Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂರ್ನಾಡಿನಲ್ಲಿ 102ನೇ ವಾರ್ಷಿಕ ಕೈಲ್ ಪೊಳ್ದ್ ಆಚರಣೆ : ವಿವಿಧ ಆಟೋಟಗಳು*
  • *ಸೆ.5 ರಂದು ಶಿಕ್ಷಕರ ದಿನಾಚರಣೆ*
  • *ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*
  • *ಟೈಲರಿಂಗ್ ಯಂತ್ರೋಪಕರಣ ವಿತರಣೆ*
  • *ಹೊನ್ನಮ್ಮನ ಕೆರೆ ಆವರಣದಲ್ಲಿ ಸ್ವಚ್ಛತಾ ಶ್ರಮದಾನ*
  • *ಪೊಲೀಸ್ ಪೇದೆ ಹುದ್ದೆ :  ನೇರ ನೇಮಕಾತಿ ಪರೀಕ್ಷೆ ಸುಸೂತ್ರವಾಗಿ ನಡೆಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*   
  • *31 ನೇ ವರ್ಷದ ಕೈಲ್ ಪೊವ್ದ್ ನ್ನು ಸಂಭ್ರಮದಿಂದ ಆಚರಿಸಿದ CNC*
  • *ಮಡಿಕೇರಿಯಲ್ಲಿ ಬೀದಿನಾಯಿ ಉಪಟಳ ತಡೆಗೆ ಕ್ರಮ*
  • *ಕೊಡಗು ವಿದ್ಯಾಲಯದಲ್ಲಿ ಈದ್ ಮಿಲಾದ್ ಆಚರಣೆ*
  • *ಸುಂಟಿಕೊಪ್ಪ : ಯುವಶಕ್ತಿ ದಾರಿ ತಪ್ಪದಂತೆ ಸಮಾಜ ಬೆನ್ನೆಲುಬಾಗಿ ನಿಲ್ಲಬೇಕು: ಬಿ.ಸಿ. ದಿನೇಶ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ದಸರಾ ಮುಕ್ತ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿ : ಕಬಡ್ಡಿ…ಕಬಡ್ಡಿ… ರೈಡ್ ಮಾಡಿ ಗಮನ ಸೆಳೆದ ಶಾಸಕದ್ವಯರು*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ ದಸರಾ ಮುಕ್ತ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿ : ಕಬಡ್ಡಿ…ಕಬಡ್ಡಿ… ರೈಡ್ ಮಾಡಿ ಗಮನ ಸೆಳೆದ ಶಾಸಕದ್ವಯರು*

