
ಮಡಿಕೇರಿ ಅ.9 NEWS DESK : ನಗರಸಭೆಯಲ್ಲಿ ಸಿಬ್ಬಂದಿಗಳ ತೀವ್ರ ಕೊರತೆಯ ನಡುವೇ ಪೌರಸಿಬ್ಬಂದಿಗಳ ಮೂಲಕ ನಗರ ಸ್ವಚ್ಚತೆಗೆ ಆದ್ಯತೆ ನೀಡಲಾಗಿದೆ ಎಂದು ಮಡಿಕೇರಿ ನಗರಸಭೆಯ ಪೌರಾಯುಕ್ತ ಹೆಚ್.ಆರ್.ರಮೇಶ್ ಹೇಳಿದ್ದಾರೆ. ಮಡಿಕೇರಿ ರೋಟರಿ ಸಭಾಂಗಣದಲ್ಲಿ ರೋಟರಿ ವುಡ್ಸ್ ವತಿಯಿಂದ ಆಯೋಜಿತ ಕಾಯ೯ಕ್ರಮದಲ್ಲಿ ಪೌರಸಿಬ್ಬಂದಿಗಳಾದ ಅಹಮ್ಮದ್ ಕಬೀರ್, ಎಚ್.ಆರ್.ಶಂಕರ್, ಈರಪ್ಪ ಶೆಟ್ಟಿ, ವಸಂತ ಕುಮಾರ್, ಬಿ.ಟಿ. ಜಗದೀಶ್ ಅವರನ್ನು ಸನ್ಮಾನಿಸಿ ಅವರು ಮಾತನಾಡಿದರು. ಕಳೆದ ಕೆಲವು ವಷ೯ಗಳಿಗೆ ಹೋಲಿಸಿದರೆ ಮಡಿಕೇರಿಯಲ್ಲಿ ಸ್ವಚ್ಚತೆ ಸಂಬಂಧಿತ ಜನರಲ್ಲಿ ಹೆಚ್ಚು ಅರಿವು ಮೂಡಿದೆ. ಪೌರಸಿಬ್ಬಂದಿಗಳು ನಗರದ ತ್ಯಾಜ್ಯ ವಿಲೇವಾರಿ ಮಾಡುವ ಪೌರಸಿಬ್ಬಂದಿಗಳ ಆರೋಗ್ಯದ ಬಗ್ಗೆಯೂ ನಗರಸಭೆ ಹೆಚ್ಚಿನ ಕಾಳಜಿ ವಹಿಸಿದೆ. ಪ್ರತೀ ವಷ೯ ಅತ್ಯುತ್ತಮ ರೀತಿಯಲ್ಲಿ ಪೌರಸಿಬ್ಬಂದಿಗಳ ಆರೋಗ್ಯ ತಪಾಸಣೆ ಕೈಗೊಳ್ಳಲಾಗುತ್ತಿದೆ. ಅಗತ್ಯವುಳ್ಳವರಿಗೆ ಉತ್ತಮ ಗುಣಮಟ್ಟದ ಚಿಕಿತ್ಸೆಯನ್ನೂ ನೀಡಲಾಗುತ್ತಿದೆ ಎಂದೂ ರಮೇಶ್ ನುಡಿದರು. ಈಗಾಗಲೇ ಮಡಿಕೇರಿಯ ರಾಜರಾಜೇಶ್ವರಿ ಬಡಾವಣೆಯಲ್ಲಿ ಪೌರಸಿಬ್ಬಂದಿಗಳಿಗೆ 12 ಮನೆಗಳನ್ನು ನಿಮಿ೯ಸಿ ಉಚಿತವಾಗಿ ವಿತರಿಸುವ ಕಾಯ೯ವೂ ಪ್ರಗತಿಯಲ್ಲಿದೆ ಎಂದೂ ರಮೇಶ್ ಹೇಳಿದರು.700 ಜನಸಂಖ್ಕೆಗೊಬ್ಬರಂತೆ ಓವ೯ ಪೌರಸಿಬ್ಬಂದಿಗಳಿರಬೇಕು. ಆದರೆ ಈ ಪ್ರಮಾಣವೂ ಮಡಿಕೇರಿಗೆ ಸಾಕಾಗುವುದಿಲ್ಲ ಎನ್ನುವಂತಾಗಿದ ಎಂದೂ ಅವರು ಹೇಳಿದರು. ರೋಟರಿ ಜಿಲ್ಲಾ ಪಬ್ಲಿಕ್ ಇಮೇಜ್ ಸಮಿತಿ ಉಪಾಧ್ಯಕ್ಷ ಅನಿಲ್ ಹೆಚ್.