Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಕ್ರಿಯೇಟಿವ್ ಕಾಲೇಜಿನ ವಾರ್ಷಿಕ ಶಿಬಿರದ ಸಮಾರೋಪ : ಪೌರ ಕಾರ್ಮಿಕರಿಗೆ ಸನ್ಮಾನ*
ಇತ್ತೀಚಿನ ಸುದ್ದಿಗಳು

*ಕ್ರಿಯೇಟಿವ್ ಕಾಲೇಜಿನ ವಾರ್ಷಿಕ ಶಿಬಿರದ ಸಮಾರೋಪ : ಪೌರ ಕಾರ್ಮಿಕರಿಗೆ ಸನ್ಮಾನ*

October 9, 20252 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಅ.9 NEWS DESK : ಕರ್ನಾಟಕ ಸರಕಾರ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ರಾಷ್ಟ್ರೀಯ ಸೇವಾ ಯೋಜನೆ ಪ್ರಯುಕ್ತ ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ ವತಿಯಿಂದ ನಡೆದ ‘ನಶಾ ಮುಕ್ತ ಭಾರತ ಅಭಿಯಾನ’ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭವು ಕಾರ್ಕಳದ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಉಡುಪಿಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಜಿಲ್ಲಾ ಉಪನಿರ್ದೇಶಕರಾದ ಮಾರುತಿ, ವಿದ್ಯಾರ್ಥಿ ಜೀವನದಲ್ಲಿ ಇಂತಹ ಶಿಬಿರಗಳು ನೈಜ ಜೀವನದ ಪಾಠ ಕಲಿಸುವ ಪಾಠ ಶಾಲೆಯಂತಿವೆ. ಸಮಾಜ ಸೇವೆ ಎಂದರೆ ಕೇವಲ ಒಂದು ದಿನದ ಕಾರ್ಯಕ್ರಮವಲ್ಲ. ಅದು ಜೀವನಪೂರ್ತಿ ಅಳವಡಿಸಿಕೊಳ್ಳಬೇಕಾದ ಮನೋಭಾವ’ ಎಂದು ಕರೆ ನೀಡಿದರು. ಸಂಸ್ಥೆಯ ಸಹ ಸಂಸ್ಥಾಪಕರಾದ ಎಸ್.ಎಲ್.ಅಶ್ವತ್ ಪ್ರಾಸ್ತಾವಿಕ ಮಾತನಾಡಿ ‘ಸಮಾಜಕ್ಕೆ ಕೊಡುಗೆ ನೀಡುವ ಮನೋಭಾವ ಬೆಳೆಸಿದರೆ, ಶಿಕ್ಷಣದ ಗುರಿ ಸಾರ್ಥಕವಾಗುತ್ತದೆ’ ಎಂದು ಹೇಳಿದರು. ಮುಖ್ಯ ಅತಿಥಿ ಮುನಿಯಾಲು ಉದಯ ಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಹಾಗೂ ಬಂಟ್ಸ್ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಉದಯ್ ಕುಮಾರ್ ಶೆಟ್ಟಿ ಇಂದಿನ ಯುವಕರು ಸಾಮಾಜಿಕ ಹೊಣೆಗಾರಿಕೆಯನ್ನು ಅರಿತುಕೊಳ್ಳುವಲ್ಲಿ ಮುಂಚೂಣಿಯಲ್ಲಿರಬೇಕು. ಶಿಬಿರಗಳಲ್ಲಿ ಬೆಳೆದ ಅನುಭವವು ಭವಿಷ್ಯದ ನಾಯಕರಾಗಿ ರೂಪಗೊಳ್ಳಲು ಸಹಾಯಕವಾಗುತ್ತದೆ’ ಎಂದರು. ಉದ್ಯಮಿ ವಿಜಯ್ ಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳು ಕೇವಲ ಅಕಾಡೆಮಿಕ್ ಯಶಸ್ಸಿನಲ್ಲೇ ಅಲ್ಲ, ಸಮಾಜಮುಖಿ ಕಾರ್ಯಗಳಲ್ಲೂ ತೊಡಗಿಸಿಕೊಂಡಾಗ ಮಾತ್ರ ನಿಜವಾದ ಶಿಕ್ಷಣದ ಅರ್ಥ ಸಾರ್ಥಕವಾಗುತ್ತದೆ’ ಎಂದು ಹೇಳಿದರು. ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರು ಮತ್ತು ಇಸ್ರೋದ ನಿವೃತ್ತ ವಿಜ್ಞಾನಿ ಜನಾರ್ಧನ ಇಡ್ಯಾ ರವರು ‘ಜೀವನದಲ್ಲಿ ದೊಡ್ಡ ಸ್ಥಾನ ಪಡೆಯುವುದಕ್ಕಿಂತ, ಒಳ್ಳೆಯ ಮಾನವಿಯ ಮೌಲ್ಯಗಳನ್ನು ಅಳವಡಿಸಿಕೊಂಡು ನಾಗರಿಕನಾಗುವುದು ಮುಖ್ಯ. ಈ ಶಿಬಿರದ ಅನುಭವಗಳು ನಿಮ್ಮ ವ್ಯಕ್ತಿತ್ವ ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ’ ಎಂದರು. ನಂದಿನಿ ಶೆಟ್ಟಿ, ನ್ಯಾಯವಾದಿ ಮತ್ತು ನೋಟರಿ, ಕಾರ್ಕಳ ಇವರು ‘ಎನ್.ಎಸ್.ಎಸ್ ಶಿಬಿರವು ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ, ನಾಯಕತ್ವ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸುವ ವೇದಿಕೆ ಆಗಿದೆ’ ಎಂದು ಅಭಿಪ್ರಾಯಪಟ್ಟರು. ವರ್ಮ ಅಜ್ರಿ, ವಿಶ್ರಾಂತ ಪ್ರಾಂಶುಪಾಲರು, ಎಂ.ಪಿ.ಎಂ ಕಾಲೇಜು, ಕಾರ್ಕಳ ಇವರು’ಯುವಕರು ರಾಷ್ಟ್ರದ ಶಕ್ತಿ. ಅವರಿಂದ ಪ್ರಾರಂಭವಾಗುವ ಪ್ರತಿಯೊಂದು ಸಣ್ಣ ಸೇವಾ ಚಟುವಟಿಕೆ ದೇಶದ ಅಭಿವೃದ್ಧಿಗೆ ದಾರಿ ತೋರಿಸಬಹುದು’ ಎಂದು ಹೇಳಿದರು. ಅನ್ನಪೂರ್ಣ ಕಾಮತ್, ಪ್ರಾಂಶುಪಾಲರು, ಸರಕಾರಿ ಪದವಿಪೂರ್ವ ಕಾಲೇಜು, ಕಾರ್ಕಳ ಇವರು ಎನ್.ಎಸ್.ಎಸ್ ಘಟಕದ ವತಿಯಿಂದ ನಡೆದ ಕಾರ್ಯವೈಖರಿಗಳನ್ನು ಶ್ಲಾಘಿಸಿ, ವಂದಿಸುತ್ತಾ ‘ವಿದ್ಯಾರ್ಥಿಗಳು ಶ್ರಮ, ಶಿಸ್ತು ಮತ್ತು ಸೇವಾ ಮನೋಭಾವದಿಂದ ಕಾರ್ಯನಿರ್ವಹಿಸಿದ್ದು ಪ್ರಶಂಸನೀಯ. ಎನ್.ಎಸ್.