ಅಕ್ಟೋಬರ್ 13, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.13 NEWS DESK : ಮಡಿಕೇರಿ ನಗರ ದಸರಾ ಕ್ರೀಡಾ ಸಮಿತಿ ವತಿಯಿಂದ ಗಾಂಧಿ ಮೈದಾನದಲ್ಲಿ ಆಯೋಜಿತ ಹೊನಲು ಬೆಳಕಿನ ಮುಕ್ತ ಕಬಡ್ಡಿ ಪಂದ್ಯಾವಳಿಗೆ ಭಾನುವಾರ ಸಂಜೆ ಜಿಲ್ಲೆಯ ಶಾಸಕದ್ವಯರು ಜ್ಯೋತಿ ಬೆಳಗಿ, ರೈಡ್ ಮಾಡುವ ಮೂಲಕ ವಿಧ್ಯುಕ್ತ ಚಾಲನೆ ನೀಡಿದರು. ಮಡಿಕೇರಿ ದಸರಾ ಕ್ರೀಡಾ ಸಮಿತಿ ಅಧ್ಯಕ್ಷ ಪ್ರದೀಪ್ ಕರ್ಕೆರ ಅವರ ಅಧ್ಯಕ್ಷತೆಯಲ್ಲಿ ಆಯೋಜಿತ ಉದ್ಘಾಟನಾ ಸಮಾರಂಭದಲ್ಲಿ ಜ್ಯೋತಿ ಬೆಳಗಿ ಸಮಾರಂಭ ಉದ್ಘಾಟಿಸಿದ ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಎ.ಎಸ್. ಪೊನ್ನಣ್ಣ ಅವರು ಮಾತನಾಡಿ, ಕೊಡಗು ಜಿಲ್ಲೆ ಅಸಂಖ್ಯ ಕ್ರೀಡಾಪಟುಗಳನ್ನು ರಾಜ್ಯ ಮತ್ತು ರಾಷ್ಟ್ರ ಮಟ್ಟಕ್ಕೆ ನೀಡಿದ ಖ್ಯಾತಿಯನ್ನು ಹೊಂದಿದೆ. ಕ್ರೀಡಾ ಚಟುವಟಿಕೆಗಳನ್ನು ಪ್ರತಿಯೊಬ್ಬರು ತೊಡಗಿಸಿಕೊಳ್ಳುವುದು ಅವಶ್ಯವೆಂದ ಅವರು, ಇಂತಹ ಕ್ರೀಡಾ ಚಟುವಟಿಕೆಗಳು ನಮ್ಮ ಆರೋಗ್ಯವನ್ನು ಕಾಪಾಡುವುದಲ್ಲದೆ ಸಮಚಿತ್ತತೆಯಿಂದ ಬದುಕನ್ನು ಎದುರಿಸಲು ಸಹಕಾರಿಯಾಗಿದೆಯೆಂದು ನುಡಿದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಮಾತನಾಡಿ, ಮಳೆಯ ಕಾರಣದಿಂದ ದಸರಾ ಸಂದರ್ಭ ನಡೆಯಬೇಕಿದ್ದ ಕಬಡ್ಡಿ ಪಂದ್ಯಾವಳಿಯನ್ನು ಇಂದು ಆಯೋಜಿಸಲಾಗುತ್ತಿದೆ. ಇಂತಹ ಕ್ರೀಡಾಕೂಟಗಳಲ್ಲಿ ಗೆಲುವು ಸೋಲಿಗೂ ಮಿಗಿಲಾಗಿ ಪಾಲ್ಗೊಳ್ಳುವಿಕೆ ಅತ್ಯಂತ ಪ್ರಮುಖವಾಗುತ್ತದೆಂದು ಅಭಿಪ್ರಾಯಿಸಿದರು. ಮಡಿಕೇರಿ ದಸರಾ ಸಮಿತಿ ಕಾರ್ಯಾಧ್ಯಕ್ಷರಾದ ಬಿ.ಕೆ.ಅರುಣ್ ಕುಮಾರ್ ಮಾತನಾಡಿ, ಕ್ರೀಡಾ ಚಟುವಟಿಕೆಗಳು ನಮಗೆ ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮನಸ್ಥಿತಿಯನ್ನು ನಮ್ಮಲ್ಲಿ ಮೂಡಿಸುತ್ತದೆಂದು ನುಡಿದರು. :: ಶಾಸಕದ್ವಯರಿಂದ ಕಬಡ್ಡಿ…ಕಬಡ್ಡಿ..! :: ಸಭಾ ಕಾರ್ಯಕ್ರಮದ ಬಳಿಕ ಆಯೋಜಿತ ಪತ್ರಕರ್ತರ ತಂಡ ಮತ್ತು ದಸರಾ ಕ್ರೀಡಾ ಸಮಿತಿ ತಂಡಗಳ ನಡುವಣ ಪ್ರದರ್ಶನ ಪಂದ್ಯಕ್ಕೆ ಶಾಸಕದ್ವಯರಾದ ಎ.ಎಸ್.ಪೊನ್ನಣ್ಣ ಮತ್ತು ಡಾ. ಮಂತರ್ ಗೌಡ ಅವರು, ತಾವೇ ‘ಕಬಡ್ಡಿ…ಕಬಡ್ಡಿ…’ ಎನ್ನುತ್ತ ರೈಡ್ ಮಾಡಿ ಗಮನ ಸೆಳೆÉದರು. ಸಭಾ ಕಾರ್ಯಕ್ರಮದಲ್ಲಿ ನಗರಸಭಾ ಉಪಾಧ್ಯಕ್ಷರಾದ ಮಹೇಶ್ ಜೈನಿ, ಮಾಜಿ ಎಂಎಲ್‍ಸಿ ವೀಣಾ ಅಚ್ಚಯ್ಯ, ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷರಾದ ಬೊಳ್ಳಜಿರ ಅಯ್ಯಪ್ಪ, ಮಡಿಕೇರಿ ನಗರ ದಸರಾ ಸಮಿತಿ ಪ್ರಧಾನ ಕಾರ್ಯದರ್ಶಿ ಅರುಣ್ ಶೆಟ್ಟಿ, ಮಡಿಕೇರಿ ಯುವ ದಸರಾ ಸಮಿತಿ ಅಧ್ಯಕ್ಷ ಕವನ್ ಕೊತ್ತೋಳಿ, ನಗರಸಭಾ ಸದಸ್ಯೆ ಚಿತ್ರಾವತಿ, ನಗರಸಭಾ ನಾಮ ನಿರ್ದೇಶಿತ ಸದಸ್ಯರಾದ ಸದಾ ಮುದ್ದಪ್ಪ, ಜಿ.ಸಿ. ಜಗದೀಶ್, ದಶ ಮಂಟಪ ಸಮಿತಿ ಅಧ್ಯಕ್ಷರಾದ ಹರೀಶ್ ಅಣ್ವೇಕರ್, ಪ್ರಮುಖರಾದ ಪ್ರಕಾಶ್ ಆಚಾರ್ಯ, ಜಿ.ಕೆ.ಜಗದೀಶ್, ಕ್ರೀಡಾ ಸಮಿತಿಯ ರವಿ ಕರ್ಕೆರ, ಪ್ರಸನ್ನ ಭಟ್ ಮೊದಲಾದವರು ಉಪಸ್ಥಿತರಿದ್ದರು. :: ರೋಚಕ ಪ್ರದರ್ಶನ ಪಂದ್ಯ :: ದಸರಾ ಕ್ರೀಡಾ ಸಮಿತಿ ಅಧ್ಯಕ್ಷ ಪ್ರದೀಪ್ ಕರ್ಕೆರ ನೇತೃತ್ವದ ತಂಡ ಹಾಗೂ ಮಂಜು ನೇತೃತ್ವದ ಪತ್ರಕರ್ತರ ಸಂಘದ ನಡುವಿನ ಪ್ರದರ್ಶನ ಪಂದ್ಯ ಕುತೂಹಲಕಾರಿಯಾಗಿ ನಡೆದು, ಅಲ್ಪ ಅಂತರದಿಂದ ಕ್ರೀಡಾ ಸಮಿತಿ ತಂಡ ಗೆಲುವನ್ನು ದಾಖಲಿಸಿತು.ಪಂದ್ಯಾವಳಿಯಲ್ಲಿ ಜಿಲ್ಲೆ ಸೇರಿದಂತೆ ಹೊರ ಜಿಲ್ಲೆಗಳ ತಂಡಗಳು ಪಾಲ್ಗೊಂಡಿದ್ದು, ಪ್ರಶಸ್ತಿಗಾಗಿ ಪೈಪೋಟಿ ನಡೆಸಿದವು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮೂರ್ನಾಡಿನಲ್ಲಿ 102ನೇ ವಾರ್ಷಿಕ ಕೈಲ್ ಪೊಳ್ದ್ ಆಚರಣೆ : ವಿವಿಧ ಆಟೋಟಗಳು*

ಸೆಪ್ಟೆಂಬರ್ 1, 2026

*ಸೆ.5 ರಂದು ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 1, 2026

*ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*

ಸೆಪ್ಟೆಂಬರ್ 1, 2026

*ಸೆ.5 ರಂದು ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 1, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.1 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಶಿಕ್ಷಕರ…

*ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*

ಸೆಪ್ಟೆಂಬರ್ 1, 2026

*ಟೈಲರಿಂಗ್ ಯಂತ್ರೋಪಕರಣ ವಿತರಣೆ*

ಸೆಪ್ಟೆಂಬರ್ 1, 2026

*ಹೊನ್ನಮ್ಮನ ಕೆರೆ ಆವರಣದಲ್ಲಿ ಸ್ವಚ್ಛತಾ ಶ್ರಮದಾನ*

ಸೆಪ್ಟೆಂಬರ್ 1, 2026

*ಪೊಲೀಸ್ ಪೇದೆ ಹುದ್ದೆ :  ನೇರ ನೇಮಕಾತಿ ಪರೀಕ್ಷೆ ಸುಸೂತ್ರವಾಗಿ ನಡೆಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*   

ಸೆಪ್ಟೆಂಬರ್ 1, 2026

*31 ನೇ ವರ್ಷದ ಕೈಲ್ ಪೊವ್ದ್ ನ್ನು ಸಂಭ್ರಮದಿಂದ ಆಚರಿಸಿದ CNC*

ಸೆಪ್ಟೆಂಬರ್ 1, 2026

*ಮಡಿಕೇರಿಯಲ್ಲಿ ಬೀದಿನಾಯಿ ಉಪಟಳ ತಡೆಗೆ ಕ್ರಮ*

ಸೆಪ್ಟೆಂಬರ್ 1, 2026

*ಕೊಡಗು ವಿದ್ಯಾಲಯದಲ್ಲಿ ಈದ್ ಮಿಲಾದ್ ಆಚರಣೆ*

ಸೆಪ್ಟೆಂಬರ್ 1, 2026

*ಸುಂಟಿಕೊಪ್ಪ : ಯುವಶಕ್ತಿ ದಾರಿ ತಪ್ಪದಂತೆ ಸಮಾಜ ಬೆನ್ನೆಲುಬಾಗಿ ನಿಲ್ಲಬೇಕು: ಬಿ.ಸಿ. ದಿನೇಶ್*

ಸೆಪ್ಟೆಂಬರ್ 1, 2026

*ಸಣ್ಣ ಪ್ರಮಾಣದ ಬೆಟ್ಟ ಕುಸಿತ*

ಸೆಪ್ಟೆಂಬರ್ 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.