
ಮಡಿಕೇರಿ ಅ.13 NEWS DESK : ಸ್ವಚ್ಚ ಕೊಡಗು – ಸುಂದರ ಕೊಡಗು ಅಭಿಯಾನಕ್ಕೆ ಜಿಲ್ಲೆಯಾದ್ಯಂತ ಅತ್ಯುತ್ತಮ ಸ್ಪಂದನ ದೊರಕಿದ್ದು, ಅ. 15 ರಂದು ಸ್ವಚ್ಚತೆ ಸಂಬಂಧಿತ ಬೃಹತ್ ಅಭಿಯಾನ ನಡೆಯಲಿದೆ ಎಂದು ಕೂಗ್೯ ಹೋಟೇಲ್, ರೆಸಾಟ್೯ ಅಸೋಸಿಯೇಷನ್ ಅಧ್ಯಕ್ಷ ಕುಂಡ್ಯೋಳಂಡ ದಿನೇಶ್ ಕಾಯ೯ಪ್ಪ ತಿಳಿಸಿದ್ದಾರೆ. ಕೂಗ್೯ ಹೋಟೇಲ್, ರೆಸಾಟ್೯ ಅಸೋಸಿಯೇಷನ್ ನೇತೃತ್ವದಲ್ಲಿ ಕೊಡಗು ಜಿಲ್ಲಾಡಳಿತ, ಕೊಡಗು ಜಿಲ್ಲಾ ಪಂಚಾಯತ್, ಕೊಡಗು ಚೇಂಬರ್ ಆಫ್ ಕಾಮಸ್೯, ಕೊಡಗು ಹೋಂಸ್ಟೇ ಅಸೋಸಿಯೇಷನ್, ರೋಟರಿ , ಲಯನ್ಸ್ ಸಂಸ್ಥೆಗಳು, ಪ್ರವಾಸೋದ್ಯಮ ಇಲಾಖೆ, ರೆಡ್ ಕ್ರಾಸ್, ಸ್ಥಳೀಯ ಸಂಘ ಸಂಸ್ಥೆಗಳು, ಹಲವಾರು ಶಿಕ್ಷಣ ಸಂಸ್ಥೆಗಳು, ವಿವಿಧ ಸಂಘಟನೆಗಳು ಈ ಬೖಹತ್ ಅಭಿಯಾನಕ್ಕೆ ಕೈ ಜೋಡಿಸಿದೆ. ಜಿಲ್ಲೆಯಾದ್ಯಂತಲಿನಿಂದ ಅಭಿಯಾನಕ್ಕೆ ಸಹಕಾರ ನೀಡುವುದಾಗಿ ನಿರೀಕ್ಷೆಗೂ ಮೀರಿದ ಸ್ಪಂದನೆ ಸಂಘಟನೆಗಳ ಪ್ರಮುಖರಿಂದ ದೊರಕಿದೆ. ಅ.15 ರಂದು ಬುಧವಾರ ಸ್ವಚ್ಚ ಕೊಡಗು ಸುಂದರ ಕೊಡಗು ಅಭಿಯಾನಕ್ಕೆ ಜಿಲ್ಲಾ ಕೇಂದ್ರವಾದ ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತದ ಬಳಿ ಬೆಳಗ್ಗೆ 8 ಗಂಟೆಗೆ ಶಾಸಕ ಡಾ.ಮಂಥರ್ ಗೌಡ, ಜಿಲ್ಲಾಧಿಕಾರಿ ವೆಂಕಟರಾಜಾ, ಕೊಡಗು ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಜಿ.ಪಂ. ಮುಖ್ಯ ಕಾಯ೯ನಿವ೯ಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ ಸೇರಿದಂತೆ ಅನೇಕ ಗಣ್ಯರು ಚಾಲನೆ ನೀಡಲಿದ್ದಾರೆ. ಗೋಣಿಕೊಪ್ಪಲಿನಲ್ಲಿ ವಿಧಾನಪರಿಷತ್ ಸದಸ್ಯ ಎಂ.ಪಿ. ಸುಜಾಕುಶಾಲಪ್ಪ, ಕುಶಾಲನಗದಲ್ಲಿ ಜಿಲ್ಲಾ ಚೇಂಬರ್ ಆಫ್ ಕಾಮಸ್೯ ಅಧ್ಯಕ್ಷ ಬಿ.