ಟಿ. ಮಾತನಾಡಿ, ದಸರಾ ಸಂದಭ೯ ಪೌರಸಿಬ್ಬಂದಿಗಳು ಮಡಿಕೇರಿಯನ್ನು ಮಡಿಯಾದ ಕೇರಿಯನ್ನಾಗಿಸುವಲ್ಲಿ ವಹಿಸಿದ ಶ್ರಮ ಶ್ಗಾಘನೀಯ, ಪೌರಸಿಬ್ಬಂದಿಗಳ ಅವಿರತ ಶ್ರಮದಿಂದಾಗಿಯೇ ಮಡಿಕೇರಿ ತನ್ನ ಸೌಂದಯ೯ ಕಾಪಾಡಿಕೊಳ್ಳಲು ಸಾಧ್ಯವಾಗಿದೆ ಎಂದು ಶ್ಲಾಘಿಸಿದರು. ಪೌರಸಿಬ್ಬಂದಿಗಳನ್ನು ಕಸ ತೆಗೆಯುವ ವ್ಯಕ್ತಿಗಳಾಗಿ ಪರಿಗಣಿಸದೇ ನಮ್ಮ ಮನೆ, ಅಂಗಡಿಗಳಲ್ಲಿರುವ ಕಸವನ್ನು ವಿಲೇವಾರಿ ಮಾಡಿ, ಸಮಾಜವನ್ನು ಸ್ವಚ್ಚವಾಗಿರಿಸುವ ಕಾಯಕಜೀವಿಗಳೆಂದು ಮಾನವೀಯತೆಯಿಂದ ಪರಿಗಣಿಸುವಂತೆಯೂ ಅನಿಲ್ ಕೋರಿದರು. ಪೌರಸಿಬ್ಬಂದಿಗಳಿಗೆ ಅಗತ್ಯವಾದ ನಿವೇಶನ, ವಸತಿ ನಿಮಾ೯ಣದತ್ತಲೂ ಸ್ಥಳೀಯ ಸಂಸ್ಥೆಗಳು ಕಾಯ೯ಪ್ರವೖತ್ತವಾಗಬೇಕೆಂದು ಹೇಳಿದ ಅನಿಲ್ ಹೆಚ್,ಟಿ. ಪೌರಸಿಬ್ಬಂದಿಗಳು, ಕುಟುಂಬ ವಗ೯ದವರಿಗೆ ರೋಟರಿ ಸಂಸ್ಥೆಯ ಮೂಲಕ ಆರೋಗ್ಯ ಶಿಬಿರ ಆಯೋಜಿತವಾಗಬೇಕೆಂದು ಸಲಹೆ ನೀಡಿದರು. ರೋಟರಿ ವುಡ್ಸ್ ಸಲಹೆಗಾರ ಬಿ.ಜಿ. ಅನಂತಶಯನ ಮಾತನಾಡಿ, ಭೂಮಿತಾಯಿಯ ಮಡಿಲಲ್ಲಿ ತ್ಯಾಜ್ಯ ಎಸೆಯುವ ಜನರು ಹೆಚ್ಚಾಗುತ್ತಿರುವ ಸಂದಭ೯ದಲ್ಲಿ ಅಂಥ ತ್ಯಾಜ್ಯಗಳನ್ನು ವಿಲೇವಾರಿ ಮಾಡುವ ಮೂಲಕ ನಿಸಗ೯ ಮಾತೆಯನ್ನು ಸ್ವಚ್ಚಗೊಳಿಸುವ ಅಮೂಲ್ಯ ಕಾಯಕದಲ್ಲಿ ಪೌರಸಿಬ್ಬಂದಿಗಳು ತೊಡಗಿಸಿಕೊಂಡಿದ್ದಾರೆ ಎಂದು ಹೆಮ್ಮೆ ವ್ಯಕ್ತಪಡಿಸಿದರು. ಎಲ್ಲಿ ಶುದ್ದ ಹಸ್ತಗಳಿರುತ್ತವೆಯೋ ಅಂಥ ಸಮಾಜ ಸುಂದರವಾಗಿರುತ್ತದೆ. ಆ ಶುದ್ದ ಹಸ್ತವನ್ನು ಪೌರಸಿಬ್ಬಂದಿಗಳಲ್ಲಿ ಕಾಣಬಹುದಾಗಿದ ಎಂದೂ ಅನಂತಶಯನ ಹೇಳಿದರು. ರೋಟರಿ ವುಡ್ಸ್ ಅಧ್ಯಕ್ಷ ಕಿರಣ್ ಕುಂದರ್, ಮಡಿಕೇರಿಯ ಪೌರಸೇವಾ ಸಿಬ್ಬಂದಿಗಳ ಕಾಯ೯ನಿಷ್ಟೆಯ ಬಗ್ಗೆ ಪ್ರಶಂಶಿಸಿದರು. ನಗರದ ಅನೇಕರು ಏಳುವ ಮೊದಲೇ ನಗರದ ಬೀದಿಗಳು, ಮನೆಯ ಮುಂದಿನ ಪರಿಸರ ಸ್ವಚ್ಚಗೊಳ್ಳುವಲ್ಲಿ ಪೌರಸಿಬ್ಬಂದಿಗಳ ಪಾತ್ರ ಸದಾ ಮಹತ್ವದ್ದಾಗಿದೆ ಎಂದೂ ಕಿರಣ್ ಶ್ಲಾಘಿಸಿದರು. ರೋಟರಿ ವಲಯ 6 ರ ಸಹಾಯಕ ಗವನ೯ರ್ ಧಿಲನ್ ಚಂಗಪ್ಪ ಮಾತನಾಡಿ, ತ್ಯಾಜ್ಯ ವಿಲೇವಾರಿ ಮಾಡುವ ಸಂಬಂಧ ವಿದ್ಯಾಥಿ೯ಗಳಲ್ಲಿ ಸೂಕ್ತ ಮಾಹಿತಿ ನೀಡುವ ಜಾಗ್ರತಿ ಕಾಯ೯ಕ್ರಮಗಳನ್ನು ಸಾಮಾಜಿಕ ಸಂಘಸಂಸ್ಥೆಗಳು ಹೆಚ್ಚು ಮಾಡಬೇಕೆಂದು ಕರೆ ನೀಡಿದರು. ವಿದ್ಯಾಥಿ೯ಗಳಲ್ಲಿ ಪರಿಸರ ಸ್ವಚ್ಚತೆಯ ಜಾಗ್ರತಿ ಹೆಚ್ಚಾದಲ್ಲಿ ದೊಡ್ಡವರೂ ಅದರಿದ ಪಾಠ ಕಲಿಯಬಹುದಾಗಿದೆ ಎಂದೂ ಧಿಲನ್ ಅಭಿಪ್ರಾಯಪಟ್ಟರು. ಮಡಿಕೇರಿ, ಗೋಣಿಕೊಪ್ಪ ದಸರಾದ ಯಶಸ್ವಿಗೆ ಮೂಲ ಕಾರಣಕತ೯ರೇ ಪೌರಸಿಬ್ಬಂದಿಗಳಾಗಿದ್ದಾರೆ ಎಂದೂ ಗೋಣಿಕೊಪ್ಪ ದಸರಾ ಸಾಂಸ್ಕೖತಿಕ ಸಮಿತಿ ಅಧ್ಯಕ್ಷ ಧಿಲನ್ ಚಂಗಪ್ಪ ಶ್ಲಾಘಿಸಿದರು. ವಲಯ ಸೇನಾನಿ ಕಾಯ೯ಪ್ಪ ಮಾತನಾಡಿ. ಸಕ್ರಿಯ ಸೇವೆಯ ಮೂಲಕ ಸಮಾಜದ ಸ್ವಚ್ಚತೆಗೆ ಕಾರಣರಾಗುತ್ತಿರುವ ಪೌರಸಿಬ್ಬಂದಿಗಳನ್ನು ಗುರುತಿಸಿ ಸನ್ಮಾನಿಸುವ ಕಾಯ೯ ಮೆಚ್ಚುಗೆ ಪಡೆಯವಂಥದ್ದು ಎಂದರು. ರೋಟರಿ ವುಡ್ಸ್ ಕಾಯ೯ದಶಿ೯ ಪ್ರಮೀಳಾ ಶೆಟ್ಟಿ ವಂದಿಸಿದ ಕಾಯ೯ಕ್ರಮದಲ್ಲಿ ವುಡ್ಸ್ ಸಂಸ್ಥೆಯ ಸಲಹೆಗಾರ ಮೋಹನ್ ಪ್ರಭು, ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷ ರತ್ನಾಕರ್ ರೈ, ಕಾಯ೯ದಶಿ೯ ಬಿ.ಕೆ ಕಾಯ೯ಪ್ಪ, ಹಾಜರಿದ್ದರು. ವಸಂತ್ ಕುಮಾರ್ ನಿರೂಪಿಸಿದರು.









