
ಮಡಿಕೇರಿ NEWS DESK ಅ.8 : ಮಡಿಕೇರಿ ನಗರದ ಸರಕಾರಿ ಪದವಿ ಪೂರ್ವ ಕಾಲೇಜ್ (ಜೂನಿಯರ್ ಕಾಲೇಜ್) ನ ನಿವೃತ್ತ ಪ್ರಾಂಶುಪಾಲರಾದ ರೇಖಾ ಕಾಳಯ್ಯ (75) (ಕೊಕ್ಕಲೇರ ಬೊಳ್ಳಮ್ಮ) ಅವರು ಇಂದು ನಿಧನ ಹೊಂದಿದರು. ಪ್ರಸ್ತುತ ಜೂನಿಯರ್ ಕಾಲೇಜ್ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಬೃಹತ್ ಸಭಾಂಗಣದ ಪರಿಕಲ್ಪನೆ ಇವರದ್ದೇ ಆಗಿದೆ. ತಮ್ಮ ಅಧಿಕಾರವಧಿಯಲ್ಲಿ ವಿವಿಧೋದ್ದೇಶಕ್ಕಾಗಿ ಈ ಕಟ್ಟಡವನ್ನು ಸರಕಾರ ಮತ್ತು ದಾನಿಗಳ ನಿರ್ಮಿಸಿದರು. ಸರಕಾರಿ ಪದವಿ ಪೂರ್ವ ಕಾಲೇಜ್ ಗೆ ಕಾಯಕಲ್ಪ ನೀಡಿದ್ದ ರೇಖಾ ಕಾಳಯ್ಯ ಅವರು ಉತ್ತಮ ಇಂಗ್ಲೀಷ್ ಜ್ಞಾನದೊಂದಿಗೆ ವಿದ್ಯಾರ್ಥಿಗಳ ಅಚ್ಚುಮೆಚ್ಚಿನ ಗುರುವಾಗಿದ್ದರು. ಮೃತರ ಅಂತ್ಯಕ್ರಿಯೆ ಅ.9ರಂದು ಮಡಿಕೇರಿ ಕೊಡವ ಸಮಾಜದ ರುದ್ರಭೂಮಿಯಲ್ಲಿ ನಡೆಯಲಿದೆ. ರೇಖಾ ಕಾಳಯ್ಯ ಅವರ ನಿಧನಕ್ಕೆ ಹಳೆಯ ವಿದ್ಯಾರ್ಥಿಗಳು ತೀವ್ರ ಸಂತಾಪ ಸೂಚಿಸಿದ್ದಾರೆ.