ಆರ್. ನಾಗೇಂದ್ರ ಪ್ರಸಾದ್, ವೀರಾಜಪೇಟೆಯಲ್ಲಿ ಸಕಾ೯ರಿ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿ ಜಿಲ್ಲಾಧ್ಯಕ್ಷ ತೀತೀರ ಧಮ೯ಜ ಉತ್ತಪ್ಪ, ಸೋಮವಾರಪೇಟೆಯಲ್ಲಿ ತಾಲೂಕು ಹೋಂಸ್ಟೇ ಅಸೋಸಿಯೇಷನ್ ಅಧ್ಯಕ್ಷ ರೋಹಿತ್ ಮತ್ತು ಹೋಟೇಲ್, ರೆಸಾಟ್೯ ಅಸೋಸಿಯೇಷನ್ ಉಪಾಧ್ಯಕ್ಷ ಬಿ.ಎಸ್. ಸುಂದರ್ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ. ಇದೇ ವೇಳೆ ಜಿಲ್ಲೆಯಾದ್ಯಂತ ಸ್ವಚ್ಚ ಕೊಡಗು ಹೆಸರಿನ ಸ್ವಚ್ಚತಾ ಕಾಯ೯ ಪ್ರಾರಂಭವಾಗಲಿದೆ. ಆಯಾ ತಾಲೂಕು ಕೇಂದ್ರಗಳು, ಸ್ಥಳೀಯ ಸಂಸ್ಥೆಗಳು, ಗ್ರಾಮಪಂಚಾಯತ್ ಗಳಲ್ಲಿ ಸ್ಥಳೀಯ ಪ್ರತಿನಿಧಿಗಳು, ಸಂಘ ಸಂಸ್ಥೆಗಳ ಪ್ರಮುಖರು ಈ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ. ಕೊಡಗು ವಿವಿಗೆ ಸೇರಿದ 23 ಕಾಲೇಜುಗಳ 1500 ಎನ್ ಎಸ್ ಎಸ್ ವಿದ್ಯಾಥಿ೯ಗಳೂ ತಮ್ಮ ಕಾಲೇಜು ವ್ಯಾಪ್ತಿಯ ಪ್ರದೇಶಗಳಲ್ಲಿ ಸ್ವಚ್ಚತಾ ಕಾಯ೯ ನಡೆಸಲಿದ್ದಾರೆ. ಅಂತೆಯೇ ಜಿಲ್ಲೆಯ ಶಾಲಾ, ಕಾಲೇಜು ವಿದ್ಯಾಥಿ೯ಗಳು ತಮ್ಮ ಶಿಕ್ಷಣ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸ್ವಚ್ಚತಾ ಕಾಯ೯ಕೈಗೊಳ್ಳಬಹುದಾಗಿದೆ. ಕೆಡಿಸಿಸಿ ಬ್ಯಾಂಕ್ ಸೇರಿದಂತೆ ಜಿಲ್ಲೆಯ ಎಲ್ಲಾ ಬ್ಯಾಂಕ್ ಗಳ ಅಧಿಕಾರಿ, ಸಿಬ್ಬಂದಿಗಳೂ ಸಹಕಾರ ನೀಡುತ್ತಿದ್ದಾರೆ. ವತ೯ಕರು ತಮ್ಮ ಅಂಗಡಿ ವ್ಯಾಪ್ತಿಯಲ್ಲಿ ಸ್ವಚ್ಚತೆ ಕೈಗೊಳ್ಳುವ ಮೂಲಕ ಸ್ವಚ್ಚತಾ ಆಂದೋಲನದಲ್ಲಿ ಪಾಲ್ಗೊಳ್ಳಬೇಕೆಂದು ದಿನೇಶ್ ಕೋರಿದ್ದಾರೆ. ಜಿಲ್ಲೆಯ ಎಲ್ಲಾ ಸಂಘಸಂಸ್ಥೆಗಳು, ಸಾವ೯ಜನಿಕರು ಸ್ವಯಂ ಪ್ರೇರಣೆಯಿಂದ ಈ ಸ್ವಚ್ಚತಾ ಅಭಿಯಾನದಲ್ಲಿ ಪಾಲ್ಗೊಳ್ಳುವಂತೆಯೂ ದಿನೇಶ್ ಮನವಿ ಮಾಡಿದ್ದಾರೆ. ಬುಧವಾರದಂದು ಸಂಗ್ರಹವಾದ ತ್ಯಾಜ್ಯವನ್ನು ಆಯಾ ಪಂಚಾಯತ್, ಸ್ಥಳೀಯ ಸಂಸ್ಥೆಗಳ ಅಧಿಕಾರಿ, ಸಿಬ್ಬಂದಿಗಳ ಸಹಕಾರದೊಂದಿಗೆ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಸಂಗ್ರಹಿಸಿ, ಶಾಸಕರಾದ ಎ.