಾಯ*
  • *ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ : ಕಾಡಾನೆ ಸೆರೆಗೆ ಶಾಸಕರ ಸೂಚನೆ*
  • *ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*
  • *ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*
  • *ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿ ದಸರಾ ಜನೋತ್ಸವಕ್ಕೆ ವೈಭವದ ತೆರೆ : ದಶಮಂಟಪಗಳ ಶೋಭಾಯಾತ್ರೆಗೆ ಸಾಕ್ಷಿಯಾದ ಸಾವಿರಾರು ಜನ : ಡಿಜೆ ಇಲ್ಲದೆ ನಿರಾಶೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿ ದಸರಾ ಜನೋತ್ಸವಕ್ಕೆ ವೈಭವದ ತೆರೆ : ದಶಮಂಟಪಗಳ ಶೋಭಾಯಾತ್ರೆಗೆ ಸಾಕ್ಷಿಯಾದ ಸಾವಿರಾರು ಜನ : ಡಿಜೆ ಇಲ್ಲದೆ ನಿರಾಶೆ*

ಅಕ್ಟೋಬರ್ 3, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಅ.3 : ದಶಮಂಟಪಗಳ ಆಕರ್ಷಕ ಶೋಭಾಯಾತ್ರೆಯೊಂದಿಗೆ ಮಡಿಕೇರಿ ದಸರಾ ಜನೋತ್ಸವಕ್ಕೆ ವೈಭವದ ತೆರೆ ಬಿದ್ದಿದೆ. ರಾಜ್ಯ ಮತ್ತು ಹೊರ ರಾಜ್ಯಗಳ ಸಾವಿರಾರು ಮಂದಿ ವಿದ್ಯುತ್ ಅಲಂಕೃತ ಬೃಹತ್ ಮಂಟಪಗಳ ಶೋಭಾಯಾತ್ರೆಗೆ ಸಾಕ್ಷಿಯಾದರು. ಆದರೆ ಡಿಜೆ ಶಬ್ಧಕ್ಕೆ ಪೊಲೀಸ್ ಇಲಾಖೆ ಕಡಿವಾಣ ಹಾಕಿದ್ದ ಕಾರಣ ನೆರೆದಿದ್ದ ಯುವ ಸಮೂಹ ನಿರಾಶೆ ವ್ಯಕ್ತಪಡಿಸಿತು. ಕಳೆದ 150 ವರ್ಷಗಳಿಂದ ನಾಡಹಬ್ಬ ಮಡಿಕೇರಿ ದಸರಾಕ್ಕೆ ಧಾರ್ಮಿಕ ಹಾಗೂ ಸಾಂಪ್ರದಾಯಿಕವಾಗಿ ಮೆರಗನ್ನು ನೀಡುತ್ತಿರುವ ಪೇಟೆ ಶ್ರೀರಾಮ ಮಂದಿರದ ಶ್ರೀ ಕೃಷ್ಣನಿಂದ ಗೀತೋಪದೇಶವಾಗುವ ಕಥಾ ಸಾರಾಂಶದ ಮಂಟಪ ನಗರ ಸಂಚಾರವನ್ನು ಆರಂಭಿಸಿದ ನಂತರ ಉಳಿದ ಮಂಟಪಗಳ ಶೋಭಾಯಾತ್ರೆಗೆ ಚಾಲನೆ ದೊರೆಯಿತು. ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾಗಿರುವ ಶ್ರೀ ಕೋಟೆ ಮಾರಿಯಮ್ಮ ದೇವಾಲಯ ದಸರಾ ಮಂಟಪ ಸಮಿತಿ 50ನೇ ವರ್ಷದ ಉತ್ಸವ ಆಚರಣೆಯ ಹಿನ್ನೆಲೆ ವಿಷ್ಣು ಪುರಾಣದಿಂದ ಆಯ್ದ ದೇವ-ದೇವತೆಗಳ ಕಾಳಗ, ಶರಬಾವತಾರ ಹಾಗೂ ಪ್ರತ್ಯುಂಗ ದೇವಿಯಿಂದ ನರಸಿಂಹನ ಉಗ್ರ ಶಮನದ ಕಥಾ ಸಾರಾಂಶವನ್ನು ಮಂಟಪದಲ್ಲಿ ಅಳವಡಿಸಿತ್ತು. ನಗರದ ಶ್ರೀ ಚೌಡೇಶ್ವರಿ ಬಾಲಕ ಭಕ್ತ ಮಂಡಳಿಯು ತನ್ನ 63ನೇ ವರ್ಷದ ದಸರಾ ಉತ್ಸವದ ಮಂಟಪದಲ್ಲಿ ಆನಂದ ರಾಮಾಯಣದಿಂದ ಆರಿಸಿದ ಮಹಾ ಸಾದ್ವಿ ಸೀತೆಯ ಚಂಡಿಕಾವತಾರ ಎಂಬ ಕಥಾ ಸಾರಾಂಶವನ್ನು ಪ್ರದರ್ಶಿಸಿತು. ದೇಚೂರು ಶ್ರೀ ರಾಮಮಂದಿರ ದೇವಾಲಯ ದಸರಾ ಮಂಟಪ ಸಮಿತಿ 107ನೇ ವರ್ಷದ ದಸರಾ ಉತ್ಸವ ಆಚರಣೆಯ ಮಂಟಪದಲ್ಲಿ ಶ್ರೀರಾಮಾಂಜನೇಯ ವೈಭವ ಕಥಾ ಸಾರಾಂಶ ಪ್ರದರ್ಶನಗೊಂಡಿತು. ನಗರದ ನಾಲ್ಕು ಶಕ್ತಿ ದೇವತೆಗಳ ಪೈಕಿ ಹಿರಿಯ ಅಕ್ಕಳೆಂದೆ ಖ್ಯಾತಿಯಾಗಿರುವ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯ ದಸರಾ ಮಂಟಪ ಸಮಿತಿ 52 ನೇ ವರ್ಷದ ಮಂಟಪದಲ್ಲಿ ಶಿವ ಪುರಾಣದ 11 ರಿಂದ 16 ಅಧ್ಯಾಯದ ಪರಶಿವನಿಂದ ಜಲಾಂಧರನ ವಧೆ ಎಂಬ ಕಥಾ ಸಾರಾಂಶವನ್ನು ಪ್ರದರ್ಶಿಸಿತು. ಶ್ರೀಕೋಟೆ ಮಹಾಗಣಪತಿ ದೇವಾಲಯ 49ನೇ ವರ್ಷದ ದಸರಾ ಉತ್ಸವದ ಮಂಟಪದಲ್ಲಿ ಶ್ರೀ ವಿಘ್ನರಾಜನಿಂದ ಮಮತಾಸುರನ ಸಂಹಾರ ಕಥಾ ಸಾರಾಂಶ ಪ್ರದರ್ಶನಗೊಂಡಿತು.
ಶ್ರೀ ಕರವಲೆ ಭಗವತಿ ಮಹಿಷ ಮರ್ದಿನಿ ದೇವಾಲಯ ದಸರಾ ಮಂಟಪ ಸಮಿತಿ 30ನೇ ವರ್ಷದ ಮಂಟಪದಲ್ಲಿ ಸಂಜೀವಿನಿ ಸಸ್ಯಕ್ಕಾಗಿ ದ್ರೋಣಗಿರಿಯನ್ನು ಹೊತ್ತು ತರುವ ಆಂಜನೇಯನ ಕಥಾ ಸಾರಾಂಶವನ್ನು ಪ್ರಸ್ತುತ ಪಡಿಸಿತು. ನಾಲ್ಕು ಶಕ್ತಿ ದೇವತೆಗಳಲ್ಲೊಂದಾಗಿರುವ ಶ್ರೀ ಕಂಚಿಕಾಮಾಕ್ಷಿ ದೇವಾಲಯ ದಸರಾ ಮಂಟಪ ಸಮಿತಿ 62ನೇ ವರ್ಷದ ಮಂಟಪದಲ್ಲಿ ಪರಶುರಾಮನಿಂದ ಕಾರ್ತಿಕೆ ವೀರನ ಸಂಹಾರ ಕಥಾ ಸಾರಾಂಶವನ್ನು ಪ್ರದರ್ಶಿಸಿತು. 95ನೇ ವರ್ಷದ ದಸರಾ ಉತ್ಸವದ ಸಂಭ್ರಮದಲ್ಲಿರುವ ಶ್ರೀ ದಂಡಿನ ಮಾರಿಯಮ್ಮ ದೇವಾಲಯದ ದಸರಾ ಮಂಟಪ ಸಮಿತಿಯಿಂದ ‘ಶಿವ ಪುರಾಣದಿಂದ ಆಯ್ದ ಪರಶಿವನಿಂದ ಅಂಧಕಾಸುರನ ವಧೆ’ ಕಥಾ ಸಾರಾಂಶ ಪ್ರದರ್ಶನಗೊಂಡಿತು. ಶ್ರೀಕೋದಂಡ ರಾಮ ದೇವಾಲಯದ ದಸರಾ ಮಂಟಪ ಸಮಿತಿಯು 51 ನೇ ವರ್ಷದ ಮಂಟಪದಲ್ಲಿ ‘ಶ್ರೀ ಕ್ಷೇತ್ರ ಅದಿಚುಂಚನಗಿರಿ ಕಾಲ ಭೈರವ ಮಹಾತ್ಮೆ’ ಎಂಬ ಕಥಾವಸ್ತುವನ್ನು ಪ್ರದರ್ಶಿಸಿತು. *ಶ್ರೀಕೋಟೆ ಮಹಾಗಣಪತಿ ಮತ್ತು ಶ್ರೀ ಕೋಟೆ ಮಾರಿಯಮ್ಮ ದೇವಾಲಯ ಪ್ರಥಮ* ಶ್ರೀ ವಿಘ್ನರಾಜನಿಂದ ಮಮತಾಸುರನ ಸಂಹಾರ ಕಥಾ ಸಾರಾಂಶವನ್ನು ಹೊಂದಿದ್ದ ಶ್ರೀಕೋಟೆ ಮಹಾಗಣಪತಿ ದೇವಾಲಯ ಮತ್ತು ದೇವ-ದೇವತೆಗಳ ಕಾಳಗ, ಶರಬಾವತಾರ ಹಾಗೂ ಪ್ರತ್ಯುಂಗ ದೇವಿಯಿಂದ ನರಸಿಂಹನ ಉಗ್ರ ಶಮನದ ಕಥೆಯನ್ನು ಹೊಂದಿದ್ದ ಶ್ರೀ ಕೋಟೆ ಮಾರಿಯಮ್ಮ ದೇವಾಲಯ ಅಂಕಗಳ ಆಧಾರದಲ್ಲಿ ಸಮಬಲ ಗಳಿಸಿ ಪ್ರಥಮ ಬಹುಮಾನ ಪಡೆದುಕೊಂಡವು. ಪರಶುರಾಮನಿಂದ ಕಾರ್ತಿಕೆ ವೀರನ ಸಂಹಾರ ಕಥಾ ಸಾರಾಂಶವನ್ನು ಪ್ರದರ್ಶಿಸಿದ ಶ್ರೀ ಕಂಚಿ ಕಾಮಾಕ್ಷಿ ದೇವಾಲಯ ದ್ವಿತೀಯ ಹಾಗೂ ‘ಶಿವ ಪುರಾಣದಿಂದ ಆಯ್ದ ಪರಶಿವನಿಂದ ಅಂಧಕಾಸುರನ ವಧೆ’ ಕಥಾ ಸಾರಾಂಶವನ್ನು ಪ್ರಸ್ತುತ ಪಡಿಸಿದ ಶ್ರೀ ದಂಡಿನ ಮಾರಿಯಮ್ಮ ದೇವಾಲಯ ತೃತೀಯ ಬಹುಮಾನ ಗಳಿಸಿತು.
*ಯುವ ಸಮೂಹಕ್ಕೆ ನಿರಾಶೆ* ದಶಮಂಟಪಗಳ ಶೋಭಾಯಾತ್ರೆಯೇ ಮಡಿಕೇರಿ ದಸರಾ ಜನೋತ್ಸವದ ಪ್ರಮುಖ ಆಕರ್ಷಣಯಾಗಿದೆ. ಈ ಶೋಭಾಯಾತ್ರೆಯೊಂದಿಗೆ ಸಾಗುವ ಡಿಜೆ ಅಬ್ಬರಕ್ಕೆ ಕುಣಿದು ಸಂಭ್ರಮಿಸಲು ಅತ್ಯಧಿಕ ಸಂಖ್ಯೆಯಲ್ಲಿ ಯುವಕ, ಯುತಿಯರು ರಾಜ್ಯ ಮಾತ್ರವಲ್ಲದೆ ಹೊರ ರಾಜ್ಯದಿಂದಲೂ ಮಡಿಕೇರಿ ದಸರಾಕ್ಕೆ ಆಗಮಿಸುತ್ತಾರೆ. ಆದರೆ ಈ ಬಾರಿ ನ್ಯಾಯಾಲಯದ ಆದೇಶದ ಕಾರಣ ನೀಡಿ ಪೊಲೀಸ್ ಇಲಾಖೆ ಡಿಜೆ ಶಬ್ಧಕ್ಕೆ ಕಡಿವಾಣ ಹಾಕಿತ್ತು. ಕಥಾ ಸಾರಾಂಶ ಪ್ರದರ್ಶನದ ವೇಳೆ ಮಾತ್ರ ಧ್ವನಿವರ್ಧಕಗಳನ್ನು ಬಳಸಿದ ಮಂಟಪಗಳು ನಂತರ ಮೌನವಾಗಿಯೇ ಸಾಗಿದವು. ಇದರಿಂದ ಯುವ ಸಮೂಹ ಭಾರೀ ನಿರಾಶೆಯನ್ನು ಅನುಭವಿಸಿತು. *ಬನ್ನಿ ಮಂಟಪಕ್ಕೆ ತೆರಳಿದ ಕರಗಗಳು* ಮಡಿಕೇರಿ ದಸರಾ ಕರಗೋತ್ಸವ ಮತ್ತು ಕರಗಗಳ ನಗರ ಸಂಚಾರ ತನ್ನದೇ ಆದ ಇತಿಹಾಸ ಹಾಗೂ ಧಾರ್ಮಿಕ ಹಿನ್ನೆಲೆಯನ್ನು ಹೊಂದಿದೆ. ಬನ್ನಿ ಮಂಟಪದಲ್ಲಿ ಕರಗೋತ್ಸವದ ಮೂಲಕವೇ ನವರಾತ್ರಿ ಆರಂಭಗೊಂಡು ವಿಜಯದಶಮಿಯ ನಂತರದ ದಿನ ನಸುಕಿನಲ್ಲಿ ಬನ್ನಿ ಮಂಟಪದಲ್ಲಿ ಕರಗಗಳು ಬಂದು ಬನ್ನಿ ಕಡಿಯುವ ಮೂಲಕ ಮಡಿಕೇರಿ ದಸರಾ ಸಂಪನ್ನಗೊಳ್ಳುತ್ತದೆ. ಈ ಸಂಪ್ರದಾಯದಂತೆ ಶುಕ್ರವಾರ ನಸುಕಿನಲ್ಲಿ ನಾಲ್ಕು ಶಕ್ತಿ ದೇವತೆಗಳಾದ ಶ್ರೀ ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ, ಶ್ರೀ ಕಂಚಿ ಕಾಮಾಕ್ಷಿಯಮ್ಮ, ಶ್ರೀ ದಂಡಿನ ಮಾರಿಯಮ್ಮ ಹಾಗೂ ಶ್ರೀ ಕೋಟೆ ಮಾರಿಯಮ್ಮ ದೇವಾಲಯಗಳ ಕರಗಗಳು ದಶಮಂಟಪಗಳಿಂದ ಪೂಜೆ ಪಡೆದು ಬನ್ನಿ ಮಂಟಪಕ್ಕೆ ತೆರಳಿದವು. ಅಲ್ಲಿ ಬನ್ನಿ ಕಡಿಯುವ ಮೂಲಕ ದಸರಾ ಹಾಗೂ ಕರಗೋತ್ಸವಕ್ಕೆ ತೆರೆ ಎಳೆಯಲಾಯಿತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಾ.15 ರಂದು ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*

