Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿಶೇಷಚೇತನರಿಗೆ ಕ್ರೀಡಾಕೂಟ : ಕ್ರೀಡೆಯಿಂದ ದೈಹಿಕ, ಮಾನಸಿಕ ದೃಢತೆ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ*
  • *ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*
  • *ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*
  • *ವಾಹನ, ದನ ಕಳವು ಪ್ರಕರಣದ ಆರೋಪಿಗಳ ಬಂಧನ*
  • *ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*
  • *ಸೋಮವಾರಪೇಟೆ : ವಿದ್ಯಾರ್ಥಿಗಳು ಸಮಯದ ಮೌಲ್ಯ ಅರಿತುಕೊಳ್ಳಿ : ಶ್ರೀ ನಿಶ್ಚಲ ನಿರಂಜನ ದೇಶಿಕೇಂದ್ರ ಸ್ವಾಮೀಜಿ ಸಲಹೆ*
  • * ಸೋಮವಾರಪೇಟೆ : ಮಾ.27 ರಂದು ಶ್ರೀ ರಾಮನವಮಿ ಉತ್ಸವ*
  • *ಗೃಹಬಳಕೆ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಗ್ರಾಹಕರ ಗಮನಕ್ಕೆ : ಜಿಲ್ಲಾಡಳಿತದಿಂದ ಎಲ್‌ಪಿಜಿ ವಿತರಕರಿಗೆ ಕಟ್ಟುನಿಟ್ಟಿನ ಸೂಚನೆ*
  • *ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ : “ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಲು” ಅನುಭವುಳ್ಳ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ*
  • *ಕಸಾಪ ಸಂತಾಪ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿರಾಜಪೇಟೆಯಲ್ಲಿ ಎಸ್.ಎಲ್. ಭೈರಪ್ಪ ಅವರಿಗೆ ಶ್ರದ್ಧಾಂಜಲಿ : ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ ಕೀರ್ತಿ ದಿ. ಎಸ್.ಎಲ್.ಭೈರಪ್ಪ ಅವರಿಗೆ ಸಲ್ಲುತ್ತದೆ :  ಉಷಾ ಪ್ರೀತಂ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿರಾಜಪೇಟೆಯಲ್ಲಿ ಎಸ್.ಎಲ್. ಭೈರಪ್ಪ ಅವರಿಗೆ ಶ್ರದ್ಧಾಂಜಲಿ : ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ ಕೀರ್ತಿ ದಿ. ಎಸ್.ಎಲ್.ಭೈರಪ್ಪ ಅವರಿಗೆ ಸಲ್ಲುತ್ತದೆ :  ಉಷಾ ಪ್ರೀತಂ*