ಎಸ್. ಪೊನ್ನಣ್ಣ ಸೂಚನೆಯಂತೆ ಮೈಸೂರಿನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಸಾಗಿಸಲಾಗುತ್ತದ ಎಂದೂ ದಿನೇಶ್ ಮಾಹಿತಿ ನೀಡಿದ್ದಾರೆ. ಸ್ವಚ್ಚತಾ ಅಭಿಯಾನದಲ್ಲಿ ಪಾಲ್ಗೊಳ್ಳುವ ಪ್ರತೀಯೋವ೯ರು ವೈಯಕ್ತಿಕ ಸುರಕ್ಷತೆ ಬಗ್ಗೆ ಗಮನ ನೀಡಬೇಕು. ರಸ್ತೆಯ ಇಕ್ಕೆಲಗಳಲ್ಲಿ ಸ್ವಚ್ಚತಾ ಕಾಯ೯ ಕೈಗೊಳ್ಳವಾಗ ರಸ್ತೆಯಲ್ಲಿ ಸಾಗುವ ವಾಹನಗಳ ಬಗ್ಗೆ ಗಮನ ನೀಡಬೇಕು, ಗಾಜು ಸೇರಿದಂತೆ ಅಪಾಯಕಾರಿ ವಸ್ತುಗಳ ಸಂಗ್ರಹಣೆಯಲ್ಲಿ ವೈಯಕ್ತಿಕ ಎಚ್ಚರಿಕೆ ವಹಿಸಿರಬೇಕು ಎಂದೂ ದಿನೇಶ್ ಮನವಿ ಮಾಡಿದ್ದಾರೆ. ಅ.15 ರಂದು ಸಕಾ೯ರಿ ಕಛೇರಿಗಳ ಅದಿಕಾರಿ, ಸಿಬ್ಬಂದಿಗಳು ಮತ್ತು ಖಾಸಗಿ ಶಾಲಾ ಶಿಕ್ಷಕ, ಬೋದಕೇತರ ವಗ೯, ಬ್ಯಾಂಕ್ ಸಿಬ್ಬಂದಿಗಳು, ಮತ್ತು ವಿದ್ಯಾಥಿ೯ಗಳು ಬೆಳಗ್ಗೆ 10 ಗಂಟೆಯಿಂದ 11 ಗಂಟೆಯವರೆಗೆ ಸ್ವಚ್ಚತಾ ಅಭಿಯಾನದಲ್ಲಿ ಪಾಲ್ಗೊಳ್ಳಬಹುದಾಗಿದೆ ಎಂದು ಕೂಗ್೯ ಹೋಟೇಲ್, ರೆಸಾಟ್೯ ಅಸೋಸಿಯೇಷನ್ ಪ್ರಧಾನ ಕಾಯ೯ದಶಿ೯ ನಸೀರ್ ಅಹಮ್ಮದ್ ತಿಳಿಸಿದ್ದಾರೆ. ಕೊಡಗು ಜಿಲ್ಲೆಯ ಪ್ರಮುಖ ರಸ್ತೆಗಳು, ಹೆದ್ದಾರಿಯನ್ನೇ ಮುಖ್ಯವಾಗಿರಿಸಿಕೊಂಡು ಈ ಸ್ವಚ್ಚತಾ ಅಭಿಯಾನ ಕೈಗೊಳ್ಳಲಾಗಿದೆ. ಮುಂದಿನ ದಿನಗಳಲ್ಲಿಯೂ ಕೊಡಗು ಸ್ವಚ್ಚತೆ ಸಂಬಂಧಿತ ಮತ್ತಷ್ಟು ಕಾಯ೯ಕ್ರಮ ಆಯೋಜಿಸುವ ಉದ್ದೇಶವಿದೆ ಎಂದೂ ನಾಸೀರ್ ಅಹಮ್ಮದ್ ತಿಳಿಸಿದರು. ಕೊಡಗಿನ ಸ್ವಚ್ಚತೆಯು ಪ್ರತೀಯೋವ೯ರಿಗೂ ಸಂಬಂಧಿಸಿದ್ದಾಗಿದೆ. ಈ ನಿಟ್ಟಿನಲ್ಲಿ ಕೂಗ್೯ ಹೋಟೇಲ್, ರೆಸಾಟ್೯ ಅಸೋಸಿಯೇಷನ್ ಸ್ವಚ್ಚ ಕೊಡಗು – ಸುಂದರ ಕೊಡಗು ಅಭಿಯಾನ ಹಮ್ಮಿಕೊಂಡು ಸ್ವಚ್ಚತೆ ಸಂಬಂಧಿತ ಜಾಗ್ರತಿ ಮೂಡಿಸುವ ಪ್ರಯತ್ನ ಮಾಡುತ್ತಿದೆ ಎಂದು ಅವರು ತಿಳಿಸಿದ್ದಾರೆ.