ಮಾರ್ಚ್ 11, 2026

*ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾಕ್ಕೆ ಪ್ರಾಮಾಣಿಕ ಯತ್ನ : ಮಡಿಕೇರಿ 7, ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಮಂಜೂರು : ಸಚಿವ ಈಶ್ವರ ಖಂಡ್ರೆ*

ಮಾರ್ಚ್ 10, 2026

*ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*

ಮಾರ್ಚ್ 10, 2026

*ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾಕ್ಕೆ ಪ್ರಾಮಾಣಿಕ ಯತ್ನ : ಮಡಿಕೇರಿ 7, ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಮಂಜೂರು : ಸಚಿವ ಈಶ್ವರ ಖಂಡ್ರೆ*

ಮಾರ್ಚ್ 10, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಬೆಂಗಳೂರು NEWS DESK ಮಾ.10: ಆನೆ-ಮಾನವ ಸಂಘರ್ಷ ನಿಯಂತ್ರಿಸಲು 2025-26ನೇ ಸಾಲಿನಲ್ಲಿ ಮಡಿಕೇರಿ ವಿಭಾಗಕ್ಕೆ 7 ಕಿ.ಮೀ ಮತ್ತು ನಾಗರಹೊಳೆ…

*ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*

ಮಾರ್ಚ್ 10, 2026

*ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*

ಮಾರ್ಚ್ 10, 2026

*ಮಾಯಮುಡಿ ಗ್ರಾ.ಪಂ ಆಡಳಿತಾಧಿಕಾರಿಯಾಗಿ ಪಿ.ಪಿ.ಕವಿತಾ ಅಧಿಕಾರ ಸ್ವೀಕಾರ*

ಮಾರ್ಚ್ 10, 2026

*ಜವಾಬ್ದಾರಿ ನಿಭಾಯಿಸಲು ಸಾಧ್ಯವಾಗದಿದ್ದಲ್ಲಿ ಅರಣ್ಯ ಸಚಿವರು ರಾಜೀನಾಮೆ ನೀಡಲಿ : ವಿರಾಜಪೇಟೆ ಬಿಜೆಪಿ ಒತ್ತಾಯ*

ಮಾರ್ಚ್ 10, 2026

*ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ : ಕಾಡಾನೆ ಸೆರೆಗೆ ಶಾಸಕರ ಸೂಚನೆ*

ಮಾರ್ಚ್ 10, 2026

*ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 10, 2026

*ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*

ಮಾರ್ಚ್ 9, 2026

*ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*

ಮಾರ್ಚ್ 9, 2026

*ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*

ಮಾರ್ಚ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.