ಅಕ್ಟೋಬರ್ 10, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ವಿರಾಜಪೇಟೆ ಅ.10 NEWS DESK : ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ ಕೀರ್ತಿಯು ದಿ. ಎಸ್.ಎಲ್. ಭೈರಪ್ಪ ಅವರಿಗೆ ಸಲ್ಲುತ್ತದೆ ಎಂದು ಪತ್ರಕರ್ತರು ಹಾಗೂ ಬರಹಗಾರರಾದ ಉಷಾ ಪ್ರೀತಂ ಅಭಿಪ್ರಾಯಪಟ್ಟರು. ವಿರಾಜಪೇಟೆಯ ಪುರಭವನದ ಸಭಾಂಗಣದಲ್ಲಿ ವಿರಾಜಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಪತ್ರಕರ್ತರ ವೇದಿಕೆ ವಿರಾಜಪೇಟೆಯ ಸಹಯೋಗದಲ್ಲಿ ಆಯೋಜಿಸಲಾಗಿದ್ದ ದಿ. ಎಸ್.ಎಲ್. ಭೈರಪ್ಪ ಅವರಿಗೆ ಶ್ರದ್ಧಾಂಜಲಿ ಸಭೆಯನ್ನು ಉದ್ದೇಶಿಸಿ ಮಾತನಾಡುತಿದ್ದರು. ಕನ್ನಡ ಭಾಷೆ ನಾಡು ನುಡಿಗೆ ಸಂಬಂಧಿಸಿದಂತೆ ಕೊಡುಗೆಯನ್ನು ನೀಡಿದವರಲ್ಲಿ ದಿ. ಎಸ್. ಎಲ್. ಭೈರಪ್ಪ ರವರು ಅಗ್ರಗಣ್ಯರು. ಸಾಹಿತ್ಯ ಲೋಕದಲ್ಲಿ ಸದಾ ಅವಿಸ್ಮರಣಿಯವಾಗಿ ಉಳಿದಿದ್ದಾರೆ. ಮಾತ್ರವಲ್ಲದೆ ತಮ್ಮದೇ ಆದ ಶೈಲಿಯಲ್ಲಿ ಕೃತಿಯ ರಚನೆಯನ್ನು ಮಾಡಿರುತ್ತಾರೆ. ಕವಿಗಳು ಹಾಗೂ ಸಾಹಿತಿಗಳನ್ನು ಇಂದಿನ ದಿವಸಗಳಲ್ಲಿ ಜಾತಿಯ ಲೆಕ್ಕಾಚಾರದಲ್ಲಿ ನೋಡುತ್ತಿರುವುದು ವಿಷಾದನೀಯ. ಸಾಹಿತಿಗಳು ಒಂದು ನಿರ್ದಿಷ್ಟ ಜಾತಿಗೆ ಸಂಬಂಧಿಸಿದವರಾಗಿರದೆ ಒಂದು ನಾಡಿಗೆ ಸಂಬಂಧಿಸಿದವರಾಗಿರುತ್ತಾರೆ ಎಂದರು. ಎಸ್. ಎಲ್. ಭೈರಪ್ಪ ಅವರ ಪ್ರಮುಖ ಕೃತಿಗಳನ್ನು ಹಾಗೂ ಅದರಲ್ಲಿ ಅಡಗಿರುವ ಅಂಶಗಳನ್ನುಉದಾಹರಣೆ ಸಮೇತ ವಿವರಿಸಿದರು. ಗೋಣಿಕೊಪ್ಪಲು ಕಾವೇರಿ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಪಟ್ಟಡ ಪೂವಣ್ಣ ರವರು ಮಾತನಾಡುತ್ತಾ ಕನ್ನಡ ಸಾರ ಸ್ವತ ಲೋಕಕ್ಕೆ ಎಸ್. ಎಲ್. ಭೈರಪ್ಪ ಅವರ ಅಗಲಿಕೆಯು ತುಂಬಲಾರದ ನಷ್ಟವಾಗಿದೆ. ಅವರ ಕೃತಿಗಳನ್ನು ಸಂಪೂರ್ಣವಾಗಿ ಓದಿದಾಗ ಮಾತ್ರ ಅದರಲ್ಲಿರುವ ಪ್ರೌಢಿಮೆ ಕಾಣಸಿಗುತ್ತದೆ. ಇಂದಿನ ವಿದ್ಯಾರ್ಥಿಗಳು ಸಾಹಿತ್ಯದ ಪುಸ್ತಕಗಳನ್ನು ಓದಲು ಹಿಂದೇಟು ಹಾಕುತ್ತಿರುವುದು ವಿಷಾದನೀಯ ಎಂದರು. ಎಸ್. ಎಲ್. ಭೈರಪ್ಪ ಅವರ ಕೃತಿಗಳಲ್ಲಿ ರಚಿತವಾಗಿರುವ ಪ್ರಮುಖ ಅಂಶವನ್ನು ವಿವರಿಸಿದರು. ವಿರಾಜಪೇಟೆಯ ಸೆಂಟ್ ಆನ್ಸ್ ಪದವಿ ಕಾಲೇಜಿನ ಕನ್ನಡ ವಿಭಾಗದ ಪ್ರಾಧ್ಯಾಪಕರಾದ ಅರ್ಜುನ್ ಮಾತನಾಡಿ ಎಸ್. ಎಲ್. ಭೈರಪ್ಪ ಅವರ ಕೃತಿಗಳು ವಿಮರ್ಶೆ ಗೆ ಒಳಪಡುವ ವಿಚಾರವನ್ನು ಒಳಗೊಂಡಿದೆ. ಅತ್ಯಂತ ಹೆಚ್ಚು ವಿಮರ್ಶೆಗೆ ಒಳಗಾದ ಕೃತಿಗಳು ಭೈರಪ್ಪರದ್ದಾಗಿವೆ ಎಂದರು.ಸಭೆಯ ಅಧ್ಯಕ್ಷತೆ ವಹಿಸಿದ್ದ ವಿರಾಜಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ನ ಅಧ್ಯಕ್ಷರು ಹಾಗೂ ಪುರಸಭಾ ಸದಸ್ಯರಾದ ರಾಜೇಶ್ ಪದ್ಮನಾಭ್ ಮಾತನಾಡಿ ಎಸ್. ಎಲ್. ಭೈರಪ್ಪ ಅವರು ಕನ್ನಡ ಸಾಹಿತ್ಯ ಲೋಕಕ್ಕೆ ತನ್ನದೇ ಆದಂತಹ ಮೇರು ವ್ಯಕ್ತಿತ್ವದಿಂದ ಗುರುತಿಸಲ್ಪಟ್ಟವರು. ಕನ್ನಡ ಸಾಹಿತ್ಯ ಪ್ರಪಂಚಕ್ಕೆ ಸಾಹಿತ್ಯ ಕೃಷಿಯನ್ನು ಕೊಡುಗೆಯಾಗಿ ನೀಡಿದ್ದಾರೆ. ಕನ್ನಡ ಭಾಷೆ, ಸಾಹಿತ್ಯ ಪರಂಪರೆಗೆ ತಮ್ಮ ಸೇವೆಯನ್ನು ಸಲ್ಲಿಸಿರುವ ಜೊತೆಗೆ ಜನಮಾನಸದಲ್ಲಿ ಹಚ್ಚ ಹಸಿರಾಗಿ ಉಳಿದಿದ್ದಾರೆ ಎಂದರು. ಈ ಸಭೆಯಲ್ಲಿ ನಿವೃತ್ತ ಪ್ರಾಂಶುಪಾಲರಾದ ಪಟ್ಟಡ ಪೂವಣ್ಣ ರವರು ಎಸ್ ಎಲ್ ಭೈರಪ್ಪ ಅವರ ಜ್ಞಾಪಕಾರ್ಥ ಶಾಲೆ ಕಾಲೇಜುಗಳಲ್ಲಿ ಉಪನ್ಯಾಸವನ್ನು ನಡೆಸಲು ಹತ್ತು ಸಾವಿರ ರೂಗಳ ದತ್ತಿನಿದಿಯನ್ನು ನೀಡುವುದಾಗಿ ಘೋಷಿಸಿದರು. ಈ ಸಂದರ್ಭದಲ್ಲಿ ನಿವೃತ್ತ ಶಿಕ್ಷಕರಾದ ಮಂಜುನಾಥ್, ಸಾವಿತ್ರಿ ಹೆಚ್. ಜಿ., ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು, ಪತ್ರಕರ್ತರ ವೇದಿಕೆಯ ಸದಸ್ಯರುಗಳು, ಉಪನ್ಯಾಸಕರು ಉಪಸ್ಥಿತರಿದ್ದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿಶೇಷಚೇತನರಿಗೆ ಕ್ರೀಡಾಕೂಟ : ಕ್ರೀಡೆಯಿಂದ ದೈಹಿಕ, ಮಾನಸಿಕ ದೃಢತೆ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ*

ಮಾರ್ಚ್ 16, 2026

*ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*

ಮಾರ್ಚ್ 16, 2026

*ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*

ಮಾರ್ಚ್ 16, 2026

*ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*

ಮಾರ್ಚ್ 16, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.16 NEWS DESK : ಸ್ವಚ್ಛ ಕೊಡಗು-ಸುಂದರ ಕೊಡಗು ಹೆಸರಿನಲ್ಲಿ ಪ್ರಸಿದ್ಧ ಪುಣ್ಯ ಕ್ಷೇತ್ರಗಳು ಸೇರಿದಂತೆ ಪ್ರವಾಸಿ ಸ್ಥಳಗಳು,…

*ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*

ಮಾರ್ಚ್ 16, 2026

*ವಾಹನ, ದನ ಕಳವು ಪ್ರಕರಣದ ಆರೋಪಿಗಳ ಬಂಧನ*

ಮಾರ್ಚ್ 16, 2026

*ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*

ಮಾರ್ಚ್ 16, 2026

*ಸೋಮವಾರಪೇಟೆ : ವಿದ್ಯಾರ್ಥಿಗಳು ಸಮಯದ ಮೌಲ್ಯ ಅರಿತುಕೊಳ್ಳಿ : ಶ್ರೀ ನಿಶ್ಚಲ ನಿರಂಜನ ದೇಶಿಕೇಂದ್ರ ಸ್ವಾಮೀಜಿ ಸಲಹೆ*

ಮಾರ್ಚ್ 16, 2026

* ಸೋಮವಾರಪೇಟೆ : ಮಾ.27 ರಂದು ಶ್ರೀ ರಾಮನವಮಿ ಉತ್ಸವ*

ಮಾರ್ಚ್ 16, 2026

*ಗೃಹಬಳಕೆ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಗ್ರಾಹಕರ ಗಮನಕ್ಕೆ : ಜಿಲ್ಲಾಡಳಿತದಿಂದ ಎಲ್‌ಪಿಜಿ ವಿತರಕರಿಗೆ ಕಟ್ಟುನಿಟ್ಟಿನ ಸೂಚನೆ*

ಮಾರ್ಚ್ 16, 2026

*ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ : “ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಲು” ಅನುಭವುಳ್ಳ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ*

ಮಾರ್ಚ್ 16, 2026

*ಕಸಾಪ ಸಂತಾಪ*

ಮಾರ್ಚ್ 15, 2026

*ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*

ಮಾರ್ಚ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.