ಎಸ್ ಕೇವಲ ಕಾರ್ಯಕ್ರಮವಲ್ಲ, ಅದು ವ್ಯಕ್ತಿತ್ವ ನಿರ್ಮಾಣದ ಪಾಠವಾಗಿದೆ’ ಎಂದರು. :: ಪೌರ ಕಾರ್ಮಿಕರಿಗೆ ಸನ್ಮಾನ :: ಸಮಾರೋಪ ಕಾರ್ಯಕ್ರಮದಲ್ಲಿ 25 ವರ್ಷಗಳಿಗಿಂತಲೂ ಸುದೀರ್ಘ ಅವಧಿಯಿಂದ ಪೌರಕಾರ್ಮಿಕರಾಗಿ ದುಡಿದು ಸಮಾಜಕ್ಕೆ ಸೇವೆ ಸಲ್ಲಿಸುತ್ತಿರುವ ಸುಧೀರ್, ಪೂವಪ್ಪ, ರವಿ, ನಾಗೇಶ್, ಸಂಜೀವ ಇವರನ್ನು ಎನ್.ಎಸ್.ಎಸ್ ಘಟಕದ ವತಿಯಿಂದ ಗೌರವಿಸಿ ಸನ್ಮಾನಿಸಲಾಯಿತು. ಅತಿಥಿಗಳ ಸಮ್ಮುಖದಲ್ಲಿ ಶಿಬಿರವಾಣಿಯನ್ನು ಬಿಡುಗಡೆಗೊಳಿಸಲಾಯಿತು.ವಿದ್ಯಾರ್ಥಿಗಳಾದ ಹಿತ ಮತ್ತು ಅಕ್ಷರ್ 7 ದಿನಗಳ ಎನ್.ಎಸ್.ಎಸ್ ಘಟಕದ ಅನುಭವಗಳ ಕುರಿತು ಮಾತನಾಡಿದರು. ಎಲ್ಲಾ ಅತಿಥಿಗಳನ್ನು ಕಾರ್ಯಕ್ರಮದ ಸವಿನೆನಪಿನ ದ್ಯೋತಕವಾಗಿ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಸಹ ಸಂಸ್ಥಾಪಕರಾದ ಡಾ. ಗಣನಾಥ ಶೆಟ್ಟಿ ಬಿ, ವಿದ್ವಾನ್ ಗಣಪತಿ ಭಟ್, ಆದರ್ಶ ಎಂ.ಕೆ ರವರು ಗೌರವ ಉಪಸ್ಥಿತಿ ವಹಿಸಿದ್ದರು. ಉಪನ್ಯಾಸಕರಾದ ಸಂತೋಷ್ ಸ್ವಾಗತಿಸಿ, ಶಿಬಿರಾಧಿಕಾರಿ ಉಮೇಶ್ ವಂದನಾರ್ಪಣೆಗೈದರು. ಉಪನ್ಯಾಸಕಿ ಪ್ರಿಯಾಂಕ ತೀರ್ಥರಾಮ ಕಾರ್ಯಕ್ರಮ ನಿರೂಪಿಸಿದರು. ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.

 

Share. Facebook Twitter Pinterest LinkedIn Tumblr Email WhatsApp
Previous Article*ಕಾರ್ಕಳ : ಕ್ರಿಯೇಟಿವ್ ಕಾಲೇಜಿನ ಎನ್.ಎಸ್.ಎಸ್ ಘಟಕದ ವತಿಯಿಂದ ಪ್ರೇಕ್ಷಣೀಯ ಸ್ಥಳಗಳ ಸ್ವಚ್ಛತಾ ಕಾರ್ಯಕ್ರಮ*
Next Article *ಅ.11 ರಂದು ಧ್ವನಿ ಕೊಟ್ಟ ಧಣಿ ಪ್ರಶಸ್ತಿ ಪ್ರದಾನ*

Recommended: Website design development company services in Mangalore Forex Trading Teacher in India

Related Posts

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

ಸಿಯಾಟಲ್ (ಅಮೆರಿಕಾ): ಕಳೆದ ಎರಡು ವರ್ಷಗಳಿಂದ ಇಡೀ ಜಗತ್ತಿನ ಗಮನ ಸೆಳೆದಿದ್ದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಸಾವಿನ…

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.